tag:blogger.com,1999:blog-27164827034156595322024-03-04T20:59:03.971-08:00ಸಂಪಾದಕೀಯಇದು ಸನ್ಮಾರ್ಗ ವಾರ ಪತ್ರಿಕೆಯಲ್ಲಿ ಪ್ರಕಟವಾಗುವ ಸಂಪಾದಕೀಯa k kukkilahttp://www.blogger.com/profile/04432257424497331465noreply@blogger.comBlogger490125tag:blogger.com,1999:blog-2716482703415659532.post-27376217229195361572024-02-06T05:16:00.000-08:002024-02-06T05:16:32.676-08:00ಭಾರತದ ಎದೆಗೆ ವಾಸಿಯಾಗದ ಗಾಯ ಮಾಡಿರುವುದೇ ಅರ್ಹತೆಯೇ?<div class="separator" style="clear: both; text-align: center;"><a href="https://blogger.googleusercontent.com/img/b/R29vZ2xl/AVvXsEgiIGdvYJS9I2vtua5MgLZBfscBKd2uWXnWJt4F7QHt4XZcDBgrqWLcsyKILZCKDRmTLdNCOvaQlDjqVEgIxYx6qNsgMv2tRftAa26EtnYeIchq5WRHK3Md3XmvM8sCKgpXE-XPBOnW8dUXlXTYjrRGg2mPSN5LbLTXoyntnjVC-iaVUgMRvGGqkwnhkQcK/s1143/editorial%20pic.jpg" imageanchor="1" style="margin-left: 1em; margin-right: 1em;"><img border="0" data-original-height="555" data-original-width="1143" height="194" src="https://blogger.googleusercontent.com/img/b/R29vZ2xl/AVvXsEgiIGdvYJS9I2vtua5MgLZBfscBKd2uWXnWJt4F7QHt4XZcDBgrqWLcsyKILZCKDRmTLdNCOvaQlDjqVEgIxYx6qNsgMv2tRftAa26EtnYeIchq5WRHK3Md3XmvM8sCKgpXE-XPBOnW8dUXlXTYjrRGg2mPSN5LbLTXoyntnjVC-iaVUgMRvGGqkwnhkQcK/w400-h194/editorial%20pic.jpg" width="400" /></a></div><br /><p><br /></p><p> ಸನ್ಮಾರ್ಗ <span style="background-color: white; color: #222222; font-family: Arial, Helvetica, sans-serif; font-size: small;">ಸಂಪಾದಕೀಯ</span></p><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಬಾಬರಿ ಮಸೀದಿ ಧ್ವಂಸವನ್ನು ಅಪರಾಧ ಮತ್ತು ಕ್ರಿಮಿನಲ್ ಕೃತ್ಯ ಎಂದು 2019 ನವೆಂಬರ್ನಲ್ಲಿ ಸುಪ್ರೀಮ್ ಕೋರ್ಟ್ ನ ಐವರು ನ್ಯಾಯಾಧೀಶರು ಘೋಷಿಸುವಾಗಲೂ ಧ್ವಂಸದ ಆರೋಪಿಯಾಗಿಯೇ ಉಳಿದುಕೊಂಡಿದ್ದ ಎಲ್.ಕೆ. ಅಡ್ವಾಣಿಯವರನ್ನು ಭಾರತ ರತ್ನ ಪುರಸ್ಕಾರದ ಮೂಲಕ ಗೌರವಿಸಲಾಗಿದೆ. ಈ ತೀರ್ಪಿನ 11 ತಿಂಗಳ ಬಳಿಕ 2020 ಸೆಪ್ಟೆಂಬರ್ 20ರಂದು ಲಕ್ನೋದ ಸಿಬಿಐ ವಿಶೇಷ ನ್ಯಾಯಾಲಯವು ಅಡ್ವಾಣಿ ಸಹಿತ 32 ಮಂದಿ ಆರೋಪಿಗಳನ್ನು ದೋಷಮುಕ್ತಗೊಳಿಸಿತು. ಇದೇವೇಳೆ, ಅಡ್ವಾಣಿ ಮೇಲಿನ ಆರೋ ಪವನ್ನು ಸಾಬೀತುಪಡಿಸುವ ವೀಡಿಯೋವನ್ನು ನ್ಯಾಯಾಲಯದ ಮುಂದೆ ಸಿಬಿಐ ನ್ಯಾಯಾಲಯ ಅದನ್ನು ಪುರಸ್ಕರಿಸ ಲಿಲ್ಲ. ಕಾರಣ ಏನೆಂದರೆ, ಫಾರೆನ್ಸಿಕ್ ಲ್ಯಾಬೋರೇಟರಿಯಲ್ಲಿ ಆ ವೀಡಿಯೋದ ಸಾಚಾತನವನ್ನು ಪರೀಕ್ಷಿಸಿಯೇ ಇರಲಿಲ್ಲ. ಹಾಗೆಯೇ, ಅಂದಿನ ಧ್ವಂಸ ಕಾರ್ಯಕ್ಕೆ ಸಂಬಂಧಿಸಿದ ಫೋಟೋಗಳನ್ನು ನ್ಯಾಯಾಲಯಕ್ಕೆ ಸಿಬಿಐ ಸಲ್ಲಿಸಿತ್ತು. ಆದರೆ ಅದರ ಮೂಲ ಪ್ರತಿಯನ್ನೇ ಸಲ್ಲಿಸಿರಲಿಲ್ಲ. ಅಷ್ಟಕ್ಕೂ,</span><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಸಾಕ್ಷ್ಯವಾಗಿ ಸಲ್ಲಿಸುವ ಯಾವುದೇ ವೀಡಿಯೋವನ್ನೂ ಫಾರೆನ್ಸಿಕ್ ಲ್ಯಾಬೋರೇಟರಿ ಪರೀಕ್ಷೆಗೆ ಒಳಪಡಿಸಬೇಕು ಎಂದೋ ಅಥವಾ ಯಾವುದೇ ಫೋಟೋದ ನೆಗೆಟಿವ್ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದೋ ಸಿಬಿಐಗೆ ಗೊತ್ತಿರಲಿಲ್ಲ ಎಂದಲ್ಲ. ಅಲ್ಲದೇ ಹೀಗೆ ಮಾಡುವುದಕ್ಕೆ ಸಾಕಷ್ಟು ಸಮಯಾವಕಾಶ ಇರಲಿಲ್ಲ ಎಂದೂ ಅಲ್ಲ. 1992ರಿಂದ 2020ರ ನಡುವೆ ದೀರ್ಘ 28 ವರ್ಷಗಳೇ ಸಿಬಿಐಗೆ ಇತ್ತು. ಧ್ವಂಸ ವೀಡಿಯೋದ ಫಾರೆನ್ಸಿಕ್ ಪರೀಕ್ಷೆಗೆ ಒಳಪಡಿಸುವುದಕ್ಕೆ ಮತ್ತು ಫೋಟೋಗಳ ಮೂಲ ಪ್ರತಿಯನ್ನು ಸಂಗ್ರಹಿಸುವುದಕ್ಕೆ ಇದಕ್ಕಿಂತಲೂ ಹೆಚ್ಚಿನ ಅವಧಿ ಬೇಕು ಎಂದು ಯಾರೂ ಹೇಳಲಾರರು. ಅಂದರೆ, ಸಿಬಿಐ ಉದ್ದೇಶಪೂರ್ವಕವಾಗಿಯೇ ಹೀಗೆ ನಡಕೊಂಡಿತ್ತು. ಆರೋಪಿಗಳನ್ನು ದೋಷಮುಕ್ತಗೊಳಿಸುವುದೇ ಉದ್ದೇಶವಾಗಿರುವಾಗ ಅದು ಪ್ರಬಲ ಸಾಕ್ಷ್ಯ ಗಳನ್ನು ಸಲ್ಲಿಸುವುದಾದರೂ ಹೇಗೆ? ಈ ತೀರ್ಪಿನ ವಿರುದ್ಧ ಉತ್ತರ ಪ್ರದೇಶದ ಹಾಜಿ ಮೆಹಬೂಬ್ ಮತ್ತು ಸೈಯದ್ ಅಖ್ಲಾಕ್ ಎಂಬವರು ಅರ್ಜಿ ಸ ಲ್ಲಿಸಿದರಾದರೂ 2022 ಸೆ. 9ರಂದು ಅಲಹಾಬಾದ್ ಹೈಕೋರ್ಟು ಆ ಅರ್ಜಿಯನ್ನೇ ತಳ್ಳಿಹಾಕಿತು. ಪ್ರಕರಣದಲ್ಲಿ ನೀವು ಸಂತ್ರಸ್ತರೆಂದು ಸಾಬೀತಾಗದ ಕಾರಣ ನಿಮಗೆ ಅರ್ಜಿ ಸಲ್ಲಿಸುವ ಅರ್ಹತೆಯಿಲ್ಲ ಎಂದು ಕಾರಣವನ್ನೂ ನೀಡಿತು. ಹಾಗಂತ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್, ಉಮಾಭಾರತಿ ಮುಂತಾದವರು ಧ್ವಂಸ ಪ್ರಕರಣದಿಂದ ದೋಷಮುಕ್ತಗೊಂಡದ್ದು ಇದೇ ಮೊದಲಲ್ಲ. 2003ರಲ್ಲಿ ಸಿಬಿಐ ನ್ಯಾಯಾಲಯವು ಈ ಪ್ರಕರಣದಿಂದ ಅಡ್ವಾಣಿಯನ್ನು ಮುಕ್ತಗೊಳಿಸಿತ್ತು. ಆದರೆ, ಬಾಬರಿ ಮಸೀದಿ ಧ್ವಂಸಗೊಳ್ಳುವ ವೇಳೆ ಅಡ್ವಾಣಿಯವರ ಸುರಕ್ಷತೆಗಾಗಿ ನಿಯೋಜಿಸಲಾಗಿದ್ದ ಐಪಿಎಸ್ ಅಧಿಕಾರಿ ಅಂಜು ಗುಪ್ತ ಅವರು ನೀಡಿರುವ ಸಾಕ್ಷ್ಯವನ್ನು ಪರಿಗಣಿಸಿ ಅಲಹಾಬಾದ್ ನ್ಯಾಯಾಲಯದ ಲಕ್ನೋ ಬೆಂಚ್ ಅಡ್ವಾಣಿ ಮೇಲಿನ ಪ್ರಕರಣವನ್ನು ಮರು ಊರ್ಜಿತಗೊಳಿಸಿತು. ‘ಅಡ್ವಾಣಿಯವರು ಬಾಬರಿ ಮಸೀದಿ ಇದ್ದ ಸ್ಥಳಕ್ಕೆ ಆಗಮಿಸುವ ಮೊದಲು ಪರಿಸ್ಥಿತಿ ಶಾಂತವಾಗಿತ್ತು’ ಎಂದು ಅಂಜು ಗುಪ್ತಾ ರಾಯ್ಬರೇಲ್ವಿ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದರು. ಅಲ್ಲದೇ, ‘ಅಡ್ವಾಣಿಯವರ ಪ್ರಚೋದಕ ಭಾಷಣವೇ ಮಸೀದಿ ಧ್ವಂಸಕ್ಕೆ ಕಾರಣವಾಗಿತ್ತು’ ಎಂದೂ ಹೇಳಿಕೆ ನೀಡಿದ್ದರು. ‘ಅವರ ಭಾಷಣ ಪರಿಸ್ಥಿತಿಯನ್ನು ಹದಗೆಡಿಸಿತು, ಮಸೀದಿಯ ಗುಂಬಜ್ಗಳು ಉರುಳಿದಾಗ ಉಮಾಭಾರತಿ ಮತ್ತು ಸಾಧ್ವಿ ಋತುಂಬರಾ ಪರಸ್ಪರ ಆಲಿಂಗಿಸಿದರು, ಸಿಹಿ ಹಂಚಿದರು, ಮಾತ್ರವಲ್ಲ, ಅಡ್ವಾಣಿ, ಜೋಶಿ ಮತ್ತು ಎಸ್.ಪಿ. ದೀಕ್ಷಿತ್ರನ್ನು </span><span style="background-color: white; color: #222222; font-family: Arial, Helvetica, sans-serif; font-size: small;">ಆಲಿಂಗಿಸಿ ಸಂತೋಷ ವ್ಯಕ್ತಪಡಿಸಿದರು ಹಾಗೂ ಮಸೀದಿ ಧ್ವಂಸದ ಬಳಿಕ ಅವರೆಲ್ಲ ಪರಸ್ಪರ ಅಭಿನಂದನೆ ಸಲ್ಲಿಸಿಕೊಂಡರು..’ ಎಂದವರು 1993ರಲ್ಲಿ ಸಿಬಿಐ ಮುಂದೆ ಸಾಕ್ಷ ನುಡಿದಿದ್ದರು. ಮಸೀದಿಯನ್ನು ಬೀಳಿಸುವಂತೆ ಉಮಾಭಾರತಿ ಮತ್ತು ಸಾಧ್ವಿ ಋತುಂಬರಾ ಪ್ರಚೋದಿಸಿದರು ಎಂದು 2010ರಲ್ಲಿ ಸಿಬಿಐ ನ್ಯಾಯಾಲಯಕ್ಕೆ ನೀಡಿದ ಸಾಕ್ಷಿಯಲ್ಲೂ ಅಂಜು ಗುಪ್ತ ಹೇಳಿದ್ದರು. ಸಿಬಿಐ ಪಟ್ಟಿ ಮಾಡಿದ್ದ ಸಾಕ್ಷಿಗಳ ಪೈಕಿ 9ನೆಯವರಾಗಿದ್ದ ಅಂಜು ಗುಪ್ತ ಅವರ ಸಾಕ್ಷ ಬಹಳ ಪ್ರಾಮುಖ್ಯದ್ದಾಗಿತ್ತು. ಆದರೆ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಈ ಸಾಕ್ಷದ ಗಂಭೀರತೆಯನ್ನು ತಣಿಸುವುದಕ್ಕೆ ಏನೆಲ್ಲ ಬೇಕೋ ಅವೆಲ್ಲವನ್ನೂ ಆ ಬಳಿಕ ಸಿಬಿಐ ಶ್ರಮಿಸಿರುವಂತಿದೆ. ಸ್ಥಳೀಯ ಸಾಕ್ಷಿಗಳ ಪೈಕಿ ಯಾರನ್ನೂ ಅದು ಪರೀಕ್ಷೆಗೆ ಒಳಪಡಿಸಲೇ ಇಲ್ಲ. ಹೀಗೆ ಬಾಬರಿ ಮಸೀದಿ ಇದ್ದ ಜಾಗ ಯಾರಿಗೆ ಸೇರಬೇಕು ಎಂಬ ಪ್ರಕರಣ ಸುಪ್ರೀಮ್ ಕೋರ್ಟು ಮೆಟ್ಟಲೇರಿ 2019 ನವೆಂಬರ್ 9ರಂದು ತೀರ್ಪು ಪ್ರಕಟವಾಗುವಾಗಲೂ ಧ್ವಂಸ ಪ್ರಕರಣ ಇನ್ನೂ ಸಿಬಿಐ ನ್ಯಾಯಾ ಲಯದಲ್ಲೇ ಕೊಳೆಯುತ್ತಿತ್ತು. ಕೊನೆಗೂ ಬಾಬರಿ ಮಸೀದಿ ಧ್ವಂಸವನ್ನು ಕ್ರಿಮಿನಲ್ ಕೃತ್ಯ ಮತ್ತು ಅಪರಾಧ ಎಂದು ಹೇಳಿ ಮಂದಿರ ನಿರ್ಮಾಣಕ್ಕೆ ಸುಪ್ರೀಮ್ ಅನುಮತಿ ನೀಡಿದ ಬಳಿಕ ಸಿಬಿಐ ಚುರುಕಾಯಿತು. 2020 ಸೆ. 30ರಂದು ಅಡ್ವಾಣಿ ಸಹಿತ ಎಲ್ಲರನ್ನೂ ದೋಷಮುಕ್ತಗೊಳಿಸಿದ ಸಿಬಿಐ ನ್ಯಾಯಾಧೀಶ ಎಸ್.ಕೆ. ಯಾದವ್, ಅಂದೇ ನಿವೃತ್ತರಾದರು. ನಿಜವಾಗಿ, ಅವರು ಒಂದು ವರ್ಷದ ಮೊದಲೇ ನಿವೃತ್ತರಾಗಬೇಕಿತ್ತು. ಆದರೆ, ಈ ಪ್ರಕರಣಕ್ಕೆಂದೇ ಅವರ ಸೇವಾವಧಿಯನ್ನು ವಿಸ್ತರಿಸಲಾಗಿತ್ತು. ಅಷ್ಟಕ್ಕೂ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಅಡ್ವಾಣಿಯವರಿಗೆ ಭಾರತ ರತ್ನ ಸಲ್ಲಬೇಕೋ ಬೇಡವೋ ಎಂಬ ಚರ್ಚೆಯೇ ಅಪ್ರಸ್ತುತ. 1992 ರಿಂದ 2020 ಸೆಪ್ಟೆಂಬರ್ ವರೆಗೆ ದೀರ್ಘ 28 ವರ್ಷಗಳ ಕಾಲ ಗಂಭೀರ ಕ್ರಿಮಿನಲ್ ಆರೋಪವನ್ನು ಹೊತ್ತುಕೊಂಡ ಮತ್ತು 1989ರಲ್ಲಿ ರಥಯಾತ್ರೆ ನಡೆಸಿ ದೇಶದ ನಾಗರಿಕರನ್ನು ಹಿಂದೂ-ಮುಸ್ಲಿಮ್ ಆಗಿ ವಿಭಜಿಸಿದ್ದಲ್ಲದೇ ರಕ್ತದೋಕುಳಿಗೂ ಕಾರಣವಾದ ವ್ಯಕ್ತಿಯೋರ್ವ ಭಾರತ ರತ್ನಕ್ಕೆ ಅರ್ಹರೇ ಎಂದು ಚರ್ಚೆಗೊಳಗಾಗುವುದೇ ತಮಾಷೆ. ಅವರನ್ನು ಈಗಲೂ ಭಾರತದ ಗೃಹಸಚಿವರಾಗಿ ಯಾರೂ ನೆನಪಿಸುತ್ತಿಲ್ಲ. ಅಥವಾ ಸಚಿವರಾಗಿ ಮಹತ್ವದ ಕೊಡುಗೆ ಕೊಟ್ಟವರಾಗಿಯೂ ಸ್ಮರಿಸುತ್ತಿಲ್ಲ. ರಥಯಾತ್ರೆ ಮತ್ತು ಅದಕ್ಕೆ ಸಂಬಂಧಿಸಿದ ನಾಗರಿಕ ಸಂಕಷ್ಟಗಳ ಕಾರಣಕ್ಕಾಗಿಯೇ ಅವರೀಗಲೂ ಗುರುತಿಸಿಕೊಳ್ಳುತ್ತಿದ್ದಾರೆ. ಅವರು ಭಾರತ ರತ್ನಕ್ಕೆ ಯಾಕೆ ಅನರ್ಹ ಅನ್ನುವುದಕ್ಕೆ ಈ ಗುರುತೇ ಧಾರಾಳ ಸಾಕು.</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಅಡ್ವಾಣಿಯವರು ರಥಯಾತ್ರೆ ನಡೆಸುವ ಮೊದಲು ಬಾಬರೀ ಮಸೀದಿ ವಿವಾದವು ಅಯೋಧ್ಯೆಗೆ ಸೀಮಿತಗೊಂಡಿತ್ತು. ಬಾಬರೀ ಮಸೀದಿ ಇದ್ದ ಸ್ಥಳ ಯಾರಿಗೆ ಸೇರಿದ್ದು ಎಂಬ ಪ್ರಶ್ನೆ ನ್ಯಾಯಾಲಯದಲ್ಲಿ ತನ್ನ ಪಾಡಿಗೆ ನಡೆಯುತ್ತಿತ್ತು. ನ್ಯಾಯಾಲಯದ ತೀರ್ಪಿನ ಮೂಲಕ ಅದು ಇತ್ಯರ್ಥವಾಗುವುದಕ್ಕೂ ಅವಕಾಶವಿತ್ತು. ಒಂದುವೇಳೆ, ಈ ಪ್ರಕರಣವು ದೇಶವ್ಯಾಪಿ ಸಂಚಲನ ಸೃಷ್ಟಿಸಬೇಕಾದಷ್ಟು ಗಂಭೀರವೇ ಆಗಿರುತ್ತಿದ್ದರೆ, ಸರ್ದಾರ್ ವಲ್ಲಭಬಾಯಿ ಪಟೇಲ್, ಸಾವರ್ಕರ್ ಮತ್ತು ಆ ಕಾಲದಲ್ಲಿದ್ದ ಬಲಪಂಥೀಯ ನಾಯಕರು 1947 ಆಗಸ್ಟ್ 15ರ ಬಳಿಕ ಇದನ್ನೇ ಪ್ರಧಾನ ವಿಷಯವಾಗಿ ಎತ್ತಿಕೊಳ್ಳುತ್ತಿದ್ದರು ಮತ್ತು ದೇಶದಾದ್ಯಂತ ಅದಕ್ಕಾಗಿ ಅಭಿಯಾನವನ್ನೇ ನಡೆಸುತ್ತಿದ್ದರು. ಭಾರತ ಸ್ವತಂತ್ರಗೊಂಡ ವೇಳೆ ಇಲ್ಲಿನ ಮುಸ್ಲಿಮ್ ನಾಯಕತ್ವ ಅತ್ಯಂತ ದುರ್ಬಲವಾಗಿತ್ತು ಮತ್ತು ಮುಸ್ಲಿಮರ ದೊಡ್ಡದೊಂದು ಗುಂಪು ಪಾಕಿಸ್ತಾನವಾಗಿ ಬದಲಾಗಿತ್ತು. ಇಷ್ಟಿದ್ದೂ, ಆ ಕಾಲದಲ್ಲಿ ಈ ವಿವಾದವು ರಾಷ್ಟ್ರವ್ಯಾಪಿ ಸಂಚಲನ ಸೃಷ್ಟಿಸದೇ ಇರುವುದಕ್ಕೆ ಮತ್ತು ವಲ್ಲಭಬಾಯಿ ನೇತೃತ್ವದಲ್ಲಿ ಗಂಭೀರ ಪ್ರಯತ್ನ ನಡೆಯದೇ ಇರುವುದಕ್ಕೆ ಕಾರಣಗಳೇನು? ನಿಜವಾಗಿ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">1989ರ ಅಡ್ವಾಣಿ ರಥಯಾತ್ರೆ ನಿಕಷಕ್ಕೆ ಒಳಗಾಗಬೇಕಾದದ್ದೇ ಈ ಕಾರಣಕ್ಕಾಗಿ. ಬಾಬರಿ ಮಸೀದಿ ವಿವಾದವನ್ನು ಶಂಕರಾಚಾರ್ಯರ ಮಧ್ಯಸ್ಥಿಕೆಯಲ್ಲಿ ಇತ್ಯರ್ಥಪಡಿಸಲಾಗಿತ್ತು ಮತ್ತು ವಾಜಪೇಯಿಯವರು ಅದನ್ನು ಒಮ್ಮೆ ಪ್ರಸ್ತಾಪಿಸಿಯೂ ಇದ್ದರು ಎಂಬುದನ್ನು ಪರಿಗಣಿಸುವಾಗ ಅಡ್ವಾಣಿಯವರ ರಥಯಾತ್ರೆಯ ಮರ್ಮ ಅರ್ಥವಾಗುತ್ತದೆ. “ಆ ಜಾಗವನ್ನು ನಾವು ಹೋರಾಡಿಯೇ ಪಡಕೊಳ್ಳುತ್ತೇವೆ, ಮಾತುಕತೆಯ ಇತ್ಯರ್ಥ ಬೇಕಾಗಿಲ್ಲ...” ಎಂಬ ರಾಜಕೀಯ ನಿಲುವಿನ ಕಾರಣದಿಂದಾಗಿಯೇ ಈ ಪ್ರಕರಣ ಇಷ್ಟೊಂದು ರಕ್ತಪಾತಕ್ಕೆ ಮತ್ತು ಧಾರ್ಮಿಕ ವಿಭಜನೆಗೆ ಕಾರಣವಾಯಿತು ಎಂದೇ ಹೇಳಬೇಕು. ಇದರ ಸಂಪೂರ್ಣ ಹೊಣೆಯನ್ನು ಅಡ್ವಾಣಿಯವರೇ ಹೊರಬೇಕಾಗುತ್ತದೆ. ಅವರು ನಡೆಸಿದ ರಥಯಾತ್ರೆ ಮತ್ತು ಆ ಬಳಿಕ ಉಂಟಾದ ಕಾನೂನುಬಾಹಿರ ಧ್ವಂಸವು ಈ ದೇಶದ ಆತ್ಮಕ್ಕೆ ಮಾಡಿರುವ ಗಾಯ ಇನ್ನೂ ವಾಸಿಯಾಗಿಲ್ಲ. ಮಾತ್ರವಲ್ಲ, ಆ ಗಾಯವನ್ನು 3 ದಶಕಗಳ ಬಳಿಕ ಇವತ್ತಿಗೂ ಜೀವಂತ ಇಡಲಾಗಿದೆಯಲ್ಲದೇ, ಕೆದಕಿ ಕೆದಕಿ ಧರ್ಮ ಧ್ರುವೀಕರಣಕ್ಕೆ ಬಳಸಿಕೊಳ್ಳಲಾಗುತ್ತಿದೆ. ಅಡ್ವಾಣಿ ನೇತೃತ್ವ ನೀಡಿದ ರಾಜಕೀಯ ಪಕ್ಷವು ಇವತ್ತೂ ಅದರ ದುರ್ಲಾಭವನ್ನು ಪಡೆಯುತ್ತಲೂ ಇದೆ. ಹೀಗಿರುತ್ತಾ, </span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಭಾರತ ರತ್ನ ಅಡ್ವಾಣಿಯವರ ಮುಡಿಗೇರುವುದೆಂದರೆ, ಅದು ದೇಶದ ಪರಂಪರೆಗೆ ಆಗುವ ಅವಮಾನ. ದೇಶದ ಆತ್ಮಕ್ಕೆ ಚುಚ್ಚಿದ ಮತ್ತು ಶಾಂತಿ-ನೆಮ್ಮದಿಗೆ ಭಂಗ ತಂದ ಆರೋಪವನ್ನು ನಿರಂತರ 28 ವರ್ಷಗಳ ಎದುರಿಸಿದ ವ್ಯಕ್ತಿಯೋರ್ವ ಭಾರತ ರತ್ನವಾಗಿ ಗೌರವಿಸಲ್ಪಡುವುದು ಆಘಾತಕಾರಿ ಮತ್ತು ಆತಂಕಕಾರಿ.</span></div>a k kukkilahttp://www.blogger.com/profile/04432257424497331465noreply@blogger.com0tag:blogger.com,1999:blog-2716482703415659532.post-33022391637197520642024-02-03T07:08:00.000-08:002024-02-03T07:08:25.444-08:00ವಾಯಿಲ್ ದಹ್ ದಾಹ್, ಹಕೀಮ್ ಮತ್ತು ಕ್ರೌರ್ಯದ 100 ದಿನಗಳು<p><br /></p><div class="separator" style="clear: both; text-align: center;"><a href="https://blogger.googleusercontent.com/img/b/R29vZ2xl/AVvXsEhw0MfFpf1vtH7eOvc9u1aoa1Gwp8CjqiI9ktVWMo4cFLTuta72fHbvJ8ZuGvStMQ_2Q1JQJBELsKg1o6ASdg58dYwtFP_U-hkmTpLP2KEanXSqzuA08uRCg-_ZdOro16I20mRjqULaArCypmGyFoTLvHZqMEFfDVvGWCoYgFkKzvNByun86DmNnStGGbuK/s1143/edit%20pic.jpg" imageanchor="1" style="margin-left: 1em; margin-right: 1em;"><img border="0" data-original-height="555" data-original-width="1143" height="194" src="https://blogger.googleusercontent.com/img/b/R29vZ2xl/AVvXsEhw0MfFpf1vtH7eOvc9u1aoa1Gwp8CjqiI9ktVWMo4cFLTuta72fHbvJ8ZuGvStMQ_2Q1JQJBELsKg1o6ASdg58dYwtFP_U-hkmTpLP2KEanXSqzuA08uRCg-_ZdOro16I20mRjqULaArCypmGyFoTLvHZqMEFfDVvGWCoYgFkKzvNByun86DmNnStGGbuK/w400-h194/edit%20pic.jpg" width="400" /></a></div><br /><p><br style="background-color: white; color: #222222; font-family: Arial, Helvetica, sans-serif; font-size: small;" /><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಫೆಲೆಸ್ತೀನ್ ಮೇಲೆ ಇಸ್ರೇಲ್ನ ಮುತ್ತಿಗೆ 100 ದಿನಗಳನ್ನೂ ದಾಟಿ ಮುಂದುವರಿದಿದೆ. ಫೆಲೆಸ್ತೀನಿನ 85% ಮಂದಿ ಕೂಡಾ ತಮ್ಮ ಮನೆಮಾರುಗಳನ್ನು ತೊರೆದು ನಿರಾಶ್ರಿತರಾಗಿ ಅಲೆಯುತ್ತಿದ್ದಾರೆ. ಗಾಝಾದ ಬಹುತೇಕ ಎಲ್ಲ ಆಸ್ಪತ್ರೆಗಳೂ ಸ್ಥಗಿತಗೊಂಡಿವೆ. ಶಾಲೆ, ಕಾಲೇಜುಗಳು ಧರಾಶಾಹಿಯಾಗಿವೆ. ಯಾವ ಕ್ಷಣದಲ್ಲೂ ತಾವು ಹತ್ಯೆಗೀಡಾಗಬಹುದು ಎಂಬ ನಿರೀಕ್ಷೆಯಿಂದಲೇ ಫೆಲೆಸ್ತೀನಿಯರು ದಿನ ದೂಡುತ್ತಿದ್ದಾರೆ. ರೋಗಿಗಳು, ಗಾಯಾಳುಗಳು, ವೃದ್ಧರು, ಮಕ್ಕಳು ಮತ್ತು ಮಹಿಳೆಯರು ಈ ದಾಳಿಯಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜನನಿಬಿಡ ಅಪಾರ್ಟ್ಮೆಂಟ್ಗಳ ಮೇಲೆ ಇಸ್ರೇಲ್ ಬಾಂಬ್ ಹಾಕುತ್ತಿರುವುದನ್ನು ನೋಡಿದರೆ, ನರಮೇಧವೇ ಅದರ ಉದ್ದೇಶ ಅನ್ನುವುದನ್ನು ಸ್ಪಷ್ಟಪಡಿಸುತ್ತಿದೆ. ಹಮಾಸ್ನ ನೆಪದಲ್ಲಿ ಇಡೀ ಫೆಲೆಸ್ತೀನನ್ನು ನಿರ್ವೀರ್ಯಗೊಳಿಸುವುದು ಮತ್ತು ಸಂಪೂರ್ಣ ಪರಾವಲಂಬಿಯಾಗಿಸುವುದು ಅದರ ರಣತಂತ್ರವೆಂಬುದು ದಿನೇದಿನೇ ನಿಚ್ಚಲವಾಗುತ್ತಿದೆ.</span></p><p><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಈಗಾಗಲೇ ಹತ್ಯೆಗೀಡಾದ 23 ಸಾವಿರ ಮಂದಿ ಫೆಲೆಸ್ತೀನಿಯರ ಪೈಕಿ 10 ಸಾವಿರಕ್ಕಿಂತಲೂ ಅಧಿಕ ಮಕ್ಕಳೇ ಇದ್ದಾರೆ. 7 ಸಾವಿರಕ್ಕಿಂತಲೂ ಅಧಿಕ ಮಹಿಳೆಯರಿದ್ದಾರೆ. ಹಮಾಸನ್ನು ನಾಶ ಮಾಡುತ್ತೇವೆ ಎಂದು ಹೊರಟ ಇಸ್ರೇಲ್ ಎಲ್ಲವನ್ನೂ ನಾಶಮಾಡುತ್ತಿದೆ. ಈ ಕ್ರೌರ್ಯದ ಭೀಕರತೆಯನ್ನು ಪ್ರತಿದಿನ ಅಲ್ ಜಝೀರಾ, ಮಿಡ್ಲ್ ಈಸ್ಟ್ ಐಯಂಥ ಕೆಲವು ಅಂತಾರಾಷ್ಟ್ರೀಯ ಮಾಧ್ಯಮಗಳು ಬಿತ್ತರಿಸುತ್ತಲೂ ಇವೆ. ಇಸ್ರೇಲ್ನ ಕ್ರೌರ್ಯದ ತೀವ್ರತೆಯನ್ನು ಅಂದಾಜಿಸುವುದಕ್ಕೆ ಗಾಝಾದ 30 ವರ್ಷದ ಹಕೀಮ್ ಮತ್ತು 56 ವರ್ಷದ ವಾಯಿಲ್ ದಹ್ ದಾಹ್ ರ ಅನುಭವಗಳೇ ಧಾರಾಳ ಸಾಕು. ನಿಜವಾಗಿ, ಈ ಹಕೀಮ್- ಗಾಝಾ ಪರಿಸ್ಥಿತಿಯ ಒಂದು ತುದಿಯಾದರೆ ವಾಯಿಲ್ </span><span style="background-color: white; color: #222222; font-family: Arial, Helvetica, sans-serif; font-size: small;">ದಹ್ ದಾಹ್ </span><span style="background-color: white; color: #222222; font-family: Arial, Helvetica, sans-serif; font-size: small;">ರು ಇನ್ನೊಂದು ತುದಿ.</span></p><p><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಗಾಝಾದ ಕೆಲವು ಯುವಕರನ್ನು ಇಸ್ರೇಲ್ ಸೇನೆ ಬಂಧಿಸಿ ಕೊಂಡೊಯ್ಯುತ್ತಿರುವ ವೀಡಿಯೋ ಮತ್ತು ಚಿತ್ರಗಳು ಡಿಸೆಂಬರ್ ಮಧ್ಯಭಾಗದಲ್ಲಿ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಯುವಕರ ಮೈಮೇಲೆ ಒಳವಸ್ತ್ರವೊಂದನ್ನು ಬಿಟ್ಟು ಇನ್ನೇನೂ ಇರಲಿಲ್ಲ. ಮಂಡಿಯೂರಿ ಕುಳಿತಿದ್ದ ಈ ಗುಂಪಿನಲ್ಲಿ ಈ ಹಕೀಮ್ ಕೂಡಾ ಇದ್ದ. ಹಮಾಸ್ನ ಭೂಗತ ಸುರಂಗ ಮಾರ್ಗದ ಪತ್ತೆ ಕಾರ್ಯದಲ್ಲಿ ಇಸ್ರೇಲ್ ಯೋಧರು ಈ ಹಕೀಮ್ನನ್ನು ಮಾನವ ಬಾಂಬ್ ಆಗಿ ಪರಿವರ್ತಿಸುವ ತಂತ್ರ ಹೆಣೆದರು. ತಾವು ಪತ್ತೆ ಹಚ್ಚಿದ ಗಾಝಾದ ಸುರಂಗದೊಳಗೆ ಹಮಾಸ್ ಯೋಧರು ಇದ್ದಾರೋ ಇಲ್ಲವೋ ಎಂಬುದಾಗಿ ಈ ಯೋಧರಿಗೆ ಪರೀಕ್ಷಿಸಬೇಕಾಗಿತ್ತು. ಅದಕ್ಕಾಗಿ ಈ ಹಕೀಮ್ನನ್ನು ಬಳಸಿಕೊಳ್ಳಲು ಅವರು ನಿರ್ಧರಿಸಿದರು. ಈತನ ದೇಹಕ್ಕೆ ಬಾಂಬ್ ಬೆಲ್ಟನ್ನು ಕಟ್ಟಲಾಯಿತಲ್ಲದೇ, ತಲೆಗೊಂದು ಕ್ಯಾಮರಾವನ್ನೂ ಅಳವಡಿಸಲಾಯಿತು. ಬಳಿಕ ಸುರಂಗದೊಳಗೆ ಕಳುಹಿಸಿಕೊಡಲಾಯಿತು. ಸುರಂಗದೊಳಗಿನ ಪ್ರತಿಯೊಂದೂ ಆ ಕ್ಯಾಮರಾದ ಮೂಲಕ ಹೊರಗಿರುವ ಯೋಧರಿಗೆ ಸ್ಪಷ್ಟವಾಗಿ ಕಾಣಿಸುವ ರೀತಿಯಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಒಂದುವೇಳೆ,</span></p><p><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಸುರಂಗದೊಳಗೆ ಹಮಾಸ್ ಯೋಧರು ಅಡಗಿದ್ದರೆ ತಕ್ಷಣ ಈತನ ದೇಹಕ್ಕೆ ಕಟ್ಟಲಾಗಿದ್ದ ಬಾಂಬನ್ನು ಉಡಾಯಿಸುವುದು ಯೋಧರ ತಂತ್ರವಾಗಿತ್ತು. ಹಕೀಮ್ಗೂ ಅದು ಗೊತ್ತಿತ್ತು. ನಿನ್ನನ್ನು ದೇವನಲ್ಲಿಗೆ ಕಳುಹಿಸುತ್ತಿದ್ದೇವೆ ಎಂದೇ ಆತನನ್ನು ಕಳುಹಿಸುವ ಮೊದಲು ಯೋಧರು ತಿಳಿಸಿದ್ದರು. ಆದರೆ, ಸುರಂಗದೊಳಗೆ ಹಮಾಸ್ ಯೋಧರು ಪತ್ತೆಯಾಗದ ಕಾರಣ ಆತ ಜೀವಸಮೇತ ಹೊರಬಂದ ಮತ್ತು ಆತನನ್ನು ಯೋಧರು ಬಿಡುಗಡೆಗೊಳಿಸಿದರು. ಈ ಇಡೀ ಘಟನೆಯನ್ನು ಈ ಹಕೀಮ್ ಆ ಬಳಿಕ ಮಾಧ್ಯಮಗಳ ಜೊತೆ ಹಂಚಿಕೊಂಡ. ಈತನೊಬ್ಬನೇ ಅಲ್ಲ, 15 ವರ್ಷದ ಬಾಲಕನೂ ಸೇರಿದಂತೆ ಹಲವು ಮಂದಿ ಇಂಥ ಪರೀಕ್ಷೆಗೆ ಒಳಪಟ್ಟಿದ್ದಾರೆ ಎಂದೂ ವರದಿ ಇದೆ ಮತ್ತು ಅದರಲ್ಲಿ ಸ್ಫೋಟಕ್ಕೆ ಒಳಗಾದವರು ಎಷ್ಟು ಮಂದಿ ಅನ್ನುವುದು ಸ್ಪಷ್ಟವಾಗಿಲ್ಲ. ಹಾಗೆಯೇ,</span></p><p><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ವಾಯಿಲ್ </span><span style="background-color: white; color: #222222; font-family: Arial, Helvetica, sans-serif; font-size: small;">ದಹ್ ದಾಹ್</span><span style="background-color: white; color: #222222; font-family: Arial, Helvetica, sans-serif; font-size: small;"> ರದ್ದು ಇನ್ನೊಂದು ತುದಿ. ಅಲ್ ಜಝೀರಾ ಚಾನೆಲ್ನ ಪತ್ರಕರ್ತ ಮತ್ತು ಫೆಲೆಸ್ತೀನ್ ಚೀಫ್ ಬ್ಯೂರೋ ಕೂಡ ಆಗಿರುವ ಇವರು ಈ ವೃತ್ತಿಗಾಗಿ ತೆತ್ತಿರುವ ಬೆಲೆ ಅಪಾರವಾದದ್ದು. ಗಾಝಾದಲ್ಲಿ ವೃತ್ತಿನಿರತರಾಗಿರುವ ಪತ್ರಕರ್ತರನ್ನು ಇಸ್ರೇಲ್ ಬಾಂಬ್ ಹಾಕಿ ಸಾಯಿಸುತ್ತಿರುವುದು ಎಲ್ಲರಿಗೂ ಗೊತ್ತು. ಈಗಾಗಲೇ ೧೦೦ರಷ್ಟು ಪತ್ರಕರ್ತರನ್ನು ಇಸ್ರೇಲ್ ಬಾಂಬ್ ಹಾಕಿ ಸಾಯಿಸಿದೆ. ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ನಲ್ಲಿ ಇಸ್ರೇಲ್ ಈ ಕಾರಣಕ್ಕಾಗಿಯೇ ವಿಚಾರಣೆಗೂ ಒಳಗಾಗಿದೆ. ಈ ವಾಯಿಲ್ </span><span style="background-color: white; color: #222222; font-family: Arial, Helvetica, sans-serif; font-size: small;">ದಹ್ ದಾಹ್</span><span style="background-color: white; color: #222222; font-family: Arial, Helvetica, sans-serif; font-size: small;"> ರು ಕಳೆದ ಅಕ್ಟೋಬರ್ನಲ್ಲಿ ಅಲ್ ಜಝೀರಾ ಚಾನೆಲ್ಗಾಗಿ ಲೈವ್ ವರದಿ ನೀಡುತ್ತಿದ್ದಾಗಲೇ ಅವರ ಪತ್ನಿ, 15 ವರ್ಷದ ಮಗಳು, 7 ವರ್ಷದ ಮಗ ಮತ್ತು ಮೊಮ್ಮಗಳನ್ನು ಇಸ್ರೇಲ್ ಬಾಂಬ್ ಹಾಕಿ ಸಾಯಿಸಿತ್ತು. ಅಲ್ ಜಝೀರಾ ಫೋಟೋಗ್ರಾಫರ್ ಆಗಿದ್ದ 27 ವರ್ಷದ ಇವರ ಮಗ ಹಂಝ ಮತ್ತು ಮಗಳು ಬದುಕುಳಿದಿದ್ದರು. ಕಳೆದ ಜನವರಿ 7ರಂದು ಈ ಮಗನನ್ನೂ ಇಸ್ರೇಲ್ ಬಾಂಬ್ ಹಾಕಿ ಸಾಯಿಸಿದೆ. ಹೀಗೆ ಈ </span><span style="background-color: white; color: #222222; font-family: Arial, Helvetica, sans-serif; font-size: small;">ದಹ್ ದಾಹ್</span><span style="background-color: white; color: #222222; font-family: Arial, Helvetica, sans-serif; font-size: small;"> ತನ್ನ ಇಡೀ ಕುಟುಂಬವನ್ನೇ ಕಳಕೊಂಡು ಗಾಝಾದಲ್ಲಿ ಒಣ ಮರದಂತೆ ಅನಾಥವಾಗಿ ನಿಂತಿದ್ದಾರೆ. ನಿಜವಾಗಿ,</span></p><p><span style="background-color: white; color: #222222; font-family: Arial, Helvetica, sans-serif; font-size: small;">ಗಾಝಾದಲ್ಲಿ ತಾನು ನಡೆಸುತ್ತಿರುವ ನರಮೇಧವನ್ನು ಇಸ್ರೇಲ್ ಬಚ್ಚಿಡಲು ಪ್ರಯತ್ನಿಸುತ್ತಿದೆ. ಗಾಝಾ ಪ್ರವೇಶಕ್ಕೆ ಅಂತಾರಾಷ್ಟ್ರೀಯ ಮಾಧ್ಯಮ ಸಂಸ್ಥೆಗಳಿಗೆ ಇಸ್ರೇಲ್ ಅನುಮತಿಯನ್ನೂ ನೀಡುತ್ತಿಲ್ಲ. ಆದ್ದರಿಂದ, ಫೆಲೆಸ್ತೀನ್ ಕುರಿತು ಅಲ್ಲಿನ ನಾಗರಿಕರೇ ಸೆರೆ ಹಿಡಿದಿರುವ ಸಣ್ಣ ಪುಟ್ಟ ವೀಡಿಯೋಗಳು, ಚಿತ್ರಗಳು ಮತ್ತು ವರದಿಗಳನ್ನೇ ಜಾಗತಿಕ ಮಾಧ್ಯಮಗಳು ಇವತ್ತು ಆಶ್ರಯಿಸುವಂತಾಗಿದೆ. ಫೆಲೆಸ್ತೀನಿ ಪತ್ರಕರ್ತರು ಜೀವ ಕೈಯಲ್ಲಿ ಹಿಡಿದು ವೃತ್ತಿನಿರತರಾಗಬೇಕಾದ ಭಯಾನಕ ಸ್ಥಿತಿಯಿದೆ. ಅಂದಹಾಗೆ, ಯಾವುದೇ ವೃತ್ತಿನಿರತ ಪತ್ರಕರ್ತರಿಗೂ ನಾಗರಿಕ ಪತ್ರಕರ್ತರಿಗೂ ಸಾಕಷ್ಟು ವ್ಯತ್ಯಾಸ ಇದೆ. ವೃತ್ತಿನಿರತ ಪತ್ರಕರ್ತರಲ್ಲಿ ಕೌಶಲ್ಯ ಇರುತ್ತದೆ. ಯಾವುದನ್ನು ಹೇಗೆ, ಯಾವ ಕೋನದಲ್ಲಿ ಚಿತ್ರಿಸಬೇಕು ಮತ್ತು ಹೇಗೆ ವರದಿ ಮಾಡಬೇಕು ಎಂಬ ತಿಳುವಳಿಕೆ ಇರುತ್ತದೆ. ಆದರೆ ಕಂಡದ್ದನ್ನು ಮೊಬೈಲ್ನಲ್ಲಿ ಸೆರೆ ಹಿಡಿಯುವ ಸಾಮಾನ್ಯ ನಾಗರಿಕರಿಗೆ ಈ ತಿಳುವಳಿಕೆ ಮತ್ತು ಕೌಶಲ್ಯ ಇರುವುದಿಲ್ಲ. ಇವತ್ತು ಜಗತ್ತಿಗೆ ಲಭ್ಯವಾಗುತ್ತಿರುವುದು ಈ ಬಡಪಾಯಿ ನಾಗರಿಕರು ಸೆರೆಹಿಡಿದಿರುವ ಚಿತ್ರಗಳು ಮತ್ತು ವೀಡಿಯೋಗಳು ಹಾಗೂ ಅವರು ತಮಗೆ ತಿಳಿದಷ್ಟು ಬರೆದಿರುವ ವರ ದಿಗಳು. ಹಾಗಂತ, ಪತ್ರಕರ್ತರೇ ಅಲ್ಲದ ಇವರು ಸೆರೆಹಿಡಿದಿರುವ ಚಿತ್ರಗಳು ಮತ್ತು ವೀಡಿಯೋಗಳೇ ಇಷ್ಟು ಭಯಾನಕವಾಗಿದೆ ಮತ್ತು ಜಗತ್ತಿನ ಎದೆಗೂಡನ್ನು ನಡುಗಿಸುವಂತಾಗಿದೆ ಎಂದಮೇಲೆ, ವೃತ್ತಿನಿರತ ಪತ್ರಕರ್ತರು ಮುಕ್ತವಾಗಿ ತಿರುಗಿ ವರದಿ ಮಾಡುವಂತಿದ್ದರೆ ಆ ವರದಿ, ವೀಡಿಯೋ ಮತ್ತು ಚಿತ್ರಗಳು ಇನ್ನೆಷ್ಟು ಭಯಾನಕವಿದ್ದೀತು? ಬಹುಶಃ, ಈ ವಾಸ್ತವವನ್ನು ಇತರೆಲ್ಲರಿಗಿಂತ ಹೆಚ್ಚಾಗಿ ಇಸ್ರೇಲ್ ಅರಿತುಕೊಂಡಿದೆ. ಒಂದುವೇಳೆ,</span></p><p><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಸ್ವತಂತ್ರ ಪತ್ರಕರ್ತರು ಗಾಝಾ ಪ್ರವೇಶಿಸಿದರೆ, ಅವರ ವರದಿಗಾರಿಕೆಯಿಂದಾಗಿ ಈಗ ತನ್ನ ಪರ ಇರುವವರಲ್ಲಿ ಹೆಚ್ಚಿನ ಮಂದಿಯನ್ನೂ ತಾನು ಕಳಕೊಳ್ಳಬೇಕಾದೀತು ಎಂಬ ಭಯ ಅದಕ್ಕಿದೆ. ತನ್ನನ್ನು ಬೆಂಬಲಿಸುವ ರಾಷ್ಟ್ರಗಳಲ್ಲೇ ತನ್ನ ವಿರುದ್ಧ ಪ್ರತಿಭಟನೆಗಳು ಕಾಣಿಸಿಕೊಂಡೀತು ಮತ್ತು ಆಯಾ ರಾಷ್ಟ್ರಗಳು ತನ್ನನ್ನು ಕೈಬಿಟ್ಟೀತು ಎಂಬ ಆತಂಕ ಅದನ್ನು ಕಾಡುತ್ತಿದೆ. ಆ ಕಾರಣದಿಂದಲೇ ಫೆಲೆಸ್ತೀನ್ನಲ್ಲಿ ವೃತ್ತಿನಿರತರಾಗಿರುವ ಪತ್ರಕರ್ತರನ್ನು ಅದು ಹುಡುಕಿ ಹುಡುಕಿ ಸಾಯಿಸುತ್ತಿದೆ ಮತ್ತು ವಿದೇಶಿ ಪತ್ರಕರ್ತರನ್ನು ಗಾಝಾ ಪ್ರವೇಶಿಸದಂತೆ ತಡೆಯುತ್ತಿದೆ. ಅಷ್ಟಕ್ಕೂ,</span></p><p><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಅಣುಬಾಂಬೂ ಸೇರಿದಂತೆ ಅತ್ಯಾಧುನಿಕ ಶಸ್ತಾçಸ್ತçಗಳನ್ನು ಹೊಂದಿರುವ ದೇಶವೊಂದು ಅತ್ತ ದೇಶವೇ ಅಲ್ಲದ ಮತ್ತು ತನ್ನದೇ ಮಿಲಿಟರಿ ವ್ಯವಸ್ಥೆಯನ್ನೂ ಹೊಂದಿಲ್ಲದ ಭೂಪ್ರದೇಶದ ಮೇಲೆ 100 ದಿನಗಳಿಗಿಂತಲೂ ಅಧಿಕ ಸಮಯದಿಂದ ಸತತ ಬಾಂಬ್ ದಾಳಿ ನಡೆಸುತ್ತಿದೆ ಎಂಬುದು ಮಾನವ ಇತಿಹಾಸದಲ್ಲೇ ಮೊಟ್ಟಮೊದಲನೆಯದಾದ ಮತ್ತು ಅತ್ಯಂತ ಭೀಭತ್ಸಕರವಾದ ಕ್ರೌರ್ಯವಾಗಿದೆ. ಆಯುಧ ಬಲವಿಲ್ಲದ ಜನತೆಯೊಂದರ ಮೇಲೆ ಬಲಶಾಲಿ ರಾಷ್ಟ್ರವೊಂದು ನಡೆಸುತ್ತಿರುವ ಈ ಏಕಮುಖ ದಾಳಿಯನ್ನು ‘ಆತ್ಮರಕ್ಷಣೆ’ ಎಂಬ ಹೆಸರಲ್ಲಿ ಜಗತ್ತಿನ ಬಲಾಢ್ಯ ಶಕ್ತಿಗಳು ಸಮರ್ಥಿಸಿಕೊಳ್ಳುತ್ತಿರುವುದು ಮನುಷ್ಯತ್ವದ ಅಣಕವಾಗಿದೆ. ನಿಜವಾಗಿ, ವಿಶ್ವಸಂಸ್ಥೆ, ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಇತ್ಯಾದಿಗಳು ಬಡರಾಷ್ಟ್ರಗಳ ಮೇಲೆ ಸವಾರಿ ಮಾಡಲು ಬಲಾಢ್ಯರು ರೂಪಿಸಿಕೊಂಡಿರುವ ಆಯುಧಗಳೇ ಹೊರತು ಇ ನ್ನೇನಲ್ಲ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ.</span></p>a k kukkilahttp://www.blogger.com/profile/04432257424497331465noreply@blogger.com0tag:blogger.com,1999:blog-2716482703415659532.post-11584541892373117842024-02-03T06:47:00.000-08:002024-02-03T06:47:02.219-08:00ಅಪರಾಧಿಗಳು ಮತ್ತು ಪ್ರಭುತ್ವದ ಅನೈತಿಕ ನಂಟಿನ ಅನಾವರಣ<p><br /></p><div class="separator" style="clear: both; text-align: center;"><a href="https://blogger.googleusercontent.com/img/b/R29vZ2xl/AVvXsEg0QxTzxoypN4pq0CrJUAFw2EJBTFymhyq8boElYhv3HKSJLPUVzGblEohBj4_4dPU9nEv5qdeFsOX5ssketjlJtwVoEz7EDB0a0iAEJsFYtmV4Sr1UbCIzmXyaIzBkksAKsqujdRI8ruvA87TLaqcaY7S4b0jdVz_Nm6XejqVl6dpb-eLsN9yzoccKjpMM/s1143/edit%20pic%201.jpg" imageanchor="1" style="margin-left: 1em; margin-right: 1em;"><img border="0" data-original-height="555" data-original-width="1143" height="194" src="https://blogger.googleusercontent.com/img/b/R29vZ2xl/AVvXsEg0QxTzxoypN4pq0CrJUAFw2EJBTFymhyq8boElYhv3HKSJLPUVzGblEohBj4_4dPU9nEv5qdeFsOX5ssketjlJtwVoEz7EDB0a0iAEJsFYtmV4Sr1UbCIzmXyaIzBkksAKsqujdRI8ruvA87TLaqcaY7S4b0jdVz_Nm6XejqVl6dpb-eLsN9yzoccKjpMM/w400-h194/edit%20pic%201.jpg" width="400" /></a></div><br /><p><br /></p><span style="background-color: white; color: #222222; font-family: Arial, Helvetica, sans-serif; font-size: small;">`ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳು ಜೈಲಿನಿಂದ ಹೊರಗಿರುವುದಕ್ಕೆ ಅನರ್ಹರು' ಎಂದು ಸುಪ್ರೀಮ್ ಕೋರ್ಟು ತೀರ್ಪು ನೀಡುತ್ತಿದ್ದ ಹೊತ್ತಿನಲ್ಲೇ, 20 ವರ್ಷದ ಜೈಲು ಶಿಕ್ಷೆಗೆ ಗುರಿಯಾಗಿರುವ ಗುರ್ಮೀತ್ ರಾಮ್ ರಹೀಮ್ ಸಿಂಗ್ಗೆ ಬಿಡುಗಡೆಯ ಭಾಗ್ಯ ಸಿಕ್ಕಿದೆ. ಈತ ಸ್ವಘೋಷಿತ ಧಾರ್ಮಿಕ ನಾಯಕ. ದೇರಾ ಸಚ್ಚಾ ಸೌದಾ ಪಂಥದ ಮುಖ್ಯಸ್ಥ. ಬಿಜೆಪಿಯೊಂದಿಗೆ ನಿಕಟ ಸಂಬಂಧ ಇರುವ ವ್ಯಕ್ತಿಯಾಗಿಯೂ ಗುರುತಿಸಿಕೊಂಡಿದ್ದಾನೆ. ತನ್ನ ಆಶ್ರಮದಲ್ಲಿರುವ ಇಬ್ಬರ ಮೇಲೆ ಅತ್ಯಾಚಾರ ಎಸಗಿದ ಅಪರಾಧಕ್ಕಾಗಿ ಸಿಬಿಐ ನ್ಯಾಯಾಲಯದಿಂದ ದೋಷಿ ಎಂದು ಘೋಷಿಸಲ್ಪಟ್ಟವ. ಹರ್ಯಾಣದ ರೋಹ್ಟಕ್ ಜಿಲ್ಲೆಯ ಸುನರಿಯಾ ಜೈಲಿನಲ್ಲಿ ಕಳೆದ 2017ರಿಂದಲೂ ಬಂಧಿಯಾಗಿರುವ ಈತನಿಗೆ ನ್ಯಾಯಾಲಯವು 50 ದಿನಗಳ ಪೆರೋಲನ್ನು (ಬಿಡುಗಡೆ) ಮಂಜೂರು ಮಾಡಿದೆ. ಹಾಗಂತ,</span><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಇದು ಮೊದಲ ಪೆರೋಲ್ ಅಲ್ಲ. ಇದು ಕಳೆದ 24 ತಿಂಗಳುಗಳಲ್ಲಿ ಈತನಿಗೆ ಲಭಿಸಿರುವ 7ನೇ ಪೆರೋಲ್ ಮತ್ತು ಕಳೆದ ನಾಲ್ಕು ವರ್ಷಗಳಲ್ಲಿ ಸಿಕ್ಕಿರುವ 9ನೇ ಪೆರೋಲ್ ಕೂಡಾ ಹೌದು. ಕೇವಲ ಕಳೆದ ಒಂದೇ ವರ್ಷದಲ್ಲಿ ಈತನಿಗೆ 3 ಪೆರೋಲ್ಗಳು ಸಿಕ್ಕಿವೆ ಮತ್ತು ಆ ಮೂಲಕ ಆತ 91 ದಿನಗಳ ಕಾಲ ಜೈಲಿನಿಂದ ಹೊರಗೆ ಇದ್ದ. ದೇರಾ ಸಚ್ಚಾ ಸೌದಾದ ಮಾಜಿ ಮುಖ್ಯಸ್ಥ ಸತ್ನಾಮ್ ಸಿಂಗ್ ಜನ್ಮ ವಾರ್ಷಿಕೋತ್ಸವದಲ್ಲಿ ಭಾಗವಹಿಸುವುದಕ್ಕಾಗಿ ಪೆರೋಲ್ ಮೂಲಕ ಜೈಲಿನಿಂದ ಹೊರಬಂದ ಆತ, ಭಾರೀ ಗಾತ್ರದ ಖಡ್ಗದಿಂದ ಕೇಕ್ ಕತ್ತರಿಸಿದ್ದ. ಆ ವೀಡಿಯೋ ಆ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಹರ್ಯಾಣದಲ್ಲಿ ಪಂಚಾಯತ್ ಚುನಾವಣೆ ನಡೆಯುವುದಕ್ಕಿಂತ ತುಸು ಮುನ್ನ 2022ರ ಅಕ್ಟೋಬರ್ನಲ್ಲಿ ಈತನಿಗೆ ಪೆರೋಲ್ ಸಿಕ್ಕಿತ್ತು. ಹೀಗೆ ಬಿಡುಗಡೆಗೊಂಡ ಈತ ವರ್ಚುವಲ್ ಸತ್ಸಂಗ ನಡೆಸಿದ್ದ ಮತ್ತು ಬಿಜೆಪಿಯ ಹಲವು ಮುಖಂಡರು ಇದರಲ್ಲಿ ಭಾಗಿಯಾಗಿದ್ದರು. ತನ್ನ ತಾಯಿಯನ್ನು ನೋಡುವುದಕ್ಕಾಗಿ 2020 ಮತ್ತು 21ರಲ್ಲಿ ತಲಾ ಒಂದು ಬಾರಿ ಈತನಿಗೆ ಪೆರೋಲ್ ಸಿಕ್ಕಿತ್ತು. 2022ರಲ್ಲಂತೂ ಮೂರು ಬಾರಿ ಪೆರೋಲ್ ಸಿಕ್ಕಿತ್ತು. ಆಗೆಲ್ಲ ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಬಿಜೆಪಿ ಸರಕಾರವನ್ನು ವಿಪಕ್ಷಗಳು ತೀವ್ರವಾಗಿ ತರಾಟೆಗೆ ಎತ್ತಿಕೊಂಡಿದ್ದುವು. ಹಾಗಂತ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ರಾಜ್ಯ ಸರಕಾರದ ಸಹಕಾರ ಇಲ್ಲದೇ ಅಪರಾಧಿಯೋರ್ವ ಇಷ್ಟು ಸಲೀಸಾಗಿ ಪೆರೋಲ್ ಪಡಕೊಂಡು ಜೈಲಿನಿಂದ ಹೊರಡುವುದಕ್ಕೆ ಸಾಧ್ಯವಿಲ್ಲ ಎಂಬುದು ಎಲ್ಲರಿಗೂ ಗೊತ್ತು. ಬಿಲ್ಕೀಸ್ ಬಾನು ಪ್ರಕರಣದ ಅಪರಾಧಿಗಳಿಗೂ ಇಂಥದ್ದೇ ಪೆರೋಲ್ ಲಭಿಸಿದೆ. 2023 ಆಗಸ್ಟ್ 15 ರಂದು ಸನ್ನಡತೆಯ ಆಧಾರದಲ್ಲಿ ಈ 11 ಮಂದಿ ಅಪರಾಧಿಗಳು ಬಿಡುಗಡೆಗೊಳ್ಳುವುದಕ್ಕಿಂತ ಮೊದಲು ಹಲವಾರು ಬಾರಿ ಪೆರೋಲ್ಗಳನ್ನು ಪಡೆದಿದ್ದರು. ರಮೇಶ್ ಭಾಯಿ ರೂಪಾ ಭಾಯಿ ಚಂದನ ಎಂಬ ಅಪರಾಧಿ ಒಟ್ಟು 1198 ದಿನಗಳ ಕಾಲ ಜೈಲಿನಿಂದ ಹೊರಗಿದ್ದ. ರಾಜು ಭಾಯಿ ಬಾಬುಲಾಲ್ ಸೋನಿ ಎಂಬವ 1166 ದಿನಗಳ ಕಾಲ ಜೈಲಿನಿಂದ ಹೊರಗಿದ್ದ. ಪ್ರದೀಪ್ ರಮಣ್ ಲಾಲ್ ಮೋಧಿಯಾ ಎಂಬವನು 1011 ದಿನಗಳ ಕಾಲ ಜೈಲಿನಿಂದ ಹೊರಗಿದ್ದು ಓಡಾಡಿಕೊಂಡಿದ್ದ. ಇವರ ಹೊರತಾಗಿ ಜಸ್ವಂತ್ ಭಾಯಿ ಚತುರ್ ಭಾಯಿ ನೈ ಎಂಬವ 950 ದಿನಗಳ ಕಾಲ, ಗೋವಿಂದ ಭಾಯಿ ಲಖಮ್ ಭಾಯಿ ನೈ ಎಂಬವ 986 ದಿನಗಳ ಕಾಲ, ಶೈಲೇಶ್ ಭಾಯಿ ಚಿಮಣ್ ಲಾಲ್ ಭಟ್ 934 ದಿನಗಳ ಕಾಲ ಮತ್ತು ಬಿಪಿನ್ ಚಂದ್ರ ಕನ್ನಯ್ಯ ಲಾಲ್ ಜೋಷಿ ಎಂಬವ 909 ದಿನಗಳ ಕಾಲ ಜೈಲಿನಿಂದ ಹೊರಗಿದ್ದರು. ಈ ಅಪರಾಧಿಗಳ ಪೈಕಿ ಅತ್ಯಂತ ಕಡಿಮೆ ಕಾಲ ಜೈಲಿನಿಂದ ಹೊರಗಿದ್ದವನ ಹೆಸರು ಮಿತೇಶ್ ಭಾಯಿ ಚಿಮಣ್ ಲಾಲ್ ಭಟ್ ಎಂದಾಗಿದ್ದು, ಆತ 771 ದಿನಗಳ ಕಾಲ ಜೈಲಿನಿಂದ ಬಿಡುಗಡೆ ಹೊಂದಿದ್ದ. ಈ ಎಲ್ಲ ಮಾಹಿತಿಯನ್ನು ಖುದ್ದು ಗುಜರಾತ್ ಸರ್ಕಾರವೇ ಸುಪ್ರೀಮ್ ಕೋರ್ಟ್ಗೆ ತಿಳಿಸಿದೆ.</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">2002ರ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ನಡೆದ ಭೀಕರ ಹತ್ಯಾಕಾಂಡದ ಅಪರಾಧಿಗಳಿಗೆ ಗುಜರಾತ್ ಸರ್ಕಾರ ಕೊಟ್ಟ ಗೌರವ ಇದು. 21ರ ಹರೆಯದ ಗರ್ಭಿಣಿ ಬಿಲ್ಕೀಸ್ ಬಾನು ಮೇಲೆ ಈ ದುರುಳರು ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೇ ಆಕೆಯ ಮೂರು ವರ್ಷದ ಮಗಳನ್ನು ನೆಲಕ್ಕೆ ಅಪ್ಪಳಿಸಿ ಕೊಂದಿದ್ದರು ಮತ್ತು ಕುಟುಂಬದ 7 ಮಂದಿಯ ಹತ್ಯೆ ನಡೆಸಿದ್ದರು. ಈ ಅಪರಾಧ ಸಾಬೀತಾದ ಕಾರಣದಿಂದಲೇ ಸಿಬಿಐ ನ್ಯಾಯಾಲಯ 2008ರಲ್ಲಿ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ 2012ರಲ್ಲಿ ಎತ್ತಿ ಹಿಡಿದಿತ್ತು. ಆ ಬಳಿಕ ಸುಪ್ರೀಮ್ ಕೋರ್ಟಿನ ಕದ ತಟ್ಟುವ ಅವಕಾಶ ಈ ಅಪರಾಧಿಗಳಿಗೆ ಇತ್ತಾದರೂ ಅವರು ಅದಕ್ಕಾಗಿ ಪ್ರಯತ್ನಿಸಲಿಲ್ಲ. ಬಹುಶಃ, ಈ ಜೀವಾವಧಿ ಶಿಕ್ಷೆ ಎಲ್ಲಿ ಮರಣ ದಂಡನೆಯಾಗಿ ಪರಿವರ್ತನೆಯಾದೀತೋ ಎಂಬ ಭಯ ಇವರನ್ನು ಕಾಡಿರಬೇಕು. ನಿಜವಾಗಿ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಇವರು ಮಾಡಿರುವ ಕೃತ್ಯಕ್ಕೆ ಮರಣ ದಂಡನೆಯೇ ಸೂಕ್ತ ಶಿಕ್ಷೆ. ಯಾವಾಗ ಇವರಿಗೆ ವಿಧಿಸಲಾಗಿರುವ ಜೀವಾವಧಿ ಶಿಕ್ಷೆಯನ್ನು ಬಾಂಬೆ ಹೈಕೋರ್ಟು ಎತ್ತಿ ಹಿಡಿಯಿತೋ ಮುಂದೆ ಇವರ ಹಿತ ಕಾಯುವ ಕೆಲಸವನ್ನು ಗುಜರಾತ್ ಸರಕಾರ ವಹಿಸಿಕೊಂಡಂತೆ ಕಾಣಿಸುತ್ತಿದೆ. 2012ರಿಂದ 2023 ಆಗಸ್ಟ್ 15ರಂದು ಬಿಡುಗಡೆಯಾಗುವ ವರೆಗಿನ ಅವಧಿಯ ನಡುವೆ ಈ 11 ಮಂದಿ ಅಪರಾಧಿಗಳು ಕನಿಷ್ಠ 2 ವರ್ಷಗಳಿಂದ ಸುಮಾರು 4 ವರ್ಷಗಳ ತನಕ ಜೈಲಿನಿಂದ ಹೊರಗಿದ್ದುದು ಇದನ್ನೇ ಸೂಚಿಸುತ್ತದೆ. ಇದೀಗ ಈ ದುರುಳರನ್ನು ಸುಪ್ರೀಮ್ ಕೋರ್ಟು ಮತ್ತೆ ಜೈಲಿಗಟ್ಟಿದೆ. ಜೈಲಿಗೆ ಮರಳುವುದಕ್ಕೆ ಕಾಲಾವಕಾಶ ಕೋರಿ ಅವರು ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದೆ. ಇದು ಆಶಾದಾಯಕ ಬೆಳವಣಿಗೆಯಾದರೂ ಸಂಭ್ರಮಿಸುವಂಥದ್ದಲ್ಲ. ಯಾಕೆಂದರೆ,</span><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಆಡಳಿತಗಾರರು ಅಪರಾಧಿಗಳ ಪೋಷಕ ಪಾತ್ರವನ್ನು ನಿಭಾಯಿಸುತ್ತಿರುವ ವರೆಗೆ ಶಿಕ್ಷೆ ಎಂಬುದು ಸರಕಾರಿ ಕಡತಗಳಿಗಷ್ಟೇ ಸೀಮಿತವಾಗಿರುತ್ತದೆ. ಅಪರಾಧಿಗಳ ಜೊತೆ ಆಡಳಿತಗಾರರೇ ಶಾಮೀಲಾದರೆ ಕಾನೂನಿನ ಕಣ್ಣಿಗೆ ಮಣ್ಣೆರಚುವುದು ಕಷ್ಟ ಅಲ್ಲ. ಈ 11 ಮಂದಿ ಅಪರಾಧಿಗಳು ಕಳೆದ ಒಂದು ದಶಕದಲ್ಲಿ ನೂರಕ್ಕಿಂತಲೂ ಅಧಿಕ ಬಾರಿ ಪಡೆದಿರುವ ಬಿಡುಗಡೆ ಭಾಗ್ಯವೇ ಇದಕ್ಕೆ ಸಾಕ್ಷಿ. ನಿಜವಾಗಿ, ಅಪರಾಧಿಗಳಲ್ಲಿ ಪಶ್ಚಾತ್ತಾಪಭಾವವನ್ನು ಮೂಡಿಸಬೇಕು ಮತ್ತು ಸನ್ನಡತೆಯನ್ನು ಬೆಳೆಸಬೇಕು ಎಂಬ ಉದ್ದೇಶವೂ ನ್ಯಾಯಾಲಯ ವಿಧಿಸುವ ಶಿಕ್ಷೆಯ ಹಿಂದಿರುತ್ತದೆ. ಆದರೆ ಆಡಳಿತಗಾರರು ಅಪರಾಧಿಗಳ ಬೆಂಬಲಕ್ಕೆ ನಿಂತಾಗ ಈ ಉದ್ದೇಶವೇ ಅರ್ಥ ಕಳಕೊಳ್ಳುತ್ತದೆ. ಅಪರಾಧಿ ನಿಶ್ಚಿಂತರಾಗುತ್ತಾರೆ ಮತ್ತು ಈ ಹಿಂದಿಗಿಂತಲೂ ಹೆಚ್ಚು ಕ್ರೂರಿಗಳಾಗುತ್ತಾರೆ. 2020ರಲ್ಲಿ ಪೆರೋಲ್ ಮೂಲಕ ಜೈಲಿನಿಂದ ಹೊರಬಂದ ಮಿತೇಶ್ ಚಿಮಣ್ಲಾಲ್ ಭಟ್ ಇದಕ್ಕೊಂದು ನಿದರ್ಶನ. ಈ ಅವಧಿಯಲ್ಲಿ ಈತನ ಮೇಲೆ ಪ್ರಕರಣ ದಾಖಲಾಗಿತ್ತು. ಮಹಿಳೆಗೆ ಕಿರುಕುಳ ನೀಡಿದ್ದು, ಉದ್ದೇಶಪೂರ್ವಕವಾಗಿ ಅವಮಾನಿಸಿದ್ದು, ಶಾಂತಿಭಂಗಕ್ಕೆ ಪ್ರಚೋದನೆ ನೀಡಿದ್ದು ಹಾಗೂ ಕ್ರಿಮಿನಲ್ ಕೃತ್ಯವೂ ಸೇರಿದಂತೆ ಭಾರತೀಯ ದಂಡಸಂಹಿತೆ ಯ ಸೆಕ್ಷನ್ 354, 504 ಮತ್ತು 506ರಡಿಯಲ್ಲಿ ಈತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಹೀಗಿದ್ದೂ, ಆ ಬಳಿಕವೂ ಈತನಿಗೆ ಪೆರೋಲ್ ಲಭಿಸಿತು ಮತ್ತು ಆ ಮೂಲಕ 281 ದಿನಗಳ ಕಾಲ ಈತ ಜೈಲಿನಿಂದ ಹೊರಗಿದ್ದ. ಅಂದಹಾಗೆ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಗುರ್ಮೀತ್ ರಾಮ್ ರಹೀಮ್ನಿಗೆ ಸಿಗುತ್ತಿರುವ ಪೆರೋಲ್ಗಳನ್ನೂ ಈ ನೆಲೆಯಲ್ಲೇ ವಿಶ್ಲೇಷಿಸಬೇಕಾಗಿದೆ. ಜೀವಾವಧಿ ಶಿಕ್ಷೆಗೊಳಗಾಗಿರುವ ಸಾಮಾನ್ಯ ಅಪರಾಧಿಗಳಿಗೆ ಸಿಗದ ಪೆರೋಲ್ಗಳು ಇಂಥವರಿಗೆ ಯಾಕೆ ಮತ್ತು ಹೇಗೆ ಸಿಗುತ್ತದೆ ಎಂಬ ಪ್ರಶ್ನೆಯನ್ನು ಹರಡಿ ಕುಳಿತರೆ ಆಡಳಿತಗಾರರು ಮತ್ತು ಅಪರಾಧಿಗಳ ನಡುವಿನ ಅನೈತಿಕ ನಂಟು ಬಿಚ್ಚಿಕೊಳ್ಳುತ್ತಾ ಹೋಗುತ್ತದೆ. ಹಾಗಿದ್ದರೂ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ನ್ಯಾಯಮೂರ್ತಿ ಬಿ.ವಿ. ನಾಗರತ್ನ ಮತ್ತು ಉಜ್ವಲ್ ಭುಯಾನ್ ಅವರಿದ್ದ ನ್ಯಾಯಪೀಠದ ನಿಷ್ಠುರ ತೀರ್ಪನ್ನು ಶ್ಲಾಘಿಸಬೇಕಾಗಿದೆ. ನ್ಯಾಯಾಧೀಶರುಗಳು ಪ್ರಭುತ್ವದ ಪಕ್ಷಪಾತಿಳಾಗುತ್ತಿದ್ದಾರೋ ಎಂಬ ಸಂದೇಹ ಸಾರ್ವಜನಿಕವಾಗಿ ಬಲಗೊಳ್ಳುತ್ತಿರುವ ಹೊತ್ತಿನಲ್ಲೇ ಈ ತೀರ್ಪು ಪ್ರಕಟವಾಗಿದೆ. </span><span style="background-color: white; color: #222222; font-family: Arial, Helvetica, sans-serif; font-size: small;">ಸ್ವತಂತ್ರ ನ್ಯಾಯಾಲಯವೇ ಜನರ ಪಾಲಿನ ಬಹುದೊಡ್ಡ ಆಯುಧ. ಪ್ರಭುತ್ವ ಎಂದೂ ಸಂಪೂರ್ಣ ನ್ಯಾಯ ಪಕ್ಷಪಾತಿಯಾಗುವುದಕ್ಕೆ ಸಾಧ್ಯವೇ ಇಲ್ಲ. ಅದು ಓಟಿನ ಲೆಕ್ಕಾಚಾರದಲ್ಲೇ ನ್ಯಾಯಾನ್ಯಾಯವನ್ನು ನಿರ್ಧರಿಸುತ್ತದೆ. ಆದರೆ ನ್ಯಾಯಾಲಯ ಹಾಗಲ್ಲ. ಅದಕ್ಕೆ ಓಟಿನ ಹಂಗಿಲ್ಲ. ಆದ್ದರಿಂದ ಅದು ನ್ಯಾಯದ ಹೊರತು ಇನ್ನಾವುದಕ್ಕೂ ನಿಷ್ಠವಾಗಿರಲೇಬಾರದು. 11 ಮಂದಿ ಅಪರಾಧಿಗಳನ್ನು ಮತ್ತೆ ಜೈಲಿಗಟ್ಟಿ ಗುಜರಾತ್ ಸರ್ಕಾರಕ್ಕೆ ಪಾಠ ಕಲಿಸಿದ ನ್ಯಾಯಾಧೀಶರುಗಳಿಗೆ ಧನ್ಯವಾದಗಳು.</span></div>a k kukkilahttp://www.blogger.com/profile/04432257424497331465noreply@blogger.com0tag:blogger.com,1999:blog-2716482703415659532.post-6966198605273107472024-02-03T06:31:00.000-08:002024-02-03T06:31:16.645-08:00ಲಕ್ಷ್ಮೀ ಹೆಗ್ಡೆ ಉಳಿಸಿ ಹೋಗಿರುವ ಪ್ರಶ್ನೆಗಳು...<p> </p><div class="separator" style="clear: both; text-align: center;"><a href="https://blogger.googleusercontent.com/img/b/R29vZ2xl/AVvXsEjUql3hGUaSufM6XDTNSsk5iiImfjbDnXscHz-uxDMEeBCcHNCvpAC0bmNsD9pE4Eb_sym_VCcpsPxkhptn_7zO4EUJU-NvHtB5siYfRAJV96aq4AKpd3DcJjBlx61XHRLtjzp-SAmCl8ydHdplhECHURrDDXlRhu1LScPRbup9BBwLFFxeWHpRU96EEeu2/s1143/edit%20pic.jpg" imageanchor="1" style="margin-left: 1em; margin-right: 1em;"><img border="0" data-original-height="555" data-original-width="1143" height="194" src="https://blogger.googleusercontent.com/img/b/R29vZ2xl/AVvXsEjUql3hGUaSufM6XDTNSsk5iiImfjbDnXscHz-uxDMEeBCcHNCvpAC0bmNsD9pE4Eb_sym_VCcpsPxkhptn_7zO4EUJU-NvHtB5siYfRAJV96aq4AKpd3DcJjBlx61XHRLtjzp-SAmCl8ydHdplhECHURrDDXlRhu1LScPRbup9BBwLFFxeWHpRU96EEeu2/w400-h194/edit%20pic.jpg" width="400" /></a></div><br /><p></p><p>ಸನ್ಮಾರ್ಗ <span style="background-color: white; color: #222222; font-family: Arial, Helvetica, sans-serif; font-size: small;">ಸಂಪಾದಕೀಯ</span></p><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಮಾಧ್ಯಮಗಳ ಮುಖಪುಟದಲ್ಲಿ ಜಾಗ ಪಡೆಯಬೇಕಿದ್ದ ಲಕ್ಷ್ಮೀ ಹೆಗ್ಡೆ ಎಂಬ ತಾಯಿ ಯಾರ ಗಮನಕ್ಕೂ ಬಾರದೇ ತನ್ನ ಊರು ಇಳಂತಿಲದ ಅಷ್ಟಿಷ್ಟು ಹಿರಿಯರ ಕರುಣೆಯ ಮಾತುಗಳಿಗೆ ಆಹಾರವಾಗಿ ಜನವರಿ ಏಳರಂದು ಇಹಲೋಕ ತ್ಯಜಿಸಿದರು. ಹಾಗಂತ,</span><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;"><br /></span><div><span style="background-color: white; color: #222222; font-family: Arial, Helvetica, sans-serif; font-size: small;">ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಇಳಂತಿಲದ ಈ ಲಕ್ಷ್ಮೀ ಹೆಗ್ಡೆ ಪ್ರಸಿದ್ಧರಲ್ಲ. ಇನ್ಫೋಸಿಸ್ನ ಸುಧಾ ಮೂರ್ತಿ, ಓಟಗಾತಿ ಪಿ.ಟಿ. ಉಷಾ, ಕಾಂಗ್ರೆಸ್ ಮುಖಂಡೆ ಸೋನಿಯಾ ಗಾಂಧಿ ಅಥವಾ ಐಟಿ ಕ್ಷೇತ್ರದ ಕಿರಣ್ ಮಜುಂದಾರ್ರಂತೆ ಸಾಧಕಿಯೂ ಅಲ್ಲ. ಆದರೆ, ದ.ಕ. ಜಿಲ್ಲೆಯ ಕನ್ಯಾನದ ಭಾರತ್ ಸೇವಾಶ್ರಮದಲ್ಲಿ ನಡೆದ ಇವರ ಸಾವು ಸಮಾಜದ ಪಾಲಿಗೆ ಪಾಠದಾಯಕ. ನಿಜವಾಗಿ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಈ ತಾಯಿ ವೃದ್ಧಾಶ್ರಮದಲ್ಲಿ ಬದುಕಿನ ಸಂಧ್ಯಾಕಾಲವನ್ನು ಕಳೆಯಬೇಕಾದಂಥ ಅಸಹಾಯಕಿಯಲ್ಲ. ಇಳಂತಿಲದಲ್ಲಿ ಸ್ವಂತದ್ದೊಂದು ಮನೆಯೂ ಅವರಿಗಿತ್ತು. ಏಳು ಮಕ್ಕಳನ್ನೂ ಹೆತ್ತಿದ್ದರು. ಆದರೆ, ಈ ತಾಯಿ ಮಕ್ಕಳ ನಡುವೆ ಅದೇನು ವೈಮನಸ್ಯ ಉಂಟಾಯಿತೋ ಗೊತ್ತಿಲ್ಲ, ಈ ವೃದ್ಧ ತಾಯಿ ಮಕ್ಕಳ ನಿರ್ಲಕ್ಷ್ಯಕ್ಕೆ ಒಳಗಾದರು. ಕೊನೆಗೆ ಮಕ್ಕಳ ನಡವಳಿಕೆಗೆ ಬೇಸತ್ತು ಪೊಲೀಸ್ ಠಾಣೆಯ ಮೆಟ್ಟಿಲೇರಿದರು. ಮಕ್ಕಳಿಗೆ ಕರೆಯೂ ಹೋಯಿತು. ಆದರೆ ತಾಯಿಯ ಆರೈಕೆ ಮಾಡಲೋ ಕಾಳಜಿ ತೋರಲೋ ಮಕ್ಕಳು ನಿರಾಕರಿಸಿದರು. ಪೊಲೀಸ್ ಠಾಣೆಯಲ್ಲಿ ಒಂಟಿಯಾದ ತಾಯಿಯನ್ನು ಠಾಣಾಧಿಕಾರಿ ನಂದಕುಮಾರ್ ಭಾರತ್ ಸೇವಾಶ್ರಮಕ್ಕೆ ಸೇರಿಸಿದರು. ಮಾತ್ರವಲ್ಲ, ಮಗನ ಸ್ಥಾನದಲ್ಲಿ ನಿಂತು ಆಗಾಗ ಅವರ ಯೋಗಕ್ಷೇಮ ವಿಚಾರಿಸುತ್ತಾ ಪ್ರೀತಿ ತೋರಿಸುತ್ತಿದ್ದರು. ಇಂಥ ತಾಯಿ ಈ ಆಶ್ರಮದಲ್ಲಿ ನಿಧನರಾದಾಗಲೂ ಈ ಮಕ್ಕಳು ಕೊನೆಯ ಬಾರಿ ನೋಡುವುದಕ್ಕಾಗಲಿ ಅಂತ್ಯಸಂಸ್ಕಾರ ನೆರವೇರಿಸುವುದಕ್ಕಾಗಲಿ ಬರಲೇ ಇಲ್ಲ. ಆಶ್ರಮದಿಂದ ಕರೆ ಮಾಡಿ ವಿನಂತಿಸಿದರೂ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾಗಿಲ್ಲ. ಕೊನೆಗೆ ಆಶ್ರಮದವರೇ ಸೇರಿ ಅಂತಿಮ ವಿಧಿ ಪೂರೈಸಿದರು. ಒಂದುರೀತಿಯಲ್ಲಿ,</span><span style="background-color: white; color: #222222; font-family: Arial, Helvetica, sans-serif; font-size: small;">ಈ ಲಕ್ಷ್ಮೀ ಹೆಗ್ಡೆ ಕೆಲವು ಪ್ರಶ್ನೆಗಳನ್ನು ಉಳಿಸಿ ಹೋಗಿದ್ದಾರೆ. ಏಳು ಮಕ್ಕಳಿಗೆ ಜನ್ಮ ನೀಡಿದ ತಾಯಿಗೆ ಏಳು ಮಕ್ಕಳಲ್ಲಿ ಒಬ್ಬರೂ ನೆರವಿಗೆ ಬಾರದೇ ಇರುವುದಕ್ಕೆ ಕಾರಣಗಳೇನು? ಹಾಗಂತ, </span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಮಕ್ಕಳನ್ನು ಕಟಕಟೆಯಲ್ಲಿ ನಿಲ್ಲಿಸುವುದು ಸುಲಭ ಮತ್ತು ನಿಲ್ಲಿಸಲೇ ಬೇಕು. ಹೆತ್ತಮ್ಮನನ್ನು ಬೀದಿಗಟ್ಟಿರುವುದಕ್ಕೆ ಮಕ್ಕಳು ಕೊಡುವ ಯಾವುದೇ ಸಮರ್ಥನೆಯೂ ತಿರಸ್ಕಾರಕ್ಕಷ್ಟೇ ಯೋಗ್ಯ. ಈ ಮಕ್ಕಳೇನೂ ಪ್ರಯೋಗಾಲಯದಲ್ಲಿ ಹುಟ್ಟಿರುವುದಲ್ಲ. ಈ ಏಳು ಮಕ್ಕಳಲ್ಲಿ ಪ್ರತಿಯೊಂದನ್ನೂ ಈ ಲಕ್ಷ್ಮೀ ಹೆಗ್ಡೆ ಎಂಬ ತಾಯಿ 9 ತಿಂಗಳು ತನ್ನ ಹೊಟ್ಟೆಯಲ್ಲಿಟ್ಟು ಬೆಳೆಸಿದ್ದರು. ಗರ್ಭದಲ್ಲಿರುವ ಮಗುವಿಗೆ ಏನೂ ಹಾನಿಯಾಗದಿರಲಿ ಎಂದು ಈ 9 ತಿಂಗಳೂ ವಿಶೇಷ ಕಾಳಜಿಯನ್ನು ತೋರಿದ್ದರು. ಈ ಅವಧಿಯಲ್ಲಿ ಈ ಲಕ್ಷ್ಮೀ ಹೆಗ್ಡೆ ಎಷ್ಟು ಮದುವೆಗಳನ್ನು ತಪ್ಪಿಸಿಕೊಂಡಿದ್ದಾರೆ, ಎಷ್ಟು ಪ್ರಯಾಣಗಳನ್ನು ರದ್ದು ಪಡಿಸಿಕೊಂಡಿದ್ದಾರೆ, ಎಷ್ಟು ಧಾರ್ಮಿಕ, ಸಾಮಾಜಿಕ ಮತ್ತು ಕೌಟುಂಬಿಕ ಕಾರ್ಯಕ್ರಮಗಳಿಗೆ ಗೈರಾಗಿದ್ದಾರೆ ಅನ್ನುವುದು ಅವರಿಗಷ್ಟೇ ಗೊತ್ತು. ತಿನ್ನುವಾಗ, ಕುಡಿಯುವಾಗ, ಮಲಗುವಾಗ, ನಡೆಯುವಾಗ... ಹೀಗೆ ಎಲ್ಲ ಸಂದರ್ಭಗಳಲ್ಲೂ ಹೊಟ್ಟಿಯಲ್ಲಿರುವ ಮಗುವಿನ ಕ್ಷೇಮದ ದೃಷ್ಟಿಯಿಂದ ಈ ತಾಯಿ ವಿಶೇಷ ಕಾಳಜಿ ತೋರಿರಬಹುದು. ಈ ಏಳು ಮಕ್ಕಳ ಗರ್ಭ ಧರಿಸಿದಲ್ಲಿಂದ ತೊಡಗಿ ಪ್ರಸವದ ವರೆಗೆ ಮತ್ತು ಆ ಬಳಿಕದಿಂದ ದೊಡ್ಡವರಾಗುವವರೆಗೆ ಈ ಲಕ್ಷ್ಮೀ ಹೆಗ್ಡೆ ತೋರಿರಬಹುದಾದ ಅಸಾಧಾರಣ ತಾಳ್ಮೆ, ಪ್ರೀತಿ ಮತ್ತು ಕಾಳಜಿಯನ್ನು ಪದಗಳಲ್ಲಿ ಹಿಡಿದಿಡಲು ಸಾಧ್ಯವಿಲ್ಲ. ಈ ತಾಯ್ತನದ ಭಾರವನ್ನು ಓರ್ವ ಹೆಣ್ಣಿಗೆ ಮಾತ್ರ ನಿಭಾಯಿಸಲು ಸಾಧ್ಯ ಎಂದು ಹೇಳುವಷ್ಟು ಇದು ಸವಾಲಿನದ್ದು. ಅಂದಹಾಗೆ,</span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಇಷ್ಟೆಲ್ಲಾ ತ್ಯಾಗ-ಪ್ರೀತಿಯನ್ನು ತೋರಿ ಮಕ್ಕಳನ್ನು ಬೆಳೆಸುವ ತಾಯಿ ವೃದ್ಧಾಪ್ಯದಲ್ಲಿ ಈ ಮಕ್ಕಳಿಂದಲೇ ಯಾಕೆ ಪರಿತ್ಯಕ್ತರಾಗುತ್ತಾರೆ ಎಂಬ ಪ್ರಶ್ನೆ ಸಹಜವಾಗಿಯೇ ಇಲ್ಲಿ ಮುನ್ನೆಲೆಗೆ ಬರುತ್ತದೆ. ಮಕ್ಕಳನ್ನು ಕೃತಘ್ನರು, ಹೆತ್ತವರ ಮಹತ್ವ ಗೊತ್ತಿಲ್ಲದವರು, ಧರ್ಮದ್ರೋಹಿಗಳು ಎಂದೆಲ್ಲಾ ಷರಾ ಬರೆದು ಆ ಪ್ರಶ್ನೆಯಿಂದ ತಪ್ಪಿಸಿಕೊಳ್ಳಬಹುದು. ಆದರೂ ಮಕ್ಕಳೇಕೆ ಹೀಗಾಗುತ್ತಾರೆ ಅನ್ನುವ ಪ್ರಶ್ನೆಯ ಗಂಭೀರತೆ ಹಾಗೆಯೇ ಉಳಿಯುತ್ತದೆ. ಇದು ಓರ್ವ ಲಕ್ಷ್ಮೀ ಹೆಗ್ಡೆಯ ಪ್ರಶ್ನೆಯಲ್ಲ. ವೃದ್ಧಾಶ್ರಮದಲ್ಲಿರುವ ವೃದ್ಧರನ್ನು ಮಾತ್ರ ಕೇಂದ್ರೀಕರಿಸಿ ಕೇಳಬೇಕಾದ ಪ್ರಶ್ನೆಯೂ ಅಲ್ಲ. ಈ ದೇಶದಲ್ಲಿ ಕೋಟ್ಯಂತರ ವೃದ್ಧರಿದ್ದಾರೆ. ಅವರೆಲ್ಲ ವೃದ್ಧಾಶ್ರಮದಲ್ಲಿ ಇಲ್ಲದೇ ಇರಬಹುದು. ಆದರೆ ಮನೆಯೆಂಬ ವೃದ್ಧಾಶ್ರಮದಲ್ಲಿ ನಿತ್ಯ ಕಣ್ಣೀರಿನೊಂದಿಗೆ ಬದುಕುತ್ತಿದ್ದಾರೆ ಎಂದು ವರ್ಷಂಪ್ರತಿ ಬಿಡುಗಡೆಗೊಳ್ಳುವ ಸಮೀಕ್ಷಾ ವರದಿಗಳು ಹೇಳುತ್ತವೆ. ಮಗ ಮತ್ತು ಸೊಸೆ ಅಥವಾ ಮಗಳು ಮತ್ತು ಗಂಡ ಅಥವಾ ಇನ್ನಿತರ ಆಶ್ರಯದಾತರಿಂದ ನಿತ್ಯ ಮಾನಸಿಕ ಮತ್ತು ದೈಹಿಕ ಶೋಷಣೆಗೆ ಅವರು ಗುರಿಯಾಗುತ್ತಾ ಜೀವನ ಪ್ರೀತಿಯನ್ನೇ ಮರೆತು ಬದುಕುತ್ತಿದ್ದಾರೆ ಎಂದು ಈ ಸಮೀಕ್ಷೆಗಳು ಹೇಳುತ್ತಲೇ ಇವೆ. ವರ್ಷಂಪ್ರತಿ ಇಂಥವರ ಸಂಖ್ಯೆ ಅಧಿಕವಾಗುತ್ತಲೂ ಇದೆ. ಇದಕ್ಕೆ ಏನು ಕಾರಣ? ಹೆತ್ತು ಹೊತ್ತು ಸಾಕಿ ಬೆಳೆಸಿದವರೇ ಮಕ್ಕಳ ಪಾಲಿಗೆ ಭಾರ ಅನ್ನಿಸಿಕೊಳ್ಳಲು ಕಾರಣ ಏನು? ಹೆತ್ತವರ ಪಾಲೂ ಇದರಲ್ಲಿ ಇದೆಯೇ? ಅವರು ಮಕ್ಕಳ ನಡುವೆ ಪಕ್ಷಪಾತಿ ವರ್ತನೆ ತೋರುತ್ತಾರೆಯೇ? ಒಂದಿಬ್ಬರ ಪರ ವಹಿಸಿ ಉಳಿದ ಮಕ್ಕಳನ್ನು ನಿರ್ಲಕ್ಷಿಸುವಂಥ ವರ್ತನೆ ಅವರಲ್ಲಿದೆಯೇ? ಆಸ್ತಿಯಲ್ಲಿ ಅನ್ಯಾಯವಾಗಿ ವಿಲೇವಾರಿ ಮಾಡುತ್ತಾರೆಯೇ? ಮಕ್ಕಳಿಗೆ ಕೊಡುವ ಪ್ರೀತಿಯಲ್ಲೂ ತಾರತಮ್ಯ ಎಸಗುತ್ತಾರೆಯೇ? ಅನುಕೂಲಸ್ಥ ಮಗನ ಅಥವಾ ಮಗಳ ಪರ ವಹಿಸುವ ಮತ್ತು ಅದರಿಂದಾಗಿ ಕೌಟುಂಬಿಕ ಏರುಪೇರುಗಳಾಗುವ ಘಟನೆಗಳು ಹೆಚ್ಚತೊಡಗಿವೆಯೇ? ಅಥವಾ ಬಡತನ ಮತ್ತು ಔಷಧಿಗಾಗಿ ಖರ್ಚು ಮಾಡಲಾಗದ ಅಸಹಾಯಕತೆಯು ಹೆತ್ತವರ ಮೇಲೆ ಮಕ್ಕಳು ಏರಿ ಹೋಗುವುದಕ್ಕೆ ಮತ್ತು ಚುಚ್ಚು ಮಾತುಗಳಿಗೆ ಕಾರಣವಾಗುತ್ತಿದೆಯೇ? ಅಷ್ಟಕ್ಕೂ,</span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಬಾಲ್ಯದಿಂದ ತೊಡಗಿ ಯೌವನ ಪ್ರಾಯದವರೆಗೆ ಪ್ರತಿಯೊಬ್ಬರಿಗೂ ಹೆತ್ತವರಿಂದಲೋ ಶಿಕ್ಷಕರಿಂದಲೋ ಸಮಾಜದಿಂದಲೋ ಜೀವನ ಪಾಠ ಲಭಿಸುತ್ತಲೇ ಇರುತ್ತದೆ. ಹಾಗೆ ಮಾಡಬೇಕು, ಹೀಗೆ ಮಾಡಬಾರದು, ಹೇಗೆ ವರ್ತಿಸಬೇಕು ಮತ್ತು ಹೇಗೆ ಬಾರದು ಇತ್ಯಾದಿಗಳನ್ನು ಈ ಪ್ರಾಯದಲ್ಲಿ ಹೇಳಿ ಕೊಡಲಾಗುತ್ತದೆ. ಹಾಗಂತ, ಇಂಥದ್ದೇ ತರಬೇತಿಯು ವೃದ್ಧಾಪ್ಯಕ್ಕೆ ತಲುಪುವ ಹೆತ್ತವರಿಗೂ ನೀಡಬೇಕಾದ ಅಗತ್ಯ ಇದೆಯೇ? ವೃದ್ಧಾಪ್ಯಕ್ಕೆ ತಲುಪುವ ಪ್ರಾಯದಲ್ಲಿ ಹೇಗೆ ಜೀವಿಸಬೇಕು, ಮಕ್ಕಳು ಮತ್ತು ಮರಿಮಕ್ಕಳೊಂದಿಗೆ ಹೇಗಿರಬೇಕು, ಮನೆಯ ವಾತಾವರಣವನ್ನು ಹೇಗೆ ತನಗೆ ಪೂರಕವಾಗಿ ಬಳಸಿಕೊಳ್ಳಬೇಕು, ತನ್ನ ಆಸೆ-ಇಂಗಿತವನ್ನು ಪೂರೈಸಿಕೊಳ್ಳುವುದಕ್ಕೆ ಯಾವ ರೀತಿಯ ವರ್ತನೆ ಅಗತ್ಯ.. ಎಂಬಿತ್ಯಾದಿ ತರಬೇತಿಯನ್ನು ಹಿರಿಯರಿಗೆ ನೀಡುವ ಕಾರ್ಯಾಗಾರಗಳ ಅಗತ್ಯ ಇದೆಯೇ? ಬಾಲ್ಯದಲ್ಲಿ ಮಕ್ಕಳು ಹಠಮಾರಿಗಳಾಗುವಂತೆಯೇ ಹಿರಿಪ್ರಾಯಕ್ಕೆ ತಲುಪಿದವರೂ ಹಠಮಾರಿಗಳಾಗುತ್ತಾರೆ. ಇಂಥ ಹಿರಿಯರಿರುವ ಮನೆಗಳ ಸಮೀಕ್ಷೆ ಮತ್ತು ಮಕ್ಕಳಿಗೆ ಆ ಹಿರಿಯರ ಮನಸ್ಥಿತಿಯನ್ನು ಅರ್ಥ ಮಾಡಿಸುವ ವ್ಯವಸ್ಥಿತ ಪ್ರಯತ್ನಗಳು ನಡೆಯಬೇಕಾಗಿದೆಯೇ? ನಿಜವಾಗಿ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಮಕ್ಕಳ ಪಾಲಿನ ಸ್ವರ್ಗ ಮತ್ತು ನರಕ ಅವರ ಹೆತ್ತವರಾಗಿದ್ದಾರೆ ಎಂಬ ಅತೀ ಪ್ರಬಲ ಮತ್ತು ಪರಿಣಾಮಕಾರಿ ಪರಿಕಲ್ಪನೆ ಇಸ್ಲಾಮಿನದ್ದು. ಹೆತ್ತವರ ಮನ ನೋಯಿಸುವ ಮಕ್ಕಳು ದೇವಕೋಪಕ್ಕೆ ತುತ್ತಾಗುತ್ತಾರೆ ಎಂಬ ಅತಿ ಮಹತ್ವದ ಸಂದೇಶವನ್ನು ಇಸ್ಲಾಮ್ ಸಾರುತ್ತದೆ. ವೃದ್ಧ ಹೆತ್ತವರ ಬಗ್ಗೆ ‘ಛೆ’ ಎಂಬ ಪದವನ್ನೂ ಬಳಸಬಾರದು ಎಂದು ಪವಿತ್ರ ಕುರ್ಆನ್ ತಾಕೀತು ಮಾಡಿದೆ. ಹಿಂದೂ ಧರ್ಮದಲ್ಲೂ ಹೆತ್ತವರ ಬಗ್ಗೆ ಮೌಲ್ಯಯುತ ಆದೇಶಗಳಿವೆ. ಶ್ರವಣ ಕುಮಾರನ ಕತೆಯನ್ನು ಓದಿಯೇ ಎಲ್ಲ ಮಕ್ಕಳೂ ಬೆಳೆಯುತ್ತಿದ್ದಾರೆ. ಸಮಸ್ಯೆ ಏ ನೆಂದರೆ, ಬಾಲ್ಯದಲ್ಲಿ ಕಲಿತ ಪಾಠ ಅವರು ಬೆಳೆದು ದೊಡ್ಡವರಾದಾಗ ಪಾಲನೆಗೆ ಬರುತ್ತಿಲ್ಲ ಎಂಬುದು. ಆದ್ದರಿಂದಲೇ, ಲಕ್ಷ್ಮೀ ಹೆಗ್ಡೆ ಮುಖ್ಯವಾಗುತ್ತಾರೆ. ಇಂಥವರ ಸಂಖ್ಯೆ ಅಸಂಖ್ಯ ಇದ್ದಿರಬಹುದಾದರೂ ಹೀಗೆ ಬಹಿರಂಗಕ್ಕೆ ಬರುವುದು ಬಹಳ ಕಡಿಮೆ. ಅಷ್ಟಕ್ಕೂ, </span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;"> ಆಗೊಮ್ಮೆ ಈಗೊಮ್ಮೆ ಬೆಳಕಿಗೆ ಬರುವ ಇಂಥ ಸುದ್ದಿಗಳನ್ನು ಪತ್ರಿಕೆಗಳು ಮುಖಪುಟದಲ್ಲಿ ಪ್ರಕಟಿಸಿದರೆ, ಅದು ಸಾರ್ವಜನಿಕ ಚರ್ಚೆಗೂ ಒಳಗಾಗಬಹುದು ಮತ್ತು ಒಂದಷ್ಟು ಜಾಗೃತಿಗೂ ಕಾರಣವಾಗಬಹುದು.</span></div>a k kukkilahttp://www.blogger.com/profile/04432257424497331465noreply@blogger.com0tag:blogger.com,1999:blog-2716482703415659532.post-44210180110017761412024-01-11T04:24:00.000-08:002024-01-11T04:24:49.463-08:00ಮುಸ್ಲಿಮರೇ, ಶ್ರೀರಾಮನ ವಿರೋಧಿಯಾಗಿಸುವ ಸಂಚಿಗೆ ಬಲಿಯಾಗಬೇಡಿ<p> </p><p></p><div class="separator" style="clear: both; text-align: center;"><a href="https://blogger.googleusercontent.com/img/b/R29vZ2xl/AVvXsEghAbU8Uz3AubU1SbhhQT74omsn9Wr9s9XYXrsY70p3uPrWtwvaLKf8y-1AWAD_v7KIk3x6rr6z6Q2qiB8xCfVxREAODgrAKP8Kw85Z5VJiOtoycWsPMn5_QJ7xDQFhyphenhyphenYEZNvcEGAEguzDADzQ-sqC3IyiYQjVyQa6wVqm3hxrdXPRK5gji2iFbcaaDpEyY/s1143/editorial%20pic.jpg" imageanchor="1" style="margin-left: 1em; margin-right: 1em;"><img border="0" data-original-height="555" data-original-width="1143" height="194" src="https://blogger.googleusercontent.com/img/b/R29vZ2xl/AVvXsEghAbU8Uz3AubU1SbhhQT74omsn9Wr9s9XYXrsY70p3uPrWtwvaLKf8y-1AWAD_v7KIk3x6rr6z6Q2qiB8xCfVxREAODgrAKP8Kw85Z5VJiOtoycWsPMn5_QJ7xDQFhyphenhyphenYEZNvcEGAEguzDADzQ-sqC3IyiYQjVyQa6wVqm3hxrdXPRK5gji2iFbcaaDpEyY/w400-h194/editorial%20pic.jpg" width="400" /></a></div><p></p><p><br /></p><span style="background-color: white; color: #222222; font-family: Arial, Helvetica, sans-serif; font-size: small;">ಅಯೋಧ್ಯೆಯ ಬಾಬರಿ ಮಸೀದಿ ವಿವಾದಕ್ಕೆ ಸಂಬಂಧಿಸಿ 2019 ನವೆಂಬರ್ 9ರಂದು ಸುಪ್ರೀಮ್ ಕೋರ್ಟು ನೀಡಿದ ಆದೇಶದಲ್ಲಿ ಮೂರು ಪ್ರಮುಖ ಅಂಶಗಳಿದ್ದುವು. </span><div><span style="background-color: white; color: #222222; font-family: Arial, Helvetica, sans-serif; font-size: small;">1. ಧ್ವಂಸಗೊಂಡ ಮಸೀದಿ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅವಕಾಶ. </span></div><div><span style="background-color: white; color: #222222; font-family: Arial, Helvetica, sans-serif; font-size: small;">2. ಬದಲಿ ಜಾಗದಲ್ಲಿ ಮಸೀದಿ ನಿರ್ಮಾಣ. </span></div><div><span style="background-color: white; color: #222222; font-family: Arial, Helvetica, sans-serif; font-size: small;">3. ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿರುವುದು ಕ್ರಿಮಿನಲ್ ಕೃತ್ಯ. </span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಆದರೆ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಸುಪ್ರೀಮ್ ಕೋರ್ಟ್ ನ ಐವರು ನ್ಯಾಯಾಧೀಶರ ಈ ಒಮ್ಮತದ ತೀರ್ಪನ್ನು ಉನ್ನತ ನ್ಯಾಯಾಂಗ ತಜ್ಞರೇ ಪ್ರಶ್ನಿಸಿದ್ದರು. ಬ್ಲಂಡರ್ ಅಂದಿದ್ದರು. ಮುಸ್ಲಿಮ್ ಸಮುದಾಯವಂತೂ ಈ ತೀರ್ಪಿನ ಬಗ್ಗೆ ತಮ್ಮ ತೀವ್ರ ಅಸಮಾಧಾನ ಸೂಚಿಸಿತ್ತು. ಆದರೆ, ಸುಪ್ರೀಮ್ ಕೋರ್ಟಿಗಿಂತ ಉನ್ನತ ನ್ಯಾಯಾಂಗ ಪೀಠ ಇಲ್ಲದೇ ಇರುವುದರಿಂದ ಈ ತೀರ್ಪಿಗೆ ತಲೆಬಾಗಬೇಕಾದುದು ಎಲ್ಲರ ಪಾಲಿಗೂ ಸಾಂವಿಧಾನಿಕ ಬೇಡಿಕೆಯಾಗಿತ್ತು. ತೀವ್ರ ಅಸಮಾಧಾನವಿದ್ದರೂ ಭಾರತೀಯ ಮುಸ್ಲಿಮರು ಈ ತೀರ್ಪಿಗೆ ಬದ್ಧವಾಗಿ ನಡಕೊಂಡರು. ಇದೀಗ ರಾಮಮಂದಿರವು ಉದ್ಘಾಟನೆಗೆ ಸಿದ್ಧವಾಗಿದೆ. ಈಗಾಗಲೇ ಪ್ರಮುಖ ಹಿಂದಿ ಮತ್ತು ಇಂಗ್ಲಿಷ್ ಚಾನೆಲ್ಗಳು ರಾಮಮಂದಿರವನ್ನು ಕೇಂದ್ರೀಕರಿಸಿ ಚರ್ಚೆ ಪ್ರಾರಂಭಿಸಿವೆ. ಕನ್ನಡ ಚಾನೆಲ್ಗಳೂ ಹಿಂದೆ ಬಿದ್ದಿಲ್ಲ. ಹಾಗಂತ, </span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಈ ಚರ್ಚೆ ಹೆಚ್ಚು ಆಕರ್ಷಕವಾಗಬೇಕಾದರೆ ಮತ್ತು ಜನರನ್ನು ತಲುಪಬೇಕಾದರೆ ಮುಸ್ಲಿಮರನ್ನು ಒಂದಲ್ಲ ಒಂದು ರೀತಿಯಲ್ಲಿ ಪಾಲುಗೊಳಿಸಲೇಬೇಕಾದ ಅನಿವಾರ್ಯತೆ ಇವುಗಳಿಗೆಲ್ಲ ಇದ್ದೇ ಇದೆ. ಆದ್ದರಿಂದ, ಈ ಚಾನೆಲ್ಗಳು ಬಡ ಮುಸ್ಲಿಮರ ಬಾಯಿಗೆ ಮೈಕ್ ಇಟ್ಟು ಅಭಿಪ್ರಾಯ ಸಂಗ್ರಹಿಸುವ ಪ್ರಯತ್ನ ಮಾಡಬಹುದು. ಚರ್ಚೆಯ ಹೆಸರಲ್ಲಿ ಮುಸ್ಲಿಮರನ್ನು ಕೂರಿಸಿ, ಪ್ರಚೋದನೆಗೆ ಒಳಪಡಿಸಿ ರಾಮನನ್ನೇ ಕಟಕಟೆಯಲ್ಲಿ ನಿಲ್ಲಿಸುವ ಮಾತುಗಳನ್ನು ಹೊರಡಿಸುವುದಕ್ಕೆ ಪ್ರಯತ್ನಿಸಲೂ ಬಹುದು. ಸುಪ್ರೀಮ್ ಕೋರ್ಟು ತೀರ್ಪಿಗೆ ವ್ಯಕ್ತಪಡಿಸುವ ಅಸಾಮಾಧಾನವನ್ನೇ ಕೋರ್ಟು ನಿಂದನೆಯಾಗಿ ಮತ್ತು ಸಂವಿಧಾನ ವಿರೋಧಿಯಾಗಿ ಬಿಂಬಿಸಲೂ ಬಹುದು. ಗಡ್ಡ, ಟೋಪಿ, ಪೈಜಾಮ ಧರಿಸಿದ ಮುಸ್ಲಿಮನಿಂದ ರಾಮಮಂದಿರಕ್ಕೋ ಅಥವಾ ರಾಮನಿಗೋ ಅಪಚಾರವಾಗುವ ರೀತಿಯ ಹೇಳಿಕೆಗಳನ್ನು ಪ್ರಚೋದಿಸಿಯೋ ಪುಸಲಾಯಿಸಿಯೋ ಪಡೆದು ಮುಸ್ಲಿಮ್ ಸಮುದಾಯವನ್ನೇ ಕಟಕಟೆಯಲ್ಲಿ ನಿಲ್ಲಿಸುವುದಕ್ಕೆ ಪ್ರಯತ್ನಿಸಬಹುದು. ಈ ಹಿನ್ನೆಲೆಯಲ್ಲಿ, ಮುಸ್ಲಿಮ್ ಸಮುದಾಯ ಈಗಿಂದೀಗಲೇ ಜಾಗರೂಕ ವಾಗಬೇಕು. ಮುಸ್ಲಿಮರನ್ನು ಖೆಡ್ಡಾಕ್ಕೆ ಬೀಳಿಸಿ ಮಜಾ ನೋಡುವ ಮಾಧ್ಯಮ ತಂತ್ರಗಳಿಗೆ ಬಲಿ ಬೀಳದಂತೆ ಎಚ್ಚರ ವಹಿಸಿಕೊಳ್ಳಬೇಕು. ನಿಜವಾಗಿ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಮುಸ್ಲಿಮರು ಶ್ರೀರಾಮನ ವಿರೋಧಿಗಳಲ್ಲ. ಶ್ರೀರಾಮನನ್ನು ವಿರೋಧಿಸುವುದಕ್ಕೆ ಕಾರಣಗಳೇ ಇಲ್ಲ. ಶ್ರೀರಾಮ ಈ ಮಣ್ಣಿನ ಬಹುದೊಡ್ಡ ಸಮುದಾಯದ ಪಾಲಿಗೆ ಆದರ್ಶ ಪುರುಷ. ಆತನಿಗಾಗಿ ಒಂದಲ್ಲ, ಸಾವಿರ ಮಂದಿರ ಕಟ್ಟುವುದಿದ್ದರೂ ಅದಕ್ಕೆ ಮುಸ್ಲಿಮರಿಂದ ಅಡ್ಡಿಯೂ ಇಲ್ಲ. ಆದರೆ, ಮರ್ಯಾದಾ ಪುರುಷೋತ್ತಮ ಎಂದು ಗೌರವಿಸಲ್ಪಡುವ ಶ್ರೀರಾಮನನ್ನು ಮುಸ್ಲಿಮ್ ದ್ವೇಷಕ್ಕಾಗಿ ರಾಜಕೀಯ ಶಕ್ತಿಗಳು ಬಳಸುತ್ತಿರುವುದಕ್ಕೆ ಮುಸ್ಲಿಮ್ ಸಮುದಾಯಕ್ಕೆ ನೋವಿದೆ. ಅಂದಹಾಗೆ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಬಾಬರಿ ಮಸೀದಿ ಇದ್ದ ಜಾಗ ಯಾರಿಗೆ ಸಂಬಂಧಿಸಿದ್ದು ಎಂಬ ಬಗ್ಗೆ ನ್ಯಾಯಾಲಯದಲ್ಲಿ ತಕರಾರಿತ್ತೇ ಹೊರತು ಶ್ರೀರಾಮನಿಗೆ ಸಂಬಂಧಿಸಿ ಯಾವ ತಕರಾರೂ ಇರಲಿಲ್ಲ. ಆ ಜಾಗ ತಮಗೆ ಸಂಬಂಧಿಸಿದ್ದು ಎಂಬುದು ಮುಸ್ಲಿಮರ ವಾದವಾಗಿತ್ತು. ಆದರೆ, ರಾಜಕೀಯ ಶಕ್ತಿಗಳು ಈ ಜಾಗದ ತಕರಾರರನ್ನು ದುರ್ವ್ಯಾಖ್ಯಾನಿಸಿದುವು ಮತ್ತು ಮಂದಿರ-ಮಸೀದಿ ವಿವಾದವಾಗಿ ಬಿಂಬಿಸಿದುವು. ಮಾತ್ರವಲ್ಲ, ಮುಸ್ಲಿಮರು ಶ್ರೀರಾಮನ ವಿರೋಧಿಗಳು ಎಂಬಂತೆ ಪ್ರಚಾರ ಪಡಿಸಿದುವು. ಮಾಧ್ಯಮಗಳು ಈ ಪ್ರಚಾರಕ್ಕೆ ಬೆಂಕಿ ಕೊಟ್ಟು ಎಲ್ಲೆಡೆ ಹಬ್ಬಿಸಿದುವು. ಇದೀಗ ಈ ಪ್ರಕರಣ ಇತ್ಯರ್ಥಗೊಂಡಿದ್ದರೂ ಮಾಧ್ಯಮಗಳ ಹಸಿವು ತಣಿದಂತೆ ಕಾಣಿಸುತ್ತಿಲ್ಲ. ಅವು ಮತ್ತೆ ಮೈಕ್ ಎಂಬ ಪಂಜಿನೊಂದಿಗೆ ಹೊರಡುವ ಸಿದ್ಧತೆಯಲ್ಲಿರುವಂತೆ ಕಾಣಿಸುತ್ತಿದೆ. ಮತ್ತೊಮ್ಮೆ ಈ ದೇಶದಲ್ಲಿ ಧರ್ಮೋನ್ಮಾದ ಹುಟ್ಟು ಹಾಕಲು ಪ್ರಯತ್ನ ಪಡುತ್ತಿರುವಂತಿದೆ. ಅಷ್ಟಕ್ಕೂ,</span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;"> ಟಿ.ವಿ. ಮಾಧ್ಯಮಗಳು ಪ್ರಾಮಾಣಿಕವೇ ಆಗಿರುವುದಾದರೆ, ಅಯೋಧ್ಯೆಯ ಶ್ರೀರಾಮ ಮಂದಿರಕ್ಕಿಂತ 22 ಕಿ.ಮೀಟರ್ ದೂರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮಸೀದಿಯ ಕತೆ ಏನಾಯಿತು ಎಂಬ ಚರ್ಚೆ, ಅಭಿಪ್ರಾಯ ಸಂಗ್ರಹ, ಪ್ರತ್ಯಕ್ಷ ವರದಿ, ತನಿಖಾ ವರದಿಗಳನ್ನು ಮಾಡಬಹುದು. ಮಸೀದಿ ನಿರ್ಮಾಣಕ್ಕೆ ಜಾಗ ಮಾಡಿಕೊಡಿ ಎಂಬ ಸುಪ್ರೀಮ್ ಆದೇಶ ವನ್ನು ಸರಕಾರ ಎಷ್ಟಂಶ ಪಾಲಿಸಿದೆ ಎಂಬ ಬಗ್ಗೆಯೂ ಪರಾಮರ್ಶೆ ನಡೆಸಬಹುದು. ಹಾಗೆಯೇ, ಕ್ರಿಮಿನಲ್ ಕೃತ್ಯ ಎಂದು ಸುಪ್ರೀಮ್ ಕೋರ್ಟು ಸಾರಿದ ಮಸೀದಿ ಧ್ವಂಸದ ವಿಚಾರಣೆ ಎಲ್ಲಿಗೆ ಬಂದು ಮುಟ್ಟಿದೆ ಎಂದೂ ವಿಶ್ಲೇಷಿಸಬಹುದು. ಆದರೆ ಇವಾವುವೂ ಆಗುತ್ತಿಲ್ಲ. ಒಂದು ಕಡೆ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಶ್ರೀರಾಮ ಮಂದಿರ ಉದ್ಘಾಟನೆಗೆ ಸಿದ್ಧವಾಗಿರುವಾಗ ಇನ್ನೊಂದು ಕಡೆ ಮಸೀದಿ ನಿರ್ಮಾಣ ಕಾಮಗಾರಿಯೇ ಆರಂಭವಾಗಿಲ್ಲ. ಅಯೋಧ್ಯೆಗಿಂತ 22 ಕಿ.ಮೀಟರ್ ದೂರದ ದನ್ನಿಪುರದಲ್ಲಿ ಮಸೀದಿ ನಿರ್ಮಾಣಕ್ಕೆಂದು ಸರಕಾರ 5 ಎಕರೆ ಭೂಮಿಯನ್ನೇನೋ ನೀಡಿದೆ. ಆದರೆ, ಇದು ಕೃಷಿ ಭೂಮಿ ಎಂದು ಹೇಳಲಾಗುತ್ತಿದೆ. ಕೃಷಿ ಭೂಮಿಯಲ್ಲಿ ಮಸೀದಿ ನಿರ್ಮಿಸುವುದಕ್ಕೆ ಅದರದ್ದೇ ಆದ ಕಾನೂನು ತೊಡಕುಗಳಿವೆ. 2021ರಲ್ಲಿ ಮಸೀದಿ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದನ್ನು ಬಿಟ್ಟರೆ ಉಳಿದಂತೆ ಈವರೆಗೆ ಯಾವ ಚಟುವಟಿಕೆಯೂ ನಡೆದಿಲ್ಲ. ಆಯೋಧ್ಯಾ ಅಭಿವೃದ್ಧಿ ಪ್ರಾಧಿಕಾರವು (AAD) ವಿವಿಧ ಕಾರಣಗಳನ್ನೊಡ್ಡಿ ನಿರ್ಮಾಣ ಕಾರ್ಯಕ್ಕೆ ತಡೆ ಒಡ್ಡುತ್ತಲೇ ಇದೆ. 2022ರಲ್ಲಿ ಅಗ್ನಿಶಾಮಕ ಇಲಾಖೆಯು ರಸ್ತೆಗೆ ಸಂಬಂಧಿಸಿ ತಕರಾರನ್ನು ಎತ್ತಿ ನಿರಪೇಕ್ಷಣಾ ಸರ್ಟಿಫಿಕೇಟ್ ಕೊಡಲು ನಿರಾಕರಿಸಿತ್ತು. ಆ ಬಳಿಕ ಮಸೀದಿ ನಿರ್ಮಾಣದ ನಕಾಶೆಗೆ ಆಕ್ಷೇಪ ವ್ಯಕ್ತಪಡಿಸಿತು. 4500 ಚದರ ಮೀಟರ್ ವ್ಯಾಪ್ತಿಯಲ್ಲಿ ಮಸೀದಿ, ಪ್ರತಿದಿನ 200 ಮಂದಿಗೆ ಊಟ ಹಾಕಿಸುವಷ್ಟು ದೊಡ್ಡದಾದ ಕಮ್ಯುನಿಟಿ ಕಿಚನ್, 200 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ, ಮ್ಯೂಸಿಯಂ, ಸಮುದಾಯ ಸಂಶೋಧನಾ ಕೇಂದ್ರ... ಇತ್ಯಾದಿಗಳನ್ನು ನಿರ್ಮಿಸುವ ನಕಾಶೆಯನ್ನು ಆಯೋಧ್ಯಾ ಅಭಿವೃದ್ಧಿ ಪ್ರಾಧಿಕಾರಕ್ಕೆ ನೀಡಲಾಗಿತ್ತು. ಆದರೆ, </span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಇದರ ಅಂಗೀಕಾರಕ್ಕಾಗಿ 112 ಕೋಟಿ ರೂಪಾಯಿ ಡಿಪಾಸಿಟ್ ಇಡುವಂತೆ ಅದು ಸೂಚಿಸಿತು. ಆದರೆ ಉ. ಪ್ರದೇಶ ಸುನ್ನಿ ವಕ್ಫ್ ಬೋರ್ಡ್ ನ ಅಧೀನದಲ್ಲಿ ಮಸೀದಿ ನಿರ್ಮಾಣಕ್ಕೆಂದೇ ರಚಿಸಲಾಗಿರುವ ಇಂಡೋ-ಇಸ್ಲಾಮಿಕ್ ಕಲ್ಚರಲ್ ಫಾರ್ಮ್(IICF)ನ ಬಳಿ ಇಷ್ಟು ಮೊತ್ತ ಇರಲಿಲ್ಲ. 50 ಲಕ್ಷ ರೂಪಾಂಯಿ ಡಿಪಾಸಿಟ್ ಇಡಲಷ್ಟೇ ನಾವು ಶಕ್ತರು ಎಂದು ಅದು ಹೇಳಿತು. ಆದರೆ, ಪ್ರಾಧಿಕಾರ ಈ ಕೋರಿಕೆಯನ್ನು ತಿರಸ್ಕರಿಸಿತು. ಇದರಿಂದಾಗಿ ಉಭಯ ಸಂಕಟಕ್ಕೆ ಸಿಲುಕಿದ </span><span style="background-color: white; color: #222222; font-family: Arial, Helvetica, sans-serif; font-size: small;">IICF</span><span style="background-color: white; color: #222222; font-family: Arial, Helvetica, sans-serif; font-size: small;">, ಪ್ರಸ್ತಾವಿತ ನಕಾಶೆಯಿಂದ ಮಸೀದಿಯೊಂದನ್ನು ಬಿಟ್ಟು ಉಳಿದವುಗಳನ್ನೆಲ್ಲಾ ಕೈಬಿಡುವ ನಿರ್ಧಾರಕ್ಕೆ ಬಂತು. ಮಸೀದಿ ನಿರ್ಮಾಣಕ್ಕೆ ಬೇಕಾದಷ್ಟು ಡಿಪಾಸಿಟ್ ಇಡುವುದು ಮತ್ತು ಮಸೀದಿ ನಿರ್ಮಾಣದ ಬಳಿಕ ಹಣ ಸಂಗ್ರಹಿಸಿ ಉಳಿದವುಗಳ ನಿರ್ಮಾಣಕ್ಕೆ ಕೈ ಹಾಕುವ ಗುರಿಯನ್ನು ಇಟ್ಟುಕೊಂಡಿತು. ಆರಂಭದಲ್ಲಿ ಭಾರತೀಯ ಶೈಲಿಯಲ್ಲಿ ಮಸೀದಿ ನಿರ್ಮಿಸುವ ಉದ್ದೇಶದೊಂದಿಗೆ ನಕಾಶೆ ತಯಾರಿಸಲಾಯಿತಾದರೂ ಅದು ಸಮಿತಿಯಲ್ಲಿ ತಿರಸ್ಕೃತಗೊಂಡಿತು. ಇದೀಗ ಹೊಸ ಶೈಲಿಯ ನಕಾಶೆ ತಯಾರಾಗುತ್ತಿದ್ದು, 2024ರ ಮೇ ತಿಂಗಳಲ್ಲಿ ಸಿದ್ಧವಾಗಲಿದೆ ಎಂದು ಹೇಳಲಾಗಿದೆ. ಬಳಿಕ ಅದಕ್ಕೆ ಆಡಳಿತಾತ್ಮಕ ಅಂಗೀಕಾರ ದೊರೆಯಬೇಕಾಗಿದೆ. ದೆಹಲಿಯ ಜಾಮಿಯಾ ಮಿಲ್ಲಿಯ ಇಸ್ಲಾಮಿಯಾ ವಿಶ್ವವಿದ್ಯಾಲಯದ ಆರ್ಕಿಟೆಕ್ಚರ್ ಅಖ್ತರ್ ಅವರ ನೇತೃತ್ವದಲ್ಲಿ ರಚನೆಯಾಗುತ್ತಿರುವ ಮಸೀದಿ ನಕಾಶೆಯು ಎಷ್ಟೇ ಅದ್ಭುತವಾಗಿದ್ದರೂ ಹಣ ಮತ್ತು ಆಡಳಿತಾತ್ಮಕ ತೊಡಕುಗಳು ಈ ಮಸೀದಿ ನಿರ್ಮಾಣಕ್ಕೆ ಎದುರಾಗಲಿದೆ ಎಂಬುದು ಸ್ಪಷ್ಟ. ಒಂದುವೇಳೆ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಮಂದಿರ ನಿರ್ಮಾಣಕ್ಕೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ತೋರಿರುವ ಮುತುವರ್ಜಿಯ ಒಂದು ಶೇಕಡಾ ಅಂಶವನ್ನಾದರೂ ಈ ಮಸೀದಿ ನಿರ್ಮಾಣದತ್ತ ನೀಡುತ್ತಿದ್ದರೆ ಒಂದೇ ಸಮಯದಲ್ಲಿ ಮಸೀದಿ ಮತ್ತು ಮಂದಿರಗಳ ಉದ್ಘಾಟನೆ ನಡೆಸಬಹುದಿತ್ತು. ಒಂದುಕಡೆ, ಸರಕಾರಿ ಸಂಸ್ಥೆಗಳು ಮಸೀದಿ ನಿರ್ಮಾಣಕ್ಕೆ ವಿವಿಧ ಅಡೆ-ತಡೆಗಳನ್ನು ನೀಡುತ್ತಿರುವಾಗ ಇನ್ನೊಂದು ಕಡೆ ಸರಕಾರವೇ ಮುಂದೆ ನಿಂತು ಮಂದಿರ ನಿರ್ಮಿಸುತ್ತಿದೆ. ಅಲ್ಲದೇ, ಸರಕಾರದ ಅಧೀನದಲ್ಲಿರುವ ಸುನ್ನಿ ವಕ್ಫ್ ಬೋರ್ಡ್ ಉದ್ದೇಶಪೂರ್ವಕವಾಗಿಯೇ ಮಸೀದಿ ನಿರ್ಮಾಣಕ್ಕೆ ವಿಳಂಬ ಧೋರಣೆ ಅನುಸರಿಸುತ್ತಿದೆಯೇ ಎಂಬ ಅನುಮಾನವೂ ಇದೆ. </span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಇವೇನೇ ಇದ್ದರೂ, ಮುಂದಿನ ಕೆಲವು ದಿನಗಳ ಕಾಲ ಮುಸ್ಲಿಮರು ಜಾಗರೂಕರಾಗಿರಬೇಕು. ರಾಮಮಂದಿರಕ್ಕೆ ಸಂಬಂಧಿಸಿ ಮಾಧ್ಯಮದವರು ಕೇಳುವ ಪ್ರಶ್ನೆಗಳನ್ನು ಅಳೆದೂ ತೂಗಿ ಉತ್ತರಿಸಬೇಕು. ಮುಸ್ಲಿಮರನ್ನು ಶ್ರೀ ರಾಮನ ವಿರೋಧಿಗಳು ಎಂದು ಬಿಂಬಿಸುವುದಕ್ಕೆ ಪೂರಕವಾಗಿ ಏನನ್ನೂ ಆಡಬಾರದು.</span></div>a k kukkilahttp://www.blogger.com/profile/04432257424497331465noreply@blogger.com0tag:blogger.com,1999:blog-2716482703415659532.post-68069974742910223272024-01-02T01:56:00.000-08:002024-01-02T01:56:27.286-08:00ಹಿಂದೂ ಧರ್ಮಕ್ಕೆ ಸವಾಲಾಗಿರುವ ಕಲ್ಲಡ್ಕ ಪ್ರಭಾಕರ ಭಟ್<p><br /></p><p><span style="background-color: white; color: #222222; font-family: Arial, Helvetica, sans-serif; font-size: small;"></span></p><div class="separator" style="clear: both; text-align: center;"><a href="https://blogger.googleusercontent.com/img/b/R29vZ2xl/AVvXsEiBKM9RunZw8zPX9kcI-FUfV9xkAGIzxVd5tSwQIDn0f9sscRe6hHIvOcd_Szdqt4hD77yTIkcdmn5DsjNxh1Jij452weaEkmbsaG3hgL1nvpayXiAxTIgQCd3RcJqEmhZSW9HcK9xkD9fnoDQDGx1QGxxkKoq28qEpB_p2hRbpfbwqdk624y0zXdeptD9T/s1143/editorial%20pic.jpg" imageanchor="1" style="margin-left: 1em; margin-right: 1em;"><img border="0" data-original-height="555" data-original-width="1143" height="194" src="https://blogger.googleusercontent.com/img/b/R29vZ2xl/AVvXsEiBKM9RunZw8zPX9kcI-FUfV9xkAGIzxVd5tSwQIDn0f9sscRe6hHIvOcd_Szdqt4hD77yTIkcdmn5DsjNxh1Jij452weaEkmbsaG3hgL1nvpayXiAxTIgQCd3RcJqEmhZSW9HcK9xkD9fnoDQDGx1QGxxkKoq28qEpB_p2hRbpfbwqdk624y0zXdeptD9T/w400-h194/editorial%20pic.jpg" width="400" /></a></div><br /><p></p><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಈ ದೇಶದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚೆಂದರೆ 20 ಕೋಟಿಯಷ್ಟಿದೆ. ಆದರೆ ಹಿಂದೂಗಳ ಜನಸಂಖ್ಯೆ 100 ಕೋಟಿಗಿಂತಲೂ ಅಧಿಕವಿದೆ. ಕೇವಲ ಜನಸಂಖ್ಯೆಯೊಂದೇ ಅಲ್ಲ, ಈ ದೇಶದ ಸಂಪನ್ಮೂಲವನ್ನು ಅತ್ಯಂತ ಕಡಿಮೆ ಪಡೆಯುತ್ತಿರುವ ಸಮುದಾಯವೂ ಮುಸ್ಲಿಮರದ್ದೇ. ಸರಕಾರಿ ಉದ್ಯೋಗಗಳಲ್ಲಿ ಮುಸ್ಲಿಮರ ಪಾಲು ಅತ್ಯಂತ ಕಡಿಮೆ. ಬ್ಯಾಂಕ್ಗಳಿಂದ ಭಾರೀ ಪ್ರಮಾಣದ ಸಾಲ ಪಡೆದು ವಿದೇಶಕ್ಕೆ ಹಾರಿ ಹೋಗುವ ಉದ್ಯಮಿಗಳ ಪೈಕಿ ಮುಸ್ಲಿಮರಾರೂ ಇಲ್ಲ. ದೇಶದ ವಿವಿಧ ರಾಜ್ಯಗಳ ಶಾಸನಸಭೆಗಳಲ್ಲಿ ಮುಸ್ಲಿಮ್ ಪ್ರತಿನಿಧಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಾ ಬರುತ್ತಿದೆ. ಸಂಸತ್ನಲ್ಲೂ ಇದೇ ಪರಿಸ್ಥಿತಿ. ಕೇಂದ್ರ ಸರಕಾರದ ಸಚಿವ ಸಂಪುಟದಲ್ಲಿ ಒಬ್ಬನೇ ಒಬ್ಬ ಮುಸ್ಲಿಮ್ ಜನಪ್ರತಿನಿಧಿ ಇಲ್ಲ. ಮುಸ್ಲಿಮ್ ಸಮುದಾಯದ ಹಿಂದುಳಿವಿಕೆಯನ್ನು ಪರಿಗಣಿಸಿ ನೀಡಲಾಗುತ್ತಿದ್ದ ಒಂದೊಂದೇ ಸೌಲಭ್ಯವನ್ನೂ ಸರಕಾರಗಳು ಕಿತ್ತುಕೊಳ್ಳುತ್ತಾ ಬರುತ್ತಿವೆ. ಕರ್ನಾಟಕದಲ್ಲಿ 2ಬಿ ಮೀಸಲಾತಿ ಕೆಟಗರಿಯಿಂದ ಮುಸ್ಲಿಮ್ ಸಮುದಾಯವನ್ನು ಹೊರಹಾಕಲಾಯಿತು. ಇದೇವೇಳೆ,</span><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;"> ಉನ್ನತ ವ್ಯಾಸಂಗ ಮಾಡುತ್ತಿರುವ ಮುಸ್ಲಿಮ್ ವಿದ್ಯಾರ್ಥಿಗಳೂ ಸೇರಿದಂತೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೌಲಾನಾ ಆಝಾದ್ ಫೆಲೋಶಿಪನ್ನು ಕೇಂದ್ರ ಸರಕಾರ ಸ್ಥಗಿತಗೊಳಿಸಿದೆ. ಬಾಬರಿ ಮಸೀದಿ ಪ್ರಕರಣದಲ್ಲಿ ಮಂದಿರ ನಿರ್ಮಾಣ ಮತ್ತು ಮಸೀದಿ ನಿರ್ಮಾಣಕ್ಕೆ ಸುಪ್ರೀಮ್ ಕೋರ್ಟು ಏಕಧ್ವನಿಯಲ್ಲಿ ಆದೇಶಿಸಿತ್ತು. ಆದರೆ, ಮಂದಿರ ನಿರ್ಮಾಣ ಬಹುತೇಕ ಪೂರ್ತಿಯಾಗಿದೆ. ಆದರೆ ಮಸೀದಿ ನಿರ್ಮಾಣಕ್ಕೆ ಇನ್ನೂ ಶಂಕುಸ್ಥಾಪನೆಯೇ ಆಗಿಲ್ಲ. ಇದರ ನಡುವೆಯೇ ಕಾಶಿಯ ಗ್ಯಾನ್ವಾಪಿ ಮಸೀದಿ ಮತ್ತು ಮಥುರಾದ ಈದ್ಗಾಹ್ ಮಸೀದಿಗಳ ವಿರುದ್ಧ ನ್ಯಾಯಾಲಯಗಳಲ್ಲಿ ದೂರು ಸ ಲ್ಲಿಕೆಯಾಗಿದೆ ಮತ್ತು ಮಸೀದಿಗಳ ಸರ್ವೇಗೆ ನ್ಯಾಯಾಲಯ ಅನುಮತಿಯನ್ನೂ ನೀಡಿದೆ. ಇದೇವೇಳೆ, ದೇಶದೆಲ್ಲೆಡೆ ಅನೈತಿಕ ಪೊಲೀಸ್ಗಿರಿಯ ಹೆಸರಲ್ಲಿ, ದನಸಾಗಾಟದ ಹೆಸರಲ್ಲಿ ಮುಸ್ಲಿಮ್ ಸಮುದಾಯ ವಿವಿಧ ರೀತಿಯ ದಾಳಿಗಳಿಗೆ ತುತ್ತಾಗುತ್ತಿದೆ. ವ್ಯಾಪಾರ ಬಹಿಷ್ಕಾರವನ್ನೂ ಎದುರಿಸುತ್ತಿದೆ. ಇದರ ಜೊತೆಗೆ ಕಾನೂನು ನಿರ್ಮಾಣದಲ್ಲೂ ಮುಸ್ಲಿಮ್ ಸಮುದಾಯವನ್ನೇ ಗುರಿ ಮಾಡಲಾಗುತ್ತಿದೆ. ತ್ರಿವಳಿ ತಲಾಕನ್ನು ಸುಪ್ರೀಮ್ ಕೋರ್ಟು ಅಮಾನ್ಯ ಮಾಡಿದ್ದನ್ನೇ ನೆಪವಾಗಿಸಿಕೊಂಡ ಕೇಂದ್ರ ಸರಕಾರ ಕಾನೂನೊಂದನ್ನು ರೂಪಿಸಿತು. ಅದರ ಪ್ರಕಾರ, ತ್ರಿವಳಿ ತಲಾಕ್ ಹೇಳುವುದನ್ನು ಕ್ರಿಮಿನಲ್ ಅಪರಾಧವೆಂದು ಸಾರಲಾಯಿತು ಮತ್ತು ಅಂಥ ವ್ಯಕ್ತಿಗೆ 3 ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ಘೋಷಿಸಲಾಯಿತು. ಒಂದುಕಡೆ, </span><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಸುಪ್ರೀಮ್ ಕೋರ್ಟು ತ್ರಿವಳಿ ತಲಾಕನ್ನು ಅಮಾನ್ಯ ಮತ್ತು ಅಸಿಂಧು ಎಂದು ಹೇಳಿರುವಾಗ ವ್ಯಕ್ತಿಯನ್ನು ಜೈಲಿಗೆ ಹಾಕುವುದರಿಂದ ಉಂಟಾಗುವ ಕೌಟುಂಬಿಕ ಸಮಸ್ಯೆಗಳು ಏನೇನು ಅನ್ನುವ ಪ್ರಶ್ನೆಗೆ ಈ ಕಾನೂನಿನಲ್ಲಿ ಉತ್ತರವೇ ಇಲ್ಲ. ತ್ರಿವಳಿ ತಲಾಕ್ ಹೇಳಿದ ವ್ಯಕ್ತಿಯನ್ನು ಜೈಲಿಗೆ ಹಾಕುವುದೆಂದರೆ, ಆ ತಲಾಕ್ ಸಿಂಧು ಎಂದು ಪರೋಕ್ಷವಾಗಿ ಸಾರಿದಂತೆ. ತಲಾಕೇ ಅಲ್ಲದ ತಲಾಕ್ ಗಾಗಿ ವ್ಯಕ್ತಿಯನ್ನು ಜೈಲಿಗೆ ಹಾಕಿದರೆ, ಆ ಬಳಿಕವೂ ಆ ವಿವಾಹ ಊರ್ಜಿತದಲ್ಲಿರುವುದೇ, ಜೈಲಿನಿಂದ ಹೊರಬಂದ ವ್ಯಕ್ತಿ ಆ ದಾಂಪತ್ಯ ಸಂಬಂಧವನ್ನು ಉಳಿಸಿಕೊಳ್ಳಬಹುದೇ, ಆತ ಜೈಲಲ್ಲಿರುವ ವರೆಗೆ ಆತನ ಪತ್ನಿ ಮತ್ತು ಮಕ್ಕಳನ್ನು ನೋಡಿಕೊಳ್ಳುವವರು ಯಾರು, ವರಮಾನ ಏನು... ಇತ್ಯಾದಿ ಪ್ರಶ್ನೆಗಳಿಗೂ ಕಾನೂನು ರೂಪಿಸಿದವರು ಉತ್ತರವನ್ನು ಹೇಳಲಿಲ್ಲ. ಆತ ಜೈಲಲ್ಲಿರುವಾಗ ಆಕೆ ಇನ್ನೊಂದು ಮದುವೆ ಆಗುವಂತೆಯೂ ಇಲ್ಲ. ಯಾಕೆಂದರೆ, ಸುಪ್ರೀಮ್ ಕೋರ್ಟು ಪ್ರಕಾರ ತ್ರಿವಳಿ ತಲಾಕ್, ವಿಚ್ಛೇದನ ಆಗುವುದಿಲ್ಲ. ಗಂಡನಿಂದ ವಿಚ್ಛೇದನ ಪಡೆಯದೆ ಇನ್ನೊಂದು ಮದುವೆಯಾಗುವುದಕ್ಕೆ ಅವಕಾಶವೂ ಇಲ್ಲ. ಅತ್ತ ವಿಚ್ಛೇದನಕ್ಕೂ ಒಳಗಾಗದ ಮತ್ತು ಇತ್ತ ಗಂಡನೂ ಇಲ್ಲದ ಅತಂತ್ರ ಸ್ಥಿತಿಯೊಂದರಲ್ಲಿ ಮುಸ್ಲಿಮ್ ಮಹಿಳೆಯರನ್ನು ನಿಲ್ಲಿಸುವ ಕಾನೂನೊಂದನ್ನು ಕೇಂದ್ರ ಸರಕಾರ ರೂಪಿಸಿ ಕೈತೊಳೆದುಕೊಂಡಿದೆ. ಮಾತ್ರವಲ್ಲ, ಇದನ್ನೇ ಮುಸ್ಲಿಮ್ ಸಮುದಾಯದ ಮಹಿಳೆಯರಿಗೆ ಮಾಡಲಾದ ಮಹದುಪಕಾರ ಎಂದೇ ಬಿಂಬಿಸಿಕೊಳ್ಳುತ್ತಿದೆ. ಅದೇವೇಳೆ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಹಿಂದೂ ವ್ಯಕ್ತಿಯೋರ್ವ ಹೀಗೆಯೇ ತನ್ನ ಪತ್ನಿಯನ್ನು ತ್ಯಜಿಸಿ ಹೋಗುವುದನ್ನು ಕೇಂದ್ರ ಸರಕಾರ ಸಿವಿಲ್ ಪ್ರಕರಣವಾಗಿ ಸದ್ದಿಲ್ಲದೇ ಉಳಿಸಿಕೊಂಡಿದೆ. ಎಲ್ಲರಿಗೂ ಸಮಾನ ಕಾನೂನು ಇರಬೇಕು ಎಂದು ಒತ್ತಿ ಹೇಳುತ್ತಾ ಸಮಾನ ನಾಗರಿಕ ಸಂಹಿತೆಯ ಬಗ್ಗೆ ಮಾತನಾಡುವ ಇದೇ ಸರಕಾರ ಒಂದೇ ಬಗೆಯ ಅಪರಾಧವನ್ನು ಎರಡು ರೀತಿಯಾಗಿ ವಿಂಗಡಿದ್ದೇಕೆ ಎಂಬ ಪ್ರಶ್ನೆಗೂ ಉತ್ತರವಿಲ್ಲ. ಪತ್ನಿಯನ್ನು ತ್ಯಜಿಸಿದ ಮುಸ್ಲಿಮ್ ವ್ಯಕ್ತಿ ಕ್ರಿಮಿನಲ್ ಆಗಿ ಜೈಲಲ್ಲಿರುವಾಗ ಅದೇ ತಪ್ಪೆಸಗಿದ ಹಿಂದೂ ವ್ಯಕ್ತಿ ಈ ಯಾವ ಭಯವೂ ಇಲ್ಲದೇ ಮತ್ತು ಕ್ರಿಮಿನಲ್ಲೂ ಆಗದೇ ಆರಾಮವಾಗಿರುತ್ತಾನೆ. ಈ ನಡುವೆ ಬಹುಪತ್ನಿತ್ವವನ್ನು ಗುರಿಯಾಗಿಸಿಕೊಂಡು ಕಾನೂನು ರೂಪಿಸಲು ಅಸ್ಸಾಂ ಸರಕಾರ ಹೊರಟಿರುವಾಗ ಉತ್ತರ ಪ್ರದೇಶದಲ್ಲಿ ಮದ್ರಸಾಗಳು ಸರಕಾರದ ಕೆಂಗಣ್ಣಿಗೆ ಗುರಿಯಾಗಿವೆ. ಲವ್ ಜಿಹಾದ್ನ ಹೆಸರಲ್ಲಿ ಕಾನೂನುಗಳನ್ನು ಜಾರಿ ಮಾಡಲಾಗಿದೆ. ಇಂಥ ಸಂದರ್ಭದಲ್ಲೇ ಕಲ್ಲಡ್ಕ ಪ್ರಭಾಕರ ಭಟ್ ಮುಸ್ಲಿಮ್ ಸಮುದಾಯದ ಮಹಿಳೆಯರ ಬಗ್ಗೆ ಅತ್ಯಂತ ತುಚ್ಛವಾದ ಮತ್ತು ಅವಮಾನಕರವಾದ ಹೇಳಿಕೆಯನ್ನು ಸಾರ್ವಜನಿಕರ ಮುಂದೆ ನೀಡಿದ್ದಾರೆ. ಅವರೋರ್ವ ವ್ಯಕ್ತಿ ಮಾತ್ರವಾಗಿದ್ದರೆ ಈ ಮಾತನ್ನು ಗಂಭೀರವಾಗಿ ಪರಿಗಣಿಸಬೇಕಿರಲಿಲ್ಲ. ಆದರೆ, </span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಅವರು ರಾಜಕೀಯವಾಗಿ, ಧಾರ್ಮಿಕವಾಗಿ ಮತ್ತು ಸಾರ್ವಜನಿಕವಾಗಿ ಪ್ರಭಾವಶಾಲಿ. ಗಣೇಶೋತ್ಸವ, ಶಾರದೋತ್ಸವ, ಹಿಂದೂ ಸಮಾಜೋತ್ಸವ, ಜೀರ್ಣೋದ್ಧಾರ, ಅಷ್ಟಮಂಗಲ... ಇತ್ಯಾದಿ ಎಲ್ಲ ಕಾರ್ಯಕ್ರಮಗಳಲ್ಲೂ ಮುಖ್ಯ ಅತಿಥಿಯಾಗಿ ಅವರು ಭಾಗವಹಿಸುತ್ತಾರೆ. ಇಂಥ ವ್ಯಕ್ತಿ ಸಾರ್ವಜನಿಕರ ಮುಂದೆ ಮುಸ್ಲಿಮ್ ಮಹಿಳೆಯರ ವಿರುದ್ಧ ಅವಮಾನ ಕಾರಿಯಾಗಿ ಮಾತನಾಡಿದ್ದಾರೆ. ಇವರ ವಿರುದ್ಧ ಸರಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದು ಪ್ರಬಲ ಆಗ್ರಹವಾದರೆ, ಇನ್ನೊಂದು- ಜನಸಂಖ್ಯೆ, ಶ್ರೀಮಂತಿಕೆ, ಸರಕಾರದಲ್ಲಿ ಪಾಲುದಾರಿಕೆಯೂ ಸೇರಿದಂತೆ ಯಾವ ವಿಷಯದಲ್ಲೂ ಹಿಂದೂ ಸಮುದಾಯಕ್ಕೆ ಬದಲಿಯಾಗದ, ಪ್ರತಿಯಾಗದ ಮತ್ತು ಸಾಟಿಯಾಗದ ಮುಸ್ಲಿಮ್ ಸಮುದಾಯವನ್ನು ಇವರೆಲ್ಲ ಪದೇ ಪದೇ ಕಟಕಟೆಯಲ್ಲಿ ಯಾಕೆ ನಿಲ್ಲಿಸುತ್ತಿದ್ದಾರೆ ಅನ್ನುವ ಪ್ರಶ್ನೆಯೂ ಇದೆ. ಹೀಗೆ ಬೈಯೋದರ ಹಿಂದೆ ಓಟಿನ ಉದ್ದೇಶ ಇದೆಯೇ? ಮುಸ್ಲಿಮರನ್ನು ತೆಗಳುವುದರಿಂದ ಹಿಂದೂಗಳೇಕೆ ತೆಗಳಿದವರಿಗೆ ಓಟು ಕೊಡುತ್ತಾರೆ? ಮುಸ್ಲಿಮರನ್ನು ತೆಗಳುವುದರಿಂದ ಮತ್ತು ಸತಾಯಿಸುವುದರಿಂದ ಹಿಂದೂ ಧರ್ಮಕ್ಕೆ ಆಗುವ ಲಾಭವೇನು? ಹಿಂದೂ ಧರ್ಮದ ಅಭಿವೃದ್ಧಿಯು ಮುಸ್ಲಿಮರನ್ನು ಆಧರಿಸಿಕೊಂಡಿದೆಯೇ? 20 ಕೋಟಿಯಷ್ಟಿರುವ ಮುಸ್ಲಿಮರು 100 ಕೋಟಿಗಿಂತಲೂ ಅಧಿಕ ಇರುವ ಹಿಂದೂಗಳಿಗೆ ತೊಡಕೇ? ಅಪಾಯಕಾರಿಯೇ? ರಾಜಕೀಯವಾಗಿ, ಆರ್ಥಿಕವಾಗಿ, ಕಾನೂನಾತ್ಮಕವಾಗಿ ಮತ್ತು ಸಾಮಾಜಿಕವಾಗಿ- ಹೀಗೆ ಯಾವ ಕ್ಷೇತ್ರದಲ್ಲೂ ಬಲಿಷ್ಠವಾಗಿಲ್ಲದ ಸಮುದಾಯವೊಂದನ್ನು ಈ ಎಲ್ಲ ಕ್ಷೇತ್ರಗಳಲ್ಲೂ ಬಲಶಾಲಿಯಷ್ಟೇ ಅಲ್ಲ, ಸಂಪೂರ್ಣ ಪ್ರಾಬಲ್ಯವನ್ನು ಸ್ಥಾಪಿಸುವ ಸಮುದಾಯಕ್ಕೆ ಪ್ರತಿಸ್ಪರ್ಧಿ ಎಂದು ಬಿಂಬಿಸುವುದನ್ನು ಹಿಂದೂಗಳು ಯಾಕೆ ನಂಬುತ್ತಿದ್ದಾರೆ? </span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಈ ದೇಶದಲ್ಲಿ 99.99% ರಾಜಕೀಯ ಪಕ್ಷಗಳು ಕೂಡಾ ಹಿಂದೂಗಳದ್ದೇ ಮತ್ತು ಮುಂಚೂಣಿ ನಾಯಕರೂ ಹಿಂದೂಗಳೇ. ಈ ದೇಶದ ಪ್ರಮುಖ ಉದ್ಯಮಿಗಳೂ ಹಿಂದೂಗಳೇ. ವಿಶ್ವವಿದ್ಯಾಲಯಗಳ ಕುಲಪತಿಗಳು, ಪ್ರೊಫೆಸರ್ಗಳು, ಉಪನ್ಯಾಸಕರ ಪಟ್ಟಿಯನ್ನು ಪರಿಶೀಲಿಸಿದರೂ ಅಲ್ಲೆಲ್ಲಾ ಮುಸ್ಲಿಮ್ ಹೆಸರು ಅಪರೂಪದಲ್ಲಿ ಅಪರೂಪ. ರಾಷ್ಟ್ರಪತಿಗಳು, ರಾಜ್ಯಪಾಲರುಗಳು, ಪ್ರಧಾನಿ, ನ್ಯಾಯಾಧೀಶರುಗಳು, ವೈದ್ಯರುಗಳು, ಸಾಹಿತಿಗಳು... ಹೀಗೆ ಎಲ್ಲೆಲ್ಲೂ ಮುಸ್ಲಿಮ್ ಪ್ರಾತಿನಿಧ್ಯ ಅತ್ಯಂತ ಕಡಿಮೆ. ಇಷ್ಟೆಲ್ಲಾ ಇದ್ದೂ ಮತ್ತೂ ಮುಸ್ಲಿಮರನ್ನೇ ಕಟಕಟೆಯಲ್ಲಿ ನಿಲ್ಲಿಸುವುದು ಮತ್ತು ಅದನ್ನೇ ಹಿಂದೂಗಳು ನಂಬುವುದೆಲ್ಲ ಏಕೆ? ಮುಸ್ಲಿಮರನ್ನು ಅಪಾಯಕಾರಿಗಳಂತೆ ಬಿಂಬಿಸುವವರ ಸುಳ್ಳನ್ನು ಪ್ರಶ್ನಿಸದೇ ಸುಳ್ಳಿಗೇ ಶರಣಾಗುವ ಪರಿಸ್ಥಿತಿ ಈ ದೇಶದಲ್ಲಿ ಯಾಕಿದೆ?</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಯಾವುದೇ ದೇಶ ಅಭಿವೃದ್ಧಿಯಾಗಬೇಕಾದರೆ ಆ ದೇಶದಲ್ಲಿರುವ ಎಲ್ಲರ ಕೊಡುಗೆಯೂ ಅತೀ ಅಗತ್ಯ. ಮುಸ್ಲಿಮ್ ಸಮುದಾಯವನ್ನು ಸದಾ ಬೇಲಿಯ ಮೇಲಿಡುತ್ತಾ ಮತ್ತು ಅವರ ಅಭಿವೃದ್ಧಿಗೆ ಅಡ್ಡಗಾಲು ಹಾಕುತ್ತಾ ದೇಶದ ಅಭಿವೃದ್ಧಿಯ ಕನಸು ಕಾಣುವುದು ಅತಾರ್ಕಿಕ ಮತ್ತು ಅಸಂಬದ್ಧ. ಮುಸ್ಲಿಮರನ್ನು ಭೂತದಂತೆ ಚಿತ್ರಿಸುವವರನ್ನು ಹಿಂದೂಗಳು ತಿದ್ದದ ಹೊರತು ಅವರು ವರ್ತನೆ ಬದಲಿಸಲಾರರು. ಪ್ರಭಾಕರ ಭಟ್ ಆಗಲಿ, ಇನ್ನಾರದ್ದೇ ಆಗಲಿ ಮುಸ್ಲಿಮ್ ದ್ವೇಷ ಕೊನೆಗೊಳ್ಳಬೇಕಾದರೆ ಹಿಂದೂ ಸಮುದಾಯ ಚುರುಕಾಗಬೇಕು. ಹಿಂದೂ ಧರ್ಮದ ಅಳಿವು-ಉಳಿವು ಮುಸ್ಲಿಮರನ್ನು ಅವಲಂಬಿಸಿಕೊಂಡಿಲ್ಲ ಎಂಬುದನ್ನು ಗಟ್ಟಿ ಧ್ವನಿಯಲ್ಲಿ ಸಾರಬೇಕು. ಇಂಥವರಿಗೆ ಧಾರ್ಮಿಕ ಕಾರ್ಯಕ್ರಮಗಳಿಂದ ಬಹಿಷ್ಕಾರ ಹೇರುವ ಮೂಲಕ ಪಾಠ ಕಲಿಸಬೇಕು.</span></div></div>a k kukkilahttp://www.blogger.com/profile/04432257424497331465noreply@blogger.com0tag:blogger.com,1999:blog-2716482703415659532.post-65703662573443168782023-12-25T03:49:00.000-08:002023-12-25T03:49:58.692-08:00ಹೆಣ್ಣು ಭ್ರೂಣ ಹತ್ಯೆ: ಈ ಮನಸ್ಥಿತಿಯನ್ನು ಬರೇ ಕಾನೂನಿನಿಂದ ಬದಲಿಸಬಹುದೇ?<p></p><div class="separator" style="clear: both; text-align: center;"><a href="https://blogger.googleusercontent.com/img/b/R29vZ2xl/AVvXsEi3LKG1JO72rbVTpBfS42vfJL5tgnTsX1hqYQnz89-HUyKHaO5ULuRJf42bYHScSY6tQVJCBheDPaDARiGRwaH6LcSnKkkdMnlf7dzKrAndR0XcMouJQ77NTaeVAyP-vex-VeG5NRE_VMtxfnfsfbHrrkz-vTBWIkKY4E67-1nGNlnB5DMG2CkcRP_ZrfVk/s1137/edit%20pic.jpg" imageanchor="1" style="margin-left: 1em; margin-right: 1em;"><img border="0" data-original-height="599" data-original-width="1137" height="211" src="https://blogger.googleusercontent.com/img/b/R29vZ2xl/AVvXsEi3LKG1JO72rbVTpBfS42vfJL5tgnTsX1hqYQnz89-HUyKHaO5ULuRJf42bYHScSY6tQVJCBheDPaDARiGRwaH6LcSnKkkdMnlf7dzKrAndR0XcMouJQ77NTaeVAyP-vex-VeG5NRE_VMtxfnfsfbHrrkz-vTBWIkKY4E67-1nGNlnB5DMG2CkcRP_ZrfVk/w400-h211/edit%20pic.jpg" width="400" /></a></div><br /><p></p><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಇತ್ತೀಚೆಗೆ ರಾಜ್ಯದ ಮಂಡ್ಯದಲ್ಲಿ ಭಿನ್ನ ಪಾದಯಾತ್ರೆ ನಡೆಯಿತು. ಮದುವೆಗೆ ಹೆಣ್ಣು ಕರುಣಿಸು ಎಂದು ಕೋರಿ ಮಾಯಕಾರ ಮಾದೇವನಿಗೆ ಹರಕೆ ಒಪ್ಪಿಸಲು ನಡೆಸಿದ ಪಾದಯಾತ್ರೆ ಇದು. ಇವರು ಹೀಗೆ ಪಾದಯಾತ್ರೆ ನಡೆಸುತ್ತಿರುವಾಗ ಇದೇ ಮಂಡ್ಯದ ಲ್ಯಾಬ್ಗಳ ಮೇಲೆ ಪೊಲೀಸರು ಕಣ್ಣಿಟ್ಟಿದ್ದರು. ಭಾರೀ ಸಂಖ್ಯೆಯಲ್ಲಿ ಇಲ್ಲಿ ಹೆಣ್ಣುಭ್ರೂಣ ಹತ್ಯೆಯಾಗುತ್ತಿದೆ ಎಂಬ ಸುಳಿವು ಅವರಿಗೆ ಲಭಿಸಿತ್ತು. ಆ ಬಳಿಕ ಹಲವರನ್ನು ಬಂಧಿಸಿದರು. ಕೇವಲ ಮೂರೇ ಮೂರು ವರ್ಷಗಳಲ್ಲಿ ಈ ಮಂಡ್ಯ-ಮೈಸೂರು ಭಾಗದಲ್ಲಿ 900ರಷ್ಟು ಹೆಣ್ಣು ಭ್ರೂಣ ಹತ್ಯೆಯಲ್ಲಿ ಈ ಬಂಧಿತರು ಭಾಗಿಯಾಗಿದ್ದಾರೆ ಅನ್ನುವುದು ಬೆಳಕಿಗೆ ಬಂತು. ಒಂದುಕಡೆ,</span><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;"><br /></span><div><span style="background-color: white; color: #222222; font-family: Arial, Helvetica, sans-serif; font-size: small;">ಮದುವೆಗೆ ಹೆಣ್ಣಿಲ್ಲ ಎಂಬ ಸ್ಥಿತಿಯಾದರೆ ಇನ್ನೊಂದು ಕಡೆ ಇರುವ ಹೆಣ್ಣನ್ನೇ ಸಾಯಿಸುವ ಸ್ಥಿತಿ- ಇವೆರಡೂ ಒಂದೇ ಕಡೆ ನಡೆ ದಿರುವುದು ನಿಜಕ್ಕೂ ಅಚ್ಚರಿ. ಉತ್ತರ ಕನ್ನಡ, ಮಂಡ್ಯ-ಮೈಸೂರು, ಬೆಳಗಾವಿ, ಬಾಗಲಕೋಟೆ ಮುಂತಾದ ಜಿಲ್ಲೆಗಳಲ್ಲಿ ಹರೆಯದ ಹೆಣ್ಣು ಮಕ್ಕಳ ಸಂಖ್ಯೆ ತೀವ್ರವಾಗಿ ಕಡಿಮೆಯಾಗುತ್ತಿದೆ ಎಂಬ ವರದಿ ಇದೆ. ಹೆಣ್ಣು ಭ್ರೂಣ ಹತ್ಯೆಗೆ ಸಂಬಂಧಿಸಿ ಬೆಳಗಾವಿ ಮೊದಲ ಸ್ಥಾನದಲ್ಲಿದ್ದರೆ, ಮಂಡ್ಯ ಎರಡು ಮತ್ತು ಬಾಗಲಕೋಟೆ ಮೂರನೇ ಸ್ಥಾನದಲ್ಲಿದೆ. ಅದರಲ್ಲೂ ಮಂಡ್ಯ, ಚಿಕ್ಕಬಳ್ಳಾಪುರ, ಬಾಗಲಕೋಟೆ, ಕಲಬುರಗಿ, ಬೀದರ್ ಮುಂತಾದ ಜಿಲ್ಲೆಗಳಲ್ಲಿ ಸಾವಿರ ಗಂಡು ಮಕ್ಕಳಿಗೆ 900ಕ್ಕಿಂತಲೂ ಕಡಿಮೆ ಹೆಣ್ಣು ಮಕ್ಕಳಿದ್ದು, ಸರ್ಕಾರದ ಕೆಂಪು ಪಟ್ಟಿಯಲ್ಲಿದೆ. ಇದು ಸರಕಾರದ ನಾಗರಿಕ ನೋಂದಣಿ ವ್ಯವಸ್ಥೆಯನ್ನು ಆಧರಿಸಿದ ದತ್ತಾಂಶಗಳಂತೆ ತಯಾರಿಸಲಾದ ಮಾಹಿತಿ. ತಿಂಗಳುಗಳ ಹಿಂದೆ ಆದಿಚುಂಚನಗಿರಿ ಮಠದಲ್ಲಿ ವಧು-ವರ ಸಂಬಂಧ ಏರ್ಪಡಿಸುವುದಕ್ಕಾಗಿ ಸಮ್ಮೇಳನ ಏರ್ಪಡಿಸಲಾಗಿತ್ತು. ಇದರಲ್ಲಿ 10 ಸಾವಿರದಷ್ಟು ಯುವಕರಿಗೆ ಪ್ರತಿಯಾಗಿ ಕೇವಲ 300ರಷ್ಟು ಯುವತಿಯರು ಮಾತ್ರ ಪಾಲ್ಗೊಂಡಿದ್ದರು.</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಯಾಕೆ ಹೀಗಾಗುತ್ತಿದೆ ಅನ್ನುವುದು ಎಲ್ಲರಿಗೂ ಗೊತ್ತು. ಕೊಟ್ಟ ಹೆಣ್ಣು ಕುಲದಿಂದ ಹೊರಗೆ ಅನ್ನುವ ಮಾತು ಈ ದೇಶದಲ್ಲಿ ಚಾಲ್ತಿಯಲ್ಲಿದೆ. ಹೆಣ್ಣಿನ ಪಾಲಿಗೆ ನಮ್ಮೆಲ್ಲ ಸಾಂಪ್ರದಾಯಿಕ ಆಚರಣೆಗಳು ಮತ್ತು ದೃಷ್ಟಿಕೋನಗಳು ಅಭದ್ರತೆಯನ್ನು ಸೂಚಿಸುತ್ತವೆಯೇ ಹೊರತು ಆಕೆಯ ಬಗ್ಗೆ ಹೆಮ್ಮೆ, ಅಭಿಮಾನ ಮತ್ತು ಸಂತಸ ಪಡುವ ರೀತಿಯಲ್ಲಿ ಇಲ್ಲವೇ ಇಲ್ಲ. ವಂಶವನ್ನು ಮುಂದುವರಿಸಲು ಗಂಡು ಬೇಕು ಎಂಬಲ್ಲಿಂದ ಹಿಡಿದು ಮದುವೆಯ ಸಂದರ್ಭದಲ್ಲಿ ವರದಕ್ಷಿಣೆ ಕೊಡಬೇಕಾಗುತ್ತದೆ ಎಂಬಲ್ಲಿವರೆಗೆ ಹೆಣ್ಣು ವಂಶಕ್ಕೆ ಅನನುಕೂಲಕರವಾದ ಪಟ್ಟಿಯನ್ನೇ ಸಮಾಜ ತಯಾರಿಸಿಟ್ಟುಕೊಂಡಿದೆ. ಹೆಣ್ಣನ್ನು ಎಷ್ಟೇ ಓದಿಸಿದರೂ ಅಂತಿಮವಾಗಿ ಆಕೆ ಪರರ ಪಾಲಾಗುತ್ತಾಳೆ ಎಂಬ ನಂಬಿಕೆ, ಕೃಷಿ ಚಟುವಟಿಕೆಯಲ್ಲಿ ಹೆಣ್ಣಿಗಿಲ್ಲದ ಪ್ರಾಧಾನ್ಯತೆ, ಹೆಣ್ಣನ್ನು ಸದಾ ಕಾಡುವ ಸುರಕ್ಷಿತತೆಯ ಭೀತಿ ಮತ್ತು ಕೆಲವೊಮ್ಮೆ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗೆ ಪಾಲು ಕೊಡಬೇಕಾಗುತ್ತದೆಂಬ ಭಯ.. ಇತ್ಯಾದಿಗಳೂ ಪಾಲಕರ ಹೆಣ್ಣು ದ್ವೇಷಕ್ಕೆ ಕಾರಣವಾಗುತ್ತದೆ. ಅಂದಹಾಗೆ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಕಾನೂನಿನ ಮೂಲಕ ಈ ಮಾನಸಿಕತೆಯನ್ನು ಪೂರ್ಣ ಮಟ್ಟದಲ್ಲಿ ಬದಲಿಸಬಹುದು ಎಂದು ಹೇಳುವ ಹಾಗಿಲ್ಲ. ಯಾಕೆಂದರೆ, ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆಯನ್ನು ಸುಸಜ್ಜಿತ ಆಸ್ಪತ್ರೆಗಳಲ್ಲೇ ನಡೆಸಬೇಕೆಂದಿಲ್ಲ. ಇದನ್ನು ತೀರಾ ಅಸುರಕ್ಷಿತವಾಗಿ ಮತ್ತು ನಗರದಿಂದ ದೂರದ ಪ್ರದೇಶಗಳಲ್ಲೂ ಮಾಡಲಾಗುತ್ತದೆ. ಸ್ಥಾಪಿತ ಸ್ಕ್ಯಾನಿಂಗ್ ಕೇಂದ್ರಗಳ ಬದಲು ಮೊಬೈಲ್ ಪ್ರಯೋಗಾಲಯದಲ್ಲೂ ಇಂಥ ಪತ್ತೆ ಮತ್ತು ಹತ್ಯೆ ನಡೆಯುತ್ತಿರುವುದರಿಂದ ಅಧಿಕಾರಿಗಳಿಗೆ ಇದರ ಸುಳಿವು ಸಿಗುವುದು ಸುಲಭವಲ್ಲ. ಇತ್ತೀಚೆಗೆ ಮಂಡ್ಯದಲ್ಲಿ ಪತ್ತೆ ಹಚ್ಚಲಾದ ‘ಭ್ರೂಣಹತ್ಯೆ’ ಜಾಲವು ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿತ್ತು. ಮಂಡ್ಯದ ಅಲೆಮನೆ ಸಮೀಪದ ಕೊಠಡಿಯಲ್ಲಿ ಯಾರಿಗೂ ಅನುಮಾನ ಬಾರದಂತೆಯೇ ಈ ಕೃತ್ಯ ನಡೆಯುತ್ತಿತ್ತು. ಸ್ಥಳೀಯರಿಗೆ ಈ ಬಗ್ಗೆ ಗೊತ್ತಾಗುವುದು ಸುಲಭವೂ ಅಲ್ಲ. ಇಲ್ಲಿ ಇನ್ನೊಂದು ಸಂಗತಿಯೂ ಇದೆ, ಈ ಭ್ರೂಣ ಹತ್ಯೆಯ ವೈದ್ಯರ ಒತ್ತಾಸೆಯಿಂದ ನಡೆಯುತ್ತಿದೆ ಎನ್ನುವಂತೆಯೂ ಇಲ್ಲ. ದಂಪತಿಗಳ ಸಮ್ಮತಿಯಿಂದ ಮತ್ತು ಒತ್ತಾಯದಿಂದಲೇ ಇಂಥವು ನಡೆಯುತ್ತಿರುವುದರಿಂದ ಇವು ಬಹಿರಂಗಕ್ಕೆ ಬರುವುದಕ್ಕೂ ಕಷ್ಟವಿದೆ. ಭ್ರೂಣಹತ್ಯೆಗಾಗಿ ನಿಗದಿ ಪಡಿಸಲಾದ ಶುಲ್ಕದಲ್ಲಿ ಏನಾದರೂ ಏರುಪೇರಾಗಿ ಜಗಳವಾದರೆ ಮಾತ್ರ ಇಂಥವು ಸಾರ್ವಜನಿಕ ಗಮನಕ್ಕೆ ಬರುತ್ತದೆ. ಆದ್ದರಿಂದಲೇ, ಈ ಹೆಣ್ಣು ಭ್ರೂಣಹತ್ಯೆಯನ್ನು ಕಾನೂನು ತಕ್ಕಡಿಯಲ್ಲಷ್ಟೇ ಇಟ್ಟು ನೋಡದೇ ಸಾಮಾಜಿಕ ಮತ್ತು ಧಾರ್ಮಿಕ ದೃಷ್ಟಿಯಿಂದಲೂ ಪರಿಶೀ ಲಿಸಬೇಕಾಗಿದೆ.</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಈ ಇಡೀ ಪ್ರಕ್ರಿಯೆಯಲ್ಲಿ ದಂಪತಿಗಳ ಪಾತ್ರ ಬಹು ಅಮೂಲ್ಯವಾದುದು. ಅವರ ಒಪ್ಪಿಗೆಯಿಲ್ಲದೇ ಭ್ರೂಣಹತ್ಯೆ ಸಾಧ್ಯವೇ ಇಲ್ಲ. ಸಾಮಾನ್ಯವಾಗಿ ಬಡ ಮತ್ತು ಅರೆ ಮಧ್ಯಮ ಕುಟುಂಬಗಳಲ್ಲಿ ಇಂಥ ಭ್ರೂಣಹತ್ಯೆ ಹೆಚ್ಚು. ಮೊದಲ ಮಗು ಹೆಣ್ಣಾದರೆ, ಎರಡನೇ ಮಗು ಗಂಡಾಗಬೇಕೆಂದು ಬಯಸುವುದು ಮತ್ತು ಅದು ಕೈಗೂಡುವುದಿಲ್ಲ ಎಂದು ಭ್ರೂಣ ಪತ್ತೆಯಲ್ಲಿ ಸ್ಪಷ್ಟವಾದರೆ ಹತ್ಯೆಗೆ ಮುಂದಾಗುವುದು ನಡೆಯುತ್ತಿದೆ. ಇದು ಮನಸ್ಥಿತಿಯೊಂದರ ಫಲಿತಾಂಶ. ಹೆಣ್ಣು ಅಶಕ್ತೆ ಮತ್ತು ಕುಟುಂಬಕ್ಕೆ ಭಾರ ಅನ್ನುವ ಭಾವನೆಯೇ ಈ ಹತ್ಯೆಗೆ ಕಾರಣ. ಬರೇ ಕಾನೂನು ಈ ಮನಸ್ಥಿತಿಯನ್ನು ಬದಲಿಸದು. ಪರಂಪರಾಗತವಾಗಿ ಮನಸ್ಸಲ್ಲಿ ಉಳಿದು ಬಿಟ್ಟಿರುವ ಈ ಮನಸ್ಥಿತಿಯನ್ನು ಬದಲಿಸುವುದಕ್ಕೂ ಸರಕಾರ ಅಭಿಯಾನ ರೂಪದ ಗಂಭೀರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಮನೆ ಮನೆ ಭೇಟಿಯಷ್ಟೇ ಅಲ್ಲ, ಕೂಲಿಕಾರರಾಗಿ ಒಂದೂರಿನಿಂದ ಮತ್ತೊಂದೂರಿಗೆ ವಲಸೆ ಹೋಗಿರುವ ದಂಪತಿಗಳನ್ನು ಭೇಟಿ ಮಾಡಿ ಅವರಲ್ಲಿ ಅರಿವು ಮೂಡಿಸುವ ಪ್ರಯತ್ನಗಳಾಗಬೇಕು. ಉಚಿತ ಶಿಕ್ಷಣವೂ ಸೇರಿದಂತೆ ಹೆಣ್ಣು ಮಕ್ಕಳಿಗಾಗಿ ಸರಕಾರ ಜಾರಿ ಮಾಡಿರುವ ವಿವಿಧ ಯೋಜನೆಗಳ ಕುರಿತಂತೆ ಮಾಹಿತಿ ನೀಡಬೇಕು. ಇದರ ಜೊತೆಗೇ ಮಾನವ ಜೀವ ಎಷ್ಟು ಅಮೂಲ್ಯ ಎಂಬುದನ್ನು ಅವರು ಗಂಭೀರವಾಗಿ ಅವಲೋಕಿಸುವಂತೆ ಮಾಡಬೇಕು. ಇದಕ್ಕಾಗಿ ವಿವಿಧ ಸರಕಾರೇತರ ಸಂಸ್ಥೆಗಳ ನೆರವನ್ನು ಪಡೆದುಕೊಳ್ಳಬೇಕು. ಒಂದುರೀತಿಯಲ್ಲಿ</span></div><div><span style="background-color: white; color: #222222; font-family: Arial, Helvetica, sans-serif; font-size: small;">,</span><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಭ್ರೂಣಹತ್ಯೆ ಎಂಬುದು 21ನೇ ಶತಮಾನದ ಪಿಡುಗಲ್ಲ. ಇದಕ್ಕೆ ಪುರಾತನ ಇತಿಹಾಸವಿದೆ. ಪ್ರವಾದಿ ಮುಹಮ್ಮದ್(ಸ)ರ ಕಾಲದಲ್ಲೂ ಈ ಪಿಡುಗು ವ್ಯಾಪಕವಾಗಿತ್ತು. ಕೆಲವೊಂದು ಬುಡಕಟ್ಟುಗಳು ಹೆಣ್ಣು ಮಗುವನ್ನು ಅಪಾರವಾಗಿ ದ್ವೇಷಿಸುತ್ತಿದ್ದುವು. ಇವತ್ತಿನಂತೆ ಭ್ರೂಣಪತ್ತೆ ಪರೀಕ್ಷೆ ಇಲ್ಲದ ಆ ಕಾಲದಲ್ಲಿ ಹುಟ್ಟಿದ ಕೂಡಲೇ ಹೆಣ್ಣು ಮಗುವನ್ನು ಹೂಳುವ ಪದ್ಧತಿ ಇತ್ತು. ಪ್ರವಾದಿ ಮುಹಮ್ಮದ್(ಸ)ರು ಈ ಪದ್ಧತಿಯನ್ನು ಪ್ರಬಲವಾಗಿ ವಿರೋಧಿಸಿದರು. ಜನರ ಮನಸ್ಸಲ್ಲಿ ಅಪರಾಧಿ ಭಾವವನ್ನು ಹುಟ್ಟು ಹಾಕಿದರು. ಪ್ರತಿಯೊಬ್ಬರನ್ನೂ ಮರಣಾನಂತರ ದೇವನು ಎಬ್ಬಿಸುತ್ತಾನೆ ಮತ್ತು ಹತ್ಯೆಗೀಡಾದ ಹೆಣ್ಣು ಮಗುವಿನ ಮುಂದೆ ಆಕೆಯ ಹೆತ್ತವರನ್ನು ನಿಲ್ಲಿಸಿ ವಿಚಾರಣೆಗೊಳಪಡಿಸಿ ಶಿಕ್ಷೆಯನ್ನು ನೀಡಲಾಗುತ್ತದೆ ಎಂದು ಎಚ್ಚರಿಸಿದರು. ಯಾವ ಹೆತ್ತವರು ಹೆಣ್ಣು ಮಗುವನ್ನು ಚೆನ್ನಾಗಿ ಲಾಲಿಸಿ ಪಾಲಿಸಿ ಬೆಳೆಸುತ್ತಾರೋ ಅವರಿಗೆ ಸ್ವರ್ಗವಿದೆ ಎಂದು ಘೋಷಿಸಿದರು. ಮದುವೆಯ ವೇಳೆ ಹೆಣ್ಣಿಗೆ ವಧು ಧನ ಪಾವತಿಸಿ ಮದುವೆಯಾಗಬೇಕೆಂದು ಯುವಕರಿಗೆ ಆದೇಶಿಸಿದರು. ಆ ಮೂಲಕ ವರದಕ್ಷಿಣೆ ಎಂಬ ಪರಿಕಲ್ಪನೆಗೇ ಕೊಡಲಿಯೇಟು ನೀಡಿದರು. ಶಿಕ್ಷಣ ಪ್ರತಿ ಹೆಣ್ಣು-ಗಂಡಿನ ಮೇಲೂ ಕಡ್ಡಾಯ ಎಂದು ಸಾರಿದರು. ಗಂಡಿನಂತೆಯೇ ಹೆಣ್ಣಿಗೂ ಹೆತ್ತವರ ಆಸ್ತಿಯಲ್ಲಿ ಪಾಲಿದೆ ಎಂದರು. ಯುದ್ಧದಲ್ಲಿ ಮಹಿಳೆಯನ್ನು ಪಾಲುಗೊಳಿಸಿದರು. ಮದೀನಾದ ಸಂತೆಯಲ್ಲಿ ಮಹಿಳೆಯರೂ ವ್ಯಾಪಾರಿಯಾದರು. ಮಹಿಳೆ ಮಸೀದಿಗೂ ಹೋಗಬಹುದು, ಸಂತೆಯಲ್ಲಿ ವ್ಯಾಪಾರವನ್ನೂ ಮಾಡಬಹುದು, ಯುದ್ಧದಲ್ಲೂ ಭಾಗವಹಿಸಬಹುದು, ಮದುವೆಯ ವೇಳೆ ವರನೇ ಆಕೆಗೆ ವಧು ಧನ ಪಾವತಿಸಿ ವಿವಾಹವಾಗಬೇಕು, ಬೇಡದ ವಿವಾಹದಿಂದ ಆಕೆ ವಿಚ್ಛೇದನ ಪಡಕೊಳ್ಳಬಹುದು, ಆಸ್ತಿಯಲ್ಲಿ ಆಕೆಗೂ ಪಾಲು ಇದೆ, ಯಾವ ಮಕ್ಕಳು ತಾಯಿಯ ಕೋಪಕ್ಕೆ ಪಾತ್ರರಾಗುತ್ತಾರೋ ಅವರು ನರಕಕ್ಕೆ.. ಇತ್ಯಾದಿ ಇತ್ಯಾದಿ ಅಮೂಲ್ಯ ಮತ್ತು ಚೇತೋಹಾರಿ ನೀತಿಗಳನ್ನು ಧರ್ಮದ ಭಾಗವಾಗಿ ಪ್ರಸ್ತುತಪಡಿಸಿದರು. ಅಲ್ಲದೇ, ಪವಿತ್ರ ಕುರ್ಆನಿನ 114 ಅಧ್ಯಾಯಗಳ ಪೈಕಿ 4ನೇ ಅಧ್ಯಾಯದ ಹೆಸರನ್ನೇ ‘ಮಹಿಳೆ’ ಎಂದಿಟ್ಟರು. ಮಹಿಳಾ ಪರ ಅವರ ಈ ಸರಣಿ ಕ್ರಮಗಳು ನಿಧಾನಕ್ಕೆ ಅಂದಿನ ಜನರ ಮೇಲೆ ಗಾಢ ಪರಿಣಾಮ ಬೀರತೊಡಗಿದವು. ಅಂತಿಮವಾಗಿ, ಹೆಣ್ಣು ಮಗುವಿಗಾಗಿ ಆಸೆಪಡುವ ಮತ್ತು ಹೆಮ್ಮೆಪಡುವ ಸಮಾಜವೊಂದನ್ನು ಅವರು ಕಟ್ಟಿ ಬೆಳೆಸಿದರು.</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಸದ್ಯ ಕಾನೂನಾತ್ಮಕವಾಗಿ ಮತ್ತು ಭಾವನಾತ್ಮಕವಾಗಿ ಜನರನ್ನು ಸಂಸ್ಕರಿಸುವ ಪ್ರಯತ್ನ ನಡೆಯಬೇಕಾಗಿದೆ.</span></div><br />a k kukkilahttp://www.blogger.com/profile/04432257424497331465noreply@blogger.com0tag:blogger.com,1999:blog-2716482703415659532.post-30322862899617382952023-12-22T04:24:00.000-08:002023-12-22T04:24:58.417-08:00ಮುಸ್ಲಿಮ್ ಸಮುದಾಯದ ಚರ್ಚೆಗೆ ಹೊಸ ಸಾಧ್ಯತೆ ತೆರೆದುಕೊಟ್ಟ ಆಶಿಕ್<div class="separator" style="clear: both; text-align: center;"><a href="https://blogger.googleusercontent.com/img/b/R29vZ2xl/AVvXsEhpyCHLnoV-dIT_c4yJE4MSBYMCoZdWzgtEZSc_eabm7O3me-VxDnl_xqQagf0gaLyTP6ISli5pCmAzIwRkEPWy2IPW5GvAHKP8cvrzhfj_hiP6Ls0Vw_3h2mSApEMraAGA4q5dV20_0kdCDB1xD1weFRSWqSwjCH9zV-LZ1wI2rTM8XespzDRDO0RHnZCL/s1137/edit%20pic%20(1).jpg" imageanchor="1" style="margin-left: 1em; margin-right: 1em;"><img border="0" data-original-height="608" data-original-width="1137" height="214" src="https://blogger.googleusercontent.com/img/b/R29vZ2xl/AVvXsEhpyCHLnoV-dIT_c4yJE4MSBYMCoZdWzgtEZSc_eabm7O3me-VxDnl_xqQagf0gaLyTP6ISli5pCmAzIwRkEPWy2IPW5GvAHKP8cvrzhfj_hiP6Ls0Vw_3h2mSApEMraAGA4q5dV20_0kdCDB1xD1weFRSWqSwjCH9zV-LZ1wI2rTM8XespzDRDO0RHnZCL/w400-h214/edit%20pic%20(1).jpg" width="400" /></a></div><br /><p><br /></p><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ದ.ಕ. ಜಿಲ್ಲೆಯ 24ರ ಯುವಕ ರಾಷ್ಟ್ರ ಮಟ್ಟದಲ್ಲಿ ಸುದ್ದಿಗೀಡಾಗಿದ್ದಾರೆ. ಸೋನಿ ಟಿ.ವಿ. ನಡೆಸಿಕೊಡುವ ಮಾಸ್ಟರ್ ಶೆಫ್ ಇಂಡಿಯಾ ಎಂಬ ಬಹುಪ್ರಸಿದ್ಧ ಅಡುಗೆ ಸ್ಪರ್ಧೆಯಲ್ಲಿ ಮಂಗಳೂರಿನ ಈ ಮುಹಮ್ಮದ್ ಆಶಿಕ್ ದೇಶದಾದ್ಯಂತದ 30 ಸಾವಿರ ಸ್ಪರ್ಧಾಳುಗಳನ್ನು ಹಿಂದಿಕ್ಕಿ ಪ್ರಥಮ ಸ್ಥಾನ ಪಡೆದು ಅದ್ಭುತ ಸಾಧನೆ ಮಾಡಿದ್ದಾರೆ. ಕಳೆದ ವರ್ಷವೂ ಸೋನಿ ಟಿ.ವಿ.ಯ ಸ್ಪರ್ಧೆಯಲ್ಲಿ ಈ ಆಶಿಕ್ ಸ್ಪರ್ಧಿಸಿದ್ದರು. ಆದರೆ ವಿಫಲರಾಗಿದ್ದರು. ಈ ಬಾರಿ ಮತ್ತೆ ಸ್ಪರ್ಧಿಸಿದರು. ಹೊಟೇಲ್ ಮ್ಯಾನೇಜ್ಮೆಂಟ್ ಕಲಿಯಬೇಕೆಂಬ ಬಯಕೆ ಇಟ್ಟುಕೊಂಡರೂ ಆರ್ಥಿಕ ಪರಿಸ್ಥಿತಿಯಿಂದಾಗಿ ಅದನ್ನು ಕೈಬಿಟ್ಟ ಯುವಕನೋರ್ವ ಸ್ವಪ್ರಯತ್ನದಿಂದ ಅದ್ಭುತ ಸಾಧಕನಾಗಿ ಮೂಡಿ ಬಂದಿರುವುದನ್ನು ಒಟ್ಟು ಸಮಾಜ ಅದರಲ್ಲೂ ಮುಸ್ಲಿಮ್ ಸಮುದಾಯ ಅವಲೋಕನಕ್ಕೆ ಒಳಪಡಿಸುವುದು ಸಕಾಲಿಕವಾದುದು.</span><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ದಕ್ಷಿಣ ಕನ್ನಡವನ್ನು ಕೋಮುಸೂಕ್ಷ್ಮ ಜಿಲ್ಲೆ ಎಂದು ಕರೆಯುವುದಿದೆ. ಈ ಹೆಸರು ವಿನಾಕಾರಣ ಬಂದಿಲ್ಲ. ಅನೈತಿಕ ಪೊಲೀಸ್ಗಿರಿ, ಗುಂಪು ಥಳಿತ, ದ್ವೇಷಭಾಷಣ, ಕೋಮುಗಲಭೆಗಳನ್ನು ಒಡಲಲ್ಲಿ ಇಟ್ಟುಕೊಂಡು ಆಗಾಗ ಅಷ್ಟಿಷ್ಟು ಹೊರಚೆಲ್ಲಿ ದಾವಾಗ್ನಿ ಸೃಷ್ಟಿಸುವ ಜಿಲ್ಲೆ ಇದು. ಇದರ ಪರಿಣಾಮ ಇಲ್ಲಿನ ಜನಜೀವನದ ಮೇಲೂ ಆಗಿದೆ. ಮುಖ್ಯವಾಗಿ, ಮುಸ್ಲಿಮ್ ಸಮುದಾಯದ ಮೇಲೆ ಈ ವಾತಾವರಣ ಸಾಕಷ್ಟು ಅಡ್ಡ ಪರಿಣಾಮವನ್ನೂ ಬೀರಿದೆ. ಸಮುದಾಯದ ಮಂದಿ ಒಂದುಕಡೆ ಒಟ್ಟು ಸೇರಿದರೆ ರಾಜಕೀಯ ಮಾತನಾಡದೇ ಮತ್ತು ರಾಜಕಾರಣಿಗಳ ಕೋಮುದ್ವೇಷದ ಮಾತುಗಳನ್ನು ಉಲ್ಲೇಖಿಸಿ ಚರ್ಚಿಸದೇ ವಿರಮಿಸುವುದು ಕಡಿಮೆ. ವಾಟ್ಸಪ್ ಗ್ರೂಪ್ಗಳಲ್ಲೂ ಇಂಥವುಗಳದ್ದೇ ಕಾರುಬಾರು. ದ್ವೇಷಭಾಷಣಗಳನ್ನು ಖಂಡಿಸುವುದು, ರಾಜಕಾರಣಿಯ ಮುಸ್ಲಿಮ್ ದ್ವೇಷಿ ಹೇಳಿಕೆಯನ್ನು ಪ್ರಶ್ನಿಸುವುದು, ಮುಸ್ಲಿಮ್ ಸಮುದಾಯ ರಾಜಕೀಯವಾಗಿ ಏನು ಮಾಡಬೇಕೆಂದು ಚರ್ಚಿಸುವುದು, ಯಾವ ರಾಜಕಾರಣಿ ಮತ್ತು ರಾಜಕೀಯ ಪಕ್ಷ ಮುಸ್ಲಿಮರಿಗೆ ಅನಾನುಕೂಲ ಎಂದೆಲ್ಲಾ ವಿಶ್ಲೇಷಿಸುವುದನ್ನೇ ಮುಸ್ಲಿಮ್ ಸಮುದಾಯದ ಹೆಚ್ಚಿನ ವಾಟ್ಸಪ್ ಗ್ರೂಪ್ಗಳಲ್ಲಿ ಮಾಡಲಾಗುತ್ತಿದೆ. ಇವುಗಳು ತಪ್ಪು ಎಂದಲ್ಲ. ಆದರೆ ಮುಸ್ಲಿಮ್ ಸಮುದಾಯದ ಆದ್ಯತೆಯೇ ಇದಾಗಿಬಿಟ್ಟರೆ, ಅದರ ನಕಾರಾತ್ಮಕ ಪರಿಣಾಮವನ್ನು ಹೊಸ ತಲೆಮಾರು ಅನುಭವಿಸಬೇಕಾಗುತ್ತದೆ. ಇಂಥ ವಾಟ್ಸಾಪ್ ಚರ್ಚೆಗಳು ಅಲ್ಲೇ ಉಳಿಯದೇ ಆ ಬಳಿಕ ಮನೆಯಲ್ಲೂ ಪ್ರಸ್ತಾಪವಾಗುತ್ತದೆ. ಪದೇಪದೇ ಇಂಥದ್ದೇ ಚರ್ಚೆ-ವಿಶ್ಲೇಷಣೆಯನ್ನು ಓದುತ್ತಾ ಓದುತ್ತಾ ವ್ಯಕ್ತಿ ಅನಗತ್ಯ ಆತಂಕ ಮತ್ತು ಗುಂಗಿಗೆ ಬೀಳಬಹುದು. ನಿಜವಾಗಿ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಅಭದ್ರತೆಯೇ ಬದುಕಾಗುವುದು ಅಪಾಯಕಾರಿ. ಎಲ್ಲೋ ನಡೆಯುವ ದ್ವೇಷ ಭಾಷಣ, ಅಮಾನವೀಯ ಕೃತ್ಯಗಳನ್ನು ಇನ್ನೆಲ್ಲೋ ಕುಳಿತು ದಿನಾ ಚರ್ಚಿಸುವುದರಿಂದ ನಿರ್ಮಾಣಾತ್ಮಕ ಆಲೋಚನೆಗೆ ತಡೆ ಬೀಳಬಹುದು. ಅದು ಮನೆಯ ಮಕ್ಕಳ ಮೇಲೂ ಪರಿಣಾಮ ಬೀರಬಹುದು. ಸ್ವತಂತ್ರ ಆಲೋಚನೆಗಳೊಂದಿಗೆ, ಸಮೃದ್ಧವಾಗಿ ಬೆಳೆಯಬೇಕಾದ ಮಕ್ಕಳು ಆತಂಕ, ಅನುಮಾನ ಮತ್ತು ನಕಾರಾತ್ಮಕ ಧೋರಣೆಯೊಂದಿಗೆ ಬೆಳೆಯಬಹುದು. ಮುಹಮ್ಮದ್ ಆಶಿಕ್ನ ಸಾಧನೆ ಈ ಎಲ್ಲ ಹಿನ್ನೆಲೆಯಲ್ಲಿ ಮುಖ್ಯವಾಗುತ್ತದೆ. ಈ ಯುವಕ ಈ ಮಟ್ಟಕ್ಕೆ ಬೆಳೆದುದು ಪವಾಡದಿಂದಲ್ಲ. ಸ್ಪಷ್ಟ ಗುರಿ, ಅಪಾರ ಬದ್ಧತೆ ಮತ್ತು ಛಲವೇ ಈ ಆಶಿಕ್ನನ್ನು ದೇಶ-ವಿದೇಶದ ತೀರ್ಪುಗಾರರು ಮಾಸ್ಟರ್ ಶೆಫ್ ಆಫ್ ಇಂಡಿಯಾವಾಗಿ ಗುರುತಿಸಿದ್ದಾರೆ. ಮನೆಯಲ್ಲೇ ಶುಚಿ-ರುಚಿಯಾದ ಆಹಾರ ತಯಾರಿಸಿ ಕೊಡುವಲ್ಲಿಂದ ಆರಂಭವಾದ ಈ ಯುವಕನ ಪ್ರಯಾಣವು, ಕಾಲೇಜುಗಳ ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಸ್ವತಃ ಸ್ಟಾಲ್ ಹಾಕಿ ವ್ಯಾಪಾರ ಮಾಡುವಲ್ಲಿ ವರೆಗೆ ಮತ್ತು ಅಲ್ಲಿಂದ ಕುಲ್ಕಿ ಶರ್ಬತ್ ಎಂಬ ಪಾನೀಯ ಮಾರಾಟದವರೆಗೂ ಬೆಳೆಯಿತು. ದ್ವಿತೀಯ ಪಿಯುಸಿಯ ಬಳಿಕ ಆರ್ಥಿಕ ಅಡಚಣೆಯಿಂದ ಕಲಿಕೆ ಮುಂದುವರಿಸಲಾಗದೇ ಸೇಲ್ಸ್ಮ್ಯಾನ್ ಕೆಲಸಕ್ಕೆ ಸೇರಿಕೊಂಡ ಆಶಿಕ್, 20ರ ಹರೆಯಲ್ಲೇ `ಕುಲ್ಕಿ ಹಬ್' ಎಂಬ ವಿವಿಧ ಪಾನೀಯಗಳ ಅಂಗಡಿ ತೆರೆದರು. ತಾನು ಶೆಫ್ ಆಗಬೇಕು ಎಂಬ ಕನಸನ್ನು ಎಂದೂ ಬಿಟ್ಟು ಕೊಡದ ಛಲದ ಸುಖವನ್ನು ಇಂದು ಈ ಆಶಿಕ್ ಅನುಭವಿಸುತ್ತಿದ್ದಾರೆ. ಅಂದಹಾಗೆ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಕೋಮು ಸಂಬಂಧಿ ವಿಷಯಗಳಿಗಾಗಿಯೇ ರಾಷ್ಟ್ರ ಮಟ್ಟದಲ್ಲಿ ಆಗಾಗ ಸುದ್ದಿಗೀಡಾಗುವ ಜಿಲ್ಲೆಯ ತರುಣನೋರ್ವ ಅತ್ಯಂತ ಚೇತೋಹಾರಿ ಮತ್ತು ಪ್ರೇರಣದಾಯಿ ಸಂಗತಿಗಾಗಿ ರಾಷ್ಟçಮಟ್ಟದಲ್ಲಿ ಸುದ್ದಿಗೀಡಾಗುವುದು ಮುಸ್ಲಿಮ್ ಸಮುದಾಯದ ಚರ್ಚೆಯ ದಿಕ್ಕನ್ನು ಬದಲಿಸುವುದಕ್ಕೆ ಪ್ರೇರಣೆಯಾಗಬೇಕು. ಈ ಮುಹಮ್ಮದ್ ಆಶಿಕ್ ಒಂದಷ್ಟು ಸಮಯದವರೆಗೆ ಸಮುದಾಯದ ವಾಟ್ಸಪ್ ಚರ್ಚೆಗಳಲ್ಲಿ ಸ್ಥಾನ ಪಡೆಯಬೇಕು. ಪ್ರತಿ ಮನೆ ಮನೆಗಳಲ್ಲೂ ಈ ಆಶಿಕ್ ಚರ್ಚಾವಸ್ತುವಾಗಬೇಕು. ಹೊಸ ತಲೆಮಾರು ಇಂಥ ಸಾಧಕರ ಕತೆಗಳನ್ನು ಕೇಳಿಕೊಂಡು ಬೆಳೆಯಬೇಕು. ದಿನವಿಡೀ ಕಾಂಗ್ರೆಸ್ಸು, ಬಿಜೆಪಿ, ಅದು, ಇದು ಎಂದು ಚರ್ಚಿಸುವುದಕ್ಕಿಂತ ಬೆಳೆಯುತ್ತಿರುವ ಪೀಳಿಗೆಯನ್ನು ಅತ್ಯಂತ ನಿರ್ಮಾಣಾತ್ಮಕವಾಗಿ ಬೆಳೆಸುವುದು ಹೇಗೆ, ಅವರನ್ನು ಸಾಧಕರಾಗಿ ಪರಿವರ್ತಿಸುವುದು ಹೇಗೆ ಎಂಬ ಬಗ್ಗೆ ಗಂಭೀರ ಅವಲೋಕನಗಳು ಸೋಶಿಯಲ್ ಮೀಡಿಯಾದಲ್ಲಿ ನಡೆಯಬೇಕು. ಅಷ್ಟೇ ತೀವ್ರವಾಗಿ ಇಂಥ ಚರ್ಚೆ ಗಳು ಪ್ರತಿ ಮನೆಮನೆಯಲ್ಲೂ ನಡೆಯಬೇಕು. ಮಕ್ಕಳು ಈ ಚರ್ಚೆಯನ್ನು ಕೇಳಿ ಬೆಳೆಯುವುದರಿಂದ ಅವರಲ್ಲೂ ನಕಾರಾತ್ಮಕ ಭಾವಗಳು ಹೊರಟು ಹೋಗಿ ಆಶಾವಾದ ತುಂಬಿಕೊಳ್ಳುತ್ತದೆ. ತಾವೂ ಆಶಿಕ್ ಆಗಬೇಕು ಅಥವಾ ಸಾಧಕರಾಗಿ ಗುರುತಿಸಿಕೊಳ್ಳಬೇಕು ಎಂಬ ಛಲ ತುಂಬುತ್ತದೆ. </span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಈ ಬಾರಿಯ ನೀಟ್ ಪರೀಕ್ಷೆಯಲ್ಲಿ ಮುಸ್ಲಿಮ್ ಸಮುದಾಯದ ವ್ಯಕ್ತಿ ಮೊದಲ 100 ರ್ಯಾಂಕಲ್ಲೂ ಕಾಣಿಸಿಕೊಂಡಿಲ್ಲ. ಅಬ್ದುಲ್ ಬಾಸಿತ್ ಅನ್ನುವ ಪ್ರತಿಭಾವಂತ ಪಡೆದಿರುವ 113ನೇ ರ್ಯಾಂಕೇ ಸಮುದಾಯದ ಪಾಲಿನ ಕಿರೀಟ. ತಮಿಳುನಾಡಿನ ಪ್ರಬಂಜನ್ ಮತ್ತು ಆಂಧ್ರದ ವರುಣ್ ಚಕ್ರವರ್ತಿ ಒಟ್ಟು 720 ಅಂಕಗಳಲ್ಲಿ 720 ಅಂಕಗಳನ್ನೂ ಪಡೆದು ಮೊದಲ ಸ್ಥಾನ ಪಡೆದಿದ್ದರು. ಈ ಬಗೆಯ ಪೈಪೋಟಿಯತ್ತ ಮುಸ್ಲಿಮ್ ಸಮುದಾಯದ ಮಕ್ಕಳನ್ನು ತರಬೇತುಗೊಳಿಸಬೇಕು. ಐಐಟಿ, ಐಐಐಟಿ, ಐಐಎಸ್ಇ, ಎನ್ಐಟಿ ಮತ್ತು ಐಐಎಂಗಳಲ್ಲಿ ಮುಸ್ಲಿಮ್ ಸಮುದಾಯದ ಅನುಪಾತ 1.92% ಎಂಬುದು ಈಗಿನ ಲೆಕ್ಕಾಚಾರ. ಈ ಅಂಕಿಅಂಶಗಳನ್ನು ಎತ್ತಿ ಉತ್ತಮಗೊಳಿಸುವುದಕ್ಕೆ ಪೂರಕ ಯೋಚನೆ ಮತ್ತು ಯೋಜನೆಗಳಿಗೆ ಸಮುದಾಯ ಚಾಲನೆ ನೀಡಬೇಕು. ಅದಕ್ಕೆ ಪ್ರಥಮ ಹೆಜ್ಜೆಯಾಗಿ ಸಕಾರಾತ್ಮಕ ಆಲೋಚನೆಗಳಿಗೆ ಆದ್ಯತೆ ನೀಡಬೇಕು. ಮುಸ್ಲಿಮ್ ಸಮುದಾಯ ಬರಹ, ಭಾಷಣ, ಸೋಶಿಯಲ್ ಮೀಡಿಯಾ ಚರ್ಚೆ ಗಳು ಮತ್ತು ಮನೆಯ ಮಾತುಕತೆಗಳೆಲ್ಲವೂ ಹೊಸ ಪೀಳಿಗೆಯ ಪಾಲಿಗೆ ಆಸಕ್ತಿಕರವಾಗುವಂತೆ ಮತ್ತು ಸಾಧನೆಗೆ ಪ್ರೇರಣೆಯಾಗುವಂತೆ ಇರಬೇಕು. ಭಾರತದ ಚಂದ್ರಯಾನದ ಯಶಸ್ಸಿನಲ್ಲಿ ಪಾತ್ರಧಾರಿಗಳಾಗಿರುವ ಸನಾ ಫೈರೋಝï, ಯಾಸಿರ್ ಅಮ್ಮಾರ್, ಮುಹಮ್ಮದ್ ಶಬೀರ್ ಆಲಂ, ಅರೀಬ್ ಅಹ್ಮದ್, ಅಖ್ತದಾರ್ ಅಬ್ಬಾಸ್, ಇಶ್ರತ್ ಜಮಾಲ್, ಖುಶ್ಬೂ ಮಿರ್ಝಾ ಮುಂತಾದ ವಿಜ್ಞಾನಿಗಳನ್ನು ಸಂದರ್ಭಾ ನುಸಾರ ಮಕ್ಕಳ ಮುಂದೆ ಪ್ರಸ್ತಾಪಿಸಿ ಕನಸು ಕಟ್ಟಬೇಕು. ಇದೇನೂ ಅಸಾಧ್ಯವಲ್ಲ. ಪ್ರತಿ ಮಗುವೂ ವಿಶಿಷ್ಟ. ಸಾಹಸ ಮತ್ತು ಸಾಧನೆ ಮಕ್ಕಳನ್ನು ಆಕರ್ಷಿಸುವಷ್ಟು ಇನ್ನಾವುದೂ ಆಕರ್ಷಿಸುವುದಿಲ್ಲ. ಒಂದುವೇಳೆ, ಮನೆಯನ್ನು ಸಾಧಕರ ಕುರಿತಾದ ಮಾತಿನ ಮಂಟಪವಾಗಿಸಿಬಿಟ್ಟರೆ ಮತ್ತು ಕಠಿಣ ಸವಾಲುಗಳನ್ನೂ ಎದುರಿಸಿ ವಿಜಯಿಯಾದವರ ಸಾಹಸಗಾಥೆಗೆ ಮೀಸಲಾಗಿಸಿದರೆ ಅದನ್ನು ಆಲಿಸುತ್ತಾ ಬೆಳೆಯುವ ಮಗು ಅದನ್ನೇ ಕನಸುತ್ತದೆ. ಅಂಥದ್ದೇ ಬದುಕು ರೂಪಿಸಿಕೊಳ್ಳಲು ಹವಣಿಸುತ್ತದೆ. ಸದ್ಯ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಮುಹಮ್ಮದ್ ಆಶಿಕ್ ಪ್ರತಿ ಮನೆಯ ಬೆರಗಾಗಿ ಚರ್ಚೆಗೆ ಒಳಗಾಗುವುದರಿಂದ ಬೆಳೆಯುವ ಪೀಳಿಗೆಯಲ್ಲಿ ಹೊಸ ಕನಸು ಹುಟ್ಟಲು ಅವಕಾಶ ಒದಗಿಸುತ್ತದೆ. ಬರೇ ಧರ್ಮ ದ್ವೇಷ ಹೇಳಿಕೆಗಳು ಮತ್ತು ಪ್ರತಿ ಹೇಳಿಕೆಗಳನ್ನೇ ಇಡೀ ದಿನ ಚರ್ಚಿಸುತ್ತಾ ಅದನ್ನೇ ಮುಸ್ಲಿಮ್ ಸಮುದಾಯದ ಆದ್ಯತಾ ವಿಷಯವಾಗಿ ಮಾರ್ಪಡಿಸುವುದರಿಂದ ಮುಸ್ಲಿಮ್ ಸಮುದಾಯ ದೂರ ನಿಲ್ಲಬೇಕಾಗಿದೆ. ಮುಸ್ಲಿಮ್ ಸಮುದಾಯದ ಆದ್ಯತೆಗಳನ್ನು ಮುಸ್ಲಿಮ್ ಸಮುದಾಯವೇ ನಿರ್ಧರಿಸಬೇಕು. ಇನ್ನಾರೋ ಹಾಕಿ ಕೊಡುವ ರಂಗಸ್ಥಳದಲ್ಲಿ ನಿಂತು ಅವರ ಆದೇಶದಂತೆ ಕುಣಿಯುವುದರಿಂದ ಸಮುದಾಯಕ್ಕೆ ಯಾವ ಲಾಭವೂ ಇಲ್ಲ. ಈ ಕುಣಿತವನ್ನೇ ಬೆಳೆಯುವ ಪೀಳಿಗೆಗಳೂ ಕಲಿಯುತ್ತವೆ ಮತ್ತು ಅವೂ ಅದನ್ನೇ ಮುಂದುವರಿಸುತ್ತವೆ. ಭಯಪಡುವವರು ಇರುವವರೆಗೆ ಭಯಪಡಿಸುವವರು ಇದ್ದೇ ಇರುತ್ತಾರೆ. ಇದೊಂದು ಮುಗಿಯದ ನಾಟಕ. ಮುಸ್ಲಿಮ್ ಸಮುದಾಯ ಇಂಥ ನಕಾರಾತ್ಮಕ ಚರ್ಚೆಗಳಿಂದ ಹೊರಬಂದು ಸಕಾರಾತ್ಮಕ ಚರ್ಚೆಗಳಿಗೆ ಹೊರಳಬೇಕು. ಪ್ರತಿ ಮನೆಯಲ್ಲೂ ಮುಹಮ್ಮದ್ ಆಶಿಕ್ನಂಥ ಸಾಧಕರು ಚರ್ಚಾ ವಿಷಯವಾಗಬೇಕು. ಹೊಸ ಪೀಳಿಗೆ ಇಂಥ ಚರ್ಚೆಗಳನ್ನೇ ಆಲಿಸಿ ಬೆಳೆಯಬೇಕು. ಇದು ಖಂಡಿತ ಸಾಧ್ಯ. ತನ್ನ ಅಪೂರ್ವ ಛಲ ಮತ್ತು ಆತ್ಮವಿಶ್ವಾಸದಿಂದ ಅಮೋಘ ಸಾಧನೆ ಮಾಡಿದ ಆಶಿಕ್ಗೆ ಅಭಿನಂದನೆಗಳು.</span></div>a k kukkilahttp://www.blogger.com/profile/04432257424497331465noreply@blogger.com0tag:blogger.com,1999:blog-2716482703415659532.post-43354578401704451532023-12-12T04:45:00.000-08:002023-12-12T04:45:59.671-08:00ಪಶ್ಚಾತ್ತಾಪಪಡುವ ಅಪ್ಪ, ಅಪರಾಧಿ ಮಗ ಮತ್ತು ಭ್ರೂಣಕ್ಕೇ ಕತ್ತಿಯಿಕ್ಕುವ ವೈದ್ಯರ ಮಧ್ಯೆ...<p></p><div class="separator" style="clear: both; text-align: center;"><a href="https://blogger.googleusercontent.com/img/b/R29vZ2xl/AVvXsEgWynjeVHXR5QmO-3v_wz97UvewM2dAJzupUlVMel5IAyWD6t4llu_m5ytGml5GLO8SQfToC70gUb9350zfwsBrERHJIxIpdZgfdNN6WPTeosa_jO0x_kWySqr3ytU8n0AHHux1v4Ik33kXLNt6ZAPsQaUGW0ADSIYY9JaN9JmL1nmP9HZ6H5QdZLMvVtib/s1143/edit%20pic%20(1).jpg" imageanchor="1" style="margin-left: 1em; margin-right: 1em;"><img border="0" data-original-height="555" data-original-width="1143" height="194" src="https://blogger.googleusercontent.com/img/b/R29vZ2xl/AVvXsEgWynjeVHXR5QmO-3v_wz97UvewM2dAJzupUlVMel5IAyWD6t4llu_m5ytGml5GLO8SQfToC70gUb9350zfwsBrERHJIxIpdZgfdNN6WPTeosa_jO0x_kWySqr3ytU8n0AHHux1v4Ik33kXLNt6ZAPsQaUGW0ADSIYY9JaN9JmL1nmP9HZ6H5QdZLMvVtib/w400-h194/edit%20pic%20(1).jpg" width="400" /></a></div><br /><p></p><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">1. ಕೇರಳ: ಹಾಸಿಗೆಯಲ್ಲಿ ಮಲ ವಿಸರ್ಜಿಸಿದರೆಂದು ಅನಾರೋಗ್ಯ ಪೀಡಿತ ತಂದೆಯನ್ನೇ ಕೊಂದ ಮಗ</span><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">2. 900 ಭ್ರೂಣಹತ್ಯೆ ಮಾಡಿದ ವೈದ್ಯನ ಬಂಧನ ಮತ್ತು </span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">3. ಎಲ್ಲಾ ಆಸ್ತಿಯನ್ನೂ ಮಗನಿಗೆ ಕೊಟ್ಟು ತಪ್ಪು ಮಾಡಿದೆ ಎಂದ ರೇಮಂಡ್ ಸಂಸ್ಥಾಪಕ ಜಯಪತ್ ಸಿಂಘಾನಿಯಾ...</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಕಳೆದ ವಾರದ ಈ ಮೂರೂ ಸುದ್ದಿಗಳ ಕೇಂದ್ರ ಬಿಂದು ಮನುಷ್ಯ. ಮಾತ್ರವಲ್ಲ, ಬುದ್ಧಿ, ವಿವೇಕ, ಅಂತಃಕರಣ ಇರುವ ಮತ್ತು ರಕ್ತಸಂಬಂಧ ಹಾಗೂ ಮಾನವೀಯ ಸಂಬಂಧಗಳ ಪೋಷಕನಂತೆ ಬಿಂಬಿಸಿಕೊಳ್ಳುತ್ತಿರುವ ಮನುಷ್ಯ ಹೇಗೆ ಅವೆಲ್ಲವನ್ನೂ ಅವಗಣಿಸಬಲ್ಲ ಮತ್ತು ರಾಕ್ಷಸನಂತೆ ವರ್ತಿಸಬಲ್ಲ ಎಂಬುದಕ್ಕೂ ಈ ಮೂರೂ ಸುದ್ದಿಗಳು ಒಳ್ಳೆಯ ಉದಾಹರಣೆ.</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಎಂಟು ತಿಂಗಳ ಹಿಂದೆ 65 ವರ್ಷದ ಸೆಬಾಸ್ಟಿಯನ್ ಎಂಬ ತಂದೆ ಕಾರು ಅಪಘಾತದಲ್ಲಿ ಗಾಯಗೊಂಡ ಬಳಿಕ ಹಾಸಿಗೆಗೆ ಸೀಮಿತರಾದರು. ಅವರ ಪತ್ನಿ ಈ ಅಪಘಾತದ ಆಸು-ಪಾಸಿನಲ್ಲೇ ಕ್ಯಾನ್ಸರ್ನಿಂದ ತೀರಿಕೊಂಡಿದ್ದರು. ಮಗ ಸೆಬಿನ್ ಕ್ರಿಶ್ಚಿಯನ್ ತಂದೆಯನ್ನು ನೋಡಿಕೊಳ್ಳುತ್ತಿದ್ದ. 64 ವರ್ಷಗಳ ವರೆಗೆ ಆರೋಗ್ಯವಂತರಾಗಿದ್ದ ಮತ್ತು ನಡೆಯುತ್ತಿದ್ದ ಈ ಅಪ್ಪನಿಗೆ ಈ ಮಗ ಭಾರವಾಗಿರಲಿಲ್ಲ. ಆದರೆ, ಈ ಅಪ್ಪ ಎಂಟೇ ಎಂಟು ತಿಂಗಳಲ್ಲಿ ಮಗನಿಗೆ ಭಾರವಾದರು. ಇದೇ ಅಪ್ಪ ಈ 26 ವರ್ಷದ ಮಗನನ್ನು ಶಿಶುವಾದಾಗಿನಿಂದ ನಡೆಯುವ ಪ್ರಾಯದ ವರೆಗೆ ಮುದ್ದಾಡಿಸಿರಬಹುದು. ಕೈ ಹಿಡಿದು ನಡೆಸಿರಬಹುದು. ಮಾರುಕಟ್ಟೆಗೆ, ಶಾಲೆಗೆ, ಪಾರ್ಕ್ ಗೆ ಕರಕೊಂಡು ಹೋಗಿರಬಹುದು. ಆಗೆಲ್ಲ ಈ ಮಗನನ್ನು ಈ ಅಪ್ಪ ಭಾರ ಅಂದುಕೊಂಡಿರುತ್ತಿದ್ದರೆ ಈ ಕ್ರಿಶ್ಚಿಯನ್ ಜೀವಂತ ಇರುತ್ತಲೇ ಇರಲಿಲ್ಲ. ಇದರ ಜೊತೆಗೆ ಓದಬಹುದಾದ ಇನ್ನೊಂದು ಸುದ್ದಿಯೆಂದರೆ, 1500 ಕೋಟಿ ರೂಪಾಯಿ ಬೆಲೆಬಾಳುವ ರೇಮಂಡ್ ಬ್ರಾಂಡ್ನ ಸಂಸ್ಥಾಪಕ ವಿಜಯಪಥ್ ಸಿಂಘಾನಿಯಾ ಅವರದು. 85 ವರ್ಷದ ಇವರು ಇವತ್ತು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. 2015ರಲ್ಲಿ ಇವರು ತಮ್ಮ ಎಲ್ಲಾ ಶೇರುಗಳು ಮತ್ತು ಕಂಪೆನಿಯನ್ನು ತನ್ನ ಏಕೈಕ ಮಗ ಗೌತಮ್ ಸಿಂಘಾನಿಯಾಗೆ ನೀಡಿದರು. ಶೂನ್ಯದಿಂದ ರೇಮಂಡ್ ಎಂಬ ಬೃಹತ್ ಬಟ್ಟೆ ಉದ್ಯಮವನ್ನು ಕಟ್ಟಿ ಬೆಳೆಸಿದ ಈ ವಿಜಯಪಥ್ ಸಿಂಘಾನಿಯಾ, ಜಗತ್ತೇ ಗುರುತಿಸುವಷ್ಟು ಪ್ರಸಿದ್ಧ ಉದ್ಯಮಿಯಾದರು. ಆದರೆ, ಯಾವಾಗ ತನ್ನ ಮಗನಿಗೆ ತನ್ನ ಸಂಪೂರ್ಣ ಆಸ್ತಿಯನ್ನು ಬರೆದು ಕೊಟ್ಟರೋ ಆ ಬಳಿಕದಿಂದ ಅವರ ಕಷ್ಟದ ದಿನಗಳು ಆರಂಭವಾದುವು. ‘ಮಗನಿಗೆ ಆಸ್ತಿಯನ್ನು ಬರೆದು ಕೊಡುವಾಗ ಒಂದಿಷ್ಟು ಹಣವನ್ನು ಉಳಿಸಿಕೊಳ್ಳದೇ ಇರುತ್ತಿದ್ದರೆ ಇವತ್ತು ಬೀದಿಯೇ ಗತಿಯಾಗುತ್ತಿತ್ತು..’ ಎಂದು ಈ ಅಪ್ಪ ಇವತ್ತು ನೊಂದು ನುಡಿಯುತ್ತಾರೆ. ಇವತ್ತು ಅಪ್ಪ-ಮಗನ ಸಂಬಂಧ ಹಳಸಿದೆ. ಅಪ್ಪನತ್ತ ತಿರುಗಿಯೂ ಈ ಮಗ ನೋಡುತ್ತಿಲ್ಲ. ಅಂದಹಾಗೆ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಈ ಎರಡು ಸುದ್ದಿಗಳಿಗಿಂತ ತುಸು ಭಿನ್ನವಾದ ಆದರೆ, ಈ ಎರಡೂ ಸುದ್ದಿಗಳಿಗಿಂತಲೂ ಅತಿ ಭೀಕರವಾದ ಸುದ್ದಿಯೇ ಭ್ರೂಣಹತ್ಯೆಗೆ ಸಂಬಂಧಿಸಿದ್ದು. ಪತ್ರಿಕೆಗಳ ಪಾಲಿಗೆ ಮುಖಪುಟದ ಲೀಡಿಂಗ್ ಸುದ್ದಿಯಾಗಬೇಕಿದ್ದ ಈ ಭ್ರೂಣಹತ್ಯೆಯು ಹೆಚ್ಚಿನೆಲ್ಲಾ ಪತ್ರಿಕೆಗಳ ಒಳ ಪುಟವನ್ನು ಸೇರಿಕೊಂಡಿದೆ ಎಂಬುದೇ ಸಮಾಜದಲ್ಲಿ ಇದೆಷ್ಟು ಮಾಮೂಲು ಎಂಬುದನ್ನು ಹೇಳುತ್ತದೆ. ಬೆಂಗಳೂರು-ಮೈಸೂರು ಸುತ್ತಮುತ್ತ ಹತ್ತರಷ್ಟು ಮಂದಿಯನ್ನು ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ ವೈದ್ಯರು, ಲ್ಯಾಬ್ ಟೆಕ್ನೀಶಿಯನ್, ಆಸ್ಪತ್ರೆ ಮುಖ್ಯಸ್ಥರೆಲ್ಲಾ ಇದ್ದಾರೆ. ಹೆಣ್ಣು ಭ್ರೂಣವನ್ನು ಪತ್ತೆ ಹಚ್ಚಿ ಹತ್ಯೆ ಮಾಡುವುದೇ ಇವರ ಕಾಯಕ. ಒಂದು ಭ್ರೂಣಹತ್ಯೆಗೆ 25 ಸಾವಿರದಷ್ಟು ಹಣವನ್ನು ಪಡೆಯುತ್ತಾರೆ. ಇದೊಂದು ಜಾಲ. ಹಾಗಂತ, </span><span style="background-color: white; color: #222222; font-family: Arial, Helvetica, sans-serif; font-size: small;">ಪೊಲೀಸರ ಕೈಗೆ ಸಿಗದೇ ಇರುವ ಇಂಥ ಕುಖ್ಯಾತ ಜಾಲಗಳು ರಾಜ್ಯದಲ್ಲಿ ಇನ್ನೂ ಅನೇಕ ಇರಬಹುದು. ಇದನ್ನೇ ದೇಶಕ್ಕೆ ಅನ್ವಯಿಸಿ ನೋಡುವಾಗ ಭಯವಾಗುತ್ತದೆ. ದೇಶದಲ್ಲಿ ಒಂದು ದಿನದಲ್ಲಿ ಎಷ್ಟು ಭ್ರೂಣಗಳು ಹತ್ಯೆಯಾಗುತ್ತಿರಬಹುದು ಮತ್ತು ಇದಕ್ಕೆ ನೆರವಾಗುವ ವೈದ್ಯರು ಮತ್ತು ಆಸ್ಪತ್ರೆಗಳು ಎಷ್ಟಿರಬಹುದು? ಅಂದಹಾಗೆ,</span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಹೆತ್ತವರ ಬಗ್ಗೆ ಕಾಳಜಿಯ ಬೋಧನೆಯನ್ನು ನೀಡದ ಒಂದೇ ಒಂದು ಧರ್ಮ ಇಲ್ಲ. ಭಾರತವಂತೂ ಧರ್ಮಗಳೇ ತುಂಬಿಕೊಂಡಿರುವ ಮಣ್ಣು. ಶ್ರವಣಕುಮಾರನ ಭಾವುಕ ಕತೆಯನ್ನು ಬಾಲ್ಯದಲ್ಲಿ ಓದಿ ಬೆಳೆಯುವ ಮಕ್ಕಳೇ ಇಲ್ಲಿ ಅಧಿಕವಿದ್ದಾರೆ. ಹೆಣ್ಣನ್ನು ಪೂಜಿಸುವ ಮತ್ತು ದೇವತೆಯೆಂದು ಬಾಗುವ ಸಂಸ್ಕೃತಿಯೂ ಇಲ್ಲಿನದು. ಹಿಂದೂ, ಇಸ್ಲಾಮ್, ಕ್ರೈಸ್ತ- ಈ ಮೂರೂ ಧರ್ಮಗಳು ಹೆತ್ತವರ ಮತ್ತು ಹೆಣ್ಣಿನ ಬಗ್ಗೆ ಗೌರವಾರ್ಹವಾದ ಚಿಂತನೆಯನ್ನೇ ಹೊಂದಿವೆ. ಹೆತ್ತವರ ವಿಷಯದಲ್ಲಿ ಇಸ್ಲಾಮ್ ಎಂಥ ಕಟು ಧೋರಣೆಯನ್ನು ಹೊಂದಿದೆ ಎಂದರೆ, ವೃದ್ಧರಾಗಿರುವ ಹೆತ್ತವರ ಬಗ್ಗೆ ಛೆ ಎಂಬ ಉದ್ಗಾರವನ್ನೂ ಮಕ್ಕಳು ಹೊರಡಿಸಬಾರದು ಎನ್ನುತ್ತದೆ. ಹೆತ್ತವರ ಕೋಪಕ್ಕೆ ತುತ್ತಾದ ಯಾವ ಮಕ್ಕಳೂ ಅವರೆಷ್ಟೇ ಧರ್ಮಿಷ್ಟರಾದರೂ ಸ್ವರ್ಗ ಪ್ರವೇಶಿಸಲಾರರು ಎಂದೇ ಹೇಳಿದೆ. ‘ಹೆತ್ತವರೇ ಮಕ್ಕಳ ಪಾಲಿನ ಸ್ವರ್ಗ ಮತ್ತು ನರಕ’ ಎಂದೂ ಹೇಳಿದೆ. ಮಗ ಮುಸ್ಲಿಮ್ ಆಗಿದ್ದು, ಹೆತ್ತಬ್ಬೆ ಮುಸ್ಲಿಮೇತರರಾಗಿದ್ದರೂ ಹೆತ್ತವರ ಮೇಲಿನ ಕರ್ತವ್ಯಗಳಲ್ಲಿ ಮಗನಿಗೆ ಯಾವ ರಿಯಾಯಿತಿಯೂ ಇರುವುದಿಲ್ಲ ಎಂದೂ ತಾಕೀತು ಮಾಡಿದೆ. ನಿತ್ರಾಣದ ಮೇಲೆ ನಿತ್ರಾಣವನ್ನು ಅನುಭವಿಸಿ ಮಗುವನ್ನು ಹೆರುವ ತಾಯಿಗಾಗಿ ಮಕ್ಕಳು ಸದಾ ಪ್ರಾರ್ಥಿಸುತ್ತಿರಬೇಕೆಂದು ಕುರ್ಆನ್ ಹೇಳಿದೆಯಲ್ಲದೇ, ಆ ಪ್ರಾರ್ಥನಾ ವಿಧಾನವನ್ನೂ ಕಲಿಸಿಕೊಟ್ಟಿದೆ. ಇದಿಷ್ಟೇ ಅಲ್ಲ, ಹೆಣ್ಣು ಮಗುವನ್ನು ಪ್ರೀತಿಸುವ ಮತ್ತು ಕಾಳಜಿ ತೋರುವ ವಿಷಯದಲ್ಲಂತೂ ಇಸ್ಲಾಮ್ ಅತೀ ಮುಂಚೂಣಿಯಲ್ಲಿದೆ. ಒಬ್ಬರು ತನ್ನ ಹೆಣ್ಣು ಮಗುವಿಗೆ ಉತ್ತಮ ಶಿಕ್ಷಣ ಮತ್ತು ಸಂಸ್ಕಾರವನ್ನು ಕಲಿಸಿ ಅವರ ಬದುಕು ಚೆಲುವಾಗಿಸಿದರೆ ಆ ಹೆತ್ತವರಿಗೆ ಸ್ವರ್ಗ ಇದೆ ಎಂದು ಪ್ರವಾದಿ(ಸ) ಕಲಿಸಿದ್ದಾರೆ. ಹೆಣ್ಣು ಮಗುವಿನ ಕಾರಣಕ್ಕಾಗಿ ಹೆತ್ತವರಿಗೆ ಸ್ವರ್ಗದ ವಾಗ್ದಾನವನ್ನು ನೀಡಿದ ಏಕೈಕ ಧರ್ಮವಾಗಿ ಇಸ್ಲಾಮ್ ಗುರುತಿಸಿಕೊಂಡಿದೆ. ಇದೇವೇಳೆ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಗಂಡು ಮಗುವಿನ ಹೆತ್ತವರಿಗೆ ಇಸ್ಲಾಮ್ ಈ ವಾಗ್ದಾನವನ್ನು ನೀಡಿಯೇ ಇಲ್ಲ. ಒಂದುವೇಳೆ, ಹೆಣ್ಣು ಮಗು ಎಂಬ ಕಾರಣಕ್ಕೆ ಹತ್ಯೆ ನಡೆಸಿದರೆ, ಮರಣಾನಂತರ ವಿಚಾರಣೆಯ ವೇಳೆ ಅಂಥ ಹೆತ್ತವರನ್ನು ಆ ಮಗುವಿನ ಮುಂದೆಯೇ ಕಟಕಟೆಯಲ್ಲಿ ನಿಲ್ಲಿಸಲಾಗುವುದು ಮತ್ತು ಯಾವ ಕಾರಣಕ್ಕಾಗಿ ನಿನ್ನನ್ನು ಹತ್ಯೆ ನಡೆಸಲಾಯಿತು ಮಗೂ ಎಂದೂ ಪ್ರಶ್ನಿಸಲಾಗುವುದು, ಅದು ಕೊಡುವ ಉತ್ತರದ ಆಧಾರದಲ್ಲಿ ಹೆತ್ತವರಿಗೆ ಶಿಕ್ಷೆಯನ್ನು ನೀಡಲಾಗುವುದು ಎಂಬ ಗಂಭೀರ ಎಚ್ಚರಿಕೆಯನ್ನೂ ಕುರ್ಆನ್ನಲ್ಲಿ ನೀಡಲಾಗಿದೆ. ನಿಜವಾಗಿ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಇವತ್ತು ಹೊಸ ಮಂದಿರ-ಮಸೀದಿಗಳ ನಿರ್ಮಾಣ ಭರದಿಂದ ಸಾಗುತ್ತಲೇ ಇದೆ. ವರ್ಷದಿಂದ ವರ್ಷಕ್ಕೆ ಮಂದಿರ-ಮಸೀದಿಗೆ ತೆರಳುವ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳವೂ ಆಗುತ್ತಿದೆ. ಧರ್ಮದ ಹೆಸರಲ್ಲಿ ನಡೆಯುವ ಸಭೆ, ಸಮಾರಂಭ, ಪ್ರವಚನ, ಗೋಷ್ಠಿಗಳಿಗೆ ಜನರೂ ಭಾರೀ ಸಂಖ್ಯೆಯಲ್ಲಿ ಸೇರುತ್ತಿದ್ದಾರೆ. ಚಪ್ಪಾಳೆ, ಶಿಳ್ಳೆಗಳೂ ಬೀಳುತ್ತಿವೆ. ಆದರೆ, ಧರ್ಮಬೋಧನೆಗಳ ಪಾಲನೆಯಲ್ಲಿ ಮಾತ್ರ ಈ ಉತ್ಸಾಹ ಕಾಣಿಸುವುದಿಲ್ಲ. ಧರ್ಮಿಷ್ಠರೆಂದು ಹೇಳಿಕೊಳ್ಳುವವರೇ ಮತ್ತು ಧರ್ಮದ ಪೋಷಾಕು ತೊಟ್ಟವರೇ ಅತ್ಯಾಚಾರಿಗಳು, ಭ್ರಷ್ಟರು, ವಂಚಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಧರ್ಮದ್ವೇಷದ ಭಾಷಣಗಳನ್ನೂ ಮಾಡುತ್ತಿದ್ದಾರೆ. ಧರ್ಮವು ಎಂಬುದು ವ್ಯಕ್ತಿಯ ಪೋಷಾಕಿಗೆ ಸೀಮಿತಗೊಂಡು ಆಚರಣೆಯಲ್ಲಿ ನಾಸ್ತಿಯಾದ ಸ್ಥಿತಿಗೆ ಬಂದಿದೆ. ಇದು ಬದಲಾಗಬೇಕು.</span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;"> ಧರ್ಮ ಎಂಬುದು ನಾಗರಿಕ ಸಮಾಜದಲ್ಲಿ ಮೌಲ್ಯಗಳನ್ನು ಬಿತ್ತುವ ಬೋಧನೆಗಳ ಹೆಸರು. ಆ ಬೋಧನೆಗಳನ್ನು ಚಾಚೂ ತಪ್ಪದೇ ಅಳವಡಿಸಿಕೊಂಡ ವ್ಯಕ್ತಿ ಸಮಾಜ ಕಂಟಕ ಆಗಲಾರ. ಮಂದಿರ-ಮಸೀದಿಯನ್ನು ಕೆಡುಕಿಗೆ ಬಳಸಲಾರ. ಧರ್ಮದ ಪೋಷಾಕು ತೊಟ್ಟು ಧರ್ಮದ್ರೋಹಿ ಕೆಲಸಗಳಲ್ಲಿ ಭಾಗಿಯಾಗಲಾರ. ಸದ್ಯ ಇದಕ್ಕೆ ವಿರುದ್ಧವಾದುದು ನಡೆಯುತ್ತಿದೆ ಎಂದಾದರೆ, ಅದು ಅಪಾಯಕಾರಿ. ಅಂದಹಾಗೆ,</span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಈ ದೇಶದಲ್ಲಿ ಅಪರಾಧಗಳು ನಡೆಯದೇ ಇರುವುದಕ್ಕೆ ಕಾನೂನುಗಳ ಭಯವೊಂದೇ ಕಾರಣ ಅಲ್ಲ, ಧರ್ಮ ಮತ್ತು ಅದು ಬಿತ್ತಿದ ದೇವಭಯವೂ ಕಾರಣ. ಇಲ್ಲಿ ಅ ಪರಾಧ ಕೃತ್ಯಗಳಲ್ಲಿ ಭಾಗಿಯಾದರೆ, ಮರಣಾನಂತರ ದೇವನು ಪ್ರಶ್ನಿಸುತ್ತಾನೆ ಮತ್ತು ಶಿಕ್ಷೆ ನೀಡುತ್ತಾನೆ ಎಂಬ ಬೋಧನೆಯೂ ಜನರ ಬದುಕಿನ ಮೇಲೆ ಪ್ರಭಾವ ಬೀರಿವೆ. ಆದ್ದರಿಂದ, ಧರ್ಮದ ಮೌಲ್ಯಗಳಿಗೆ ಮತ್ತೆ ಮತ್ತೆ ಪ್ರಸ್ತುತತೆಯನ್ನು ಕಲ್ಪಿಸುತ್ತಲೇ ಇರಬೇಕಾದ ಹೊಣೆಗಾರಿಕೆ ಎಲ್ಲ ಧರ್ಮಿಷ್ಠರ ಮೇಲಿದೆ. ಪಶ್ಚಾತ್ತಾಪಪಡುವ ಸಿಂಘಾನಿಯಾರಂಥ ತಂದೆ, ಕ್ರಿಶ್ಚಿಯನ್ನಂಥ ಮಗ ಮತ್ತು ಹೆಣ್ಣು ಭ್ರೂಣವನ್ನು ಹತ್ಯೆ ಮಾಡುವ ವೈದ್ಯರು ಶೂನ್ಯವಾಗಬೇಕಾದುದು ಎಲ್ಲರ ಅಗತ್ಯ.</span></div><br />a k kukkilahttp://www.blogger.com/profile/04432257424497331465noreply@blogger.com0tag:blogger.com,1999:blog-2716482703415659532.post-15213346596839606332023-11-28T01:15:00.000-08:002023-11-28T01:15:48.260-08:00ಉಡುಪಿಯಲ್ಲಿ ತಾಯಿ-ಮಕ್ಕಳ ಹತ್ಯೆ: ಕಲಿಯಬೇಕಾದ ಪಾಠ ಏನು?<p> </p><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;"><div class="separator" style="clear: both; text-align: center;"><a href="https://blogger.googleusercontent.com/img/b/R29vZ2xl/AVvXsEiE6wUFdmwD2DWm3T7PBVoJl9wkeefj8Lben_wlH4v1X0_j8cNL7xVbeOYHJ9djgavAsql2evrU0fi66kq5lzzjTbUg8HxdSeHYbW9U85AzhhlBySSh7OAu3drUWeBYE1sKoxNvDRefy4cGMaxOE-heWITres3hkoidqGFugoYQYjR2IiEs-uiOuhRYIiz9/s1143/edit%20pic%20(1).jpg" imageanchor="1" style="margin-left: 1em; margin-right: 1em;"><img border="0" data-original-height="555" data-original-width="1143" height="194" src="https://blogger.googleusercontent.com/img/b/R29vZ2xl/AVvXsEiE6wUFdmwD2DWm3T7PBVoJl9wkeefj8Lben_wlH4v1X0_j8cNL7xVbeOYHJ9djgavAsql2evrU0fi66kq5lzzjTbUg8HxdSeHYbW9U85AzhhlBySSh7OAu3drUWeBYE1sKoxNvDRefy4cGMaxOE-heWITres3hkoidqGFugoYQYjR2IiEs-uiOuhRYIiz9/w400-h194/edit%20pic%20(1).jpg" width="400" /></a></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div>ಕರಾವಳಿ ಮತ್ತೆ ಸುದ್ದಿಯಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಅಕ್ಷಯ್ ಕಲ್ಲೇಗ ಎಂಬ ಯುವಕನ ಹತ್ಯೆ ನಡೆದು ವಾರವಾಗುವ ಮೊದಲೇ ಉಡುಪಿಯ ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ನಡೆದಿದೆ. ಈ ಎರಡೂ ಹತ್ಯೆಗಳಲ್ಲಿರುವ ಸಮಾನ ಅಂಶವೇನೆಂದರೆ, ಹತ್ಯೆಗೆ ಬಳಸಿರುವ ಆಯುಧ. ತಲವಾರಿಗೆ ಹಿಂದೂ-ಮುಸ್ಲಿಮ್ ಎಂಬ ಬೇಧ ಇಲ್ಲ. ಹೆಣ್ಣು-ಗಂಡು, ಮಕ್ಕಳು, ಶಿಶುಗಳು ಎಂಬ ಬೇಧವೂ ಇಲ್ಲ. ಅದು ಯಾರ ಕೈಯಲ್ಲಿದೆಯೋ ಅವರ ಆದೇಶವನ್ನು ಚಾಚೂ ತಪ್ಪದೇ ಪಾಲಿಸುತ್ತದೆ. ಇನ್ನು, ಈ ತಲವಾರಿಗೆ ಬಲಿಯಾಗುವವರ ಧರ್ಮ ಯಾವುದೇ ಆದರೂ ಚೆಲ್ಲುವ ರಕ್ತದ ಬಣ್ಣ ಒಂದೇ. ಬಲಿಯಾದವರ ಕುಟುಂಬದವರು ಹಾಕುವ ಕಣ್ಣೀರಿನ ಬಣ್ಣವೂ ಒಂದೇ. ಹಾಗಂತ,</span><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಕರಾವಳಿಯನ್ನು ಬೆಚ್ಚಿಬೀಳಿಸಿದ ಮೊದಲ ಹತ್ಯೆಯೇನೂ ಇದಲ್ಲ. 11 ವರ್ಷಗಳ ಹಿಂದೆ ದ.ಕ. ಜಿಲ್ಲೆಯ ಪಂಜಿಮೊಗರಿನಲ್ಲಿ ರಝಿಯಾ ಎಂಬ ತಾಯಿ ಹಾಗೂ ಫಾತಿಮಾ ಎಂಬ ಮಗಳನ್ನು ಮನೆಗೆ ನುಗ್ಗಿ ಹತ್ಯೆ ಮಾಡಲಾಗಿತ್ತು. ಅಪರಾಧಿ ಇನ್ನೂ ಪತ್ತೆಯಾಗಿಲ್ಲ. ಇದೀಗ, 46 ವರ್ಷದ ಹಸೀನಾ ಎಂಬ ತಾಯಿ ಹಾಗೂ ಮಕ್ಕಳಾದ ಅಫ್ನಾಜ್, ಅಯ್ನಾಝï, ಆಸಿಮ್ರನ್ನು ಮನೆಗೆ ನುಗ್ಗಿ ಹತ್ಯೆ ಮಾಡಲಾಗಿದೆ. ಈ ಎರಡು ಭಯಾನಕ ಕ್ರೌರ್ಯಗಳ ನಡುವೆಯೂ ಕರಾವಳಿಯಲ್ಲಿ ಸಾಕಷ್ಟು ರಕ್ತ ಹರಿದಿದೆ. ಇವೆಲ್ಲಕ್ಕೂ ಧರ್ಮದ್ವೇಷವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲಾಗಿದೆ. ವಿಧಾನಸಭಾ ಚುನಾವಣೆ ನಡೆಯುವುದಕ್ಕಿಂತ ಸಮಯಗಳ ಮೊದಲು ದ.ಕ. ಜಿಲ್ಲೆಯನ್ನು ಮೂರು ಹತ್ಯೆಗಳು ನಡುಗಿಸಿಬಿಟ್ಟವು. ಬಲಿಯಾದವರನ್ನು ಹಿಂದೂ-ಮುಸ್ಲಿಮ್ ಎಂದು ವಿಭಜಿಸಲಾಯಿತು. ಹೀಗೆ ವಿಭಜಿಸಿ ಈ ಹತ್ಯೆಗಳ ಪರ-ವಿರುದ್ಧ ಮಾತಾಡಿದವರು ಮಕ್ಕಳು, ಕುಟುಂಬ ಎಂದು ಆರಾಮವಾಗಿ ಬದುಕುತ್ತಿದ್ದಾರೆ. ರಾಜಕಾರಣಿಗಳಂತೂ ಆ ಘಟನೆಯನ್ನೇ ಮರೆತಿದ್ದಾರೆ. ಪತ್ರಿಕೆಗಳೂ ಮರೆತಿವೆ. ಸೋಶಿಯಲ್ ಮೀಡಿಯಾವಂತೂ ಕ್ರಿಕೆಟ್, ಬಿಗ್ಬಾಸು, ಅಫೇರು ಎಂದೆಲ್ಲಾ ತನ್ನದೇ ಲೋಕದಲ್ಲಿ ಮುಳುಗಿ ಹೋಗಿದೆ. ಸದ್ಯ ಈ ಹತ್ಯೆಗಳನ್ನು ಇವತ್ತು ಯಾರಾದರೂ ನೆನಪಿಸುತ್ತಿದ್ದರೆ ಅದು ಸಂತ್ರಸ್ತ ಕುಟುಂಬದವರು ಮಾತ್ರ. ಮಗನನ್ನು ಕಳಕೊಂಡ ಹೆತ್ತವರು, ಪತಿಯನ್ನು ಕಳಕೊಂಡ ಪತ್ನಿ ಮತ್ತು ಮಕ್ಕಳ ಹೊರತು ಇನ್ನಾರೂ ಆ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಇಷ್ಟಿದ್ದೂ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ರಕ್ತದಾಹದ ಭಾಷೆಯಲ್ಲಿ ಮಾಡಲಾಗುವ ಭಾಷಣಗಳಿಗೆ ಕಡಿವಾಣ ಬಿದ್ದಿಲ್ಲ. ಚಪ್ಪಾಳೆ, ಶಿಳ್ಳೆಗಳೂ ಕಡಿಮೆಯಾಗಿಲ್ಲ. ಒಂದು ಮನೆಯ ಬೆಳಕನ್ನು ನಂದಿಸುವುದು ಎಷ್ಟು ಆಘಾತಕಾರಿ ಎಂದು ಬುದ್ಧಿ ಹೇಳುವವರಿಗೆ ಮಾನ್ಯತೆಯೂ ಸಿಗುತ್ತಿಲ್ಲ. ಒಂದುಕಡೆ ತನ್ನ ಎಲ್ಲವನ್ನೂ ಕಳಕೊಂಡು ಕುಟುಂಬವೊಂದು ಕಣ್ಣೀರು ಹಾಕುತ್ತಿರುವಾಗ ಇನ್ನೊಂದು ಕಡೆ ಆ ಕಣ್ಣೀರಿಗೆ ನಾವೇ ಕಾರಣ ಎಂಬಂತೆ ಸಂಭ್ರಮಪಡುವ ಕೇಡುಗಾಲ ಇದು. ಇಂಥ ಸ್ಥಿತಿಯಲ್ಲಿ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ನಡೆದಿದೆ. ಈ ಹತ್ಯೆಗೆ ಕಾರಣ ಏನೇ ಇರಬಹುದು, ಆದರೆ ಇಂಥವು ಯಾಕೆ ನಡೆಯುತ್ತಿದೆ ಎಂಬ ಬಗ್ಗೆ ಒಟ್ಟು ಸಮಾಜ ಚಿಂತಿಸಬೇಕಾಗಿದೆ. ಯುವ ಸಮೂಹಕ್ಕೆ ನೆತ್ತರ ರುಚಿ ಹತ್ತಿಸಿದ್ದು ಯಾರು? ಯಾವುದು? ಸಾಮಾನ್ಯವಾಗಿ, ಇಂಥ ಕೃತ್ಯಗಳಲ್ಲಿ ಹೆಚ್ಚಾಗಿ ಯುವ ಸಮೂಹವೇ ಭಾಗಿಯಾಗುತ್ತಿದೆ. ಕತ್ತಿ-ತಲವಾರನ್ನು ಮ ನಬಂದAತೆ ಬಳಸುತ್ತಿದೆ. ಯಾವುದೋ ಮನೆಯ ದೀಪವನ್ನು ನಂದಿಸಿ, ಜೈಲಿಗೂ ಹೋಗಿ ಊರಿಗೂ ಮನೆಯವರಿಗೂ ಭಾರ ಎ ನ್ನಿಸಿಕೊಳ್ಳುತ್ತಿದೆ. ಜೈಲಿನಿಂದ ಹೊರಬಂದ ಬಳಿಕ ಮತ್ತದೇ ಕೃತ್ಯಗಳಲ್ಲಿ ಭಾಗಿಯಾಗಬೇಕಾದ ಒತ್ತಡವೋ ಅನಿವಾರ್ಯತೆಯೋ ಎದುರಾಗುತ್ತಿದೆ. ಇವನ್ನು ಈ ಆವೇಶದ ಹುಡುಗರಿಗೆ ಬಿಡಿಸಿ ಹೇಳುವವರು ಯಾರು? ಅಂದಹಾಗೆ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಉಡುಪಿಯಲ್ಲಿ ಮೂವರು ಮಹಿಳೆಯರು ಮತ್ತು ಓರ್ವ ಮಗುವನ್ನು ಹತ್ಯೆ ಮಾಡಿದ ಅಪರಾಧಿಯನ್ನು ಈ ವ್ಯವಸ್ಥೆ ಬಂಧಿಸಬಹುದು. ಆತನಿಗೆ ನ್ಯಾಯಾಲಯದಲ್ಲಿ ಶಿಕ್ಷೆಯೂ ಆಗಬಹುದು. ಆದರೆ ಎರಡು ಪ್ರಶ್ನೆಗಳು ಈ ನಾಗರಿಕ ಸಮಾಜವನ್ನು ಸದಾ ಉತ್ತರಕ್ಕಾಗಿ ಪೀಡಿಸುವುದನ್ನು ತಪ್ಪಿಸಲಾಗದು.</span><span style="background-color: white; color: #222222; font-family: Arial, Helvetica, sans-serif; font-size: small;"> 1. ತನ್ನ ಇಡೀ ಕುಟುಂಬವನ್ನೇ ಕಳಕೊಂಡ ನೂರ್ ಮುಹಮ್ಮದ್ ಎಂಬ ಮೂರು ಮಕ್ಕಳ ಪಾಲಿನ ಅಪ್ಪ ಮತ್ತು ಹಸೀನಾ ಎಂಬವರ ಪತಿಯ ಒಡಲಾಳದ ಸಂಕಟಕ್ಕೆ ಈ ಪ್ರಭುತ್ವದಿಂದ ಔಷಧಿ ಕೊಡಲು ಸಾಧ್ಯವೇ? 2. ಮಚ್ಚು- ಲಾಂಗು-ಕತ್ತಿ-ಬಂದೂಕು-ಕಡಿ-ಕೊಲ್ಲು, ಸೇಡು-ದ್ವೇಷ... ಇತ್ಯಾದಿಗಳನ್ನೇ ಮನರಂಜನೆಯ ಹೆಸರಲ್ಲಿ ಪ್ರತಿ ಮನೆ ಮನೆಗೂ ತಲುಪಿಸುತ್ತಿರುವ ಚಿತ್ರರಂಗವನ್ನು ನಾವು ಕಟಕಟೆಯಲ್ಲಿ ನಿಲ್ಲಿಸುವುದು ಯಾವಾಗ?</span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಸಿನಿಮಾ ಎಂಬುದು ಒಂದು ಉದ್ಯಮ. ಹಾಕಿದ ದುಡ್ಡನ್ನು ಬಡ್ಡಿಸಮೇತ ವಾಪಸ್ ಪಡಕೊಳ್ಳುವ ಜರೂರತ್ತು ಈ ಕ್ಷೇತ್ರಕ್ಕಿದೆ. ಆ ಕಾರಣ ದಿಂದಲೇ ಮನರಂಜನೆ ಎಂಬ ಗುರಿಯ ಆಚೆಗೆ ವ್ಯಾಪಾರಿ ದೃಷ್ಟಿಕೋನದಿಂದ ಯೋಚಿಸಬೇಕಾದ ಅನಿವಾರ್ಯತೆ ನಿರ್ಮಾಪಕನ ಮೇಲೆ ಇದ್ದೇ ಇರುತ್ತದೆ. ಅಂದಹಾಗೆ, ಮನರಂಜನೆ ಮತ್ತು ವ್ಯಾಪಾರ ಇವೆರಡೂ ಸರಳ ರೇಖೆಯಲ್ಲಿ ಚಲಿಸಬಹುದೇ ಹೊರತು ಜೊತೆಗೂಡುವುದು ಬಹಳ ಕಷ್ಟ. ಇವತ್ತಿನ ಹೆಚ್ಚಿನ ಸಿನಿಮಾಗಳು ಬಂದೂಕು, ಲಾಂಗು-ಮಚ್ಚು ಮತ್ತು ಕ್ರೌರ್ಯಗಳಿಂದ ಹೊರತಾಗಿಲ್ಲ. ಆರಾಮ ಕೋಣೆಯಲ್ಲಿ ಕುಳಿತು ಸಿನಿಮಾಕ್ಕಾಗಿ ಅದ್ಭುತ ಕತೆ ರಚಿಸುವ ಕತೆಗಾರನ ಮುಂದೆ ಆ ಕತೆ ದೃಶ್ಯರೂಪ ಪಡೆದಾಗ ಅದು ಸಮಾಜದಲ್ಲಿ ಎಂಥ ಪರಿಣಾಮ ಬೀರಬಹುದು ಎಂಬ ಅರಿವು ಇರುತ್ತದೋ ಗೊತ್ತಿಲ್ಲ. ಹೀರೋ, ಹೀರೋಯಿನ್ ಮತ್ತು ವಿಲನ್ ಪಾತ್ರವನ್ನು ಸೃಷ್ಟಿಸಿ, ಆ ಹೀರೋಯಿನನ್ನು ತನ್ನವಳನ್ನಾಗಿಸುವುದಕ್ಕೆ ಹೀರೋ ಹತ್ತು ಹಲವು ತಂತ್ರಗಳನ್ನು ಹೆಣೆಯುವುದು, ಆ ದಿಶೆಯಲ್ಲಿ ಹತ್ಯೆ, ಜಗಳ, ಘರ್ಷಣೆ ಇತ್ಯಾದಿಗಳನ್ನು ನಡೆಸುವುದು ಮತ್ತು ಇವೆಲ್ಲವನ್ನೂ ನೋಡಗರ ಮನಸ್ಸಿಗೆ ಸರಿ ಎಂದು ಬಿಂಬಿಸುವುದು ಸಿ ನಿಮಾಗಳಲ್ಲಿ ಸಾಮಾನ್ಯವಾಗಿರುತ್ತದೆ. ಮನರಂಜನೆಯ ಹೆಸರಲ್ಲಿ ಸಿನಿಮಾ ಕ್ಷೇತ್ರ ಇದನ್ನು ಸಮರ್ಥಿಸಿಕೊಳ್ಳಬಹುದು. ಆದರೆ,</span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;"> ವೀಕ್ಷಕರೆಲ್ಲ ಒಂದೇ ಮನಸ್ಥಿತಿಯವರು ಇರಬೇಕಿಲ್ಲವಲ್ಲ. ಒಂದು ಸಿನಿಮಾದಿಂದ ಒಬ್ಬೊಬ್ಬರು ಒಂದೊಂದು ರೀತಿಯ ಪಾಠವನ್ನು ಕಲಿತುಕೊಳ್ಳಬಹುದು. ಇನ್ನೊಬ್ಬರನ್ನು ಮುಗಿಸುವುದಕ್ಕೆ ಅದರಿಂದ ಪ್ರೇರಣೆ ಪಡೆಯುವವರಿರಬಹುದು. ಹತ್ಯೆ ನಡೆಸಿದ ಬಳಿಕ ತಪ್ಪಿಸಿಕೊಳ್ಳುವ ವಿಧಾನವನ್ನೂ ಸಿನಿಮಾದಿಂದ ಕಲಿತುಕೊಳ್ಳುವವರಿರಬಹುದು. ಸಿನಿಮಾಗಳಿಂದ ಪ್ರೇರಣೆ ಪಡೆದು ನಡೆದ ಅನೇಕ ಅ ಪರಾಧ ಕೃತ್ಯಗಳು ಈಗಾಗಲೇ ಸುದ್ದಿಗೀಡಾಗಿವೆ. ಮಲಯಾಳಂನ ದೃಶ್ಯಂ ಸಿನಿಮಾದ ಪ್ರೇರಣೆ ಯಿಂದ ಅಪರಾಧ ಕೃತ್ಯವೆಸಗಿದವರು ಕೆಲವು ಸಮಯದ ಹಿಂದೆ ಸುದ್ದಿಗೀಡಾಗಿದ್ದರು. ಇವಲ್ಲದೇ ಮನರಂಜನೆಯ ಹೆಸರಲ್ಲಿ ನಡೆಯುವ ಕೆಲವು ಹಿಂಸಾಸ್ವರೂಪಿ ಆಟಗಳೂ ಪ್ರತಿ ಮನೆಯ ಟಿವಿ ಯಲ್ಲೂ ವಿಜೃಂಭಿಸುತ್ತಿವೆ. ಮೊಬೈಲ್ನ ಈ ಕಾಲದಲ್ಲಿ ಟಿವಿಯ ಹಂಗಿಲ್ಲದೇ ಪ್ರತಿಯೊಬ್ಬರಿಗೂ ಇವೆಲ್ಲ ದಕ್ಕುತ್ತಲೂ ಇವೆ. ಮನುಷ್ಯ ಕ್ರೂರಿಯಾಗುವುದಕ್ಕೆ ಏನೇನೆಲ್ಲ ಬೇಕೋ ಅವೆಲ್ಲವನ್ನೂ ಒದಗಿಸುವುದಕ್ಕೆ ಬೇಕಾದ ಎಲ್ಲ ವ್ಯವಸ್ಥೆಯೂ ನಾವಿರುವ ಇದೇ ಸಮಾಜದಲ್ಲಿದೆ. ಸದ್ಯ ನಾವು ಇವೆಲ್ಲವನ್ನೂ ಹರಡಿಟ್ಟುಕೊಂಡೇ ಈ ತಾಯಿ ಮಕ್ಕಳ ಹತ್ಯೆಯ ಸಹಿತ ಎಲ್ಲವನ್ನೂ ವಿಶ್ಲೇಷಣೆಗೆ ಒಳಪಡಿಸ ಬೇಕಾಗಿದೆ. ಮುಖ್ಯವಾಗಿ, ಯುವ ಸಮೂಹಕ್ಕೆ ಸಹನೆಯ ಮತ್ತು ಮೌಲ್ಯದ ಪಾಠ ವನ್ನು ತಿಳಿ ಹೇಳುವ ಪ್ರಯತ್ನ ಪ್ರತಿ ಮನೆಯಲ್ಲೂ ನಡೆಯಬೇಕಾಗಿದೆ. ಹುಚ್ಚು ಆವೇಶಕ್ಕೆ ಬಿದ್ದು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ತಡೆಯುವುದಕ್ಕೆ ಪ್ರತಿ ಮನೆಯೂ ಎಚ್ಚರಿಕೆಯ ಹೆಜ್ಜೆ ಇಡಬೇಕಾಗಿದೆ.</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ಯೆಗೀಡಾದ ಅಕ್ಷಯ್ನ ತಂದೆ ಎದೆ ಬಿರಿದು ಕಣ್ಣೀರು ಹಾಕುವ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಸಂಖ್ಯ ಮಂದಿ ವೀಕ್ಷಿಸಿದ್ದಾರೆ. ನೋಡಿದ ಎಲ್ಲರ ಕಣ್ಣೂ ಒದ್ದೆಯಾಗಿದೆ. ಇದೀಗ ಉಡುಪಿಯ ನೂರ್ ಮುಹಮ್ಮದ್ ಅವರ ಸರದಿ. ತನ್ನ ಕುಟುಂಬದ ಎಲ್ಲರನ್ನೂ ಕಳಕೊಂಡು ಒಂಟಿಯಾದ ಅವರ ಸಂಕಟವನ್ನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ. ಅವರು ವಿದೇಶಕ್ಕೆ ಹೋಗಿರುವುದೇ ಪತ್ನಿ-ಮಕ್ಕಳನ್ನು ಸುಖವಾಗಿಡುವುದಕ್ಕೆ. ರಾತ್ರಿ-ಬೆಳಗಾಗುವುದರೊಳಗೆ ತನ್ನ ಇಡೀ ಪರಿವಾರವೇ ಹೊರಟು ಹೋದರೆ ಆ ವ್ಯಕ್ತಿಗಾಗುವ ಆಘಾತ ಹೇಗಿರಬಹುದು? ದ್ವೇಷದ ಹೆಸರಲ್ಲೋ ಸೇಡಿನ ಹೆಸರಲ್ಲೋ ತಲವಾರು-ಬಂದೂಕು ಎತ್ತಿಕೊಳ್ಳುವ ಪ್ರತಿಯೊಬ್ಬರೂ ಈ ಕುರಿತಂತೆ ಅವಲೋಕಿಸಬೇಕು. ಹತ್ಯೆ ಯಾವುದಕ್ಕೂ ಪರಿಹಾರ ಅಲ್ಲ, ಅದು ಕುಟುಂಬವೊಂದರ ದೀರ್ಘ ಕಣ್ಣೀರ ಬದುಕಿಗೆ ಆರಂಭ ಅಷ್ಟೇ.</span></div><br />a k kukkilahttp://www.blogger.com/profile/04432257424497331465noreply@blogger.com0tag:blogger.com,1999:blog-2716482703415659532.post-11034211042654426212023-11-13T01:43:00.000-08:002023-11-13T01:43:45.891-08:00ಬಿಜೆಪಿ ಮತ್ತು ಮಡಿಲ ಮಾಧ್ಯಮವನ್ನು ಬೆತ್ತಲೆ ಮಾಡಿದ ಡೊಮಿನಿಕ್ ಮಾರ್ಟಿನ್<p> </p><p></p><div class="separator" style="clear: both; text-align: center;"><a href="https://blogger.googleusercontent.com/img/b/R29vZ2xl/AVvXsEgE0Ki_7U-s6b5AW57blAdnZo3l_7eDNFa6eBp0HFIM4jnPMF5uMV91QDoQy6bC1oRf1gjkhN_P1YRKmAM4Ig2UqfWYwnVrk6i7hprqGkQrGKg23H8zx4AWL02-3zs0v8Xf9N1sotShsTKYhorKMO1rRmnEim2nSZdBjEb2PGeGTB90Xv3yjHhCuEn2qrsL/s1143/edit%20pic.jpg" imageanchor="1" style="margin-left: 1em; margin-right: 1em;"><img border="0" data-original-height="555" data-original-width="1143" height="194" src="https://blogger.googleusercontent.com/img/b/R29vZ2xl/AVvXsEgE0Ki_7U-s6b5AW57blAdnZo3l_7eDNFa6eBp0HFIM4jnPMF5uMV91QDoQy6bC1oRf1gjkhN_P1YRKmAM4Ig2UqfWYwnVrk6i7hprqGkQrGKg23H8zx4AWL02-3zs0v8Xf9N1sotShsTKYhorKMO1rRmnEim2nSZdBjEb2PGeGTB90Xv3yjHhCuEn2qrsL/w400-h194/edit%20pic.jpg" width="400" /></a></div><br /><span style="background-color: white; color: #222222; font-family: Arial, Helvetica, sans-serif; font-size: small;"><br /></span><p></p><p><br /></p><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಕೇರಳ ಬಾಂಬ್ ಸ್ಫೋಟದ ಆರೋಪಿಯನ್ನು ಘಟನೆ ನಡೆದ 7 ಗಂಟೆಗಳ ಒಳಗೆ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕೊಚ್ಚಿ ಸಮೀಪದ ಕಳಮಶ್ಶೇರಿಯ ಕನ್ವೆನ್ಶನ್ ಸೆಂಟರ್ನಲ್ಲಿ ಬಾಂಬ್ ಸ್ಫೋಟ ನಡೆದಾಗ ಸಮಯ ಸುಮಾರು ಬೆಳಗ್ಗಿನ 9 ಗಂಟೆ. ಆರೋಪಿ ಡೊಮಿನಿಕ್ ಮಾರ್ಟಿನ್ ಎಂಬವನನ್ನು ಬಂಧಿಸಿದ್ದೇವೆ ಎಂದು ಕೇರಳ ಎಡಿಜಿಪಿ ಎಂ.ಆರ್. ಅಜಿತ್ ಕುಮಾರ್ ಮಾಧ್ಯಮಗಳ ಮುಂದೆ ಘೋಷಿಸುವಾಗ ಸಮಯ ಸಂಜೆ 4 ಗಂಟೆ 15 ನಿಮಿಷ. ಆದರೆ, ಈ 9ರಿಂದ ನಾಲ್ಕೂ ಕಾಲು ಗಂಟೆಯ ಈ ಸಣ್ಣ ಅವಧಿಯ ಒಳಗೆ ಮಾಧ್ಯಮಗಳು, ಸೋಶಿಯಲ್ ಮೀಡಿಯಾ ಬಳಕೆದಾರರು ಮತ್ತು ಬಿಜೆಪಿ ನಾಯಕರು ಜನರನ್ನು ದಾರಿ ತಪ್ಪಿಸುವುದಕ್ಕೆ ಹರಡಿದ ಸುಳ್ಳುಗಳು ಮಾತ್ರ ಭಯಾನಕವಾಗಿತ್ತು. ಈ ಸ್ಫೋಟದ ಹಿಂದೆ ಮುಸ್ಲಿಮರಿದ್ದಾರೆ ಎಂದು ನೇರವಾಗಿಯೋ ಪರೋಕ್ಷವಾಗಿಯೋ ನಂಬಿಸಲು ಅವರೆಲ್ಲ ಯತ್ನಿಸಿದರು. ಕೇರಳ ಬಿಜೆಪಿ ರಾಜ್ಯ ಸಮಿತಿ ಸದಸ್ಯ ಸಂದೀಪ್ ಜಿ. ವಾರಿಯರ್ ಅಂತೂ ‘ಯಹೋವನ ಸಾಕ್ಷಿ’ ಎಂಬ ಪಂಥವನ್ನು ಯಹೂದಿಗಳ ಗುಂಪು ಎಂದೇ ಕರೆದರು. ‘ಯಹೂದಿಗಳ ಪವಿತ್ರ ಗ್ರಂಥವಾದ ತೋರಾವನ್ನೇ ಈ ಯಹೋವನ ಸಾಕ್ಷಿಗಳೂ ಅನುಸರಿಸುತ್ತಾರೆ, ಇವರಿಬ್ಬರೂ ಒಂದೇ ದೈವಿಕ ಗ್ರಂಥದ ಅನುಯಾಯಿಗಳು, ಹಮಾಸನ್ನು ಸಮರ್ಥಿಸಿದ ಸಿಪಿಎಂ ಮತ್ತು ಕಾಂಗ್ರೆಸ್ಗಳು ಈ ಭಯೋತ್ಪಾದಕ ದಾಳಿಯ ಹೊಣೆಯನ್ನು ವಹಿಸಿಕೊಳ್ಳಬೇಕು..’ ಎಂದು ಹೇಳಿದರು. ಅಂದರೆ,</span><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಹಮಾಸ್ ಮೇಲೆ ಇಸ್ರೇಲ್ ಸಾರಿರುವ ಯುದ್ಧಕ್ಕೆ ಆಕ್ರೋಶಗೊಂಡ ಮುಸ್ಲಿಮರು ಯಹೂದಿಯರದ್ದೇ ಪಂಗಡವಾದ ಯಹೋವನ ಸಾಕ್ಷಿಗಳ ಮೇಲೆ ಬಾಂಬ್ ದಾಳಿ ನಡೆಸಿದ್ದಾರೆ ಎಂದೇ ಇದರರ್ಥ. ಇದೇ ಭಾವದ ಹೇಳಿಕೆಯನ್ನು ಕೇಂದ್ರ ಸಚಿವ ರಾಜೀವ್ ಚಂದ್ರ ಶೇಖರ್ ಕೂಡಾ ನೀಡಿದರು-</span></div><div><span style="background-color: white; color: #222222; font-family: Arial, Helvetica, sans-serif; font-size: small;">‘ಕೇರಳವನ್ನು ಲವ್ ಜಿಹಾದ್ ನಾಡನ್ನಾಗಿಸಲು ಹಾಗೂ ದ್ವೇಷವನ್ನು ಹಬ್ಬಿಸಲು ಭಯೋತ್ಪಾದಕ ಹಮಾಸ್ ಸಂಘಟನೆಯನ್ನು ಬೆಂಬಲಿಸುತ್ತಿರುವ ಕಾಂಗ್ರೆಸ್-ಸಿಪಿಎಂ, ಯುಪಿಎ ಮೈತ್ರಿಕೂಟದ ಲಜ್ಜೆಗೆಟ್ಟ ತುಷ್ಠೀಕರಣ ರಾಜಕೀಯಕ್ಕೆ ನಾಚಿಕೆಯಾಗಬೇಕು..’ ಎಂದವರು ಟ್ವೀಟ್ ಮಾಡಿದರು. ಈ ಟ್ವೀಟ್ನ ಟಾರ್ಗೆಟ್ ಕೂಡಾ ಮುಸ್ಲಿಮರೇ. ಬಿಜೆಪಿಯ ಇನ್ನೋರ್ವ ನಾಯಕ ಮತ್ತು ಅದಕ್ಕಿಂತಲೂ ಮುಖ್ಯವಾಗಿ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅಂತೂ ಇವರಿಗಿಂತಲೂ ಒಂದು ಹೆಜ್ಜೆ ಮುಂದಿಟ್ಟರು-</span></div><div><span style="background-color: white; color: #222222; font-family: Arial, Helvetica, sans-serif; font-size: small;"> `ಕಾಂಗ್ರೆಸ್ ಮತ್ತು ಸಿಪಿಎಂನಿಂದ ದಶಕಗಳ ಕಾಲದ ಓಲೈಕೆ ಮತಬ್ಯಾಂಕ್ ರಾಜಕಾರಣವು ಮುಸ್ಲಿಮರನ್ನು ಅವಿದ್ಯಾವಂತರನ್ನಾಗಿ, ಹಿಂದುಳಿದವರನ್ನಾಗಿ ಮತ್ತು ಅಪರಾಧಿಗಳನ್ನಾಗಿ ಮಾಡಿದೆ, ಅದರಿಂದಾಗಿ ಭಯೋತ್ಪಾದನೆಯನ್ನು ನಾವು ಮನೆಬಾಗಿಲಿಗೆ ಆಹ್ವಾನಿಸಿದ್ದೇವೆ, ಈ ಜನರು ಮುಖ್ಯವಾಹಿನಿಗೆ ಬರಲು ಯಾವಾಗ ಯೋಚಿಸುತ್ತಾರೆ..’ ಎಂದು ಟ್ವೀಟ್ ಮಾಡಿದರು. ಈ ಟ್ವೀಟ್ನ ಗುರಿ ಕೂಡಾ ಮುಸ್ಲಿಮರೇ. ಮುಸ್ಲಿಮರು ಅವಿದ್ಯಾವಂತರಾಗಿದ್ದು, ಆ ಕಾರಣದಿಂದ ಅಪರಾಧಿಗಳಾಗುತ್ತಿದ್ದಾರೆ ಮತ್ತು ಭಯೋತ್ಪಾದನೆ ಯಲ್ಲಿ ಭಾಗಿಯಾಗುತ್ತಿದ್ದಾರೆ ಎಂಬರ್ಥವನ್ನೇ ಈ ಟ್ವೀಟ್ ಧ್ವನಿಸುತ್ತದೆ. ಇವೆಲ್ಲಕ್ಕೂ ಕಲಶ ಇಟ್ಟಂತೆ ಕನ್ನಡದ ಪವರ್ ಟಿವಿ ಸುದ್ದಿ ಪ್ರಕಟಿಸಿತು, ‘ಬಾಂಬ್ ಸ್ಫೋಟದ ಆರೋಪಿ ಪೊಲೀಸರಿಗೆ ಶರಣು’ ಎಂಬ ಶೀರ್ಷಿಕೆಯ ಸುದ್ದಿಯನ್ನು ಮುಸ್ಲಿಮನ ಫೋಟೋದೊಂದಿಗೆ ಅದು ಪ್ರಕಟಿಸಿತು. ಇಷ್ಟೇ ಅಲ್ಲ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಈ ಸ್ಫೋಟ ನಡೆದ ಬೆನ್ನಿಗೇ ಸೋಷಿಯಲ್ ಮೀಡಿಯಾವಂತೂ ಸುಳ್ಳುಗಳನ್ನೇ ಹೊತ್ತುಕೊಂಡು ಮನಬಂದಂತೆ ತಿರುಗಾಡಿತು. ‘ಯಹೋವನ ಸಾಕ್ಷಿಗಳು’ ಎಂಬ ಪಂಥವನ್ನು ಅದು ಯಹೂದಿಗಳೆಂದೇ ಬಿಂಬಿಸಿತು. ಯಹೂದಿಗಳನ್ನೇ ಗುರಿ ಮಾಡಿ ಬಾಂಬ್ ಸ್ಫೋಟಿಸಲಾಗಿದೆ ಎಂಬಂತೆ ಆಡಿಕೊಂಡಿತು. ಈ ಸ್ಫೋಟಕ್ಕಿಂತ ಮೊದಲು ಕೇರಳದಲ್ಲಿ ನಡೆದ ಫೆಲೆಸ್ತೀನ್ ಪರ ರ್ಯಾಲಿಗಳನ್ನು ಎತ್ತಿ ಹೇಳುತ್ತಾ, ಈ ಸ್ಫೋಟಕ್ಕೂ ಈ ರ್ಯಾಲಿಗೂ ನಡುವೆ ಸಂಬಂಧವನ್ನು ಕಲ್ಪಿಸಿತು. ನಿಜವಾಗಿ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಬಾಂಬ್ ಸ್ಫೋಟಗೊಂಡ ಕಳಮಶ್ಶೇರಿಯಲ್ಲಿ ಯಹೂದಿಗಳೇ ಇಲ್ಲ. ಕೇರಳದಲ್ಲಿ ಒಟ್ಟು 15ರಿಂದ 20ರಷ್ಟು ಯಹೂದಿಗಳಿದ್ದಾರೆ ಎಂದು ಅಂಕಿ-ಅಂಶ ಹೇಳುತ್ತದೆ. ಫ್ಯೂ ರಿಸರ್ಚ್ ಸೆಂಟರ್ 2021ರಲ್ಲಿ ಪ್ರಕಟಿಸಿದ ವರದಿ ಪ್ರಕಾರ, ಭಾರತದಲ್ಲಿ ಹೆಚ್ಚೆಂದರೆ 3ರಿಂದ 4 ಸಾವಿರ ಯಹೂದಿ ಮತ್ತು ಬಹಾಯಿ ಸಮುದಾಯದವರಿದ್ದಾರೆ. ಕೇರಳದಲ್ಲಿ ಹಿಂದೂಗಳ ಸಂಖ್ಯೆ 54% ಇದ್ದರೆ, ಮುಸ್ಲಿಮರು 22% ಮತ್ತು ಕ್ರೈಸ್ತರು 18% ಇದ್ದಾರೆ. ಈ ಯಹೋವನ ಸಾಕ್ಷಿಗಳು ಎಂಬುದು ಕ್ರೈಸ್ತರದ್ದೇ ಒಂದು ಬಂಡಾಯ ಪಂಥ. ಈ ಗುಂಪು ಕ್ರೈಸ್ತರ ತ್ರಿ ಏಕತ್ವವನ್ನು ಒಪ್ಪುವುದಿಲ್ಲ. ಇವರು ಯಹೋವನನ್ನು ನಿಜವಾದ ಸೃಷ್ಟಿಕರ್ತ ಎಂದು ವಾದಿಸುತ್ತಾರೆ ಮತ್ತು ಈ ಯಹೋವನು ಪ್ರವಾದಿ ಇಬ್ರಾಹೀಮ್, ಮೂಸಾ ಮತ್ತು ಈಸಾರ ದೇವ ಎಂದು ಹೇಳುತ್ತಾರೆ. ಹಾಗೆಯೇ, ಇವರ ವೆಬ್ಸೈಟ್ ಮಾಹಿತಿಯ ಆಧಾರದಲ್ಲಿ ಹೇಳುವುದಾದರೆ, ಇವರು ಝಿಯೋನಿಝಮ್ ಅನ್ನು ಒಂದು ಧರ್ಮ ಎಂದು ಒಪ್ಪುವುದಿಲ್ಲ ಮತ್ತು ರಾಜಕೀಯ ಝಿಯೋನಿಝಮ್ ಬಗ್ಗೆ ತಟಸ್ಥ ನಿಲುವನ್ನು ಹೊಂದಿದ್ದಾರೆ. ಆದರೆ, ಈ ಎಲ್ಲ ಸತ್ಯವನ್ನು ಅಡಗಿಸಿಟ್ಟು ಬಿಜೆಪಿ ನಾಯಕರು, ಮಾಧ್ಯಮ ಮತ್ತು ಸೋಶಿಯಲ್ ಮೀಡಿಯಾದ ಒಂದು ಗುಂಪು ಅತ್ಯಂತ ಅಮಾನವೀಯವಾದ ಪರಮ ಸುಳ್ಳನ್ನು ಹಂಚಿಕೊಂಡಿದೆ. ಆ ಮೂಲಕ ತಮ್ಮ ಮುಸ್ಲಿಮ್ ದ್ವೇಷವನ್ನು ಜಗಜ್ಜಾಹೀರುಗೊಳಿಸಿದೆ. ನಿಜವಾಗಿ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಈ ದೇಶದಲ್ಲಿ ಮುಸ್ಲಿಮ್ ದ್ವೇಷ ಎಂಬುದು ಒಂದೊಳ್ಳೆಯ ಸರಕು. ಪ್ರತಿನಿತ್ಯ ಈ ಸರಕನ್ನು ಮಾರುವ ಒಂದು ಗುಂಪು ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯವಾಗಿದೆ. ಮುಸ್ಲಿಮರನ್ನು ಖಳರಂತೆ ಬಿಂಬಿಸುವುದೇ ಈ ಗುಂಪಿನ ಪರಮ ಉದ್ದೇಶ. ಇದೇ ಗುಂಪು ಇದೇ ಕೇರಳದ ವೀಡಿಯೋವೊಂದನ್ನು ವಾರದ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿತ್ತು. ಮುಸ್ಲಿಮ್ ವಿದ್ಯಾರ್ಥಿನಿಯರು ಓರ್ವ ಹಿಂದೂ ಮಹಿಳೆಯೊಂದಿಗೆ ವಾಗ್ವಾದ ನಡೆಸುವ ವೀಡಿಯೋ. ಬುರ್ಖಾ ಧರಿಸಿರದ ಕಾರಣಕ್ಕಾಗಿ ಹಿಂದೂ ಮಹಿಳೆಯನ್ನು ಬಸ್ಸಿನಿಂದ ಕೆಳಗಿಳಿಸಿದ ಮುಸ್ಲಿಮ್ ವಿದ್ಯಾರ್ಥಿನಿಯರು ಎಂಬ ಒಕ್ಕಣೆಯೊಂದಿಗೆ ಈ ವೀಡಿಯೋವನ್ನು ಟ್ವೀಟರ್(ಎಕ್ಸ್)ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿತ್ತು. ಉತ್ತರ ಭಾರತವೂ ಸೇರಿದಂತೆ ವಿದೇಶದಲ್ಲೂ ಈ ವೀಡಿಯೋ ಭಾರೀ ಪ್ರಚಾರವನ್ನು ಪಡೆಯಿತು. ‘ಪಶ್ಚಿಮ ಕೇರಳದಲ್ಲಿ ಬುರ್ಖಾ ಧರಿಸದೇ ಬಸ್ಸಿನಲ್ಲಿ ಪ್ರಯಾಣಿಸಲೂ ಸಾಧ್ಯವಿಲ್ಲ..’ ಎಂದು ಈ ವೀಡಿಯೋ ಹಂಚಿಕೊಂಡ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಅನಿಲ್ ಆ್ಯಂಟನಿ ಟ್ವೀಟ್ ಮಾಡಿದ್ದರು. ಆದರೆ, ಈ ವೀಡಿಯೋದ ಕುರಿತಂತೆ ಅಕ್ಟೋಬರ್ 28ರಂದು ಇಂಡಿಯಾ ಟುಡೇ ಪತ್ರಿಕೆಯು ಸತ್ಯಶೋಧನಾ ವರದಿಯನ್ನು ಪ್ರಕಟಿಸುವ ಮೂಲಕ ಸುಳ್ಳಿಗೆ ಬಲವಾದ ಏಟು ಕೊಟ್ಟಿತು. ನಿಜವಾಗಿ, ಆ ವೀಡಿಯೋಕ್ಕೂ ಧರ್ಮಕ್ಕೂ ಸಂಬಂಧವೇ ಇರಲಿಲ್ಲ. ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾಕ್ಕೆ ಹೋಗುತ್ತಿದ್ದ ಬಸ್ಸಿನೊಳಗೆ ಅಕ್ಟೋಬರ್ 20ರಂದು ಆ ಘಟನೆ ನಡೆದಿತ್ತು.</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಕುಂಬಳೆಯ ಖನ್ಸಾ ವಿಮೆನ್ಸ್ ಕಾಲೇಜಿನ ವಿದ್ಯಾರ್ಥಿನಿಯರು ಬಸ್ಸನ್ನು ತಡೆದು ಹತ್ತಿದ್ದರು. ಕಾಲೇಜಿನ ಎದುರು ಬಸ್ ನಿಲುಗಡೆ ಇಲ್ಲದೇ ಇರುವುದನ್ನು ಪ್ರತಿಭಟಿಸಿ ಅವರು ಬಸ್ ತಡೆದಿದ್ದರು. ವೀಡಿಯೋದಲ್ಲಿರುವ ಆಶಾ ಭಾಸ್ಕರ್ ಅನ್ನುವ ಮಹಿಳೆ ಕುಂಬಳೆಯಲ್ಲಿರುವ ಶಿಕ್ಷಣ ಸಂಸ್ಥೆಯೊಂದರ ಅಧಿಕಾರಿಯಾಗಿದ್ದು, ಬಸ್ ತಡೆದುದನ್ನು ಪ್ರಶ್ನಿಸಿದ್ದಲ್ಲದೇ, ಬಸ್ ಪರ ವಾದಿಸಿದ್ದರು. ಇದು ವಿದ್ಯಾರ್ಥಿನಿಯರನ್ನು ಕೆರಳಿಸಿತ್ತು. ಅಲ್ಲದೇ, ಬಸ್ ಹತ್ತುವ ಗಡಿಬಿಡಿಯಲ್ಲಿ ವಿದ್ಯಾರ್ಥಿನಿಯರು ಅವರ ಪಾದಕ್ಕೂ ತುಳಿದಿದ್ದರು. ಈ ಹಿನ್ನೆಲೆಯಲ್ಲೇ ಆ ವಾಗ್ವಾದ ನಡೆದಿತ್ತು. ಧರ್ಮಕ್ಕೂ ಅದಕ್ಕೂ ಸಂಬಂಧವೇ ಇಲ್ಲ ಎಂದು ಆಶಾ ಭಾಸ್ಕರ್ ಇಂಡಿಯಾ ಟುಡೇಯೊಂದಿಗೆ ಹೇಳಿದರು. ಇವೇ ಅಭಿಪ್ರಾಯವನ್ನು ಬಸ್ನ ಕಂಡೆಕ್ಟರ್ ಮನೋಜ್ ಕೂಡಾ ಹೇಳಿದರು. ಹಾಗೆಯೇ, ‘ಆ ವೀಡಿಯೋದ ಜೊತೆಗೆ ಹಂಚಿಕೊಳ್ಳುತ್ತಿರುವ ಮಾಹಿತಿಗಳು ಸಂಪೂರ್ಣ ಸುಳ್ಳಿನಿಂದ ಕೂಡಿದೆ’ ಎಂದು ಕುಂಬಳೆ ಪೊಲೀಸ್ ಠಾಣೆಯ ಮುಖ್ಯಾಧಿಕಾರಿ ಅನೂಪ್ ಕುಮಾರ್ ಕೂಡಾ ಹೇಳಿದರು. ಖನ್ಸಾ ಕಾಲೇಜಿನ ಮುಂಭಾಗ ಬಸ್ ನಿಲ್ಲಿಸಬೇಕೆಂದು ಕಾಲೇಜು ಆಗ್ರಹಿಸುತ್ತಿದ್ದು, ಆರ್.ಟಿ.ಓ. ಅಧಿಕಾರಿಗಳು ಇನ್ನೂ ಅದಕ್ಕೆ ಅನುಮತಿಸಿಲ್ಲ ಎಂದವರು ಹೇಳಿದರಲ್ಲದೇ, ವೀಡಿಯೋದಲ್ಲಿರುವ ಮಹಿಳೆ ಯಾವ ದೂರನ್ನೂ ಕೊಟ್ಟಿಲ್ಲ ಎಂದೂ ಹೇಳಿದರು. ಈ ಎಲ್ಲ ಮಾಹಿತಿಯನ್ನು ಇಂಡಿಯಾ ಟುಡೇ ಫ್ಯಾಕ್ಟ್ ಚೆಕ್ ವರದಿಯಲ್ಲಿ ವಿಸ್ತೃತವಾಗಿ ವಿವರಿಸಲಾಗಿದೆ. ಅಂದಹಾಗೆ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಸುಳ್ಳು ಧರ್ಮವಿರೋಧಿ. ಆದರೆ, ಧರ್ಮ ರಕ್ಷಣೆ ಮಾಡುತ್ತೇವೆ ಎಂದು ಘೋಷಿಸುತ್ತಾ ತಿರುಗುವ ಗುಂಪು ಮತ್ತು ರಾಜಕೀಯ ಪಕ್ಷವೊಂದು ತಮ್ಮ ಉದ್ದೇಶ ಸಾಧನೆಗಾಗಿ ಸುಳ್ಳನ್ನೇ ಆಶ್ರಯಿಸಿದೆ. ಇದು ಅತ್ಯಂತ ಆಘಾತಕಾರಿ ಮತ್ತು ವಿಡಂಬನಾತ್ಮಕ. ನಿಜವಾಗಿ, ಮುಸ್ಲಿಮ್ ದ್ವೇಷವನ್ನೇ ಹಿಂದೂ ಧರ್ಮ ರಕ್ಷಣೆ ಎಂದು ನಂಬಿರುವ ಈ ಗುಂಪಿನಿಂದಲೇ ಹಿಂದೂ ಧರ್ಮಕ್ಕೆ ಅಪಾಯ ಇದೆ. ಧರ್ಮ ಎಂಬ ಸತ್ಯಕ್ಕೆ ಸುಳ್ಳು ಎಂಬ ಅಧರ್ಮ ಎಂದೂ ಉತ್ತರ ಅಲ್ಲ, ಪರ್ಯಾಯವೂ ಅಲ್ಲ.</span></div>a k kukkilahttp://www.blogger.com/profile/04432257424497331465noreply@blogger.com0tag:blogger.com,1999:blog-2716482703415659532.post-21185404829975959662023-10-30T04:34:00.000-07:002023-10-30T04:34:15.780-07:00ಧರ್ಮದ್ವೇಷದ ಕಾರ್ಖಾನೆಯಲ್ಲಿ ಉತ್ಪಾದನೆಯಾಗುತ್ತಿರುವ ಸುಳ್ಳುಗಳು<p> </p><div class="separator" style="clear: both; text-align: center;"><a href="https://blogger.googleusercontent.com/img/b/R29vZ2xl/AVvXsEgeT720hygv7FEOp6oXWj4g7pXgB5rUmflnCaqBn7x8er79Q1yBmGR7EFikjpZjaKUfz7rXGmjdFfOYQrljoowGP5PQBQ7Ro45r6S0kZ_USUHIRMbK-bktFSV8nmVZ0_nS7bN9GmxWiU3no9XPEVRpxleAcrtO7aoCLCe4eNVBrbGtWJWuao7wZ2kCRICbO/s1121/edit%20pic.jpg" imageanchor="1" style="margin-left: 1em; margin-right: 1em;"><img border="0" data-original-height="540" data-original-width="1121" height="193" src="https://blogger.googleusercontent.com/img/b/R29vZ2xl/AVvXsEgeT720hygv7FEOp6oXWj4g7pXgB5rUmflnCaqBn7x8er79Q1yBmGR7EFikjpZjaKUfz7rXGmjdFfOYQrljoowGP5PQBQ7Ro45r6S0kZ_USUHIRMbK-bktFSV8nmVZ0_nS7bN9GmxWiU3no9XPEVRpxleAcrtO7aoCLCe4eNVBrbGtWJWuao7wZ2kCRICbO/w400-h193/edit%20pic.jpg" width="400" /></a></div><br /><p></p><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಕಳೆದವಾರ ಎರಡು ಸುದ್ದಿಗಳು ಸದ್ದು ಮಾಡಿದುವು. </span><div><span style="color: #222222; font-family: Arial, Helvetica, sans-serif; font-size: x-small;"><br /></span><div><span style="background-color: white; color: #222222; font-family: Arial, Helvetica, sans-serif; font-size: small;">1. ಕೇರಳದ ಕೋಝಿಕೋಡ್ನಲ್ಲಿ ಫೆಲೆಸ್ತೀನ್ ಪರ ಮಾಡಲಾದ ರ್ಯಾಲಿ.</span></div><div><span style="background-color: white; color: #222222; font-family: Arial, Helvetica, sans-serif; font-size: small;"> 2. ಮಂದಿರದ ಅರ್ಚಕರಿಗೆ ಬ್ಯಾಟ್ನಿಂದ ಥಳಿಸಲಾದ ಘಟನೆ.</span><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಈ ಎರಡೂ ಘಟನೆಗಳಿಗೆ ಸಂಬಂಧಿಸಿದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಹಂಚಿಕೆಯಾದುವು. ಟ್ವೀಟರ್, ಫೇಸ್ಬುಕ್ ಮತ್ತು ವಾಟ್ಸಪ್ಗಳಲ್ಲಿ ಈ ವೀಡಿಯೋಗಳನ್ನು ಅದಕ್ಕೆ ನೀಡಲಾದ ಒಕ್ಕಣೆಯೊಂದಿಗೆ ಅಸಂಖ್ಯ ಮಂದಿ ಹಂಚಿಕೊಂಡರು. ಮುಸ್ಲಿಮ್ ವಿರೋಧಿ ಮತ್ತು ಧರ್ಮದ್ವೇಷವನ್ನು ಕೆರಳಿಸುವುದಕ್ಕೆ ಈ ಎರಡೂ ವೀಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಸಂಖ್ಯ ಮಂದಿ ಬಳಸಿಕೊಂಡರು. ನಿಜವಾಗಿ,</span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;"> ಈ ಎರಡೂ ವೀಡಿಯೋಗಳು ಮುಸ್ಲಿಮರಿಗೆ ಸಂಬಂಧಿಸಿದ್ದೇ ಆಗಿರಲಿಲ್ಲ. ಫೆಲೆಸ್ತೀನ್ ಪರ ಕೋಝಿಕ್ಕೋಡ್ನಲ್ಲಿ ರ್ಯಾಲಿ ನಡೆಸಿದ್ದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಎಂಬ ರಾಜಕೀಯ ಪಕ್ಷ. ಎಸ್.ಕ್ಯು.ಆರ್. ಇಲ್ಯಾಸ್ ಇದರ ರಾಷ್ಟ್ರೀಯ ಅಧ್ಯಕ್ಷರಾದರೆ, ರವಿಶಂಕರ್ ತ್ರಿಪಾಠಿ ರಾಷ್ಟ್ರೀಯ ಉಪಾಧ್ಯಕ್ಷ. ಕೇರಳ ಘಟಕದ ಅಧ್ಯಕ್ಷರಾಗಿ ರಝಾಕ್ ಮಲೇರಿ ಎಂಬವರು ಕಾರ್ಯನಿರ್ವಹಿಸುತ್ತಿದ್ದರೆ, ಸುರೇಂದ್ರನ್ ಕರಿಪುಝ ಎಂಬವರು ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಉಷಾ ಕುಮಾರಿ, ಜ್ಯೋತಿವ್ಯಾಸ್, ಗಣೇಶ್, ಪ್ರೇಮ ಮುಂತಾದವರು ಕಾರ್ಯದರ್ಶಿಗಳಾಗಿ ಸಕ್ರಿಯವಾಗಿದ್ದಾರೆ. ಜಾನ್ ಉಪಾಧ್ಯಕ್ಷರಾಗಿದ್ದಾರೆ. ಹಾಗೆಯೇ, ಖ್ಯಾತ ಸಾಹಿತ ಬಿ.ಟಿ. ಲಲಿತಾ ನಾಯಿಕ್ ಅವರು ಈ ಮೊದಲು ಕರ್ನಾಟಕ ಘಟಕದ ಅಧ್ಯಕ್ಷರಾಗಿ ಕರ್ತವ್ಯ ನಿಭಾಯಿಸಿದ್ದರು. ಆದರೆ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಈ ಎಲ್ಲವನ್ನೂ ಅಡಗಿಸಿಟ್ಟು ಈ ರಾಷ್ಟ್ರೀಯ ಪಕ್ಷದ ವಿರುದ್ಧವೇ ಸುಳ್ಳುಗಳನ್ನು ಹರಡಲಾಯಿತು. ಈ ಸುಳ್ಳಿಗೆ ಚಾಲನೆ ನೀಡಿದ್ದು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿ ತೇಜಿಂದರ್ ಪಾಲ್ ಬಗ್ಗಾ. ಕೇರಳದಲ್ಲಿ ಹಮಾಸ್ ಉಗ್ರರ ಪರ ರ್ಯಾಲಿ ನಡೆಸಲಾಗಿದ್ದು, ಫೆಲೆಸ್ತೀನ್ ಧ್ವಜದ ಬದಲು ಇಟಲಿ ಧ್ವಜವನ್ನು ಪ್ರದರ್ಶಿಸಲಾಗಿದೆ ಎಂದು ಅವರು ಟ್ವೀಟರ್ನಲ್ಲಿ (ಎಕ್ಸ್) ವೀಡಿಯೋವೊಂದನ್ನು ಹಂಚಿಕೊಂಡರು. ಬಿಜೆಪಿ ರಾಷ್ಟ್ರೀಯ ವಕ್ತಾರ ಅನಿಲ್ ಆ್ಯಂಟನಿಯಂತೂ ಇದೇ ವೀಡಿಯೋಗೆ ಇನ್ನಷ್ಟು ಉ ಪ್ಪು-ಖಾರ ಸೇರಿಸಿ ಟ್ವೀಟ್ ಮಾಡಿದರು. ಕೇರಳದಲ್ಲಿ ಇಸ್ಲಾಮಿಕ್ ಮೂಲಭೂತವಾದ ಮತ್ತು ತೀವ್ರಗಾಮಿ ನಿಲುವು ಗಂಭೀರ ಹಂತದಲ್ಲಿದೆ ಎಂಬಂತೆ ಬರೆದು ಬಗ್ಗಾ ಅವರದೇ ವೀಡಿಯೋವನ್ನು ಹಂಚಿಕೊಂಡಿದ್ದರು. ಇವರು ಕೇರಳದ ಕಾಂಗ್ರೆಸ್ ಮುಖಂಡ ಎ.ಕೆ. ಆ್ಯಂಟನಿಯವರ ಮಗ. ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಕೊಂಡಿದ್ದರು. ಕೇರಳದವರಾದ ಇವರಿಗೆ ಕೇರಳದ ವೆಲ್ಫೇರ್ ಪಾರ್ಟಿಯ ಬಗ್ಗೆ ಮತ್ತು ಅದರ ಧ್ವಜದ ಬಗ್ಗೆ ತಿಳಿದಿಲ್ಲ ಎಂದು ಹೇಳುವಂತೆಯೂ ಇಲ್ಲ. ಆದರೂ ತೇಜಿಂದರ್ ಪಾಲ್ ಬಗ್ಗಾ ಹರಡಿದ ಸುಳ್ಳನ್ನೇ ಇವರೂ ಹಿಂದು-ಮುಂದು ನೋಡದೇ ಹಂಚಿಕೊಂಡರು. ನಿಜವಾಗಿ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಕೇರಳದಲ್ಲಿ ಹಮಾಸ್ನ ಪರ ಈ ರ್ಯಾಲಿ ನಡೆಸಲಾಗಿರಲಿಲ್ಲ ಮತ್ತು ಇಟಲಿಯ ಧ್ವಜವನ್ನೂ ಪ್ರದರ್ಶಿಸಲಾಗಿರಲಿಲ್ಲ. ಇಟಲಿ ಮತ್ತು ವೆಲ್ ಫೇರ್ ಪಾರ್ಟಿ ಆಫ್ ಇಂಡಿಯಾದ ಧ್ವಜದ ನಡುವೆ ವ್ಯತ್ಯಾಸ ಇದೆ. ನೀಲಿ, ಬಿಳಿ ಮತ್ತು ಕೆಂಪು ಬಣ್ಣವು ಎರಡೂ ಧ್ವಜಗಳಲ್ಲಿದ್ದರೂ ವೆಲ್ಫೇರ್ ಪಾರ್ಟಿಯ ಧ್ವಜದ ಮಧ್ಯಭಾಗದಲ್ಲಿರುವ ಬಿಳಿ ಬಣ್ಣದಲ್ಲಿ ಎರಡು ತೆನೆಗಳ ಚಿತ್ರ ಇದೆ. ಇಟಲಿಯ ರಾಷ್ಟ್ರೀಯ ಧ್ವಜದಲ್ಲಿ ಈ ತೆನೆಗಳಿಲ್ಲ ಮತ್ತು ಅದರ ಮೂರೂ ಬಣ್ಣಗಳೂ ಸಮಪ್ರಮಾಣದಲ್ಲಿವೆ. ಆದರೆ, ಅನಿಲ್ ಆ್ಯಂಟನಿಯಾಗಲಿ ತೇಜಿಂದರ್ ಬಗ್ಗಾ ಆಗಲಿ ಅಥವಾ ಇವರಿಬ್ಬರ ಟ್ವೀಟ್ಗಳನ್ನು ಹಂಚಿಕೊಂಡ ಅಸಂಖ್ಯಾತ ಬೆಂಬಲಿಗರಾಗಲಿ ಈ ವ್ಯತ್ಯಾಸವನ್ನು ಕಂಡೇ ಇಲ್ಲದಂತೆ ವರ್ತಿಸಿದ್ದಾರೆ. ಮಾತ್ರವಲ್ಲ, ಫೆಲೆಸ್ತೀನ್ ಪರ ಮತ್ತು ಗಾಝಾದ ಸಂತ್ರಸ್ತರ ಪರ ರ್ಯಾಲಿ ಎಂದು ಬ್ಯಾನರ್ನಲ್ಲಿ ಸ್ಪಷ್ಟವಾಗಿ ಬರೆಯಲಾಗಿದ್ದರೂ ಹಮಾಸ್ ಉಗ್ರರ ಪರ ರ್ಯಾಲಿ ಎಂಬ ಸುಳ್ಳನ್ನು ಹರಡಿದ್ದಾರೆ. ಅನಿಲ್ ಆ್ಯಂಟನಿಗಂತೂ ಇದು ಇಸ್ಲಾಮಿಕ್ ಮೂಲಭೂತವಾಗಿ ಕಂಡಿದೆ. ರಾಜಕೀಯ ಪಕ್ಷವೊಂದು ಮಾಡಿದ ರ್ಯಾಲಿಯನ್ನು ಮುಸ್ಲಿಮರ ರ್ಯಾಲಿಯಂತೆ ಮತ್ತು ಉಗ್ರರ ಪರ ರ್ಯಾಲಿಯಂತೆ ಅತ್ಯಂತ ಯೋಜನಾಬದ್ಧವಾಗಿ ಸುಳ್ಳನ್ನು ಉತ್ಪಾದಿಸಿ ಹಂಚಲಾಗಿದೆ. ಅಂದಹಾಗೆ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">2020 ನವೆಂಬರ್ 3ರಂದು ಹರ್ಯಾಣದ ಫತೇಹಾಬಾದ್ ಜಿಲ್ಲೆಯ ಧಾಬಿಕಲಾನ್ ಗ್ರಾಮದಲ್ಲಿ ನಾಲ್ವರು ಯುವಕರು ಸೇರಿ ಅರ್ಚಕರಿಗೆ ಬ್ಯಾಟ್ನಿಂದ ಥಳಿಸಿದ್ದರು. ಉತ್ತರ ಭಾರತದ ಪ್ರಮುಖ ಪತ್ರಿಕೆಗಳಾದ ದೈನಿಕ್ ಜಾಗರಣ್ ಮತ್ತು ದೈನಿಕ್ ಭಾಸ್ಕರ್ ಪತ್ರಿಕೆಗಳು ಈ ಬಗ್ಗೆ ವರದಿಯನ್ನೂ ಮಾಡಿದ್ದುವು. ಮಠದ ಒಳಗೆ ಬ್ಯಾಟನ್ನು ಇರಿಸಲು ಒಪ್ಪದ ಅರ್ಚಕನ ವರ್ತನೆಗೆ ಸಿಟ್ಟಾದ ಅಮಿತ್, ಕೃಷ್ಣಾ, ಪ್ರದೀಪ್ ಮತ್ತು ರಾಕೇಶ್ ಎಂಬ ಯುವಕರು ಅರ್ಚಕರಿಗೆ ಥಳಿಸಿದ್ದು, ಇವರನ್ನು ಬಂಧಿಸಲಾಗಿದೆ ಎಂಬ ಮಾಹಿತಿಯೂ ಆ ವರದಿಯಲ್ಲಿತ್ತು. ಖಬ್ರೆ ಅಬೀ ತಕ್ ಎಂಬ ಯುಟ್ಯೂಬ್ ಚಾನೆಲ್ ಈ ಕುರಿತಂತೆ ಇನ್ನಷ್ಟು ವಿವರಗಳನ್ನು ನೀಡಿತ್ತು. ಯುವತಿಯೊಂದಿಗೆ ದೂರವಾಣಿಯಲ್ಲಿ ಅಸಭ್ಯವಾಗಿ ಮಾತಾಡಿದ ಕಾರಣಕ್ಕಾಗಿ ಅವರನ್ನು ಥಳಿಸಲಾಗಿದೆ ಎಂದು ಅದು ಹೇಳಿತ್ತು. ಇವು ಏನೇ ಇದ್ದರೂ ಈ ಘಟನೆಗೂ ಮುಸ್ಲಿಮರಿಗೂ ಯಾವ ಸಂಬಂಧವೂ ಇಲ್ಲ. ಆದರೆ, </span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಕಳೆದವಾರ ಈ ಘಟನೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಹಂಚಿಕೆಯಾಯಿತು. ಮಂದಿರದ ಅರ್ಚಕನನ್ನು ಥಳಿಸುತ್ತಿರುವ ಮುಸ್ಲಿಮ್ ಮತಾಂಧರು ಎಂಬ ಒಕ್ಕಣೆಯೊಂದಿಗೆ ಅಸಂಖ್ಯ ಮಂದಿ ವೀಡಿಯೋ ಹಂಚಿಕೊಂಡರು. ಭಾರತೀಯ ಯುವ ಮೋರ್ಚಾದ ಸೋಶಿಯಲ್ ಮೀಡಿಯಾದ ದೆಹಲಿ ಸಹಸಂಯೋಜಕಿ ಆಕಾಂಕ್ಷಾ ಈ ವೀಡಿಯೋವನ್ನು ಟ್ವೀಟ್ ಮಾಡಿದರು. ಆ ಬಳಿಕ ಸಾವಿರಾರು ಮಂದಿ ಇದನ್ನು ಮರುಟ್ವೀಟ್ ಮಾಡಿದರು. ನಿಜವಾಗಿ,</span></div><div><br /></div><div><span style="background-color: white; color: #222222; font-family: Arial, Helvetica, sans-serif; font-size: small;">ಸುಳ್ಳು ಹೇಳುವುದು ಮತ್ತು ಸುಳ್ಳು ಹರಡುವುದನ್ನು ಧರ್ಮಗಳು ಅಪರಾಧವಾಗಿ ಕಾಣುತ್ತವೆ. ಆದರೆ, ಧರ್ಮವನ್ನು ರಕ್ಷಿಸುತ್ತೇವೆ ಎಂದು ಹೇಳುವವರು ಸುಳ್ಳನ್ನೇ ಆಶ್ರಯಿಸಿಕೊಂಡಿದ್ದಾರೆ. ಈ ದೇಶದಲ್ಲಿ ಪ್ರತಿದಿನ ಅಸಂಖ್ಯ ಸುಳ್ಳುಗಳನ್ನು ಉತ್ಪಾದಿಸಲಾಗುತ್ತದೆ. ಬಳಿಕ ಅದನ್ನು ವಿವಿಧ ಸೋಶಿಯಲ್ ಮೀಡಿಯಾಗಳ ಮೂಲಕ ಹಂಚಲಾಗುತ್ತದೆ. ಹೀಗೆ ಉತ್ಪಾದನೆಯಾಗುವ ಸುಳ್ಳುಗಳಲ್ಲಿ 99% ಸುಳ್ಳುಗಳು ಕೂಡ ಮುಸ್ಲಿಮ್ ದ್ವೇಷವನ್ನೇ ಕಾರುವಂಥವು. ಹಿಂದೂ-ಮುಸ್ಲಿಮ್ ವಿಭಜನೆಯನ್ನೇ ಗುರಿಯಾಗಿಸಿಕೊಂಡು ಉತ್ಪಾದನೆಯಾಗುವ ಸುಳ್ಳುಗಳನ್ನು ಧರ್ಮರಕ್ಷಣೆಯ ಭ್ರಮೆಯಲ್ಲಿರುವವರು ಸತ್ಯವೆಂದೇ ನಂಬಿಕೊಂಡು ಹಂಚಿಕೊಳ್ಳುತ್ತಿದ್ದಾರೆ. ಮುಸ್ಲಿಮರನ್ನು ಮತಾಂಧರು, ಉಗ್ರರು, ಹಿಂದೂ ಧರ್ಮ ದ್ವೇಷಿಗಳು ಎಂದೆಲ್ಲ ಬಿಂಬಿಸುವುದೇ ಹೆಚ್ಚಿನೆಲ್ಲ ವೀಡಿಯೋ, ಆಡಿಯೋ ಮತ್ತು ಸುದ್ದಿಗಳ ಉದ್ದೇಶ. ಅಷ್ಟಕ್ಕೂ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಯಾವುದೇ ಸುಳ್ಳು ಸುದ್ದಿಯನ್ನು ಉತ್ಪಾದನೆ ಮಾಡುವುದು ಸುಲಭ. ಆದರೆ ಅದನ್ನು ಪತ್ತೆ ಹಚ್ಚುವುದು ಸುಲಭ ಅಲ್ಲ. ಅದಕ್ಕೆ ಒಂದಷ್ಟು ಶ್ರಮ ಬೇಕಾಗುತ್ತದೆ. ಎಲ್ಲರಿಗೂ ಸತ್ಯಶೋಧನೆ ಮಾಡುವುದಕ್ಕೂ ಬರುವುದಿಲ್ಲ. ಯಾರಾದರೂ ಶ್ರಮಪಟ್ಟು ಸತ್ಯಶೋಧನೆ ಮಾಡಿದರೂ ಆ ವೇಳೆಗಾಗಲೇ ಸುಳ್ಳು ತಲುಪಬೇಕಾದಲ್ಲೆಲ್ಲ ತಲುಪಿರುತ್ತದೆ. ಆ ಬಳಿಕ ಹಂಚಿಕೆಯಾಗುವ ಈ ಸತ್ಯಸುದ್ದಿಯು ಈ ಮೊದಲಿನ ಸುಳ್ಳು ಸುದ್ದಿ ತಲುಪಿದವರಿಗೆಲ್ಲ ತಲುಪುತ್ತದೆ ಎಂದು ಹೇಳುವುದಕ್ಕೂ ಬರುವುದಿಲ್ಲ. ದ್ವೇಷ ಮತ್ತು ನಕಾರಾತ್ಮಕ ಸುದ್ದಿಗಿರುವ ಮಾರುಕಟ್ಟೆ ಪ್ರೀತಿ ಮತ್ತು ಸಕಾರಾತ್ಮಕ ಸುದ್ದಿಗೆ ಇರುವುದಿಲ್ಲ ವಾದ್ದರಿಂದ ಇಂಥ ಸತ್ಯಶೋಧಿತ ಸುದ್ದಿಗಳನ್ನು ಹಂಚಿಕೊಳ್ಳುವವರೂ ಕಡಿಮೆ. ಅಲ್ಲದೇ, ಸುದ್ದಿಯೊಂದರ ಮೂಲವನ್ನು ಹುಡುಕುತ್ತಾ ಸತ್ಯವೋ ಸುಳ್ಳೋ ಎಂಬುದನ್ನು ಪತ್ತೆ ಹಚ್ಚುವವರ ಸಂಖ್ಯೆಗೆ ಹೋಲಿಸಿದರೆ ಸುಳ್ಳು ಉತ್ಪಾದಿಸುವವರ ಸಂಖ್ಯೆ ಎಷ್ಟೋ ಸಾವಿರ ಪಟ್ಟು ಅಧಿಕವಿದೆ. ಆದ್ದರಿಂದ, </span><span style="background-color: white; color: #222222; font-family: Arial, Helvetica, sans-serif; font-size: small;">ಒಂದು ಸುದ್ದಿಯ ಮೂಲವನ್ನು ಹುಡುಕುವಾಗ ಅಸಂಖ್ಯ ಸುಳ್ಳು ಸುದ್ದಿಗಳು ಉತ್ಪಾದನೆಯಾಗಿ ಮಾರುಕಟ್ಟೆಗೆ ಹಂಚಿಕೆಯಾಗುತ್ತಿರುತ್ತದೆ. ಇವನ್ನೆಲ್ಲ ಪತ್ತೆ ಹಚ್ಚುವುದು ಅಸಾಧ್ಯ ಅನ್ನುವಷ್ಟು ಕಷ್ಟ. ಆದ್ದರಿಂದ,</span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಸರಕಾರ ಮನಸ್ಸು ಮಾಡದ ಹೊರತು ಸುಳ್ಳು ಸುದ್ದಿಗಳ ನಿಯಂತ್ರಣ ಸಾಧ್ಯವಿಲ್ಲ. ದುರಂತ ಏನೆಂದರೆ, ಇವತ್ತು ಪ್ರಭುತ್ವವೇ ಈ ಸುಳ್ಳುಗಳನ್ನು ಆಶ್ರಯಿಸಿಕೊಂಡಿದೆ. ಸುಳ್ಳು ಹರಡುವವರಲ್ಲಿ ಪ್ರಭುತ್ವವನ್ನು ಬೆಂಬಲಿಸುವ ಮುಖಂಡರು, ಕಾರ್ಯಕರ್ತರು ಮತ್ತು ಹೊಣೆಗಾರರೇ ಅಧಿಕವಿದ್ದಾರೆ. ವೆಲ್ಫೇರ್ ಪಾರ್ಟಿಯ ರ್ಯಾಲಿ ಮತ್ತು ಹರ್ಯಾಣದ ಅರ್ಚಕರ ಥಳಿತದ ವೀಡಿಯೋಗಳನ್ನು ಸುಳ್ಳು ಒಕ್ಕಣೆಗಳೊಂದಿಗೆ ಪ್ರಭುತ್ವದ ಹೊಣೆಗಾರರೇ ಹಂಚಿಕೊಂಡಿರುವುದು ಇದಕ್ಕೆ ಅತೀ ಪ್ರಬಲ ಉದಾಹರಣೆ. ಅಂದಹಾಗೆ, ಧರ್ಮವೇ ಖಂಡಿಸುವ ಸುಳ್ಳನ್ನು ಧರ್ಮ ರಕ್ಷಣೆಗೆಂದು ಉತ್ಪಾದಿಸುವವರಿರುವ ದೇಶದಲ್ಲಿ ಸುಳ್ಳು ರಾಜಗಾಂಭೀರ್ಯದಿಂದ ಸುತ್ತುವುದರಲ್ಲಿ ಆಶ್ಚರ್ಯವೂ ಇಲ್ಲ.</span></div></div></div>a k kukkilahttp://www.blogger.com/profile/04432257424497331465noreply@blogger.com0tag:blogger.com,1999:blog-2716482703415659532.post-34403414960995604472023-10-26T02:15:00.000-07:002023-10-26T02:15:14.994-07:00‘ಹಮಾಸ’ನ್ನು ಪದೇ ಪದೇ ಕಟಕಟೆಯಲ್ಲಿ ನಿಲ್ಲಿಸುವ ಮೊದಲು<p> </p><p><span style="background-color: white; color: #222222; font-family: Arial, Helvetica, sans-serif; font-size: small;"><br /></span></p><div class="separator" style="clear: both; text-align: center;"><a href="https://blogger.googleusercontent.com/img/b/R29vZ2xl/AVvXsEi3F_yWWM0fApege9xgND_TF1S9V7NDkMJLqMCSUuMR_r9Ch2IKjqjvdTrjxfLu7qJ26UV5wikkRwtvRf45G5ngzD2zRY4W5A8kmKyGsIOvsO7RrFiXYZ3RdmZvBQD_iS7YqO2Fz4PQQ9zNsBNeuGgjf4dlNOGBIUOuzq0m09-yNxTFeVpJlstwGm7iDcf-/s1138/edit%20pic%20(1).jpg" imageanchor="1" style="margin-left: 1em; margin-right: 1em;"><img border="0" data-original-height="559" data-original-width="1138" height="196" src="https://blogger.googleusercontent.com/img/b/R29vZ2xl/AVvXsEi3F_yWWM0fApege9xgND_TF1S9V7NDkMJLqMCSUuMR_r9Ch2IKjqjvdTrjxfLu7qJ26UV5wikkRwtvRf45G5ngzD2zRY4W5A8kmKyGsIOvsO7RrFiXYZ3RdmZvBQD_iS7YqO2Fz4PQQ9zNsBNeuGgjf4dlNOGBIUOuzq0m09-yNxTFeVpJlstwGm7iDcf-/w400-h196/edit%20pic%20(1).jpg" width="400" /></a></div><br /><p><br /></p><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">1. ಶಂಕಿತರ ಮೊಬೈಲ್ ಮತ್ತು ಕಂಪ್ಯೂಟರ್ನೊಳಗೆ ನುಗ್ಗಿ ಗೂಢಚರ್ಯೆ ನಡೆಸುವ ಸ್ಪೈ ವೇರ್ ತಂತ್ರಜ್ಞಾನದಿಂದ ಹಿಡಿದು ಡ್ರೋನ್ ಕ್ಯಾಮರಾಗಳ ಕಣ್ಗಾವಲು ವ್ಯವಸ್ಥೆಯವರೆಗೆ ಮತ್ತು ಮೊಸಾದ್ನಂತಹ ಜಾಗತಿಕವಾಗಿಯೇ ಅತೀ ಪ್ರಬಲ ಗುಪ್ತಚರ ವಿಭಾಗದಿಂದ ಹಿಡಿದು ಅತ್ಯಾಧುನಿಕ ಶಸ್ತ್ರಾಸ್ತ್ರಗಳ ವರೆಗೆ ಎಲ್ಲದರ ಕಣ್ತಪ್ಪಿಸಿ ಇಝ್ಝುದ್ದೀನ್ ಅಲ್ ಖಸ್ಸಾಂ ಬ್ರಿಗೇಡ್ ಎಂಬ ಗಾಝಾದ ಹಮಾಸ್ನ ಸಶಸ್ತ್ರ ತಂಡವು ನೆಲ, ಜಲ ಮತ್ತು ವಾಯು ಪ್ರದೇಶದ ಮೂಲಕ ಇಸ್ರೇಲ್ನೊಳಗೆ ನುಗ್ಗಿ ದಾಳಿ ನಡೆಸಲು ಶಕ್ತವಾದುದು ಹೇಗೆ?</span><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">2. ಇಸ್ರೇಲ್ ನಾಗರಿಕರ ಮೇಲೆ ಹಮಾಸ್ ದಾಳಿ ನಡೆಸಿದ್ದು ಎಷ್ಟು ಸರಿ?</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಸದ್ಯ ಈ ಎರಡೂ ಪ್ರಶ್ನೆಗಳಿಗೂ ಮಹತ್ವ ಇದೆ. ಹಮಾಸ್ ಎಂಬುದು ಫೆಲೆಸ್ತೀನಿನ ಅತ್ಯಂತ ಜನಪ್ರಿಯ ರಾಜಕೀಯ ಪಕ್ಷ. ಅದರ ಸಶಸ್ತ್ರ ಪಡೆಯ ಹೆಸರು ಇಝ್ಝುದ್ದೀನ್ ಅಲ್ ಖಸ್ಸಾಂ. ಹಾಗಂತ, ಇಂಥದ್ದೊಂದು ವ್ಯವಸ್ಥೆ ಕೇವಲ ಹಮಾಸ್ಗೆ ಮಾತ್ರ ಇರುವುದಲ್ಲ. ಪಶ್ಚಿಮ ದಂಡೆಯಲ್ಲಿ ಅಧಿಕಾರದಲ್ಲಿರುವ ಮುಹಮ್ಮದ್ ಅಬ್ಬಾಸ್ ನೇತೃತ್ವದ ಫತಹ್ ಎಂಬ ರಾಜಕೀಯ ಪಕ್ಷಕ್ಕೂ ಇದೆ. ಆ ಸಶಸ್ತ್ರ ಪಡೆಯ ಹೆಸರು ಅಲ್ ಖುದ್ಸ್. ಇವೆರಡರ ಹೊರತಾಗಿ ಅಲ್ಲಿನ ಎಡಪಕ್ಷಕ್ಕೂ ತನ್ನದೇ ಆದ ಸಶಸ್ತ್ರ ಪಡೆಯೂ ಇದೆ. ಅಂದರೆ, ಫೆಲೆಸ್ತೀನಿನ ರಾಜಕೀಯ ಪಕ್ಷಗಳು ತಮ್ಮದೇ ಆದ ಸಶಸ್ತ್ರ ಪಡೆಯನ್ನು ಹೊಂದಿದ್ದು, ಫೆಲೆಸ್ತೀನನ್ನು ಇಸ್ರೇಲ್ನಿಂದ ವಿಮೋಚನೆಗೊಳಿಸುವುದಕ್ಕೆ ಸಶಸ್ತ್ರ ಹೋರಾಟ ಅನಿವಾರ್ಯ ಎಂದು ಅವು ಭಾವಿಸಿಕೊಂಡಿವೆ. ಇದನ್ನು ಅರ್ಥ ಮಾಡಿಕೊಳ್ಳಬೇಕಾದರೆ, 1948ರಲ್ಲಿ ಸ್ಥಾಪನೆಯಾದ ದಿನದಿಂದ ಈ ವರೆಗೆ ಫೆಲೆಸ್ತೀನಿಯರೊಂದಿಗೆ ಇಸ್ರೇಲ್ ನಡಕೊಂಡ ವಿಧಾನವನ್ನೂ ಒರೆಗಲ್ಲಿಗೆ ಹಚ್ಚಬೇಕಾಗುತ್ತದೆ.</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">1948ರಲ್ಲಿ ಇಸ್ರೇಲ್ ಸ್ಥಾಪನೆಗೊಂಡದ್ದೇ ಬ್ರಿಟಿಷರ ಸಂಚಿನಿಂದ. ಆಗ ಫೆಲೆಸ್ತೀನ್ ಬ್ರಿಟಿಷ್ ಆಧಿಪತ್ಯಕ್ಕೆ ಒಳಪಟ್ಟಿತ್ತು. ದ್ವಿತೀಯ ವಿಶ್ವಯುದ್ಧದಲ್ಲಿ ಯಹೂದಿಯರು ಅನುಭವಿಸಿದ ಸಂಕಟಕ್ಕೆ ಮರುಗಿದ ಯುರೋಪಿಯನ್ ರಾಷ್ಟ್ರಗಳು, ಅವರಿಗೊಂದು ದೇಶ ಕಟ್ಟಿಕೊಡಬೇಕೆಂದು ತೀರ್ಮಾನಿಸಿದಾಗ ಕಂಡದ್ದೇ ಫೆಲೆಸ್ತೀನ್. ಆದರೆ ಈ ವಿಷಯದಲ್ಲಿ ಫೆಲೆಸ್ತೀನಿಯರನ್ನಾಗಲಿ, ಅರಬ್ ರಾಷ್ಟ್ರಗಳನ್ನಾಗಲಿ ಬ್ರಿಟಿಷ್ ಸಹಿತ ಯುರೋಪಿಯನ್ ಯೂನಿಯನ್ ರಾಷ್ಟ್ರಗಳು ವಿಶ್ವಾಸಕ್ಕೆ ಪಡಕೊಳ್ಳಲಿಲ್ಲ. ಯಹೂದಿಯರಿಗೆ ಯಾಕೆ ಫೆಲೆಸ್ತೀ ನಿನಲ್ಲೇ ರಾಷ್ಟ್ರ ಕಟ್ಟಿ ಕೊಡಬೇಕು, ಅವರನ್ನು ನಿರ್ದಯವಾಗಿ ನಡೆಸಿಕೊಂಡ ಹಿಟ್ಲರನ ಜರ್ಮನಿಯಲ್ಲೇಕೆ ಅದನ್ನು ನಿರ್ಮಿಸಬಾರದು ಎಂಬ ಪ್ರಶ್ನೆಯನ್ನೂ ಈ ರಾಷ್ಟçಗಳು ಕಿವಿಗೆ ಹಾಕಿಕೊಳ್ಳಲಿಲ್ಲ. ಹೀಗೆ 1948ರಲ್ಲಿ ಹುಟ್ಟುವಾಗ ತೀರಾ ಸಣ್ಣ ಭೂಪ್ರದೇಶವನ್ನು ಹೊಂದಿದ್ದ ಇಸ್ರೇಲ್ ಇವತ್ತು ಫೆಲೆಸ್ತೀನ್ ಭೂಮಿಯನ್ನು ಒತ್ತುವರಿ ನಡೆಸಿ ನಡೆಸಿ ಬೃಹತ್ತಾಗಿ ಬೆಳೆದಿದೆ. ವಿಶ್ವದಾದ್ಯಂತದ ಯಹೂದಿಯರನ್ನು ಅದು ತನ್ನಲ್ಲಿಗೆ ಕರೆಸಿಕೊಳ್ಳುತ್ತಿದೆ ಮತ್ತು ಅವರ ವಸತಿಗಾಗಿ ಫೆಲೆಸ್ತೀನಿ ನಾಗರಿಕರನ್ನು ಒಕ್ಕಲೆಬ್ಬಿಸಿ ಭೂವಿಸ್ತರಣೆ ಮಾಡುತ್ತಿದೆ. ಅಂದಹಾಗೆ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಇಸ್ರೇಲ್ ರಾಷ್ಟ್ರವನ್ನು ಫೆಲೆಸ್ತೀನಿ ಮಣ್ಣಿನಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದೆ ಎಂಬ ಕಾರಣದಿಂದಲೇ ಅರಬ್ ರಾಷ್ಟ್ರಗಳು ಇಸ್ರೇಲ್ ವಿರುದ್ಧ 3 ಯುದ್ಧಗಳನ್ನು ನಡೆಸಿವೆ. ಮೊದಲನೆಯದ್ದು, 1948ರಲ್ಲಿ. ಅಮೇರಿಕ ಮತ್ತು ಯುರೋಪಿಯನ್ ರಾಷ್ಟ್ರಗಳ ಪೂರ್ಣ ಪ್ರಮಾಣದ ಬೆಂಬಲ ಇಲ್ಲದೇ ಇರುತ್ತಿದ್ದರೆ ಈ ಯುದ್ಧಗಳಲ್ಲಿ ಇಸ್ರೇಲ್ಗೆ ಗೆಲುವು ಸಿಗುವುದಕ್ಕೆ ಸಾಧ್ಯವೇ ಇರಲಿಲ್ಲ. ಒಂದುಕಡೆ ತನ್ನ ಮಣ್ಣಿನಲ್ಲಿ ಯಹೂದಿಯರಿಗೆ ಅಕ್ರಮವಾಗಿ ರಾಷ್ಟ್ರವೊಂದನ್ನು ನಿರ್ಮಿಸಿದ್ದು ಮತ್ತು ಇನ್ನೊಂದು ಕಡೆ ಆ ರಾಷ್ಟ್ರಕ್ಕೆ ಶಸ್ತ್ರಾಸ್ತ್ರ, ಹಣಕಾಸು ಸಹಿತ ಸರ್ವ ನೆರವನ್ನೂ ಅಮೇರಿಕ ಸಹಿತ ವಿವಿಧ ರಾಷ್ಟ್ರಗಳು ನೀಡುತ್ತಿರುವುದು- ಇವೆರಡೂ ಫೆಲೆಸ್ತೀನಿಯರಲ್ಲಿ ಕಿಚ್ಚು ಹಚ್ಚಿದ್ದರೆ, ಅದು ಅಸಹಜವಲ್ಲ. ಆದ್ದರಿಂದಲೇ, ಇಸ್ರೇಲ್ ಜೊತೆ ಅವಿರತ ಶಾಂತಿ ಒಪ್ಪಂದ ಮಾಡಿಕೊಂಡು ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಿ ನೋಬೆಲ್ ಪ್ರಶಸ್ತಿಗೆ ಭಾಜನರಾದ ಫೆಲೆಸ್ತೀನ್ ನಾಯಕ ಯಾಸಿರ್ ಅರಫಾತ್ ಅವರು 1948ರ ಯುದ್ಧದಲ್ಲಿ ಭಾಗಿಯಾಗಿದ್ದರು. 1983ರಿಂದ 93ರ ವರೆಗೆ ಟ್ಯುನೀಶಿಯಾದಲ್ಲಿ ನೆಲೆಸಿ ಫೆಲೆಸ್ತೀನ್ ವಿಮೋಚನೆಗಾಗಿ ಹೋರಾಡಿದ್ದರು. 1993ರಲ್ಲಿ ಗಾಝಾಕ್ಕೆ ಮರಳಿ ಸ್ವಾಯತ್ತ ಸರ್ಕಾರ ರಚಿಸಿದರು. ಆ ಬಳಿಕ ಇಸ್ರೇಲ್ ಜೊತೆ ಕ್ಯಾಂಪ್ ಡೇವಿಡ್ ಸಭೆ, ಓಸ್ಲೋ ಒಪ್ಪಂದ, ಮ್ಯಾಡ್ರಿಡ್ ಕಾನ್ಫರೆನ್ಸ್ ನಡೆಸಿದರು. ಆದರೆ ಇಸ್ರೇಲ್ ಈ ಒಪ್ಪಂದವನ್ನು ಪಾಲಿಸಲಿಲ್ಲ ಎಂದು ಮಾತ್ರವಲ್ಲ, ಶಾಂತಿದೂತ ಅರಫಾತ್ರನ್ನು ನಿರ್ದಯವಾಗಿ ನಡೆಸಿಕೊಂಡಿತು. ಜಾಗತಿಕವಾಗಿಯೇ ಅತ್ಯಂತ ಜನಪ್ರಿಯ ನಾಯಕರಾಗಿದ್ದ ಮತ್ತು ಫತಹ್ ರಾಜಕೀಯ ಪಕ್ಷದ ಪ್ರಮುಖರಾಗಿದ್ದ ಅವರಿಗೆ 2002ರಿಂದ 2004ರ ವರೆಗೆ ಅಕ್ಷರಶಃ ನಿರ್ಬಂಧವನ್ನು ಹೇರಿತು. ಫೆಲೆಸ್ತೀನ್ನ ರಮಲ್ಲಾ ಪ್ರದೇಶದಿಂದ ಹೊರಹೋಗುವುದಕ್ಕೆ ತಡೆ ಹೇರಿತು. ಅವರು ಹೊರರಾಷ್ಟ್ರಗಳಿಗೆ ಭೇಟಿಕೊಟ್ಟು ಇಸ್ರೇಲ್ ಮೇಲೆ ಒತ್ತಡ ಹೇರದಂತೆ ತಡೆಯುವುದೇ ಈ ನಿರ್ಬಂಧದ ಉದ್ದೇಶವಾಗಿತ್ತು. 2004ರಲ್ಲಿ ಈ ಅರಫಾತ್ ನಿಧನರಾದರು. ಅವರ ಶಾಂತಿ ಯತ್ನ ಮತ್ತು ಜನಪ್ರಿಯತೆಯನ್ನು ಸಹಿಸಿಕೊಳ್ಳಲಾಗದೇ ಇಸ್ರೇಲ್ ವಿಷವಿಕ್ಕಿ ಕೊಂದಿದೆ ಎಂಬ ಸಂದೇಹವೂ ಅಸ್ತಿತ್ವದಲ್ಲಿದೆ. ನಿಜವಾಗಿ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಈ ಅರಫಾತ್ರನ್ನು ನಿರ್ದಯವಾಗಿ ನಡೆಸಿಕೊಂಡ ಕಾರಣದಿಂದ ಹುಟ್ಟಿಕೊಂಡಿರುವ ರಾಜಕೀಯ ಸಂಘಟನೆಯೇ ಹಮಾಸ್. 1987ರಲ್ಲಿ ಈ ಹಮಾಸ್ ರಚನೆಗೊಳ್ಳುವ ಮೊದಲೇ ಇಸ್ರೇಲ್ನ ಕೈಗಳಲ್ಲಿ ಸಾಕಷ್ಟು ರಕ್ತದ ಕಲೆಗಳಿದ್ದುವು. ಇಸ್ರೇಲ್ನ ದಾಳಿಯಿಂದ ಮತ್ತು ಭೂವಿಸ್ತರಣಾ ದಾಹದಿಂದ ಚೆಲ್ಲಾಪಿಲ್ಲಿಯಾದ ಫೆಲೆಸ್ತೀನಿಯರು ಪಕ್ಕದ ವಿವಿಧ ಅರಬ್ ರಾಷ್ಟ್ರಗಳಿಗೆ ಹೋಗಿ ನಿರಾಶ್ರಿತ ಶಿಬಿರಗಳಲ್ಲಿ ನೆಲೆಸಿದ್ದರು. ಅದರಲ್ಲಿ ಲೆಬನಾನ್ ನ ಶಬ್ರ-ಶತೀಲ ಎಂಬ ನಿರಾಶ್ರಿತ ಶಿಬಿರವೂ ಒಂದು. 1982ರಲ್ಲಿ ಈ ನಿರಾಶ್ರಿತ ಶಿಬಿರದ ಮೇಲೆ ಬಾಂಬ್ ಹಾಕಿದ ಇಸ್ರೇಲ್ ಸುಮಾರು ಮೂರೂವರೆ ಸಾವಿರಕ್ಕಿಂತಲೂ ಅಧಿಕ ಮಂದಿಯ ಮಾರಣಹೋಮಕ್ಕೆ ಕಾರಣವಾಗಿತ್ತು. ಆದ್ದರಿಂದ, ಹಮಾಸ್ನಿಂದಾಗಿ ಇಸ್ರೇಲ್ ಹಿಂಸಾರೂಪ ತಾಳಿದೆ ಎಂಬುದು ಅಪ್ಪಟ ಸುಳ್ಳು. ಇಸ್ರೇಲ್ನ ಹಿಂಸೆಯನ್ನು ಪ್ರತಿರೋಧಿಸುವ ಉದ್ದೇಶದಿಂದಲೇ ಹಮಾಸ್ ಸ್ಥಾಪನೆಯಾಗಿದೆ. ಅದು ಅಲ್ ಖೈದಾ, ಐಸಿಸ್, ಲಷ್ಕರೆ ತ್ವಯಿಬಾ ಅಥವಾ ಆಫ್ರಿಕನ್ ಸಶಸ್ತ್ರ ದಳಗಳಂತೆ ಇನ್ನಾವುದೋ ರಾಷ್ಟ್ರದ ಮೇಲೆ ಗೆರಿಲ್ಲಾ ಹೋರಾಟ ನಡೆಸುತ್ತಿಲ್ಲ. ತನ್ನದೇ ಭೂಮಿಯಲ್ಲಿ ಅಕ್ರಮವಾಗಿ ರಚಿಸಲ್ಪಟ್ಟ ರಾಷ್ಟ್ರದ ವಿರುದ್ಧ ವಿಮೋಚನೆಯ ಹೋರಾಟ ನಡೆಸುತ್ತಿದೆ. ಆದ್ದರಿಂದಲೇ, ಹಮಾಸನ್ನು ಭಯೋತ್ಪಾದಕ ಸಂಘಟನೆ ಎಂದು ಕರೆಯುವುದಕ್ಕೆ ಟರ್ಕಿ, ಇರಾನ್, ರಷ್ಯಾ ಸಹಿತ ವಿವಿಧ ಅರಬ್ ರಾಷ್ಟ್ರಗಳು ಈಗಲೂ ಹಿಂಜರಿಯುತ್ತಿವೆ. ಅಷ್ಟಕ್ಕೂ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಈ 2023ರಲ್ಲಿ ಈವರೆಗೆ 200ಕ್ಕಿಂತ ಅಧಿಕ ಫೆಲೆಸ್ತೀನಿಯರನ್ನು ಇಸ್ರೇಲ್ ಹತ್ಯೆ ಮಾಡಿದೆ. 2022ರಲ್ಲಿ 220 ಮಂದಿ ಫೆಲೆಸ್ತೀನಿಯರನ್ನು ಇಸ್ರೇಲ್ ಹತ್ಯೆ ಮಾಡಿತ್ತು. ಇದರಲ್ಲಿ 30 ಮಕ್ಕಳು. ಮಾತ್ರವಲ್ಲ, ವಿಶ್ವಸಂಸ್ಥೆಯಲ್ಲಿ ಇಸ್ರೇಲ್ ವಿರುದ್ಧ 45ರಷ್ಟು ಮಸೂದೆಗಳು ಅಂಗೀಕಾರಗೊಂಡಿವೆ. ಆದರೆ ಅವುಗಳಲ್ಲಿ ಒಂದಕ್ಕೂ ಇಸ್ರೇಲ್ ಕಿಂಚಿತ್ ಬೆಲೆಯನ್ನೂ ಕೊಟ್ಟಿಲ್ಲ. ಫೆಲೆಸ್ತೀನಿನಲ್ಲಿ ಇಸ್ರೇಲ್ ನಡೆಸುತ್ತಿ ರುವ ಕ್ರೌರ್ಯಗಳ ತನಿಖೆಯನ್ನು ಅಂತಾರಾಷ್ಟ್ರೀಯ ನ್ಯಾಯಾಲಯದಿಂದ ನಡೆಸಬೇಕೆಂಬ ಮಸೂದೆ ಕಳೆದ ವರ್ಷ ವಿಶ್ವಸಂಸ್ಥೆಯಲ್ಲಿ ಮಂಡಿಸಲಾಗಿತ್ತು. ಇದನ್ನು ಅಮೇರಿಕ, ಬ್ರಿಟನ್, ಜರ್ಮನಿ ಸಹಿತ 26 ರಾಷ್ಟ್ರಗಳು ವಿರೋಧಿಸಿದವು. ಆದರೆ 87 ರಾಷ್ಟ್ರಗಳು ಬೆಂಬಲಿಸುವುದರೊಂದಿಗೆ ಅದು ಅಂಗೀಕಾರಗೊಂಡಿತ್ತು. ಆದರೆ, ಅಂತಾರಾಷ್ಟೀಯ ನ್ಯಾಯಾಲಯಕ್ಕೆ ಇಸ್ರೇಲನ್ನು ಸ್ಪರ್ಶಿಸಲೂ ಈವರೆಗೂ ಸಾಧ್ಯವಾಗಿಲ್ಲ. ಹಾಗಂತ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">1987ರಲ್ಲಿ ಸ್ಥಾಪನೆಗೊಂಡ ಬಳಿಕದಿಂದ ಈವರೆಗೆ ಇಸ್ರೇಲ್ ನಾಗರಿಕರ ಮೇಲೆ ಹಮಾಸ್ ದಾಳಿಯನ್ನೇ ನಡೆಸಿರಲಿಲ್ಲ. ಅದರ ರಾಕೆಟ್ಗಳು, ಹೋರಾಟಗಳಿಗೆಲ್ಲ ಸೇನೆಯೇ ಗುರಿಯಾಗಿತ್ತು. ಈ ಬಾರಿ ಅದು ಹೋರಾಟದ ದಾರಿಯನ್ನು ಬದಲಿಸಿದೆ. ಆದ್ದರಿಂದಲೇ, ಹಮಾಸನ್ನು ಕಟಕಟೆಯಲ್ಲಿ ನಿಲ್ಲಿಸಿ ಪ್ರಶ್ನಿಸುವುದು ತಪ್ಪಾಗುವುದಿಲ್ಲ. ಇದೇವೇಳೆ, ಇಸ್ರೇಲ್ ಉದ್ದಕ್ಕೂ ಫೆಲೆಸ್ತೀನ್ ನಾಗರಿಕರ ವಿರುದ್ಧವೇ ದಾಳಿ ನಡೆಸುತ್ತಾ ಬಂದಿದೆ ಎಂಬ ಪ್ರಜ್ಞೆಯೂ ಈ ಪ್ರಶ್ನೆ ಎಸೆಯುವವರಿಗೆ ಇರಬೇಕು. 2014ರಲ್ಲಿ 3 ಮಂದಿ ಇಸ್ರೇಲಿ ಯೋಧರನ್ನು ಹಮಾಸ್ ಅಪಹರಿಸಿತ್ತು. ಇದಕ್ಕೆ ಪ್ರತಿಯಾಗಿ ಇಸ್ರೇಲ್ ನಡೆಸಿದ ದಾಳಿಗೆ 2100 ಮಂದಿ ಫೆಲೆಸ್ತೀನಿ ನಾಗರಿಕರು ಮೃತಪಟ್ಟಿದ್ದರು. ಅಂದಹಾಗೆ, ಇಸ್ರೇಲ್ನ ಕ್ರೌರ್ಯದ ಬಗ್ಗೆ ಏನೊಂದೂ ಮಾತನಾಡದೆ ಫೆಲೆಸ್ತೀನಿಯರ ಪ್ರತಿರೋಧವನ್ನೇ ಜಾಗತಿಕ ಬಲಿಷ್ಠ ರಾಷ್ಟ್ರಗಳು ಈವರೆಗೆ ಕಟೆಕಟೆಯಲ್ಲಿ ನಿಲ್ಲಿಸುತ್ತಾ ಬಂದಿದೆ. ಅದರ ಫಲಿತಾಂಶವೇ ಸಹನೆಯ ಕಟ್ಟೆಯೊಡೆದ ಈ ಪ್ರತಿಕ್ರಿಯೆ ಎಂದೂ ಹೇಳಬಹುದು. ಇದು ಸಮಸ್ಯೆಗೆ ಪರಿಹಾರ ಅಲ್ಲದೇ ಇರಬಹುದು. ಆದರೆ ಪರಿಹಾರ ಆಗಬಹುದಾದ ಅನೇಕ ಸಂದರ್ಭಗಳನ್ನು ಮತ್ತು ಅವಕಾಶಗಳನ್ನು ಇವೇ ಬಲಿಷ್ಠ ರಾಷ್ಟ್ರಗಳು ಉದ್ದೇಶಪೂರ್ವಕ ಹಾಳುಮಾಡಿದುವಲ್ಲ, ಇಸ್ರೇಲ್ನ ಸಕಲ ಕ್ರೌರ್ಯಕ್ಕೂ ಬೆಂಗಾವಲಾಗಿ ನಿಂತುವಲ್ಲ, ಅದೇಕೆ ಚರ್ಚೆಗೆ ಒಳಗಾಗುತ್ತಿಲ್ಲ? ಇಸ್ರೇಲ್ನ ಹಿಂಸೆಗೆ ಮೌನ ಸಮ್ಮತಿ ಕೊಡುತ್ತಾ ಫೆಲೆಸ್ತೀನಿಯರ ಪ್ರತಿರೋಧವನ್ನೇ ಗಂಟಲು ಬಿರಿದು ವಿರೋಧಿಸುತ್ತಿರುವುದೇಕೆ? ಹಾಗಂತ, ಪ್ರತಿರೋಧವೊಂದು ನಾಗರಿಕರ ಮೇಲಿನ ಹಿಂಸಾತ್ಮಕ ದಾಳಿಯಾಗಿ ಪರಿವರ್ತನೆಗೊಳ್ಳುವುದನ್ನು ಒಪ್ಪಲು ಖಂಡಿತ ಸಾಧ್ಯವಿಲ್ಲ. </span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಇನ್ನಾದರೂ ಬಲಿಷ್ಠರು ಫೆಲೆಸ್ತೀನಿಯರಿಗಾದ ಅನ್ಯಾಯವನ್ನು ಸರಿಪಡಿಸಲಿ.</span></div>a k kukkilahttp://www.blogger.com/profile/04432257424497331465noreply@blogger.com0tag:blogger.com,1999:blog-2716482703415659532.post-24113713995456642032023-10-09T06:34:00.000-07:002023-10-09T06:34:53.124-07:00 ಇಸ್ಲಾಮ್: ಅನ್ಯ ಧರ್ಮ ಅಸಹಿಷ್ಣುವೇ?<div class="separator" style="clear: both; text-align: center;"><a href="https://blogger.googleusercontent.com/img/b/R29vZ2xl/AVvXsEhDvMi9xl_GCZLkMvZ-pvcLnlHJtfBI6BN1_GXIlsoI_fgG1sg5LohYTeXHkwoMaI81HrJSeY5g9MncAjOFPGO4ToNGjpO_nrahSmod65n3FGui0RBHHq6TL61myJT9z7u9E-L5mNuObuDWUdEebO_AwBGSSJpxBF7oURVNb3QFlCOZDNoTn6taMUTh2uo8/s941/edit%20pic%20(1).jpg" imageanchor="1" style="margin-left: 1em; margin-right: 1em;"><img border="0" data-original-height="544" data-original-width="941" height="231" src="https://blogger.googleusercontent.com/img/b/R29vZ2xl/AVvXsEhDvMi9xl_GCZLkMvZ-pvcLnlHJtfBI6BN1_GXIlsoI_fgG1sg5LohYTeXHkwoMaI81HrJSeY5g9MncAjOFPGO4ToNGjpO_nrahSmod65n3FGui0RBHHq6TL61myJT9z7u9E-L5mNuObuDWUdEebO_AwBGSSJpxBF7oURVNb3QFlCOZDNoTn6taMUTh2uo8/w400-h231/edit%20pic%20(1).jpg" width="400" /></a></div><br /><p><br /></p><span style="background-color: white; color: #222222; font-family: Arial, Helvetica, sans-serif; font-size: small;"><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಸನ್ಮಾರ್ಗ ಸೀರತ್ ವಿಶೇಷಾಂಕ ಸಂಪಾದಕೀಯ </span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div>ಪ್ರಥಮ ಮಾನವ ಮತ್ತು ಪ್ರಥಮ ಪ್ರವಾದಿ ಆದಮ್ರ(ಅ) ಇಬ್ಬರು ಪುತ್ರರಲ್ಲಿ ಕಿರಿಯವನಾದ ಕಾಬೀಲನು ಅಣ್ಣ ಹಾಬೀಲ್ನನ್ನು ಹತ್ಯೆ ಮಾಡುತ್ತಾನೆ. ಅಣ್ಣ ಹಾಬೀಲ್ನನ್ನು ಹತ್ಯೆ ಮಾಡಲು ತಮ್ಮ ಕಾಬೀಲ್ ಮುಂದಾದಾಗ ಅಣ್ಣ ಹೇಳುವ ಮಾತನ್ನು ಮತ್ತು ಆ ಇಡೀ ವೃತ್ತಾಂತವನ್ನು ಪವಿತ್ರ ಕುರ್ಆನ್ನ ಅಧ್ಯಾಯ 50: 27-30ರ ವಚನಗಳಲ್ಲಿ ಹೀಗೆ ವಿವರಿಸಲಾಗಿದೆ-</span><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;"><br /></span><div><span style="background-color: white; color: #222222; font-family: Arial, Helvetica, sans-serif; font-size: small;">ನೀನು ನನ್ನನ್ನು ಹತ್ಯೆ ಮಾಡಲು ಕೈಯೆತ್ತಿದರೂ ನಾನು ನಿನ್ನ ಹತ್ಯೆ ಮಾಡಲ್ಲ. ನಾನು ಸರ್ವಲೋಕಗಳ ಪ್ರಭುವಾದ ಅಲ್ಲಾಹನನ್ನು ಭಯಪಡುತ್ತೇನೆ ಎಂದು ಹಾಬೀಲ್ ಹೇಳುತ್ತಾರೆ. ಕೊನೆಗೆ ಅಣ್ಣನನ್ನು ಕಾಬೀಲ್ ಹತ್ಯೆ ಮಾಡಿದ ಮತ್ತು ನಷ್ಟ ಹೊಂದಿದವರಲ್ಲಿ ಸೇರಿದ.</span><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಈ ವೃತ್ತಾಂತದ ಬೆನ್ನಿಗೇ ಪವಿತ್ರ ಕುರ್ ಆನ್ ನ 32ನೇ ವಚನದಲ್ಲಿ ಹೀಗೆ ಹೇಳಲಾಗಿದೆ-</span><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಓರ್ವ ಮಾನವನ ಹತ್ಯೆಯ ಬದಲಿಗೆ ಅಥವಾ ಭೂಮಿಯಲ್ಲಿ ಕ್ಷೋಭೆಯನ್ನುಂಟು ಮಾಡುವ ಕಾರಣದ ಹೊರತಾಗಿ ಯಾರಾದರೂ ಓರ್ವ ಮನುಷ್ಯನನ್ನು ಹತ್ಯೆ ಮಾಡಿದರೆ ಅವನು ಸಕಲ ಮಾನವ ಸಮೂಹವನ್ನೇ ಹತ್ಯೆ ಮಾಡಿದಂತೆ ಮತ್ತು ಒಬ್ಬನು ಇನ್ನೊಬ್ಬನಿಗೆ ಜೀವದಾನ ಮಾಡಿದರೆ ಸಕಲ ಮಾನವ ಸಮೂಹಕ್ಕೇ ಜೀವದಾನ ಮಾಡಿದಂತೆ.</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಪ್ರವಾದಿ(ಸ) ಹೀಗೆ ಹೇಳಿದ್ದಾರೆ,</span><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಯಾರಾದರೂ ಒಪ್ಪಂದ ಮಾಡಿಕೊಂಡ (ಅಥವಾ ದೇಶದ ಪ್ರಜೆಗಳಾಗಿರಲು ಒಪ್ಪಿಕೊಂಡೆ ಅಲ್ಪಸಂಖ್ಯಾತ) ಮುಸ್ಲಿಮೇತರರ ಹತ್ಯೆ ನಡೆಸಿದರೆ ಅಂಥ ಹತ್ಯೆಕೋರರು ನಲ್ವತ್ತು ವರ್ಷ ಪ್ರಯಾಣಿಸಿ ಹೋಗಬೇಕಾದಷ್ಟು ದೂರದವರೆಗೂ ಹಬ್ಬುವಂಥ ಸ್ವರ್ಗದ ಪರಿಮಳವನ್ನು ಕೂಡಾ ಅನುಭವಿಸಲಾರರು.</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಈ ಮೂರೂ ವಿಷಯಗಳಲ್ಲಿ ಏಕ ಸತ್ಯವೊಂದಿದೆ. ಇಸ್ಲಾಮ್ ಹಿಂಸೆಯ ವಿರೋಧಿ, ಅನ್ಯ ಧರ್ಮ ಅಸಹಿಷ್ಣುತೆಯ ವಿರೋಧಿ ಮತ್ತು ಒಂದು ಹತ್ಯೆಯನ್ನು ಇಡೀ ಮಾನವ ಸಮೂಹವನ್ನೇ ಹತ್ಯೆ ಮಾಡಿದುದಕ್ಕೆ ಸಮವೆಂದು ಪರಿಗಣಿಸುವಷ್ಟು ಹತ್ಯೆ ವಿರೋಧಿ. ಈ ಜಗತ್ತಿನಲ್ಲಿ ಪ್ರಪ್ರಥಮವಾಗಿ ಹತ್ಯೆಗೊಳಗಾದ ಹಾಬೀಲ್ನನ್ನು ಇಸ್ಲಾಮ್ ಸಜ್ಜನನೆಂದು ಪರಿಚಯಿಸುತ್ತದೆ ಮತ್ತು ಹತ್ಯೆ ಮಾಡಿದವ ಪ್ರವಾದಿಯ ಮಗನೇ ಆಗಿದ್ದರೂ ಆತನನ್ನು ನಷ್ಟ ಹೊಂದಿದವ ಮತ್ತು ಭ್ರಷ್ಟ ಚಿತ್ತದವ ಎಂದು ಉಲ್ಲೇಖಿಸುತ್ತದೆ. ಅಲ್ಲದೇ, ತಾನು ಹತ್ಯೆಗೊಳಗಾಗುವುದು ಶತಃಸಿದ್ಧ ಎಂದು ಗೊತ್ತಿದ್ದೂ ‘ತಾನು ಸರ್ವಲೋಕಗಳ ಪ್ರಭುವಾದ ಅಲ್ಲಾಹನನ್ನು ಭಯಪಡುತ್ತೇನೆ’ ಎಂದು ಅಣ್ಣ ಹೇಳುತ್ತಾರೆ. ಅಂದರೆ, ಅಲ್ಲಾಹನನ್ನು ಭಯಪಡುವವ ಹತ್ಯೆ ನಡೆಸುವುದಿಲ್ಲ ಅನ್ನುವುದೇ ಇದರ ತಾತ್ಪರ್ಯ. ಈ ಘಟನೆಯನ್ನು ಹೇಳಿದ ಬೆನ್ನಿಗೇ ಹತ್ಯೆಗೆ ಸಂಬಂಧಿಸಿ ಪವಿತ್ರ ಕುರ್ ಆನ್ ಸಾರ್ವತ್ರಿಕ ನಿಯಮವನ್ನೂ ಮುಂದಿಡುತ್ತದೆ. ಪ್ರವಾದಿ ಮುಹಮ್ಮದ್(ಸ) ಈ ಕುರ್ಆನನ್ನೇ ಬೋಧಿಸಿದರು ಮತ್ತು ಬದುಕಿದರು. ‘ತನ್ನ ಅಧೀನದಲ್ಲಿರುವ ಮುಸ್ಲಿಮೇತರ ಕಾರ್ಮಿಕನನ್ನು ಅವಧಿಗಿಂತ ಹೆಚ್ಚು ದುಡಿಸಿದರೆ ಪರಲೋಕ ವಿಚಾರಣೆಯ ವೇಳೆ ನಾನು ಆ ಮುಸ್ಲಿಮೇತರನ ಪರ ನಿಲ್ಲುವೆ..’ ಎಂದು ಪ್ರವಾದಿ(ಸ) ತನ್ನ ಅನುಯಾಯಿಗಳ ಮುಂದೆ ಘೋಷಿಸುವುದಕ್ಕೆ ಈ ಪವಿತ್ರ ಕುರ್ಆನೇ ಪ್ರೇರಣೆ. ಮುಹಮ್ಮದರು ಪ್ರವಾದಿಯಾಗಿ 40ನೇ ವರ್ಷದಲ್ಲಿ ನಿಯುಕ್ತರಾದರು ಮತ್ತು 63 ವರ್ಷಗಳ ವರೆಗೆ ಬದುಕಿದರು. ಅವರು ಮೃತಪಡುವಾಗ, ಯುದ್ಧ ಕವಚ ಓರ್ವ ಯಹೂದಿಯ ಬಳಿ ಅಡವಿಡಲಾದ ಸ್ಥಿತಿಯಲ್ಲಿ ಇತ್ತು ಎಂದು ಇತಿಹಾಸ ಹೇಳುತ್ತದೆ. ಇನ್ನೊಂದು ಮಹತ್ವಪೂರ್ಣ ಘಟನೆಯೂ ಉಲ್ಲೇಖಾರ್ಹ-</span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;"> ಬಶೀರ್ ಬಿನ್ ಉಬೈರಿಕ್ ಎಂಬ ಮುಸ್ಲಿಮ್ ವ್ಯಕ್ತಿ ಇನ್ನೋರ್ವನ ಗುರಾಣಿಯನ್ನು ಕದಿಯುತ್ತಾರೆ ಮತ್ತು ಮಾಲಕ ತನ್ನ ಗುರಾಣಿಯನ್ನು ಹುಡುಕುತ್ತಿರುವುದು ಗೊತ್ತಾದಾಗ ಅದನ್ನು ಓರ್ವ ಯಹೂದಿಯ ಮನೆಯಲ್ಲಿ ಸದ್ದಿಲ್ಲದೇ ಇಟ್ಟುಬಿಡುತ್ತಾರೆ. ಗುರಾಣಿಯ ಮಾಲಕ ಪ್ರವಾದಿಯವರಲ್ಲಿ(ಸ) ದೂರು ನೀಡುವುದಲ್ಲದೇ ಬಶೀರ್ ಬಿನ್ ಉಬೈರಿಕ್ನ ಮೇಲೆ ಸಂದೇಹವನ್ನೂ ವ್ಯಕ್ತಪಡಿಸುತ್ತಾನೆ. ಆದರೆ ಬಷೀರ್ ಬಿನ್ ಉಬೈ ರಿಕ್ ಕಳ್ಳತನವನ್ನು ನಿರಾಕರಿಸುತ್ತಾನಲ್ಲದೇ ಯಹೂದಿಯತ್ತ ಕೈ ತೋರಿಸುತ್ತಾನೆ. ಆ ಬಶೀರ್ನ ಪರ ಆತನ ಝಫರ್ ಗೋತ್ರದವರೂ ಹಲವು ಮುಸ್ಲಿಮರೂ ಬೆಂಬಲಕ್ಕೆ ನಿಲ್ಲುತ್ತಾರೆ ಮತ್ತು ಆ ಅಲ್ಪಸಂಖ್ಯಾತ ಯಹೂದಿ ವ್ಯಕ್ತಿ ತಾನು ಕದ್ದಿಲ್ಲ ಎಂದು ಹೇಳಿದರೂ ಸಾಂದರ್ಭಿಕ ಸಾಕ್ಷ್ಯಗಳು ಅವನ ವಿರುದ್ಧವೇ ಇರುವುದರಿಂದ ಪ್ರವಾದಿ(ಸ) ಆತನನ್ನೇ ತಪ್ಪಿತಸ್ಥ ಎಂದು ತೀರ್ಮಾನಿಸುವುದಕ್ಕೆ ಮುಂದಾಗುತ್ತಾರೆ. ಆಗ ಪ್ರವಾದಿಯವರನ್ನು(ಸ) ತಿದ್ದುವ ಧಾಟಿಯಲ್ಲಿ ಪವಿತ್ರ ಕುರ್ಆನ್ ನ ವಾಣಿಗಳು ಅಲ್ಲಾಹನಿಂದ ಅವತೀರ್ಣವಾಗುತ್ತವೆ ಮತ್ತು ಅಪ್ರಾಮಾಣಿಕರ ಪರ ವಾದಿಸುವವರಾಗಬೇಡಿ ಎಂದು (ಅಧ್ಯಾಯ 4, ವಚನ 105-106) ಪ್ರವಾದಿಯನ್ನು ಎಚ್ಚರಿಸುತ್ತದೆ ಮತ್ತು ಯಹೂದಿಯ ಪರ ತೀರ್ಪು ಕೊಡುವಂತೆ ಮಾಡುತ್ತದೆ.</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಅನ್ಯ ಧರ್ಮೀಯರನ್ನು ಅಸಹಿಷ್ಣುತೆಯಿಂದ ಕಾಣುವುದಕ್ಕೂ ಇಸ್ಲಾಮ್ಗೂ ಸಂಬಂಧ ಇಲ್ಲ. ಈ ದೇಶದಲ್ಲಿ 800 ವರ್ಷಗಳ ಕಾಲ ಮುಸ್ಲಿಮರು ರಾಜರಾಗಿ ಮೆರೆದರೂ ಇವತ್ತಿಗೂ ಮುಸ್ಲಿಮರ ಸಂಖ್ಯೆ 15%ವನ್ನೂ ಮೀರಿಲ್ಲ. ಇಸ್ಲಾಮ್ ಅನ್ಯಧರ್ಮ ಅಸಹಿಷ್ಣುವೇ ಆಗಿದ್ದಿದ್ದರೆ ಈ ದೇಶದ ಬಹುಸಂಖ್ಯಾತರು ಇವತ್ತು ಮುಸ್ಲಿಮರೇ ಆಗಿರುತ್ತಿದ್ದರು. </span>ಹಾಗಂತ, ಇದರಾಚೆಗೆ ಹಿಂದೂವನ್ನು ದ್ವೇಷಿಸುವ ಮುಸ್ಲಿಮ್ ಮತ್ತು ಮುಸ್ಲಿಮರನ್ನು ದ್ವೇಷಿಸುವ ಹಿಂದೂ ಇರಲು ಸಾಧ್ಯವಿದೆ. ಅದಕ್ಕೆ ಧರ್ಮ ಕಾರಣ ಅಲ್ಲ. ಸಂದರ್ಭ, ಸನ್ನಿವೇಶ, ತಪ್ಪು ಅಭಿಪ್ರಾಯಗಳು, ಅಸೂಯೆ, ಅಹಂಕಾರ, ರಾಜಕೀಯ ಅಧಿಕಾರ ಇತ್ಯಾದಿ ಇತ್ಯಾದಿ ವೈಯಕ್ತಿಕವಾದವುಗಳೇ ಕಾರಣವಾಗಿವೆ. ಅವನ್ನು ವೈಯಕ್ತಿಕವಾಗಿ ನೋಡಬೇಕೇ ಹೊರತು ಧರ್ಮದ ಕನ್ನಡಕದಿಂದಲ್ಲ. ಮುಸ್ಲಿಮ್ ರಾಷ್ಟ್ರಗಳಾಗಿರುವ ಮತ್ತು ಕುರ್ಆನನ್ನೇ ಸಂವಿಧಾನವಾಗಿ ಒಪ್ಪಿಕೊಂಡಿರುವ ಅರಬ್ ರಾಷ್ಟ್ರಗಳಲ್ಲಿ ಇವತ್ತು ಲಕ್ಷಾಂತರ ಹಿಂದೂಗಳು ಅಸಹಿಷ್ಣುತೆಯ ಅಣುವಿನಷ್ಟಾದರೂ ತಾರತಮ್ಯವನ್ನು ಅನುಭವಿಸದೆ ಬದುಕುತ್ತಿರುವುದೇ ಇಸ್ಲಾಮ್ ಅನ್ಯಧರ್ಮ ಅಸಹಿಷ್ಣುವಲ್ಲ ಎಂಬುದಕ್ಕೆ ಸಾಕ್ಷಿ.</div>a k kukkilahttp://www.blogger.com/profile/04432257424497331465noreply@blogger.com0tag:blogger.com,1999:blog-2716482703415659532.post-71105386703508351522023-09-29T23:24:00.000-07:002023-09-29T23:24:16.384-07:00ನಾಲ್ಕು ಗೋಡೆಯೊಳಗಿರುವ ಅಪ್ಪ-ಅಮ್ಮನ ದೂರುಗಳು..<p><span style="background-color: white;"><br /></span></p><p></p><div class="separator" style="clear: both; text-align: center;"><a href="https://blogger.googleusercontent.com/img/b/R29vZ2xl/AVvXsEhj-_hlIFhp31L5S5DSNOwJrhVePm-w2RaZ0ZGBa6h0cRY1po5HR9-SgLUYf9ci44odoYkpl-OqkCbnS98FOna7H6WdNp5M7N7lOAXzF0w5T_sLczgoYjfuyT1yMSYWpIO2xzVkMsdUZTJPAYVDNPAHivlNJNxoEaewOZauUJJnRBjOrYWUpdY8J2jaabCT/s1138/edit%20pic.jpg" imageanchor="1" style="margin-left: 1em; margin-right: 1em;"><img border="0" data-original-height="559" data-original-width="1138" height="196" src="https://blogger.googleusercontent.com/img/b/R29vZ2xl/AVvXsEhj-_hlIFhp31L5S5DSNOwJrhVePm-w2RaZ0ZGBa6h0cRY1po5HR9-SgLUYf9ci44odoYkpl-OqkCbnS98FOna7H6WdNp5M7N7lOAXzF0w5T_sLczgoYjfuyT1yMSYWpIO2xzVkMsdUZTJPAYVDNPAHivlNJNxoEaewOZauUJJnRBjOrYWUpdY8J2jaabCT/w400-h196/edit%20pic.jpg" width="400" /></a></div><br /><span style="background-color: white;"><br /></span><p></p><p><span style="background-color: white;">ಸನ್ಮಾರ್ಗ ಸಂಪಾ</span><span style="background-color: white; color: #222222; font-family: Arial, Helvetica, sans-serif; font-size: small;">ದಕೀಯ</span></p><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">84 ವರ್ಷದ ವೃದ್ಧೆಯ ಕುರಿತಾದ ಪ್ರಕರಣ ವಾರಗಳ ಹಿಂದೆ ರಾಜ್ಯ ಹೈಕೋರ್ಟ್ ನಲ್ಲಿ ವಿಚಾರಣೆಗೆ ಬಂದಿತ್ತು. ಇಬ್ಬರು ಗಂಡು ಮಕ್ಕಳು ನಿರ್ಲಕ್ಷಿಸಿದ ಕಾರಣ ಆ ತಾಯಿ ಮಗಳ ಮನೆಯಲ್ಲಿ ಜೀವನ ಸಾಗಿಸುತ್ತಿದ್ದಾರೆ.</span><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ತನ್ನಿಬ್ಬರು ಗಂಡು ಮಕ್ಕಳ ನಿರ್ಲಕ್ಷ್ಯ ಧೋರಣೆ ಆ ತಾಯಿಯನ್ನು ತೀವ್ರವಾಗಿ ಕಾಡಿತ್ತು. ಅವರು ಮೈಸೂರು ಜಿಲ್ಲಾಧಿಕಾರಿಯವರಲ್ಲಿ ಈ ಬಗ್ಗೆ ತನ್ನ ಸಂಕಟವನ್ನೂ ತೋಡಿಕೊಂಡಿದ್ದರು. ಅವರ ನೋವಿಗೆ ಸ್ಪಂದಿಸಿದ್ದ ಜಿಲ್ಲಾಧಿಕಾರಿ, ಮಕ್ಕಳಾದ ಮಹೇಶ್ ಮತ್ತು ಗೋಪಾಲ್ ನನ್ನು ಕರೆದು ಬುದ್ಧಿವಾದ ಹೇಳಿದ್ದರು ಮತ್ತು ಕೊನೆಗೆ ಈ ತಾಯಿಗೆ ಪ್ರತಿ ತಿಂಗಳು 10 ಸಾವಿರ ರೂಪಾಯಿ ಪಾವತಿಸುವಂತೆ ಆದೇಶಿಸಿದ್ದರು. ಆದರೆ ಇದು ಮಕ್ಕಳಿಗೆ ಒಪ್ಪಿಗೆಯಾಗಿರಲಿಲ್ಲ. ಈ ಆದೇಶವನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದರು. ಸಹೋದರಿಯರ ಕುಮ್ಮಕ್ಕಿನಿಂದಲೇ ತಾಯಿ ಜೀವನಾಂಶ ಕೋರುತ್ತಿದ್ದಾರೆ ಎಂದೂ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ಈ ಆಕ್ಷೇಪವನ್ನು ತಿರಸ್ಕರಿಸಿದ ಹೈಕೋರ್ಟು, ಆ ಇಬ್ಬರು ಗಂಡು ಮಕ್ಕಳಿಗೆ ಪಾಠವನ್ನೂ ಬೋಧಿಸಿದೆ. ‘ದುಡಿಯಲು ಸಮರ್ಥನಾಗಿರುವ ವ್ಯಕ್ತಿ ತನ್ನ ಪತ್ನಿಯನ್ನು ನೋಡಿಕೊಳ್ಳಬಹುದಾದರೆ, ಅವಲಂಬಿತ ತಾಯಿಯನ್ನೇಕೆ ನೋಡಿಕೊಳ್ಳಬಾರದು’ ಎಂದೂ ಪ್ರಶ್ನಿಸಿದೆ. ‘ತಾಯಿಯ ಹೆಣ್ಣು ಮಕ್ಕಳು ಆಸ್ತಿಯಲ್ಲಿ ಪಾಲನ್ನು ಕೋರಿಲ್ಲ, ಗಂಡು ಮಕ್ಕಳು ತ್ಯಜಿಸಿರುವ ತಾಯಿಯನ್ನು ಈ ಹೆಣ್ಣು ಮಕ್ಕಳು ನೋಡಿಕೊಳ್ಳುತ್ತಿದ್ದಾರೆ. ಇಲ್ಲದಿದ್ದರೆ ಈ ತಾಯಿ ರಸ್ತೆಯಲ್ಲಿರಬೇಕಿತ್ತು’ ಎಂದೂ ಆತಂಕ ವ್ಯಕ್ತಪಡಿಸಿದೆ. ಮಾತ್ರವಲ್ಲ, ಮೈಸೂರು ಜಿಲ್ಲಾಧಿಕಾರಿ ಆದೇಶವನ್ನು ಎತ್ತಿ ಹಿಡಿದಿದೆ.</span><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಬದುಕಿನ ಸಂಧ್ಯಾ ಕಾಲದಲ್ಲಿರುವ ಮತ್ತು ಇನ್ನೊಬ್ಬರನ್ನು ಅವಲಂಬಿಸಿಕೊಂಡಿರುವ ಸುಮಾರು ಒಂದೂವರೆ ಕೋಟಿ ವೃದ್ಧರು ಸದ್ಯ ಈ ದೇಶದಲ್ಲಿದ್ದಾರೆ ಎಂದು ಅಂದಾಜಿಸಲಾಗಿದೆ. ಇವರಲ್ಲಿ 65% ಮಂದಿ ಕೂಡಾ ಬಡವರು. ತಮ್ಮದೇ ಆದ ಆದಾಯವಿಲ್ಲದೇ ಮಕ್ಕಳನ್ನೋ ಇನ್ನಿತರರನ್ನೋ ಅವಲಂಬಿಸಿದವರು. ಇವರಲ್ಲಿ ಹೆಚ್ಚಿನವರೂ ಸುಖವಾಗಿಲ್ಲ ಎಂಬುದು ಈಗಾಗಲೇ ಬಿಡುಗಡೆಗೊಂಡಿರುವ ಅಧ್ಯಯನ ವರದಿಗಳೇ ಹೇಳುತ್ತವೆ. 2019ರಲ್ಲಿ ಬಿಡುಗಡೆಯಾದ ಏಜ್ವೆಲ್ ಫೌಂಡೇಶನ್ನ ಸಮೀಕ್ಷಾ ವರದಿ ಮತ್ತು 2015ರಲ್ಲಿ ಬಿಡುಗಡೆಯಾದ ಹೆಲ್ಪ್ ಏಜ್ ಇಂಡಿಯಾದ ಸರ್ವೆ ವರದಿಗಳನ್ನು ಅಧ್ಯಯನಕ್ಕೆ ಒಳಪಡಿಸಿದರೆ ಎದೆ ನಡುಗುವ ವಿವರಗಳನ್ನು ದರ್ಶಿಸಬಹುದು.</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಹೆಲ್ಪ್ ಏಜ್ ಇಂಡಿಯಾ 12 ನಗರಗಳಲ್ಲಿ ನಡೆಸಿದ ಸರ್ವೇ ಪ್ರಕಾರ, ಬೆಂಗಳೂರು ಮತ್ತು ನಾಗಪುರದಲ್ಲಿ ಹಿರಿಯರು ಅತೀ ಹೆಚ್ಚು ನಿಂದನೆ, ಬೈಗುಳಕ್ಕೆ ಒಳಗಾಗುತ್ತಿದ್ದಾರೆ. ದೆಹಲಿ ಮತ್ತು ಕಾನ್ಪುರಗಳಲ್ಲಿ ಈ ನಿಂದನೆಯ ಪ್ರಮಾಣ ಅತೀ ಕಡಿಮೆಯಿದೆ. ಪ್ರತೀ 10ರಲ್ಲಿ 4 ಮಂದಿ ವೃದ್ಧರು ಮನೆಯಲ್ಲಿ ನಿಂದನೆಯನ್ನು ಎದುರಿಸುತ್ತಿದ್ದಾರೆ. ಸರಾಸರಿ ಪ್ರತಿ 10ರಲ್ಲಿ 3 ಮಂದಿ ಮನೆಯವರ ತೀವ್ರ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿದ್ದಾರೆ. ಹಾಗೆಯೇ ಪ್ರತಿ 10ರಲ್ಲಿ 3 ಮಂದಿ ಮನೆಯವರ ಅಗೌರವ, ಅನಾದರಕ್ಕೆ ತುತ್ತಾಗುತ್ತಿದ್ದಾರೆ. ಇದಕ್ಕಿಂತಲೂ ಘೋರವಾದುದು ಏನೆಂದರೆ, ಸರಾಸರಿ ಪ್ರತಿ 5ರಲ್ಲಿ ಇಬ್ಬರು ಪ್ರತಿದಿನ ತೀವ್ರತರದ ನಿಂದನೆ, ಬೈಗುಳಕ್ಕೆ ಒಳಗಾಗುತ್ತಿದ್ದರೆ ಪ್ರತಿ 10ರಲ್ಲಿ ಮೂವರು ಸರಾಸರಿ ವಾರಕ್ಕೊಮ್ಮೆ ತೀವ್ರ ನಿಂದನೆಗೆ ಗುರಿಯಾಗುತ್ತಿದ್ದಾರೆ. ಪ್ರತಿ 5ರಲ್ಲಿ ಒಬ್ಬರು ಸರಾಸರಿ ತಿಂಗಳಿಗೊಮ್ಮೆ ನಿಂದನೆಗೆ ತುತ್ತಾಗುತ್ತಿದ್ದಾರೆ. ಹಾಗಂತ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ವೃದ್ಧರಿಗೆ ಹೀಗೆ ತೊಂದರೆ ಕೊಡುತ್ತಿರುವವರು ಯಾರೋ ಅಪರಿಚಿತರಲ್ಲ. ಸ್ವತಃ ಮಗ, ಮಗಳು ಅಥವಾ ಸೊಸೆಯಂದಿರೇ. ಪ್ರತಿ 10ರಲ್ಲಿ 6 ಮಂದಿ ವೃದ್ಧರು ಸೊಸೆ ಮತ್ತು ಬಹುತೇಕ ಮಗನಿಂದಲೇ ನಿಂದನೆಗೆ ಒಳಗಾಗುತ್ತಿದ್ದಾರೆ. ಆದರೆ, ವೃದ್ಧರಾದ ಹೆತ್ತವರನ್ನು ಹೆಣ್ಣು ಮಕ್ಕಳು ನಿಂದಿಸಿರುವ ಪ್ರಮಾಣ ಅತ್ಯಲ್ಪ. ಬರೇ 7% ಹೆಣ್ಣು ಮಕ್ಕಳು ಮಾತ್ರ ಈ ಆರೋಪ ಹೊತ್ತಿದ್ದಾರೆ. ಆದರೆ, ಸರ್ವೇಯಲ್ಲಿ ಮಾತನಾಡಿರುವ ಯಾವ ವೃದ್ಧರೂ ಮೊಮ್ಮಕ್ಕಳ ಮೇಲೆ ಯಾವ ದೂರನ್ನೂ ಸಲ್ಲಿಸಿಲ್ಲ. ಔಷಧಿಗಳನ್ನು ತಂದು ಕೊಡದ ಮತ್ತು ಅತೀವ ಅಗತ್ಯಗಳಿಗಾಗಿಯೂ ಹಣ ನೀಡದ ಮಕ್ಕಳ ಬಗ್ಗೆ ಹೆಚ್ಚಿನ ಹಿರಿಯರು ದೂರಿಕೊಂಡಿರುವುದೂ ಸರ್ವೇಯಲ್ಲಿದೆ. ವೃದ್ಧಾಪ್ಯ ವೇತನದ ಹಣವನ್ನೂ ನುಂಗಿ ನೀರು ಕುಡಿಯುವ </span><span style="background-color: white; color: #222222; font-family: Arial, Helvetica, sans-serif; font-size: small;">ಮಕ್ಕಳೂ ಧಾರಾಳ ಇದ್ದಾರೆ.</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಬಹುಶಃ ಅಧ್ಯಯನ ವರದಿಗಳ ಬೆನ್ನು ಬಿದ್ದು ಮಾಹಿತಿಗಳನ್ನು ಕಲೆ ಹಾಕಹೊರಟರೆ ರಾಶಿ ರಾಶಿ ವಿವರಗಳು ಸಿಗಬಹುದೇನೋ. ಇಂಥ ಅಧ್ಯಯನ ವರದಿಗಳು ಅಂಕಿ-ಸಂಖ್ಯೆಗಳ ಜೊತೆಗೇ ಈ ವೃದ್ಧರೊಂದಿಗೆ ನಡೆಸಲಾದ ವೈಯಕ್ತಿಕ ಮಾತುಕತೆಗಳ ವಿವರವನ್ನೂ ಕೊಡುತ್ತದೆ. ಅವನ್ನು ಓದುವಾಗ ಹೃದಯ ಮಿಡಿಯುತ್ತದೆ. ಮಕ್ಕಳ ಮೇಲೆ ಆರೋಪವನ್ನು ಹೊರಿಸಲಾಗದ ಸಂಕಟ ಒಂದೆಡೆಯಾದರೆ, ನರಕದಂಥ ಬದುಕು ಬಾಳಲಾಗದ ದುಃಖ ಇನ್ನೊಂದೆಡೆ- ಇವೆರಡರ ನಡುವೆ ವೃದ್ಧ ಹೆತ್ತವರು ಬೇಯುತ್ತಿರುವುದನ್ನು ಇಂಥ ಸರ್ವೇಗಳು ಮನದಟ್ಟು ಮಾಡಿಸುತ್ತವೆ. ಸಾಮಾನ್ಯವಾಗಿ ಯಾವ ಹೆತ್ತವರೂ ಇತರರೆದುರು ಮಕ್ಕಳನ್ನು ದೂರುವುದಿಲ್ಲ. ಮಕ್ಕಳು ಎಷ್ಟೇ ಕೆಟ್ಟದಾಗಿ ನಡೆಸಿಕೊಂಡರೂ ಅವನ್ನು ಇತರರಲ್ಲಿ ಹೇಳುವುದರಿಂದ ಮಕ್ಕಳು ಅವಮಾನಿತರಾಗುತ್ತಾರೆ ಎಂದೇ ಭಾವಿಸಿ ಸಹಿಸಿಕೊಳ್ಳುತ್ತಾರೆ. ಆದರೆ, ಮಕ್ಕಳ ದೌರ್ಜನ್ಯ ವಿಪರೀತ ಮಟ್ಟಕ್ಕೆ ತಲುಪಿದಾಗ ಅನ್ಯ ದಾರಿಂಯಿಲ್ಲದೇ ಹೃದಯ ತೆರೆದು ಮಾತಾಡುತ್ತಾರೆ. ಯಾವುದೇ ಸರ್ವೇಯಲ್ಲಿ ವೃದ್ಧ ಹೆತ್ತವರು ತಮ್ಮ ಮಕ್ಕಳ ಬಗ್ಗೆ ದೂರಿಕೊಂಡಿದ್ದಾರೆಂದರೆ, ಅವರು ಇಂಥದ್ದೊಂದು ನರಕಮಯ ಸನ್ನಿವೇಶದ ತುತ್ತತುದಿಯಲ್ಲಿ ಬದುಕುತ್ತಿದ್ದಾರೆಂದೇ ಅರ್ಥ. ಅಂದಹಾಗೆ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ವೃದ್ಧರ ಪಾಲಿಗೆ ಅನೇಕ ವಿಷಯಗಳು ನಕಾರಾತ್ಮಕವಾಗಿವೆ. ತಮ್ಮ ಮೇಲೆ ಅನ್ಯಾಯವಾಗುತ್ತಿದೆ ಎಂದು ಹೇಳಿ ಸಾರ್ವಜನಿಕ ಗಮನ ಸೆಳೆಯಬಲ್ಲ ಸ್ಥಳದಲ್ಲಿ ಪ್ರತಿಭಟನೆ ಮಾಡುವ ಸಾಮರ್ಥ್ಯ ಅವರಿಗಿಲ್ಲ. ಇತರರ ಹಂಗಿಲ್ಲದೇ ಬದುಕುವೆ ಎಂದು ಹೇಳುವ ವಯಸ್ಸೂ ಅದಲ್ಲ. ವೃದ್ಧರು ಪರಸ್ಪರ ಸಂಪರ್ಕದಲ್ಲಿರಿಸಬಹುದಾದ ವ್ಯವಸ್ಥೆಯಾಗಲಿ, ಅಂಥ ತಂತ್ರಜ್ಞಾನಕ್ಕೆ ಹೊಂದಿಕೊಳ್ಳುವ ವಯಸ್ಸಾಗಲಿ ಅವರದಲ್ಲ. ಆದ್ದರಿಂದಲೇ, ಒಂದೇ ಫ್ಲ್ಯಾಟ್ನಲ್ಲಿದ್ದರೂ ಪರಸ್ಪರ ಅಪರಿಚಿತರಾಗಿಯೇ ಅವರು ಬದುಕುತ್ತಿರುತ್ತಾರೆ. ಹಕ್ಕುಗಳ ಬಗ್ಗೆ ಗೊತ್ತಿದ್ದರೂ ಮತ್ತು ಕಾನೂನು ಸಂರಕ್ಷಣೆಯ ಕುರಿತು ಮಾಹಿತಿ ಇದ್ದರೂ ಅವನ್ನು ಹೋರಾಡಿ ಪಡಕೊಳ್ಳುವಷ್ಟು ದೇಹತ್ರಾಣ ಅವರಲ್ಲಿರುವುದಿಲ್ಲ. ಟಿ.ವಿ. ಚಾನೆಲ್ಗಳ ಮೈಕ್ಗಳಾಗಲಿ, ಪತ್ರಕರ್ತರ ಪೆನ್ನುಗಳಾಗಲಿ ಅವರಲ್ಲಿಗೆ ತಲುಪುವುದು ಶೂನ್ಯ ಅನ್ನುವಷ್ಟು ಕಡಿಮೆ. ವೃದ್ಧರು ಹೆಚ್ಚೆಂದರೆ ಮನೆಯಿಂದ ಆಸ್ಪತ್ರೆಗೆ ಮತ್ತು ಆಸ್ಪತ್ರೆಯಿಂದ ಮನೆಗೆ ಮಾತ್ರ ಸೀಮಿತವಾಗಿರುವುದರಿಂದ ಹಾಗೂ ಮದುವೆ, ಮುಂಜಿ, ಮರಣ, ಸಭೆ-ಸಮಾರಂಭಗಳಲ್ಲಿ ಗೈರು ಹಾಜರಿರುವುದರಿಂದ ಅವರ ಬಗೆಗಿನ ಸಾರ್ವಜನಿಕ ಗಮನವೂ ಕಡಿಮೆ. ಪ್ರಸ್ತಾಪವೂ ಕಡಿಮೆ. ಅಣು ಕುಟುಂಬದ ಈ ಕಾಲದಲ್ಲಂತೂ ವೃದ್ಧ ಅಪ್ಪನನ್ನೋ ಅಮ್ಮನನ್ನೋ ಅಥವಾ ಅವರಿಬ್ಬರನ್ನೂ ಮನೆಯಲ್ಲಿ ಕೂಡಿಟ್ಟು ಮಗ-ಸೊಸೆ ದುಡಿಯಲು ಹೋಗುತ್ತಿರುವುದೇ ಹೆಚ್ಚು. ಇಂಥ ಸ್ಥಿತಿಯಲ್ಲಿ ಬೆಳಗ್ಗಿನಿಂದ ಸಂಜೆಯವರೆಗೆ ಅವರು ಏಕತಾನತೆಯಿಂದ ಬದುಕಬೇಕಾಗುತ್ತದೆ. ಅಷ್ಟಕ್ಕೂ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ತೈತೀರಿಯಾ ಉಪನಿಷತ್ನಲ್ಲಿ ಹೇಳಲಾಗಿರುವ, ಮಾತೃ ದೇವೋಭವ ಪಿತೃ ದೇವೋಭವ ಎಂಬ ಶ್ಲೋಕ ಬಹಳ ಪ್ರಸಿದ್ಧ. ಪವಿತ್ರ ಕುರ್ಆನ್ ಅಂತೂ ವೃದ್ಧ ಹೆತ್ತವರ ಬಗ್ಗೆ ಎಷ್ಟು ಕಾಳಜಿ ವ್ಯಕ್ತಪಡಿಸಿದೆ ಎಂದರೆ, ಅವರ ಬಗ್ಗೆ ‘ಛೆ’ ಎಂಬ ಭಾವ ಕೂಡ ಮಕ್ಕಳಲ್ಲಿ ವ್ಯಕ್ತವಾಗಬಾರದು ಎಂದು ಆಜ್ಞಾಪಿಸಿದೆ. ‘ಹೆತ್ತವರೇ ಮಕ್ಕಳ ಪಾಲಿನ ಸ್ವರ್ಗ ಮತ್ತು ನರಕ’ ಎಂದೂ ಇಸ್ಲಾಮ್ ಹೇಳಿದೆ. ‘ಬಾಲ್ಯದಲ್ಲಿ ಅವರು ನಮ್ಮನ್ನು ಪ್ರೀತಿ ವಾತ್ಸಲ್ಯದಿಂದ ಸಾಕಿ ಸಲಹಿದಂತೆಯೇ ನೀನು ಅವರ ಮೇಲೆ ಕರುಣೆ ತೋರು’ ಎಂದು ಮಕ್ಕಳು ಹೆತ್ತವರಿಗಾಗಿ ಸದಾ ದೇವನಲ್ಲಿ ಪ್ರಾರ್ಥಿಸಬೇಕೆಂಬ ನಿರ್ದಿಷ್ಟ ಪ್ರಾರ್ಥನಾ ಕ್ರಮವನ್ನೇ ಇಸ್ಲಾಮ್ ಕಲಿಸಿಕೊಟ್ಟಿದೆ. ‘ನಿಮ್ಮನ್ನು ನಿತ್ರಾಣದ ಮೇಲೆ ನಿತ್ರಾಣವನ್ನು ಸಹಿಸಿ ಹೆತ್ತಿದ್ದಾಳೆ’ ಎಂಬ ಪದಪ್ರಯೋಗಿಸಿಯೇ ತಾಯಿಯ ಮಹತ್ವವನ್ನು ಎತ್ತಿ ಹೇಳಿರುವ ಕುರ್ಆನ್, ‘ನಿಮ್ಮ ಯಾವುದೇ ಸೇವೆಯು ಪ್ರಸವದ ಸಮಯದಲ್ಲಿ ತಾಯಿ ಅನುಭವಿಸಿದ ನೋವಿಗೆ ಸಮನಾಗದು’ ಎಂಬ ರೀತಿಯ ಮಾರ್ಮಿಕ ಉಪದೇಶವನ್ನೂ ನೀಡಿದೆ. ಅಂದಹಾಗೆ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಮಕ್ಕಳು, ಮೊಮ್ಮಕ್ಕಳು, ಕುಟುಂಬ ಎಂದು ಸಾಮರ್ಥ್ಯವಿರುವವರೆಗೆ ದುಡಿದು ಹಾಕಿದವರನ್ನು ವೃದ್ಧಾಪ್ಯದಲ್ಲಿ ನಿರ್ಲಕ್ಷಿಸುವುದು ಸಲ್ಲದು. ಅದು ಮಹಾಪಾಪ.</span></div>a k kukkilahttp://www.blogger.com/profile/04432257424497331465noreply@blogger.com0tag:blogger.com,1999:blog-2716482703415659532.post-31146387441530183482023-09-29T02:09:00.000-07:002023-09-29T02:09:41.029-07:00ಹಿಂದೂ ಧರ್ಮದ ರಕ್ಷಣೆಗೆ ಮುಸ್ಲಿಮರನ್ನು ನಿಂದಿಸಲೇಬೇಕಾ?<p> </p><div class="separator" style="clear: both; text-align: center;"><a href="https://blogger.googleusercontent.com/img/b/R29vZ2xl/AVvXsEjKr-NZ4UcgVM1n1TfClXGZbE0PN-Mf6lK7hypiBexe5O97J7mWyx7n1xzkhhyYJnSMmsvhcOmIoGK2FH4rwBREKZnNFnG03CoNKdTiCL6fWv-jTFC4hanuT4Q9Ow_NpVGwniJKzLndVeczwM9FwSW2emAr5CApTF0TyzQpRekeQjGc8pjvlvtKDW0EXnh7/s1161/edit%20pic%20(1).jpg" imageanchor="1" style="margin-left: 1em; margin-right: 1em;"><img border="0" data-original-height="581" data-original-width="1161" height="200" src="https://blogger.googleusercontent.com/img/b/R29vZ2xl/AVvXsEjKr-NZ4UcgVM1n1TfClXGZbE0PN-Mf6lK7hypiBexe5O97J7mWyx7n1xzkhhyYJnSMmsvhcOmIoGK2FH4rwBREKZnNFnG03CoNKdTiCL6fWv-jTFC4hanuT4Q9Ow_NpVGwniJKzLndVeczwM9FwSW2emAr5CApTF0TyzQpRekeQjGc8pjvlvtKDW0EXnh7/w400-h200/edit%20pic%20(1).jpg" width="400" /></a></div><br /><p></p><p><br />ಸನ್ಮಾರ್ಗ <span style="background-color: white; color: #222222; font-family: Arial, Helvetica, sans-serif; font-size: small;">ಸಂಪಾದಕೀಯ</span></p><span style="background-color: white; color: #222222; font-family: Arial, Helvetica, sans-serif; font-size: small;">ಕುಂದಾಪುರ ಕಾಳಿ, ದುರ್ಗೆ, ಹಿಂದುತ್ವ ಭಾಷಣಗಾರ್ತಿ, ಕಾದಂಬರಿಗಾರ್ತಿ, ಚಿಂತಕಿ ಎಂಬೆಲ್ಲಾ ಬಿರುದನ್ನು ಅಂಟಿಸಿಕೊಂಡ ಮತ್ತು ಮುಸ್ಲಿಮರನ್ನು ತಿವಿಯುವುದನ್ನೇ ಹಿಂದೂ ಧರ್ಮದ ಉದ್ಧಾರವಾಗಿ ಕಂಡಿದ್ದ ಚೈತ್ರಾ ಕುಂದಾಪುರ ಎಂಬ ಯುವತಿ ದಿನ ಬೆಳಗಾಗುವುದರೊಳಗೆ ವಂಚಕಿಯಾಗಿ ಮಾರ್ಪಟ್ಟಿದ್ದಾಳೆ. ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಎದುರಿಸುತ್ತಿದ್ದಾಳೆ. ಆಕೆಯ ವಂಚನೆಯ ವಿವಿಧ ಕರಾಳ ಸುದ್ದಿಗಳು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿವೆ. ಆಕೆ ಈ ಹಿಂದೆ ಮಾಡಿರುವ ಬೆಂಕಿ ಭಾಷಣಗಳೂ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಆಕೆಯನ್ನು ಎತ್ತಿ ಮೆರೆದಾಡಿದವರು ಮತ್ತು ಹಿಂದೂ ಧರ್ಮದ ಪ್ರಚಾರಕಿ ಎಂದು ತಲೆ ಮೇಲೆ ಕೂರಿಸಿದವರೆಲ್ಲ ಗಾಢ ಮೌನಕ್ಕೆ ಜಾರಿದ್ದಾರೆ. ಆಕೆಯ ಭಾಷಣಗಳಿಂದ ಗರಿಷ್ಠ ಲಾಭ ಪಡೆದುಕೊಂಡಿರುವ ಬಿಜೆಪಿ ಈಗಾಗಲೇ ಆಕೆಯಿಂದ ಅಂತರ ಕಾಯ್ದುಕೊಂಡಿದೆ. ಆಕೆ ಯಾರೆಂದೇ ಗೊತ್ತಿಲ್ಲ ಎಂದು ಹೇಳಿ ಕೈತೊಳೆದುಕೊಂಡಿದೆ. ಆಕೆಯನ್ನು ಕರೆಸಿ ಭಾಷಣ ಮಾಡಿಸಿರುವ ಊರವರು ಇದೀಗ ಪ್ರಾಯಶ್ಚಿತ್ತ ಪೂಜೆ ಮಾಡಿಕೊಂಡದ್ದೂ ನಡೆದಿದೆ. ಮೊನ್ನೆ ಮೊನ್ನೆವರೆಗೆ ಬೃಹತ್ ವೇದಿಕೆಯನ್ನೇರಿ ದ್ವೇಷ ಭಾಷಣ ಮಾಡುತ್ತಾ ಭಾರೀ ಜನಸ್ತೋಮದಿಂದ ಚಪ್ಪಾಳೆ, ಶಿಳ್ಳೆ, ಜೈಕಾರ ಪಡೆಯುತ್ತಿದ್ದ ಯುವತಿಯೊಬ್ಬಳ ಸ್ಥಿತಿ ಇದು. </span><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಅಷ್ಟಕ್ಕೂ,</span><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಈ ಬೆಳವಣಿಗೆಯಿಂದ ಯಾರು, ಏನನ್ನು ಕಳಕೊಂಡರು? ಯಾರ ವರ್ಚಸ್ಸಿಗೆ ಹಾನಿಯಾಗಿದೆ? ಮುಖಭಂಗವಾದ ಅನುಭವ ಯಾರಿಗಾಗಿದೆ? ಚೈತ್ರ ಜಾಮೀನಿನ ಮೂಲಕ ನಾಳೆ ಬಿಡುಗಡೆಗೊಳ್ಳಬಹುದು. ಭಾಷಣದ ಬದಲು ಬೇರೆಯದೇ ಉದ್ಯೋಗವನ್ನು ನೋಡಿಕೊಳ್ಳಲೂ ಬಹುದು ಅಥವಾ ತಾನು ಸಂತ್ರಸ್ತೆ ಎಂಬ ಅವತಾರವನ್ನು ತಾಳಲೂ ಬಹುದು. ಆದರೆ, ಆಕೆಯಿಂದಾಗಿ ಹಿಂದೂ ಧರ್ಮದ ವರ್ಚಸ್ಸಿಗೆ ಆಗಿರುವ ಹಾನಿಯನ್ನು ಇಷ್ಟು ಸುಲಭದಲ್ಲಿ ನಿವಾರಿಸಿಬಿಡಲು ಸಾಧ್ಯವಿಲ್ಲ. ಆಕೆ ವೇದಿಕೆಯೇರಿ ತನ್ನನ್ನು ಹಿಂದೂ ಧರ್ಮದ ವಕ್ತಾರೆಯಂತೆ ಬಿಂಬಿಸಿಕೊಳ್ಳುತ್ತಿದ್ದಳು. ಹಿಂದೂ ಧರ್ಮದ ರಕ್ಷಣೆಗಾಗಿ ಹೋರಾಡುತ್ತಿರುವ ಕಾರ್ಯಕರ್ತೆಯಂತೆ ಆಡಿಕೊಳ್ಳುತ್ತಿದ್ದಳು. ಮುಸ್ಲಿಮರ ವಿರುದ್ಧ ಮಾಡುತ್ತಿದ್ದ ಭಾಷಣಕ್ಕೂ ಹಿಂದೂ ಧರ್ಮದ ರಕ್ಷಣೆಯ ಕವಚವನ್ನು ತೊಡಿಸುತ್ತಿದ್ದಳು. ಅಲ್ಲದೇ, ಆಕೆಗೆ ವೇದಿಕೆ ಒದಗಿಸುತ್ತಿದ್ದುದೂ ಹಿಂದುತ್ವ ಸಂಘಟನೆಗಳೇ. ಸ್ವಾಮೀಜಿಗಳು, ಧರ್ಮಪ್ರೇಮಿಗಳೆಂದು ಕರೆಸಿಕೊಳ್ಳುತ್ತಿದ್ದವರು ಹಂಚಿಕೊಳ್ಳುತ್ತಿದ್ದ ವೇದಿಕೆಗಳನ್ನೇ ಈಕೆಯೂ ಹಂಚಿಕೊಳ್ಳುತ್ತಿದ್ದಳು. ಮಾತ್ರವಲ್ಲ, ಈಕೆಯ ಭಾಷಣವನ್ನು ಖಂಡಿಸಿ ಹಿಂದೂ ಧರ್ಮದ ಸ್ವಾಮೀಜಿಗಳಾಗಲಿ, ವಿದ್ವಾಂಸರಾಗಲಿ ಬಹಿರಂಗ ಹೇಳಿಕೆ ಕೊಟ್ಟದ್ದೂ ಇಲ್ಲ. ಆದ್ದರಿಂದ ಆಕೆಯ ಮಾತುಗಳನ್ನು ಹಿಂದೂ ಧರ್ಮದ ರಕ್ಷಣೆಯ ಭಾಗವಾಗಿ ಮತ್ತು ಹಿಂದೂ ಧರ್ಮದ ಅಗತ್ಯವಾಗಿ ಜನರು ಭಾವಿಸಿಕೊಂಡಿದ್ದರೆ, ಅದು ತಪ್ಪಾಗುವುದಿಲ್ಲ. ನಿಜವಾಗಿ, ಚೈತ್ರಾಳ ವರ್ಚಸ್ಸಿಗೆ ಆಗಿರುವ ಹಾನಿಗಿಂತ ಆಕೆ ಪ್ರಚಾರ ಮಾಡುತ್ತಿದ್ದ ವಿಚಾರಧಾರೆಗೆ ಆಗಿರುವ ಹಾನಿ ಎಷ್ಟೋ ಪಟ್ಟು ದೊಡ್ಡದು. ಚೈತ್ರಾಳಿಂದಾಗಿ ಇವತ್ತು ಹಿಂದೂ ಸಮುದಾಯ ನಾಚಿಕೆಯಿಂದ ತಲೆತಗ್ಗಿಸಿದೆ. ಆಕೆಯಿಂದ ಅಂತರ ಕಾಯ್ದುಕೊಂಡು ಮಾತಾಡುತ್ತಿದೆ. </span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಅಂದಹಾಗೆ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ವಂಚನೆ ಎಂಬುದು ಈ ಸಮಾಜಕ್ಕೆ ಹೊಸತಲ್ಲ. ವಂಚನೆ ಆರೋಪ ಹೊತ್ತುಕೊಂಡವರಲ್ಲಿ ಚೈತ್ರ ಮೊಟ್ಟಮೊದಲಿಗಳೂ ಅಲ್ಲ. ಹಿಂದೂ-ಮುಸ್ಲಿಮ್-ಕ್ರೈಸ್ತ ಎಂಬ ಬೇಧ ಇಲ್ಲದೇ ವಂಚಕರು ಪ್ರತಿದಿನ ಬಂಧನಕ್ಕೀಡಾಗುತ್ತಲೂ ಇದ್ದಾರೆ. ಹಾಗಿದ್ದ ಮೇಲೂ ಚೈತ್ರಳಿಂದಾಗಿ ಒಂದು ಸಮುದಾಯ ಅವಮಾನಕ್ಕೆ ಒಳಗಾದ ಭಾವದಲ್ಲಿ ಮಾತಾಡಲು ಕಾರಣವೇನು? ಒಂದೇ ಕಾರಣ, ಆಕೆ ಧರ್ಮದ ವಕ್ತಾರೆಯಂತೆ, ರಕ್ಷಕಿಯಂತೆ ಮತ್ತು ಉದ್ಧಾರಕಿಯಂತೆ ಬಿಂಬಿಸಿಕೊಂಡದ್ದು ಮತ್ತು ಸಂಘಟನೆಗಳು ಅದಕ್ಕೆ ಪೂರಕ ವೇದಿಕೆಗಳನ್ನು ನಿರ್ಮಿಸಿಕೊಟ್ಟು ಆಕೆಯ ಮಾತುಗಳಿಗೆ ಮೌನಸಮ್ಮತಿ ನೀಡಿದ್ದು. ಇಸ್ಲಾಮ್ ಧರ್ಮವನ್ನು ಬೈಯುವುದು ಹಿಂದೂ ಧರ್ಮದ ರಕ್ಷಣೆಯಾಗಲು ಸಾಧ್ಯವಿಲ್ಲ ಎಂಬ ಬುದ್ಧಿವಾದವನ್ನು ಆಕೆಗೆ ಬಹಿರಂಗವಾಗಿ ಯಾರೂ ನೀಡಿಲ್ಲ. ಸಣ್ಣ ವಯಸ್ಸಿನ ಯುವತಿಗೆ ಹಿಂದೂ ಧರ್ಮದ ಹೆಸರಲ್ಲಿ ಅಂಥ ವೇದಿಕೆಯನ್ನು ಕೊಡಬೇಡಿ ಎಂದು ಕಾರ್ಯಕ್ರಮ ಆಯೋಜಕರಿಗೆ ಬಹಿರಂಗವಾಗಿ ತಿಳಿ ಹೇಳಿದ ಯಾವ ಸನ್ನಿವೇಶವೂ ನಡೆದಿಲ್ಲ. ಹಿಂದೂ ಧರ್ಮದ ಪಾಲನೆಯೇ ಧರ್ಮರಕ್ಷಣೆ ಎಂಬ ವಿವೇಕದ ಮಾತನ್ನೂ ಯಾರೂ ಬಹಿರಂಗವಾಗಿ ಹೇಳಲಿಲ್ಲ. ಹಾಗಂತ, ಆಂತರಿಕವಾಗಿ ಇಂಥ ಪ್ರಕ್ರಿಯೆಗಳು ನಡೆದಿರಲೂ ಬಹುದು. ಹಿಂದೂ ಧರ್ಮದ ತಜ್ಞರು ಆಕೆಗೆ ಬುದ್ಧಿಮಾತು ಹೇಳಿರಲೂಬಹುದು. ಆದರೆ, ಆಕೆಗೆ ಪದೇ ಪದೇ ವೇದಿಕೆ ಸಿಗುತ್ತಿದ್ದುದನ್ನು ನೋಡಿದರೆ ಮತ್ತು ಅಲ್ಲೆಲ್ಲಾ ಮುಸ್ಲಿಮ್ ದ್ವೇಷವನ್ನೇ ತನ್ನ ಭಾಷಣದ ವಿಷಯವನ್ನಾಗಿಸಿದ್ದನ್ನು ಪರಿಗಣಿಸಿದರೆ ಒಂದೋ ಆಕೆ ಬುದ್ಧಿಮಾತನ್ನು ತಿರಸ್ಕರಿಸಿದ್ದಾಳೆ ಅಥವಾ ಬುದ್ಧಿಮಾತನ್ನು ಯಾರೂ ಹೇಳಿಯೇ ಇಲ್ಲ ಎಂದೇ ಅಂದುಕೊಳ್ಳಬೇಕಾಗುತ್ತದೆ.</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಯಾವುದೇ ಧರ್ಮದ ಅಳಿವು ಮತ್ತು ಉಳಿವು ಆಯಾ ಧರ್ಮವನ್ನು ಅನುಸರಿಸುವವರ ಕೈಯಲ್ಲಿದೆ. ಧರ್ಮವನ್ನು ಬದ್ಧತೆಯಿಂದ ಪಾಲಿಸುವುದೇ ಆಯಾ ಧರ್ಮಕ್ಕೆ ಅನುಯಾಯಿಗಳು ಮಾಡುವ ಅತಿದೊಡ್ಡ ಸೇವೆ. ಮುಸ್ಲಿಮರನ್ನು ಬೈಯುವುದರಿಂದ ಹಿಂದೂ ಧರ್ಮದ ರಕ್ಷಣೆಯಾಗುತ್ತದೆ ಎಂಬುದು ಬರೇ ಭ್ರಮೆ. ಮುಸ್ಲಿಮರನ್ನು ಬೈಯುವ ಭಾಷಣಕಾರರಿಗೆ ಹಿಂದೂ ಧರ್ಮದೊಂದಿಗೆ ಗುರುತಿಸಿಕೊಂಡ ಸಂಘಟನೆಗಳು ವೇದಿಕೆ ನಿರ್ಮಿಸಿ ಕೊಡುವುದರಿಂದ ಹಿಂದೂಗಳ ಬಗ್ಗೆ ಮುಸ್ಲಿಮರಲ್ಲಿ ನಕಾರಾತ್ಮಕ ಭಾವನೆ ಬರಲು ಕಾರಣವಾಗಬಹುದೇ ಹೊರತು ಅದರಿಂದ ಹಿಂದೂ ಧರ್ಮಕ್ಕೆ ಸಾಮಾಜಿಕವಾಗಿ ಯಾವ ಲಾಭವೂ ಉಂಟಾಗದು. ಮುಸ್ಲಿಮರಿಗೆ ಸಂಬಂಧಿಸಿಯೂ ಇವೇ ಮಾತು ಅನ್ವಯ. ಹಿಂದೂಗಳನ್ನು ಬೈಯುವ ಯಾವುದೇ ಭಾಷಣಕಾರ ಇಸ್ಲಾಮ್ಗೆ ಹಾನಿಯನ್ನಲ್ಲದೇ ಯಾವ ಉಪಕಾರವನ್ನೂ ಮಾಡಲಾರ. ವ್ಯಕ್ತಿಯ ತಪ್ಪನ್ನು ಸಮುದಾಯದ ಮೇಲೆ ಹೊರಿಸಿ ಬೈಯುವುದರಿಂದ ಭಾಷಣವೇನೋ ಆಕರ್ಷಕವಾಗಬಹುದು. ಆದರೆ, ಅದು ಭಾಷಣಕಾರ ಪ್ರತಿನಿಧಿಸುವ ಧರ್ಮದ ಬಗ್ಗೆ ನಾಗರಿಕರಲ್ಲಿ ನಕಾರಾತ್ಮಕ ಭಾವ ಸೃಷ್ಟಿಸುತ್ತದೆ. ತಪ್ಪು ಚೈತ್ರಾಳದ್ದಾದರೂ ಹಾಲಶ್ರೀ ಸ್ವಾಮೀಜಿಗಳದ್ದಾದರೂ ವ್ಯಕ್ತಿಗತವಾಗಿ ನೋಡಬೇಕೇ ಹೊರತು ಒಂದು ಸಮುದಾಯದ್ದೋ ಧರ್ಮದ್ದೋ ಭಾಗವಾಗಿ ಅಲ್ಲ. ಆದರೆ, ಚೈತ್ರ ಇದಕ್ಕಿಂತ ಹೊರತಾಗಿದ್ದಾಳೆ. ಆಕೆ ತನ್ನ ಧರ್ಮದ ವಕ್ತಾರೆಯಂತೆ, ಧರ್ಮರಕ್ಷಕಿಯಂತೆ ಬಿಂಬಿಸಿಕೊಂಡದ್ದಷ್ಟೇ ಅಲ್ಲ, ಆಕೆಗಾಗಿ ಪದೇ ಪದೇ ವೇದಿಕೆಗಳನ್ನು ಒದಗಿಸಿದ ಸಂಘಟನೆಗಳೂ ಕೂಡಾ ಧಾರ್ಮಿಕವಾಗಿ ಗುರುತಿಸಿಕೊಂಡಿವೆ. ಪ್ರತಿ ಭಾಷಣದಲ್ಲೂ ಆಕೆ ಇಸ್ಲಾಮ್ ಮತ್ತು ಮುಸ್ಲಿಮರನ್ನು ಪ್ರಶ್ನೆಯ ಮೊನೆಯಲ್ಲಿ ನಿಲ್ಲಿಸುತ್ತಿದ್ದಾಗಲೂ ಚಪ್ಪಾಳೆ ಬೀಳುತ್ತಿತ್ತೇ ಹೊರತು ಆಕೆಗೆ ವೇದಿಕೆಗಳೇನೂ ಕಡಿಮೆಯಾಗಲಿಲ್ಲ. ಆದ್ದರಿಂದಲೇ, ಆಕೆಯ ವ್ಯಕ್ತಿಗತ ತಪ್ಪು ಒಂದು ಸಮುದಾಯವನ್ನೇ ಪ್ರಶ್ನೆಯಾಗಿ ಇರಿಯುತ್ತಿದೆ. </span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ನಿಜವಾಗಿ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಮುಸ್ಲಿಮರನ್ನು ನಿಂದಿಸಿ ಭಾಷಣ ಮಾಡುವವರಲ್ಲಿ ಚೈತ್ರ ಮೊದಲಿಗಳಲ್ಲ. ಇಂಥವರು ಅನೇಕರಿದ್ದಾರೆ. ವ್ಯಕ್ತಿಗತ ತಪ್ಪುಗಳನ್ನು ಒಂದು ಸಮುದಾಯದ ಮತ್ತು ಧರ್ಮದ ಮೇಲೆ ಹೊರಿಸಿ ಅವಮಾನಿಸುವುದನ್ನೇ ಇವರೆಲ್ಲ ಕಸುಬಾಗಿಸಿಕೊಂಡಿದ್ದಾರೆ. ಇದನ್ನೇ ಧರ್ಮರಕ್ಷಣೆ ಎಂದೂ ನಂಬಿಸುತ್ತಿದ್ದಾರೆ. ಅಂದಹಾಗೆ, ಹಿಂದೂ ಆಗಲಿ, ಮುಸ್ಲಿಮ್ ಆಗಲಿ ಅಥವಾ ಇನ್ನಾವುದೇ ಸಮುದಾಯವಾಗಲಿ ತಪ್ಪಿತಸ್ತರನ್ನು ದಂಡಿಸುವ ಅಧಿಕಾರವನ್ನು ಈ ದೇಶದಲ್ಲಿ ಪಡೆದಿಲ್ಲ. ಅದಿರುವುದು ಸರಕಾರದ ಕೈಯಲ್ಲಿ. ಆದ್ದರಿಂದ ಮುಸ್ಲಿಮ್ ವ್ಯಕ್ತಿಯ ತಪ್ಪನ್ನು ಆ ಸಮುದಾಯ ಖಂಡಿಸಬಹುದೇ ಹೊರತು ದಂಡಿಸುವುದು ಅಪರಾಧವಾಗುತ್ತದೆ. ಆದ್ದರಿಂದ, ಅಪರಾಧ ಕೃತ್ಯವೆಸಗುವ ಮುಸ್ಲಿಮ್ ವ್ಯಕ್ತಿಯನ್ನು ಮುಸ್ಲಿಮ್ ಸಮುದಾಯ ಯಾಕೆ ದಂಡಿಸುವುದಿಲ್ಲ ಎಂಬ ಪ್ರಶ್ನೆಯೊಂದನ್ನು ಎಸೆದು ಆ ಬಳಿಕ ಮುಸ್ಲಿಮ್ ಸಮುದಾಯ ಆತನ ಅಪರಾಧದ ಜೊತೆಗಿದೆ ಎಂಬ ತೀರ್ಪು ಕೊಡುತ್ತಾ ಸಮಾಜದಲ್ಲಿ ಮುಸ್ಲಿಮ್ ದ್ವೇಷವನ್ನು ಬಿತ್ತುವ ಪ್ರಯತ್ನ ಈ ಎಲ್ಲ ಭಾಷಣಕಾರರಿಂದ ಸಾಮಾನ್ಯವಾಗಿ ನಡೆಯುತ್ತಿದೆ. ವ್ಯಕ್ತಿಗತ ತಪ್ಪನ್ನೇ ಮುಸ್ಲಿಮ್ ಸಮುದಾಯವನ್ನು ನಿಂದಿಸುವುದಕ್ಕೆ ಈ ಎಲ್ಲ ದ್ವೇಷ ಭಾಷಣಕಾರರು ಬಳಸುತ್ತಿದ್ದಾರೆ. ಇದನ್ನು ಹಿಂದೂ-ಮುಸ್ಲಿಮರೆಲ್ಲರೂ ವಿರೋಧಿಸುವ ಪ್ರಕ್ರಿಯೆ ಪ್ರಾರಂಭವಾಗಬೇಕು. ದ್ವೇಷಭಾಷಣ ಮಾಡುವ ಯಾರೇ ಇರಲಿ, ತಕ್ಷಣ ಅವರನ್ನು ವೇದಿಕೆಯಿಂದ ಕೆಳಗಿಳಿಸುವ ಮತ್ತು ಮುಂದೆ ಅವರಿಗೆ ವೇದಿಕೆ ಒದಗಿಸದಿರುವ ನಿರ್ಧಾರವನ್ನು ಹಿಂದೂ-ಮುಸ್ಲಿಮರು ಕೈಗೊಳ್ಳಬೇಕು. ಹಿಂದೂ ಧರ್ಮದ ಬಗ್ಗೆ ಹಿಂದೂ ವಿದ್ವಾಂಸರು ಮಾತಾಡಲಿ. ಮುಸ್ಲಿಮರಲ್ಲೂ ಇದೇ ಬೆಳವಣಿಗೆ ನಡೆಯಲಿ. ದ್ವೇಷ ಭಾಷಣಕಾರರು ಧರ್ಮಕ್ಕೆ ಅಪಾಯಕಾರಿಗಳೇ ಹೊರತು ಧರ್ಮರಕ್ಷಕರಲ್ಲ. ಚೈತ್ರ ಎಲ್ಲರಿಗೂ ಪಾಠವಾಗಲಿ.</span></div></div>a k kukkilahttp://www.blogger.com/profile/04432257424497331465noreply@blogger.com0tag:blogger.com,1999:blog-2716482703415659532.post-91158734229400987512023-09-18T05:41:00.002-07:002023-09-18T05:41:48.373-07:00ಬೀಫ್ನಲ್ಲಿ ಗೋಮಾಂಸ ಇಲ್ಲವೇ?<p> </p><div class="separator" style="clear: both; text-align: center;"><a href="https://blogger.googleusercontent.com/img/b/R29vZ2xl/AVvXsEgQyqmTTiEdV4V348yFpwoGBNj2Ju9RtWoeeGlQaonZaCXE9jMsPLdL0-dUuj_JwzIwPGxPy-5ETmz67uJODvwtZJBMgBordkjrXKjN82xiMiviX47SKM6ZVCTLPVBf7s3VKrBixYawUrziV4RgCfcvIS_btDNfFPB2POMb7DQuqKzF352K-c1eXiIiorDI/s1138/edit%20pic.jpg" imageanchor="1" style="margin-left: 1em; margin-right: 1em;"><img border="0" data-original-height="559" data-original-width="1138" height="196" src="https://blogger.googleusercontent.com/img/b/R29vZ2xl/AVvXsEgQyqmTTiEdV4V348yFpwoGBNj2Ju9RtWoeeGlQaonZaCXE9jMsPLdL0-dUuj_JwzIwPGxPy-5ETmz67uJODvwtZJBMgBordkjrXKjN82xiMiviX47SKM6ZVCTLPVBf7s3VKrBixYawUrziV4RgCfcvIS_btDNfFPB2POMb7DQuqKzF352K-c1eXiIiorDI/w400-h196/edit%20pic.jpg" width="400" /></a></div><br /><p><br /></p><span style="background-color: white; color: #222222; font-family: Arial, Helvetica, sans-serif; font-size: small;">ಬೀಫ್ ರಫ್ತಿನಲ್ಲಿ ಭಾರತ ಜಗತ್ತಿನಲ್ಲೇ ನಾಲ್ಕನೇ ಸ್ಥಾನದಲ್ಲಿದೆ ಎಂಬ ಸುದ್ದಿ ಕಳೆದವಾರ ಬಿಡುಗಡೆಗೊಂಡ ಮರುದಿನ ನಟಿ ಐಂದ್ರಿತಾ ರೇ ಮಾಡಿದ ಟ್ವೀಟ್ಗಿ ಮಾಧ್ಯಮಗಳ ಗಮನ ಸೆಳೆದಿತ್ತು. ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ಟ್ರಕ್ಸ ನಲ್ಲಿ ಗೋಮಾಂಸ ಸಾಗಿಸಲಾಗುತ್ತಿದೆ ಎಂದು ಹೇಳಿ ವೀಡಿಯೊಂದನ್ನು ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಟ್ಯಾಗ್ ಮಾಡಿದ್ದರು. ಆದರೆ ಐಂದ್ರಿತಾ ಅವರ ಹೇಳಿಕೆಯಲ್ಲಿ ಸತ್ಯಾಂಶವಿಲ್ಲ ಎಂದು ಆ ಬಳಿಕ ಬೆಂಗಳೂರು ಡಿಸಿಪಿ ಸಿ.ಕೆ. ಬಾಬಾ ಸ್ಪಷ್ಟಪಡಿಸಿದರು. ವಾಹನದಲ್ಲಿ ಮೂಳೆಗಳು, ಕೊಂಬುಗಳು, ಚರ್ಮ ಮತ್ತು ಪ್ರಾಣಿಗಳ ಉಪಉತ್ಪನ್ನಗಳು ಪತ್ತೆಯಾಗಿದ್ದು ಅದು ಗೋವಿನದ್ದಲ್ಲ ಅಥವಾ ಗೋಮಾಂಸವಲ್ಲ ಎಂದು ವಿವರಿಸಿದ್ದರು. ಪತ್ತೆಯಾದ ಈ ತ್ಯಾಜ್ಯವು ಬಿಬಿಎಂಪಿ ಪೂರ್ವ ವಿಭಾಗದ ಕಸಾಯಿಖಾನೆಗೆ ಸಂಬಂಧಿಸಿದ್ದು ಎಂದೂ ಹೇಳಿದ್ದರು. ಈ ಸ್ಪಷ್ಟೀಕರಣದ ಬೆನ್ನಿಗೇ ಐಂದ್ರಿತಾ ರೇ ತನ್ನ ಟ್ವೀಟ್ ಅನ್ನು ಅಳಿಸಿ ಹಾಕಿದ್ದರು. ಅಂದಹಾಗೆ,</span><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಗೋಮಾಂಸ ಎಂಬ ಪದ ಕೇಳಿದ ಕೂಡಲೇ ಬೆಚ್ಚಿ ಬೀಳುವ ಒಂದು ಗುಂಪಿನ ಮುಗ್ಧ ಸದಸ್ಯೆಯೇ ಈ ಐಂದ್ರಿತಾ ರೇ ಹೊರತು ಆಕೆಯೇನೂ ಒಂಟಿಯಲ್ಲ. ಐಂದ್ರಿತಾರಂತೆ ಭಾವುಕವಾಗುವ, ಹಿಂದು-ಮುಂದು ಆಲೋಚಿಸದೇ ಮಾತಾಡುವ ಮತ್ತು ಹತ್ಯೆಗೂ ಸಿದ್ಧವಾಗುವ ದೊಡ್ಡದೊಂದು ಗುಂಪು ಈ ದೇಶದಲ್ಲಿದೆ. ಈ ಗುಂಪಿಗೆ ಗೋರಾಜಕೀಯದ ಮಾಹಿತಿಯೇ ಇರುವುದಿಲ್ಲ ಅಥವಾ ಗೊತ್ತಿರುವ ಯಾವ ಮಾಹಿತಿಯನ್ನೂ ನಂಬದಷ್ಟು ಅವು ಬುದ್ಧಿಭ್ರಮಣೆಗೆ ಒಳಗಾಗಿರುತ್ತವೆ. ಈ ಗುಂಪಿಗೆ ನೇತೃತ್ವವನ್ನು ನೀಡುವವರು ಅಷ್ಟರ ಮಟ್ಟಿಗೆ ಈ ಗುಂಪಿನ ಮೆದುಳು ತೊಳೆದಿರುತ್ತಾರೆ. ನಿಜವಾಗಿ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಐಂದ್ರಿತಾ ರೇ ಹಂಚಿಕೊಂಡ ವೀಡಿಯೋ ಮತ್ತು ಆ ಬಳಿಕ ಡಿಸಿಪಿ ಕೊಟ್ಟ ಸ್ಪಷ್ಟನೆಯಲ್ಲಿ ಕೆಲವು ಸತ್ಯಗಳಿವೆ. ಬೆಂಗಳೂರಿನಲ್ಲಿ ಕಸಾಯಿಖಾನೆಗಳಿವೆ ಎಂಬ ಸತ್ಯವೂ ಇದರಲ್ಲಿ ಒಂದು. ಈ ಕಸಾಯಿಖಾನೆಗಳು ಸಿದ್ದರಾಮಯ್ಯ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಬಾಗಿಲು ತೆರೆದಿರುವುದಲ್ಲ ಮತ್ತು ಕಸಾಯಿಖಾನೆ ಎಂಬುದು ತರಕಾರಿ ಕತ್ತರಿಸುವ ಅಂಗಡಿಯೂ ಅಲ್ಲ. ಈ ಕಸಾಯಿಖಾನೆಗಳು ಸರಕಾರದ ಅಧೀನದಲ್ಲಿವೆ ಮತ್ತು ವರ್ಷಂಪ್ರತಿ ಸರಕಾರ ಏಲಂ ಕರೆದು ಅವನ್ನು ಹಂಚುತ್ತಲೂ ಇದೆ. ರಾಜ್ಯಾದ್ಯಂತ ನೂರಕ್ಕಿಂತಲೂ ಅಧಿಕ ಅಧಿಕೃತ ಕಸಾಯಿಖಾನೆಗಳಿವೆ. ಮಾಂಸ ಮಾಡುವುದೇ ಇವುಗಳ ಉದ್ದೇಶ. ನಿಜವಾಗಿ, ಬೊಮ್ಮಾಯಿ ಸರಕಾರ ಗೋಹತ್ಯಾ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಾಗ ಐಂದ್ರಿತಾ ಪ್ರತಿನಿಧಿಸುವ ‘ಗೋಪ್ರೇಮಿ ಗುಂಪನ್ನು’ ದಾರಿತಪ್ಪಿಸುವಲ್ಲಿ ಯಶಸ್ವಿಯಾಗಿತ್ತು. ಗೋಹತ್ಯೆಯನ್ನು ನಿಷೇಧಿಸುತ್ತೇವೆ ಎಂದು ಹೇಳುತ್ತಲೇ ಗೋಮಾಂಸಕ್ಕೆ ನಿಷೇಧವಿಲ್ಲ ಎಂದೂ ಬೊಮ್ಮಾಯಿ ಸರಕಾರ ಹೇಳಿತ್ತು ಮತ್ತು ರಾಜ್ಯದ ಯಾವುದೇ ಮಾಂಸದಂಗಡಿಯಲ್ಲಿ ಗೋಮಾಂಸ ಯಥೇಚ್ಚ ಲಭ್ಯವಾಗುತ್ತಿತ್ತು. ಗೋಹತ್ಯೆಗೆ ನಿಷೇಧವಿಲ್ಲದ ಕೇರಳ ಮುಂತಾದ ರಾಜ್ಯಗಳಿಂದ ರಾಜ್ಯದೊಳಗೆ ಗೋಮಾಂಸ ಆಮದಾಗುತ್ತಿತ್ತು. ಅಷ್ಟಕ್ಕೂ, ಒಂದು ಸರಕಾರ ಗೋಹತ್ಯೆಯ ವಿರೋಧಿ ಎಂದಾದರೆ, ಗೋಮಾಂಸಕ್ಕೆ ಅವಕಾಶ ಕೊಡುವುದರ ಉದ್ದೇಶವೇನು? ತನ್ನ ರಾಜ್ಯದಲ್ಲಿ ಗೋಹತ್ಯೆಗೆ ಅವಕಾಶ ಇಲ್ಲವೆಂದ ಮೇಲೆ ಹೊರರಾಜ್ಯದಲ್ಲಿ ಹತ್ಯೆ ಮಾಡಿದ ಗೋವಿನ ಮಾಂಸವನ್ನು ತಿನ್ನುವುದಕ್ಕೆ ಅವಕಾಶ ಮಾಡಿಕೊಡುವುದೇಕೆ? ಗೋಹತ್ಯೆಯ ವಿರೋಧವು ಗೋಮಾಂಸದ ಮೇಲೆ ಪ್ರೀತಿಯಾಗಿ ಬದಲಾದುದೇಕೆ? ಒಂದುರೀತಿಯಲ್ಲಿ, </span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಬೊಮ್ಮಾಯಿ ಸರಕಾರಕ್ಕೆ ಗೋಹತ್ಯಾ ನಿಷೇಧ ಕಾಯ್ದೆ ಜಾರಿಯಾಗುವುದು ಬೇಕಾಗಿರಲಿಲ್ಲ. ಆದರೆ ತಾನು ಗೋಹತ್ಯಾ ವಿರೋಧಿ ಎಂಬುದಾಗಿ ತನ್ನ ಕಾರ್ಯಕರ್ತರನ್ನು ನಂಬಿಸಿತ್ತು. ಆ ನಂಬಿಕೆಯನ್ನು ಉಳಿಸಬೇಕಾದರೆ ಕಾಯ್ದೆ ಜಾರಿಯ ನಾಟಕ ನಡೆಯಬೇಕಿತ್ತು. ಇದೇವೇಳೆ, ಹೈನುದ್ಯಮ ಮತ್ತು ಭತ್ತ ಇತ್ಯಾದಿ ಕೃಷಿಯಲ್ಲಿ ತೊಡಗಿಸಿಕೊಂಡಿರುವ ರೈತರನ್ನು ಎದುರು ಹಾಕಿಕೊಳ್ಳುವಂತೆಯೂ ಇರಲಿಲ್ಲ. ಪೂರ್ಣ ಪ್ರಮಾಣದಲ್ಲಿ ಗೋವು ಮತ್ತು ಎತ್ತುಗಳ ಹತ್ಯೆಯನ್ನು ನಿಷೇಧಿಸುವುದೆಂದರೆ, ರೈತರ ಕತ್ತು ಹಿಸುಕಿದಂತೆ. ಗೋವು ಸಹಿತ ಜಾನುವಾರುಗಳ ಸಾಕಾಣಿಕೆ ಮತ್ತು ಮಾರಾಟ ಎರಡೂ ಧಾರ್ಮಿಕ ಶ್ರದ್ಧೆಯ ಆಚೆಗೆ ಲಾಭ-ನಷ್ಟಗಳ ಲೆಕ್ಕಾಚಾರವನ್ನೂ ಹೊಂದಿವೆ. ಪುರಾತನ ಕಾಲದಂತೆ ಹೈನುದ್ಯಮಿಯ ಯಾವುದೇ ಹಸು ಗರ್ಭ ಧರಿಸುವುದಿಲ್ಲ. ವರ್ಷದ 365 ದಿನವೂ ಹಾಲು ಹಿಂಡುವ ಬಯಕೆಯಿಂದಲೇ ಹೈನುದ್ಯಮಿ ಹಸು ಸಾಕುತ್ತಾರೆ. ಅದಕ್ಕಾಗಿಯೇ ಕೃತಕ ವಿಧಾನಗಳ ಮೂಲಕ ಗರ್ಭ ಧರಿಸುವಂತೆ ಮಾಡುತ್ತಾರೆ. ಹೆಚ್ಚೆಚ್ಚು ಹಾಲು ಕೊಡುವ ಹಸುಗಳ ತಳಿಗಳನ್ನು ತಂದು ಸಾಕಲಾಗುತ್ತದೆ. ಅಲ್ಲದೇ, ಹುಟ್ಟುವ ಗಂಡು ಕರುಗಳನ್ನು ಹೆಚ್ಚು ಸಮಯ ಹಟ್ಟಿಯಲ್ಲಿ ಇರಿಸಿಕೊಳ್ಳುವುದೂ ಇಲ್ಲ. ಹಾಲಿಗಾಗಿ ಹಸು ಸಾಕುವ ಮತ್ತು ಹೈನುದ್ಯಮವನ್ನೇ ಕಸುಬಾಗಿಸಿಕೊಂಡವರ ಹಟ್ಟಿಯಲ್ಲಿ ಹೆಣ್ಣು ಕರುಗಳೇ ಯಾಕಿವೆ ಎಂಬ ಪತ್ತೆ ಕಾರ್ಯಕ್ಕೆ ತೊಡಗಿರುವ ಯಾರಿಗೂ ಹಸು ಸಾಕಾಣಿಕೆಯ ಗಣಿತ ಅರ್ಥವಾಗುತ್ತದೆ. ಇಲ್ಲಿರುವುದು ಬರೇ ಧಾರ್ಮಿಕ ಶ್ರದ್ಧೆಯಲ್ಲ, ಪಕ್ಕಾ ಲಾಭ-ನಷ್ಟ ಲೆಕ್ಕಾಚಾರ. ಇದರಾಚೆಗೆ ಶ್ರದ್ಧಾವಂತರೂ ಇದ್ದಾರೆ. ಅವರು ವ್ಯಾಪಾರಿ ಉದ್ದೇಶದಿಂದ ಹಸು ಸಾಕುವುದೂ ಇಲ್ಲ. ಈ ಎಲ್ಲ ವಾಸ್ತವ ಬೊಮ್ಮಾಯಿ ಸರಕಾರದ ಮುಂದಿರುವುದರಿಂದಲೇ ಅದು ಗೋಹತ್ಯೆಯನ್ನು ನಿಷೇಧಿಸಿದಂತೆ ಮಾಡಿ ಗೋಮಾಂಸ ಲಭ್ಯತೆಗೆ ಮತ್ತು ಸೇವನೆಗೆ ಅವಕಾಶ ಮಾಡಿಕೊಟ್ಟಿತು. ಹಾಗಂತ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಹೀಗೆ ಮಾಡುವುದರಿಂದ ಅನಧಿಕೃತ ಹತ್ಯೆಗೆ ಅವಕಾಶವಾಗುತ್ತದೆ ಎಂಬುದು ಸರಕಾರಕ್ಕೆ ಗೊತ್ತಿರಲಿಲ್ಲ ಎಂದಲ್ಲ. ಅನಧಿಕೃತ ಹತ್ಯೆಗೆ ಬಾಗಿಲೊಂದನ್ನು ತೆರೆದಿಡುವುದರಿಂದ ಹಸು-ಎತ್ತುಗಳಿಗೆ ಬೇಡಿಕೆ ಸೃಷ್ಟಿಯಾಗುತ್ತದೆ. ತಮಗೆ ಬೇಡದ ಹಸುವನ್ನೋ ಎತ್ತುವನ್ನೋ ರೈತರು ಈ ಅನಧಿಕೃತ ವ್ಯಾಪಾರಿಗಳಿಗೆ ಮಾರಾಟ ಮಾಡುತ್ತಾರೆ. ಇದರಿಂದಾಗಿ ರೈತರು ಸರಕಾರದ ವಿರೋಧಿಗಳಾಗುವುದು ತಪ್ಪುತ್ತದೆ. ಅಲ್ಲದೇ, ಹೀಗೆ ಅನಧಿಕೃತವಾಗಿ ನಡೆಯುವ ಮಾರಾಟ-ಸಾಗಾಟದ ಅಲ್ಲೊಂದು -ಇಲ್ಲೊಂದು ಆಯ್ದ ಪ್ರಕರಣವನ್ನು ಪತ್ತೆ ಹಚ್ಚಿದಂತೆ ಮಾಡಿ, ‘ಗೋಹತ್ಯಾ ನಿಷೇಧ ಕಾಯ್ದೆಗೆ ತಾನೆಷ್ಟು ಬದ್ಧ’ ಎಂಬುದನ್ನು ತೋರಿಸಿಕೊಂಡಂತೆಯೂ ಆಗುತ್ತದೆ. ಬೊಮ್ಮಾಯಿ ಸರಕಾರ ಮಾಡಿದ್ದು ಇದನ್ನೇ. ನಿಜವಾಗಿ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಗೋಮಾಂಸ ಎಂಬ ಪದ ಕೇಳಿದ ಕೂಡಲೇ ಬೆಚ್ಚಿಬೀಳುವ ಗುಂಪನ್ನು ಸರಕಾರಗಳು ವಂಚಿಸುತ್ತಾ ಬಂದ ಅನೇಕ ಸಂಗತಿಗಳಿವೆ. 1971ರಲ್ಲಿ ಬರೇ 1,79,000 ಟನ್ ಬೀಫ್ ರಫ್ತು ಮಾಡಿದ್ದ ಭಾರತವು 2020ರಲ್ಲಿ 13,76,000 ಟನ್ ರಫ್ತು ಮಾಡಿತ್ತು. ಮೊನ್ನೆ ಮೊನ್ನೆ ಯುನೈಟೆಡ್ ಸ್ಟೇಟ್ಸ್ ಡಿಪಾರ್ಟ್ ಮೆಂಟ್ ಆಫ್ ಆಗ್ರಿಕಲ್ಚರ್ ಬಿಡುಗಡೆಗೊಳಿಸಿದ ವರದಿ ಪ್ರಕಾರ ಬೀಫ್ ರಫ್ತಿನಲ್ಲಿ ಭಾರತ ನಾಲ್ಕನೇ ಸ್ಥಾನದಲ್ಲಿದೆ. ಮೊದಲ ಸ್ಥಾನ ಬ್ರೆಝಿಲ್ಗಾದರೆ ಆಸ್ಟ್ರೇಲಿಯಾಕ್ಕೆ ಎರಡನೇ ಸ್ಥಾನ. ಅಮೇರಿಕ ನಂಬರ್ ಮೂರು. 2013-14ರಲ್ಲಿ 13,14,161 ಮೆಟ್ರಿಕ್ ಟನ್ ಬೀಫ್ ರಫ್ತು ಮಾಡಿದ್ದ ಭಾರತವು 2014-15ರಲ್ಲಿ 14,75,540 ಮೆಟ್ರಿಕ್ ಟನ್ ಬೀಫ್ ರಫ್ತು ಮಾಡಿತ್ತು. ಬೀ ಫ್ ಮಾಂಸವಿದೆಯೆಂದು ಹೇಳಿ ಉತ್ತರ ಪ್ರದೇಶದಲ್ಲಿ ಅಖ್ಲಾಕ್ ಎಂಬವರನ್ನು ಮನೆಗೆ ನುಗ್ಗಿ ಹತ್ಯೆ ನಡೆಸಲಾದ 2015-16ರಲ್ಲಿ ಭಾರತದಿಂದ ಬೀಫ್ ರಫ್ತಿಗೇನೂ ತೊಂದರೆಯಾಗಿಲ್ಲ. ಆ ವರ್ಷ 13,14,161 ಮೆಟ್ರಿಕ್ ಟನ್ನಷ್ಟು ಮಾಂಸವನ್ನು ರಫ್ತು ಮಾಡಲಾಗಿತ್ತು. ಅಲ್ಲದೇ, ಬೀಫ್ ರಫ್ತು ಮಾಡುವಲ್ಲಿ ವಿವಿಧ ರಾಜ್ಯಗಳ ಕೊಡುಗೆಯನ್ನೂ ಗಮನಿಸಬೇಕು. ಬೀಫ್ ರಫ್ತಿನಲ್ಲಿ ಅತಿದೊಡ್ಡ ಕೊಡುಗೆ ಮುಂಬೈ ನಗರಿಯದ್ದು. ಭಾರತ ರಫ್ತು ಮಾಡುವ ಒಟ್ಟು ಬೀಫ್ನ ಪೈಕಿ 39.94% ಮಾಂಸವನ್ನು ಮುಂಬೈ ಒದಗಿಸುತ್ತದೆ. ಬಳಿಕದ ಸ್ಥಾನ ದೆಹಲಿ, ಉತ್ತರ ಪ್ರದೇಶದ ಅಲೀಘರ್, ಗಾಝಿಯಾಬಾದ್, ಆಗ್ರಾ ಇತ್ಯಾದಿ ನಗರಗಳಿಗೆ ಸಲ್ಲುತ್ತದೆ. ಆದರೆ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಗೋಹತ್ಯೆ ನಿಷೇಧ ಎಂಬ ಘೋಷಣೆಯಿಂದ ರೋಮಾಂಚಿತವಾಗುವ ಮತ್ತು ಬೀಫ್ ರಫ್ತಿನಲ್ಲಿ ಭಾರತ ಮುಂಚೂಣಿಯಲ್ಲಿದೆ ಎಂಬ ಸುದ್ದಿಯನ್ನು ಸುಳ್ಳೆಂದೋ ಅಥವಾ ಅದರಲ್ಲಿ ಗೋಮಾಂಸವೇ ಇಲ್ಲ ಎಂದೋ ನಂಬುತ್ತಾ ಬದುಕುತ್ತಿರುವ ಗುಂಪಿಗೆ ತಾವು ರಾಜಕೀಯದ ದಾಳ ಎಂಬುದು ಗೊತ್ತೇ ಇಲ್ಲ ಅಥವಾ ಅವರ ಮೆದುಳನ್ನು ಅಷ್ಟರ ಮಟ್ಟಿಗೆ ತೊಳೆದು ಬಿಡುವಲ್ಲಿ ಅವರ ನಾಯಕರು ಯಶಸ್ವಿಯಾಗಿದ್ದಾರೆ. ಮಾತ್ರವಲ್ಲ, ಮೋದಿ ಸರಕಾರವು ಎಮ್ಮೆ, ಕೋಣ ಇತ್ಯಾದಿ ಪ್ರಾಣಿಗಳ ಮಾಂಸವನ್ನಷ್ಟೇ ರಫ್ತು ಮಾಡುತ್ತಿದ್ದು ಆ ಬೀಫ್ನಲ್ಲಿ ಗೋಮಾಂಸ ಸೇರಿಲ್ಲ ಎಂದೂ ನಂಬಿಸುತ್ತಿದ್ದಾರೆ. ಒಂದುವೇಳೆ, ಭಾರತದಿಂದ ರಫ್ತು ಮಾಡುವ ಬೀಫ್ನಲ್ಲಿ ಗೋಮಾಂಸ ಇಲ್ಲ ಎಂಬುದೇ ನಿಜವಾಗಿದ್ದರೆ ಈ ಹಿಂದಿನ ಕಾಂಗ್ರೆಸ್ ಸರಕಾರಕ್ಕೂ ಇದೇ ಮಾತು ಅನ್ವಯವಾಗಬೇಕಾಗುತ್ತದೆ. ಆಗಲೂ ಭಾರತದಿಂದ ರಫ್ತಾಗುತ್ತಿದ್ದ ಮಾಂಸಕ್ಕೆ ಬೀಫ್ ಎಂದೇ ಹೆಸರಿತ್ತು. ಈಗಲೂ ಅದೇ ಹೆಸರಿದೆ. ಆದರೆ, ಈ ಹಿಂದಿನ ಸರಕಾರ ರಫ್ತು ಮಾಡುತ್ತಿದ್ದ ಬೀಫ್ಗೆ ಗೋಮಾಂಸ ಎಂಬ ವ್ಯಾಖ್ಯಾನ ಕೊಟ್ಟಿದ್ದ ಇದೇ ಮಂದಿ ಇದೀಗ ಈಗಿನ ಬೀಫ್ಗೆ ಎಮ್ಮೆ-ಕೋಣ, ಎತ್ತು ಎಂದೆಲ್ಲ ಹೇಳುವುದಾದರೆ ಅದನ್ನು ಕಾಪಟ್ಯ, ದಗಲುಬಾಜಿತನ ಎಂದೇ ಹೇಳಬೇಕಾಗುತ್ತದೆ. ನಿಜವಾಗಿ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಪ್ರಧಾನಿ ನರೇಂದ್ರ ಮೋದಿಯವರ ಗಮನಕ್ಕೆ ನಟಿ ಐಂದ್ರಿತಾ ರೇ ತಂದ ವೀಡಿಯೋ ಈ ದೇಶದ ಮುಗ್ಧ ಗುಂಪೊಂದರ ಪ್ರತೀಕದಂತಿತ್ತು.</span></div>a k kukkilahttp://www.blogger.com/profile/04432257424497331465noreply@blogger.com0tag:blogger.com,1999:blog-2716482703415659532.post-36934841888105896192023-09-18T05:07:00.000-07:002023-09-18T05:07:08.027-07:00 ಜಿಹಾದ್ಗೆ ಸಿದ್ಧವಾಗಬೇಕಾದ ಮುಸ್ಲಿಮ್ ಸಮುದಾಯ<div class="separator" style="clear: both; text-align: center;"><a href="https://blogger.googleusercontent.com/img/b/R29vZ2xl/AVvXsEgzwcYBsLsRa83Yn-r-LxXKjCSluS8nHsrMRWoOIQxp9C38CYFM3HsuVH07kA4dn-HOjOnSL1HFX4LGsrqAPFB2AMWY0o-2OVNTGzxe-jgI2kBoZ6Sd2EYYW1YFNYJMtIB40B-U_6GBZl3bFf1ULFy2z0T0NOIaDs9_90s_trQWMK6HYAA1DonQqOfV9JiL/s1138/edit%20pic.jpg" imageanchor="1" style="margin-left: 1em; margin-right: 1em;"><img border="0" data-original-height="559" data-original-width="1138" height="196" src="https://blogger.googleusercontent.com/img/b/R29vZ2xl/AVvXsEgzwcYBsLsRa83Yn-r-LxXKjCSluS8nHsrMRWoOIQxp9C38CYFM3HsuVH07kA4dn-HOjOnSL1HFX4LGsrqAPFB2AMWY0o-2OVNTGzxe-jgI2kBoZ6Sd2EYYW1YFNYJMtIB40B-U_6GBZl3bFf1ULFy2z0T0NOIaDs9_90s_trQWMK6HYAA1DonQqOfV9JiL/w400-h196/edit%20pic.jpg" width="400" /></a></div><br /><p><br /></p><span style="background-color: white; color: #222222; font-family: Arial, Helvetica, sans-serif; font-size: small;"><div><br /></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div>2021 ಸೆಪ್ಟೆಂಬರ್ನಲ್ಲಿ ಅದಾನಿ ಮಾಲಕತ್ವದ ಗುಜರಾತ್ನ ಮುಂದ್ರಾ ನಿಲ್ದಾಣದಲ್ಲಿ ಮೂರು ಸಾವಿರ ಕಿಲೋ ಗ್ರಾಮ್ ಹೆರಾಯಿನನ್ನು ವಶಪಡಿಸಿಕೊಳ್ಳಲಾಯಿತು. ಇದರ ಬೆಲೆ 20 ಸಾವಿರ ಕೋಟಿ ರೂಪಾಯಿ. 2022 ಮೇಯಲ್ಲಿ 125 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಆಂಧ್ರಪ್ರದೇಶದ ಶಮ್ಶಾದ್ನಲ್ಲಿರುವ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಳ್ಳಲಾಯಿತು. 2022 ಜುಲೈಯಲ್ಲಿ ಗುಜರಾತ್ನ ಮುಂದ್ರಾ ನಿಲ್ದಾಣ ಮತ್ತೆ ಸುದ್ದಿಯ ಕೇಂದ್ರವಾಯಿತು. 376 ಕೋಟಿ ರೂ ಪಾಯಿಯ ಹೆರಾಯಿನನ್ನು ವಶಪಡಿಸಿಕೊಳ್ಳಲಾಯಿತು. 2023 ಜೂನ್ನಲ್ಲಂತೂ ದೇಶವೇ ಬೆಚ್ಚಿ ಬೀಳುವ ಆಘಾತಕಾರಿ ಸುದ್ದಿ ಹೊರಬಿತ್ತು. ಕೇರಳದಲ್ಲಿ 25 ಸಾವಿರ ಕೋಟಿ ರೂಪಾಯಿ ಮೊತ್ತದ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ ಅನ್ನುವುದೇ ಈ ಮಾಹಿತಿ. ಬೋಟ್ನಲ್ಲಿ ಈ ಮಾದಕ ವಸ್ತುವನ್ನು ಸಾಗಿಸಲಾಗುತ್ತಿತ್ತು. ಅಷ್ಟಕ್ಕೂ,</span><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಈ ಭಾರೀ ಪ್ರಮಾಣದ ಮಾದಕ ವಸ್ತುಗಳು ಸಾಗುವುದಾದರೂ ಎಲ್ಲಿಗೆ? ಇದರ ಗ್ರಾಹಕರು ಯಾರು? ಮಾರಾಟಗಾರರು ಯಾರು ಎಂಬೆಲ್ಲಾ ಪ್ರಶ್ನೆಗಳೊಂದಿಗೆ ಪತ್ತೆ ಕಾರ್ಯಕ್ಕೆ ತೊಡಗಿದರೆ ಬೆಚ್ಚಿ ಬೀಳಿಸುವ ಮಾಹಿತಿಗಳು ಟನ್ನುಗಟ್ಟಲೆ ಸಿಗುತ್ತವೆ. ಕಳೆದವಾರ ಜಮ್ಮು- ಕಾಶ್ಮೀರದ ಡಿಜಿಪಿ ದಿಲ್ಬಾಗ್ ಸಿಂಗ್ ಅವರು ಪತ್ರಿಕಾಗೋಷ್ಠಿ ಕರೆದಿದ್ದರು. ಕಾಶ್ಮೀರದ ನಿಜ ಸಮಸ್ಯೆ ಉಗ್ರವಾದವಲ್ಲ, ಮಾದಕ ಪದಾರ್ಥಗಳು ಎಂದೂ ಅವರು ಹೇಳಿದರು. 2019ರಿಂದ 2022ರ ನಡುವೆ ಕಾಶ್ಮೀರದಲ್ಲಿ ಹೆರಾಯಿನ್ ಪತ್ತೆಯಲ್ಲಿ 100% ಹೆಚ್ಚಳವಾಗಿದೆ, ಎಫ್ಐಆರ್ನಲ್ಲಿ 60% ಹೆಚ್ಚಳವಾಗಿದೆ ಎಂದೂ ಹೇಳಿದರು. ಕಾಕತಾಳೀಯವೆಂಬಂತೆ ದ ಕ ಜಿಲ್ಲೆಯ ಮಂಗಳೂರು ನಗರ ಪೊಲೀಸ್ ಕಮೀಶನರ್ ಕುಲದೀಪ್ ಕುಮಾರ್ ಜೈನ್ ಕೂಡಾ ಇದೇ ಸಂದರ್ಭದಲ್ಲಿ ಪತ್ರಿಕಾಗೋಷ್ಠಿ ಕರೆದು, ಜಿಲ್ಲೆಯು ಹೇಗೆ ಮಾದಕ ಪದಾರ್ಥಗಳ ಅಡ್ಡೆಯಾಗುತ್ತಿದೆ ಎಂಬ ಮಾಹಿತಿಯನ್ನು ಬಿಚ್ಚಿಟ್ಟರು. 2023ರ ಜನವರಿಯಿಂದ ಡ್ರಗ್ಸ್ ಗೆ ಸಂಬಂಧಿಸಿ 243 ಪ್ರಕರಣಗಳು ದಾಖಲಾಗಿದ್ದು, 299 ಮಂದಿಯ ಮೇಲೆ ಕೇಸು ದಾಖಲಾಗಿದೆ. 1 ಕೋಟಿ ರೂಪಾಯಿ ಮೊತ್ತದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ, 106 ಡ್ರಗ್ಸ್ ಮಾರಾಟಗಾರರನ್ನು ಬಂಧಿಸಲಾಗಿದೆ ಎಂಬೆಲ್ಲಾ ಮಾಹಿತಿಯನ್ನು ಹಂಚಿಕೊಂಡರು. ನಿಜವಾಗಿ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ನಾಲ್ಕು ಬಂದೂಕು, ಹತ್ತು ಜಿಲೆಟಿನ್ ಕಡ್ಡಿಗಳು, 6 ಚೂರಿ, 3 ಮೊಬೈಲ್ ಮತ್ತು ಒಂದು ನಕಾಶೆಯನ್ನು ಪೊಲೀಸರು ವಶ ಪಡಿಸಿಕೊಂಡರೆ ಅದರ ಸುತ್ತ ದಿನವಿಡೀ ಚರ್ಚೆ ನಡೆಸುವ ನಮ್ಮ ಪತ್ರಿಕೆ ಮತ್ತು ಟಿ.ವಿ. ಮಾಧ್ಯಮಗಳು ಸಾವಿರಾರು ಕೋಟಿ ರೂ ಪಾಯಿ ಮೊತ್ತದ ಮಾದಕ ವಸ್ತುಗಳು ವಶವಾದುದನ್ನು ಚರ್ಚೆಗೆ ಅನರ್ಹ ವಿಷಯವೆಂಬಂತೆ ನಿರ್ಲಕ್ಷಿಸಿ ಬಿಡುತ್ತವೆ. ಒಂದುರೀತಿಯಲ್ಲಿ, ಬಾಂಬ್ಲೂ ಗಿಂತಲೂ ಈ ಮಾದಕ ವಸ್ತು ಅಪಾಯಕಾರಿ. ಅದು ಯುವ ಸಮೂಹವನ್ನು ಸಂಪೂರ್ಣ ಅನುತ್ಪಾದಕವಾಗಿ ಮಾರ್ಪಡಿಸಿ ಬಿಡುತ್ತದೆ. ಹೆತ್ತವರನ್ನೇ ಹತ್ಯೆ ಮಾಡುವುದಕ್ಕೂ ಹೇಸದಂಥ ಮಕ್ಕಳನ್ನು ತಯಾರಿಸುತ್ತದೆ. ಯಾವುದೇ ವಿಧ್ವಂಸಕ ಕೃತ್ಯ ನಡೆಸುವುದಕ್ಕೆ ಮತ್ತು ಹತ್ಯೆ, ಅನ್ಯಾಯ ಎಸಗುವುದಕ್ಕೆ ಇಂಥವರು ಸುಲಭದಲ್ಲಿ ಬಳಕೆಯಾಗುತ್ತಾರೆ. ಒಂದು ಮನೆಯಲ್ಲಿ ಓರ್ವ ವ್ಯಕ್ತಿ ಮಾದಕ ವಸ್ತು ಬಳಕೆದಾರನಿದ್ದಾನೆಂದರೆ ಆ ಮನೆಯ ನೆಮ್ಮದಿ ಮಾತ್ರವಲ್ಲ, ಆ ಮನೆಯ ಪರಿಸರದ ಮನೆಗಳ ನೆಮ್ಮದಿಯೂ ಕೆಟ್ಟು ಹೋಗುತ್ತದೆ. ಆತ ತನ್ನ ಅಕ್ಕ-ಪಕ್ಕದ ಮನೆಯ ಯುವಕರನ್ನೂ ಇದರ ದಾಸರನ್ನಾಗಿ ಮಾಡುತ್ತಾನೆ. ಆತನ ಇಚ್ಛೆಗೆ ಸ್ಪಂದಿಸದಿದ್ದರೆ ಹತ್ಯೆ ನಡೆಸುವುದಕ್ಕೂ ಮುಂದಾಗಬಹುದು.</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಯಾವ ಜವಾಬ್ದಾರಿಯನ್ನೂ ವಹಿಸಿಕೊಳ್ಳದ ಮತ್ತು ಸದಾ ಅಮಲಿನಲ್ಲೇ ತೇಲಾಡುವ ಒಂದು ನಿರುಪಯುಕ್ತ ಯುವ ತಲೆಮಾರನ್ನು ಈ ಮಾದಕ ವಸ್ತುಗಳು ನಿರ್ಮಿಸುತ್ತವೆ. ಕಾಶ್ಮೀರದಿಂದ ದಕ್ಷಿಣ ಭಾರತದ ಕರಾವಳಿ ಭಾಗದ ವರೆಗೆ ಸದ್ಯ ಈ ಅಪಾಯಕಾರಿ ಸ್ಥಿತಿ ಇದೆ. ಇದನ್ನು ಮಟ್ಟ ಹಾಕದಿದ್ದರೆ ಅದರ ಪರಿಣಾಮವನ್ನು ಮುಂದೆ ಪ್ರತಿ ಮನೆಯೂ ಎದುರಿಸಬೇಕಾಗಬಹುದು. ಈಗಾಗಲೇ ಕಾಶ್ಮೀರ ಈ ನಿಟ್ಟಿನಲ್ಲಿ ಪ್ರಕ್ರಿಯೆ ಆರಂಭಿಸಿದೆ. ಕಾಶ್ಮೀರದ ಮಸೀದಿಯಿಂದ ಶಾಲೆಯ ವರೆಗೆ ಜನಜಾಗೃತಿ ಅಭಿಯಾನ ಪ್ರಾರಂಭವಾಗಿದೆ. ಧಾರ್ಮಿಕ ಮುಖಂಡರು, ಮೌಲಾನಾರು ಮತ್ತು ಶಿಕ್ಷಕರು ಈಗಾಗಲೇ ಡ್ರಗ್ಸ್ ವಿರುದ್ಧ ಜಿಹಾದ್ ಘೋಷಿಸಿದ್ದಾರೆ. 2023ರಲ್ಲಿ ಈವರೆಗೆ 10 ಲಕ್ಷ ಮಂದಿ ಕಾಶ್ಮೀರಿಗಳು ಡ್ರಗ್ಸ್ ಮಾಯಾಜಾಲಕ್ಕೆ ಒಳಗಾಗಿದ್ದಾರೆ ಎಂಬ ಮಾಹಿತಿಯು ಪ್ರತಿ ಮನೆ ಮತ್ತು ಮಸೀದಿಗಳ ನಿದ್ದೆಗೆಡಿಸಿದೆ. ಅಲ್ಲಿನ ಮುಗಮ್ ಇಮಾಂಬರ ಎಂಬ ಸಂಘಟನೆಯು ಮನೆ ಮನೆ ಅಭಿಯಾನಕ್ಕೆ ಇಳಿದಿದೆ. ಶಾಲೆ ಮತ್ತು ಕಾಲೇಜುಗಳಲ್ಲಿ ಸ್ಕ್ರೀನ್ ಟೆಸ್ಟ್ ಪ್ರಾರಂಭಿಸಲಾಗಿದೆ. ಅಂದಹಾಗೆ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">90%ಕ್ಕಿಂತಲೂ ಅಧಿಕ ಮುಸ್ಲಿಮರೇ ಇರುವ ನಾಡೊಂದು ಉಮ್ಮುಲ್ ಖಬಾಯಿಸ್ ಅಥವಾ ಕೆಡುಕುಗಳ ಮಾತೆ ಎಂದು ಇಸ್ಲಾಮ್ ಗುರುತಿಸಿರುವ ಅಮಲು ಪದಾರ್ಥಗಳಿಗೆ ಬಲಿಯಾಗಿರುವುದು ನಿಜಕ್ಕೂ ಆಘಾತಕಾರಿ. ದಕ್ಷಿಣ ಕನ್ನಡ ಜಿಲ್ಲೆಯ ಪರಿಸ್ಥಿತಿಯೂ ಇದಕ್ಕಿಂತ ಭಾರೀ ಭಿನ್ನವೇನೂ ಇಲ್ಲ. ಇಲ್ಲಿನ ಮಾದಕ ವಸ್ತು ಮಾರಾಟಗಾರರು ಮತ್ತು ಸೇವಿಸುವವರಲ್ಲಿ ದೊಡ್ಡದೊಂದು ಸಂಖ್ಯೆ ಮುಸ್ಲಿಮರದ್ದಾಗಿದೆ. ಇದು ಕಹಿ ಸುದ್ದಿಯಾದರೂ ಜೀರ್ಣಿಸಿಕೊಳ್ಳಬೇಕಾಗಿದೆ. ವಾಸ್ತವವನ್ನು ಒಪ್ಪಿಕೊಳ್ಳದ ಹೊರತು ಪರಿಹಾರ ಸಾಧ್ಯವಿಲ್ಲ. ಮುಸ್ಲಿಮ್ ಸಮುದಾಯದ ಯುವ ಪೀಳಿಗೆಯು ಈ ಕೆಡುಕುಗಳ ಮಾತೆಯನ್ನು ಅಪ್ಪಿಕೊಳ್ಳುತ್ತಿರುವುದಕ್ಕೆ ಕಾರಣಗಳೇನು? ಅವರನ್ನು ಈ ಅಮಲು ಜಗತ್ತಿನೊಳಗೆ ವ್ಯವಸ್ಥಿತವಾಗಿ ತಳ್ಳಲಾಗುತ್ತಿದೆಯೇ? ಬಾಹ್ಯ ಸಂಚಿನ ಪರಿಣಾಮದಿಂದಾಗಿ ಅವರು ತಮಗರಿವಿಲ್ಲದಂತೆಯೇ ಮಾದಕ ವಸ್ತುಗಳತ್ತ ಆಕರ್ಷಿತರಾಗುತ್ತಿದ್ದಾರೆಯೇ? ಅಥವಾ ಸಾಮಾಜಿಕ, ಕೌಟುಂಬಿಕ ಸಮಸ್ಯೆಗಳು ಅವರನ್ನು ಈ ಅಮಲು ಸೇವಕರನ್ನಾಗಿ ಮಾರ್ಪಡಿಸುತ್ತಿದೆಯೇ? ಅಥವಾ ಇದರಾಚೆಗೆ ಬೇರೇನಾದರೂ ಕಾರಣಗಳು ಇವೆಯೇ? ಇವು ಏನೇ ಇದ್ದರೂ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಮುಸ್ಲಿಮ್ ಸಮುದಾಯ ತುರ್ತಾಗಿ ಗಮನ ಹರಿಸಬೇಕಾದ ಸಂದರ್ಭ ಇದು. ಸಮುದಾಯದ ಯಾವನೇ ವ್ಯಕ್ತಿ ಯಾವುದಾದರೊಂದು ಮಸೀದಿಯ ಜೊತೆಗೇ ಗುರುತಿಸಿಕೊಂಡೇ ಇರುತ್ತಾನೆ. ಇಂಥದ್ದೊಂದು ವ್ಯವಸ್ಥೆ ಇನ್ನಾವ ಸಮುದಾಯದಲ್ಲೂ ಇಲ್ಲ. ಪ್ರತಿ ಮಸೀದಿಯೂ ಮನಸ್ಸು ಮಾಡಿದರೆ ಮತ್ತು ಒಂದು ಮಸೀದಿಯು ಇನ್ನೊಂದು ಮಸೀದಿಯೊಂದಿಗೆ ಸೇರಿಕೊಂಡು ಕಾರ್ಯಪ್ರವೃತ್ತವಾದರೆ ಯುವ ಸಮೂಹವನ್ನು ಅಪಾಯದಿಂದ ರಕ್ಷಿಸುವುದಕ್ಕೆ ಸಾಧ್ಯವಿದೆ. ಮಾದಕ ವಸ್ತುಗಳ ವಿರುದ್ಧ </span><span style="background-color: white; color: #222222; font-family: Arial, Helvetica, sans-serif; font-size: small;">ಮಸೀದಿ ಕಮಿಟಿ </span><span style="background-color: white; color: #222222; font-family: Arial, Helvetica, sans-serif; font-size: small;">ಜಿಹಾದ್ ಘೋಷಿಸಬೇಕು. ತನ್ನ ಮಸೀದಿ ವ್ಯಾಪ್ತಿಯಲ್ಲಿ ಮಾದಕ ವಸ್ತು ವಿರೋಧಿ ಅಭಿಯಾನ ಕೈಗೊಳ್ಳಬೇಕು. ಶುಕ್ರವಾರದ ಜುಮಾದಲ್ಲಿ ಮತ್ತು ಇನ್ನಿತರ ಸಂದರ್ಭಗಳಲ್ಲಿ ಮಾದಕ ವಸ್ತುವಿನ ವಿರುದ್ಧ ಜನಜಾಗೃತಿ ಮೂಡಿಸಬೇಕು. ಮದ್ಯ ಮತ್ತು ಮಾದಕ ಪದಾರ್ಥಗಳ ಅಪಾಯದ ಕುರಿತು ಮದ್ರಸ ವಿದ್ಯಾರ್ಥಿಗಳಿಗೆ ನಿರಂತರ ತಿಳುವಳಿಕೆ ನೀಡಬೇಕು. ಮಸೀದಿ ಕಮಿಟಿಯು ಈ ವಿಷಯಗಳಿಗೆ ಟಾಸ್ಕ್ ಫೋರ್ಸ್ ತಂಡವನ್ನು ರಚಿಸಿ ತನ್ನ ವ್ಯಾಪ್ತಿಯ ಪ್ರತಿ ಮನೆಗೂ ಆ ತಂಡ ಭೇಟಿ ಕೊಡುವ ಮತ್ತು ಮನೆಯ ಪರಿಸ್ಥಿತಿಯನ್ನು ತಿಳಿಯುವ ಪ್ರಯತ್ನಕ್ಕಿಳಿಯಬೇಕು. ತಮ್ಮ ಮಸೀದಿ ವ್ಯಾಪ್ತಿಯೊಳಗೆ ಮಾದಕ ಪದಾರ್ಥಗಳ ಮಾರಾಟ ಜಾಲ ಸಕ್ರಿಯವಾಗಿದ್ದರೆ ಪೊಲೀಸರಿಗೆ ಮಾಹಿತಿ ಕೊಡುವಂತಾಗಬೇಕು. ಅಂದಹಾಗೆ,</span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಈಗಾಗಲೇ ಮಾದಕ ವಸ್ತು ವಿರೋಧಿ ಅಭಿಯಾನ ಆರಂಭವಾಗಿದೆ. ಇದು ದೀರ್ಘಕಾಲೀನ ಜಿಹಾದ್. ವರದಕ್ಷಿಣೆಯ ವಿರುದ್ಧ ಯಶಸ್ವಿ ಜಿಹಾದ್ ನಡೆಸಿದ ಅನುಭವವೂ ಕರಾವಳಿ ಪ್ರದೇಶದ ಮುಸ್ಲಿಮ್ ಸಮುದಾಯಕ್ಕಿದೆ. ಈ ಯಶಸ್ಸು ಒಂದೆರಡು ತಿಂಗಳುಗಳಲ್ಲಿ ಸಾಧ್ಯವಾದುದಲ್ಲ. ಭಾಷಣ ವೇದಿಕೆಯಿಂದ ಹಿಡಿದು ಸಾಂಸ್ಕೃತಿಕ ವೇದಿಕೆಗಳ ವರೆಗೆ ಅಭೂತ ಪೂರ್ವ ಹೋರಾಟವೊಂದನ್ನು ಈ ವರದಕ್ಷಿಣೆಯ ವಿರುದ್ಧ ಕರಾವಳಿ ಭಾಗದ ಮುಸ್ಲಿಮ್ ಸಮು ದಾಯ ಸಾರಿತ್ತು. ಲೇಖನ, ಕವನ, ಹಾಡು, ನಾಟಕ, ಜಾಥಾ, ಕರಪತ್ರ, ಶುಕ್ರವಾರದ ಜುಮಾ ಖುತ್ಬಾ... ಹೀಗೆ ಸರ್ವ ಮಾಧ್ಯಮವನ್ನೂ ಬಳಸಿ ಸಮುದಾಯ ಸಾರಿದ ಹೋರಾಟದಿಂದ ವರದಕ್ಷಿಣೆಯು ಸದ್ಯ ಹಿನ್ನೆಲೆಗೆ ಸರಿದಿದೆ. ನಾಚಿಕೆ ಮುನ್ನೆಲೆಗೆ ಬಂದಿದೆ. ವರದಕ್ಷಿಣೆ ವಿರೋಧಿ ಕಾನೂನಿನಿಂದ ಮಾಡಲಾಗದ ಬೃಹತ್ ಬದಲಾವಣೆಯೊಂದನ್ನು ಸಾಮುದಾಯಿಕ ಜಾಗೃತಿ ಕಾರ್ಯಕ್ರಮದಿಂದ ಮಾಡಲು ಸಮುದಾಯಕ್ಕೆ ಸಾಧ್ಯವಾಗಿದೆ. ಮದ್ಯ ಮತ್ತು ಮಾದಕ ವಸ್ತುಗಳ ವಿರುದ್ಧವೂ ಇಂಥದ್ದೇ ಸಂಘಟಿತ ಸಮರವೊಂದು ನಡೆಯಲೇಬೇಕಾಗಿದೆ. ಮಸೀ ದಿಗಳು, ಸಂಘಟನೆಗಳು, ಲೇಖಕರು, ಸಂಸ್ಕೃತಿ ಚಿಂತಕರು ಸಹಿತ ಸರ್ವರೂ ಪ್ರಯತ್ನಿಸಿದರೆ ಮತ್ತು ವಿವಿಧ ಸಂಘಟನೆಗಳು ಸಕ್ರಿಯವಾದರೆ ಕೆಡುಕುಗಳ ಮಾತೆಗೆ ಯುವ ತಲೆಮಾರು ಆಕರ್ಷಿತವಾಗುವುದನ್ನು ತಡೆಯುವುದಕ್ಕೆ ಖಂಡಿತ ಸಾಧ್ಯವಿದೆ.</span><br style="background-color: white; color: #222222; font-family: Arial, Helvetica, sans-serif; font-size: small;" /></div>a k kukkilahttp://www.blogger.com/profile/04432257424497331465noreply@blogger.com0tag:blogger.com,1999:blog-2716482703415659532.post-20906825295930304882023-09-05T00:54:00.000-07:002023-09-05T00:54:17.216-07:00ಚಂದ್ರಯಾನ: ಪ್ರತಿ ಮುಸ್ಲಿಮ್ ಮನೆಯಲ್ಲೂ ಚರ್ಚಾ ವಿಷಯವಾಗಲಿ<p><br /></p><div class="separator" style="clear: both; text-align: center;"><a href="https://blogger.googleusercontent.com/img/b/R29vZ2xl/AVvXsEg9g9IAc8VepY7sASivYIf60YU9RNE31LW7PpoC1Bj8ekkkp4TQxyCOAYgQrceH6vuJQj60VMR8V5QIAtLH3glUs2jc29k7NvDCx6ZtZjqm5mw2o5MiYuv8MqTIKLVnjTxksXnag4CprxrZIvV6tH3aafAsYgvIlBQr1wNMIfsXiQQAOhtftoRGagKb3XXv/s1138/edit%20pic.jpg" imageanchor="1" style="margin-left: 1em; margin-right: 1em;"><img border="0" data-original-height="559" data-original-width="1138" height="196" src="https://blogger.googleusercontent.com/img/b/R29vZ2xl/AVvXsEg9g9IAc8VepY7sASivYIf60YU9RNE31LW7PpoC1Bj8ekkkp4TQxyCOAYgQrceH6vuJQj60VMR8V5QIAtLH3glUs2jc29k7NvDCx6ZtZjqm5mw2o5MiYuv8MqTIKLVnjTxksXnag4CprxrZIvV6tH3aafAsYgvIlBQr1wNMIfsXiQQAOhtftoRGagKb3XXv/w400-h196/edit%20pic.jpg" width="400" /></a></div><br /><p><br /></p><span style="background-color: white; color: #222222; font-family: Arial, Helvetica, sans-serif; font-size: small;"><div><br /></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div>ಚಂದ್ರಯಾನದ ಯಶಸ್ಸನ್ನು ಭಾರ ತೀಯ ಮುಸ್ಲಿಮರು ಸಂಭ್ರಮಿಸಿದ್ದಾರೆ. ಮುಸ್ಲಿಮ್ ವಿದ್ವಾಂಸರಿಂದ ಹಿಡಿದು ಜನ ಸಾಮಾನ್ಯರ ವರೆಗೆ ದೇಶದಾದ್ಯಂತ ಈ ಸಂಭ್ರಮ ವ್ಯಕ್ತವಾಗಿದೆ. ವಿಜ್ಞಾನಿಗಳನ್ನು ಅಭಿನಂದಿಸಿ ಜಮಾಅತೆ ಇಸ್ಲಾಮೀ ಹಿಂದ್ ಟ್ವೀಟ್ ಮಾಡಿದೆ. ‘ಇದೊಂದು ಐತಿಹಾಸಿಕ ಸಂದರ್ಭ, ದೇಶ ಜಾಗತಿಕವಾಗಿ ಬಲಾಢ್ಯ ಶಕ್ತಿಯಾಗಿರುವು ದರ ಸಂಕೇತ’ ಎಂದು ರಾಷ್ಟ್ರೀಯ ಉಪಾಧ್ಯಕ್ಷ ಎಂಜಿನಿಯರ್ ಮುಹಮ್ಮದ್ ಸಲೀಮ್ ಟ್ವೀಟ್ ಮಾಡಿದ್ದಾರೆ. ಜಮೀಯತೆ ಉಲೆಮಾಯೆ ಹಿಂದ್ನ ಮುಖಂಡ ಖಾಲಿದ್ ರಶೀದ್ ಫರಂಗಿ ಮಹಾವಿಯವರು ವಿಜ್ಞಾನಿಗಳಿಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ. ಚಂದ್ರಯಾನ ಯಶಸ್ವಿಯಾಗುವುದಕ್ಕಾಗಿ ತಮ್ಮ ಮದ್ರಸದ ಮಕ್ಕಳು ವಿಶೇಷ ನಮಾಜ್ ಮಾಡಿರುವುದಾಗಿಯೂ ಹೇಳಿದ್ದಾರೆ. ಖ್ಯಾತ ಉರ್ದು ಕವಿ ಖಾಲಿದ್ ಅಝ್ಮಿ ಬರೆದ ಕವನ ವೈರಲ್ ಆಗಿದೆ. ಭಾರತ್ ಹೈ ಮೇರಾ ದೇಶ್, ಔರ್ ಯಹ್ ಮೇರಿ ಜಾನ್ ಹೈ... ಎಂಬ ಸಾಲುಗಳೊಂದಿಗೆ ಅವರು ಬರೆದ ಕವನದಲ್ಲಿ ದೇಶಪ್ರೇಮ, ದೇಶದ ಮೇಲಿನ ಋಣ ಮತ್ತು ಹೆಮ್ಮೆಯ ಭಾವಗಳಿವೆ. ದೇಶದ ಎರಡು ಪ್ರಮುಖ ಧಾರ್ಮಿಕ ಸಂಘಟನೆಗಳಾದ ಎಸ್ಕೆಎಸ್ಎಸ್ಎಫ್ ಮತ್ತು ಎಸ್ಎಸ್ಎಫ್ಗಳು ಚಂದ್ರಯಾನದ ಯಶಸ್ಸನ್ನು ಸಂಭ್ರಮದಿಂದ ಹಂಚಿಕೊಂಡಿವೆ. ಚಂದ್ರನಲ್ಲಿ ಲ್ಯಾಂಡ್ ಆಗುವ ದಿನವಾದ ಆಗಸ್ಟ್ 23ರಂದು ವಿಶೇಷ ನಮಾಜ್ ïನ ವ್ಯವಸ್ಥೆ ಮಾಡಿವೆ. ಹಲವು ಧಾರ್ಮಿಕ ಮುಖಂಡರು ಚಂದ್ರಯಾನ ಯಶಸ್ವಿಯಾಗುವಂತೆ ಪ್ರಾರ್ಥಿಸಿದ್ದು ಮತ್ತು ಆ ಬಳಿಕ ಸಂಭ್ರಮ ಹಂಚಿಕೊಂಡದ್ದೂ ನಡೆದಿದೆ. ಎಷ್ಟರವರೆಗೆಂದರೆ, ಮುಸ್ಲಿಮರಿಗೆ ಸಂಬಂಧಿಸಿ ನಕಾರಾತ್ಮಕ ಸು ದ್ದಿಗಳನ್ನು ಹಂಚಿಕೊಳ್ಳುವುದನ್ನೇ ಪೂರ್ಣಕಾಲಿಕ ಉದ್ಯೋಗವನ್ನಾಗಿ ಮಾಡಿಕೊಂಡವರೂ ‘ಮುಸ್ಲಿಮ್ ಸಂಭ್ರಮ’ದ ಕ್ಷಣಗಳನ್ನು ಹಂಚಿಕೊಂಡಿದ್ದಾರೆ,</span><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಭಾರತೀಯ ಮುಸ್ಲಿಮರಿಗೆ ಸಂಬಂಧಿಸಿ ಒಂದಕ್ಕಿಂತ ಹೆಚ್ಚು ಕಾರಣಕ್ಕಾಗಿ ಚಂದ್ರಯಾನದ ಯಶಸ್ಸು ಮುಖ್ಯವಾಗುತ್ತದೆ. ಮುಸ್ಲಿಮರ ಬಗ್ಗೆ ನಖಶಿಖಾಂತ ನಕಾರಾತ್ಮಕ ಧೋರಣೆಯನ್ನು ಹೊಂದಿರುವ ಪಕ್ಷವೊಂದು ಕೇಂದ್ರದಲ್ಲಿ ಅಧಿಕಾರದಲ್ಲಿರುತ್ತಾ ಮತ್ತು ಈ ಚಂದ್ರಯಾನದ ಯಶಸ್ಸಿನ ಸಂಪೂರ್ಣ ಕ್ರೆಡಿಟನ್ನು ಪಡಕೊಳ್ಳುತ್ತಿರುವ ಈ ಹೊತ್ತಿನಲ್ಲೂ ಮುಸ್ಲಿಮರು ಚಂದ್ರಯಾನ ಯಶಸ್ಸನ್ನು ಸಂಭ್ರಮಿಸಿರುವುದು ಪ್ರಬುದ್ಧ ನಡೆಯಾಗಿದೆ. ಚಂದ್ರಯಾನದ ಯಶಸ್ಸು ಯಾವುದೇ ಓರ್ವ ವ್ಯಕ್ತಿ, ಪಕ್ಷ ಅಥವಾ ಸರಕಾರಕ್ಕೆ ಸೀಮಿತವಾಗುವುದಿಲ್ಲ. ಇಸ್ರೋವ ನ್ನು ಸ್ಥಾಪಿಸಿದ್ದೇ ನೆಹರೂ. ಆ ಬಳಿಕದಿಂದ ಈವರೆಗೆ ಸುಮಾರು 90ರಷ್ಟು ರಾಕೆಟ್ಗಳಲ್ಲಿ ಬಾಹ್ಯಾಕಾಶಕ್ಕೆ ಹಾರಿಸಲಾಗಿದೆ. ಇದರಿಂದ ಈ ದೇಶದ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಅಪಾರ ಲಾಭವಾಗಿದೆ. ಚಂದ್ರಯಾನ ಪರಿಕಲ್ಪನೆಯನ್ನು ಆರಂಭಿಸಿದವರು ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ. 2008ರಲ್ಲಿ ಮೊದಲ ಚಂದ್ರಯಾನ ಪ್ರಯತ್ನ ಮಾಡಲಾಯಿತಾದರೂ ಅದರಲ್ಲಿ ಯಶಸ್ಸು ಸಿಗಲಿಲ್ಲ. 2019ರಲ್ಲಿ ಮತ್ತೆ ಪ್ರಯತ್ನಿಸಲಾಯಿತು. ಆದರೆ ಅದೂ ವಿಫಲವಾಯಿತು. ಇದೀಗ ಮೂರನೇ ಬಾರಿ ನಡೆಸಲಾದ ಪ್ರಯತ್ನದಲ್ಲಿ ಯಶಸ್ಸು ಸಿಕ್ಕಿದೆ. ಸುಮಾರು 800 ಕೋಟಿ ರೂಪಾಯಿ ವೆಚ್ಚದಲ್ಲಿ 3,900 ಭಾರ ತೂಗುವ ಈ ಚಂದ್ರಯಾನದ ನೇತೃತ್ವವನ್ನು ಇಸ್ರೋ ಅಧ್ಯಕ್ಷ ಸೋಮ ನಾಥ್ ವಹಿಸಿಕೊಂಡಿದ್ದರು. 2019ರಲ್ಲಿ ಚಂದ್ರಯಾನ ಪ್ರಯತ್ನ ವಿಫಲಗೊಂಡಾಗ ಕಣ್ಣೀರು ಹಾಕಿದ್ದ ಆಗಿನ ಇಸ್ರೋ ಅಧ್ಯಕ್ಷ ಶಿವನ್ರಲ್ಲಿ ಸಂತೋಷ ತರಿಸಲು ಈ ಸೋಮನಾಥ್ ಇವತ್ತು ಯಶಸ್ವಿಯಾಗಿದ್ದಾರೆ. ನಿಜವಾಗಿ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಈ ಸೋಮನಾಥ್ರ ಹೊರತಾಗಿ ಈ ಚಂದ್ರಯಾನ ಅಭಿಯಾನದಲ್ಲಿ ದುಡಿದವರಲ್ಲಿ 54 ಮಂದಿ ಮಹಿಳಾ ವಿಜ್ಞಾನಿಗಳೂ ಇದ್ದಾರೆ. ಇವರಲ್ಲಿ 8 ಮಂದಿ ಮುಸ್ಲಿಮ್ ವಿಜ್ಞಾನಿಗಳೂ ಇದ್ದಾರೆ. ಇವರಲ್ಲಿ 2013ರಿಂದ ಇಸ್ರೋದಲ್ಲಿ ದುಡಿಯುತ್ತಿರುವ ಉತ್ತರ ಪ್ರದೇಶದ ಘೋರಕ್ಪುರ್ನ ಸನಾ ಫಿರೋಜ್ ಕೂಡಾ ಒಬ್ಬರು. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ಸ್ ಎಂಜಿನಿಯರಿಂಗ್ ನಲ್ಲಿ ಬಿಟೆಕ್ ಮಾಡಿರುವ ಇವರು, ಚಂದ್ರಯಾನದ ತಾಂತ್ರಿಕ ವಿಭಾಗದಲ್ಲಿ ದುಡಿದವರಾಗಿದ್ದಾರೆ. ಇವರ ಪತಿ ಯಾಸಿರ್ ಅಹ್ಮದ್ ಕೂಡಾ ಈ ಚಂದ್ರಯಾನ ಯಶಸ್ಸಿನಲ್ಲಿ ಭಾಗಿಯಾಗಿದ್ದಾರೆ. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ಸ್ ಎಂಜಿನಿಯರಿಂಗ್ ನಲ್ಲಿ ಬಿಟೆಕ್ ಪದವೀಧರರಾಗಿರುವ ಇವರೂ ಘೋರಕ್ಪುರದವರೇ. ಹಲವು ಸಂಶೋಧನಾ ಪ್ರಬಂಧಗಳನ್ನು ಮಂಡಿಸಿರುವ ಇವರು 2010ರಿಂದ ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದಾರೆ. ಹಾಗೆಯೇ ಏರೋಸ್ಪೇಸ್, ಏರೋನಾಟಿಕಲ್ ಮತ್ತು ಆಸ್ಟ್ರೋನಾಟಿಕಲ್ ಎಂಜಿನಿಯರಿಂಗ್ ನಲ್ಲಿ ಬಿಟೆಕ್ ಪಡೆದಿರುವ ಕೇರಳದ ಮುಹಮ್ಮದ್ ಸಾದಿಕ್ ಆಲಂ ಕೂಡ ಈ ಚಂದ್ರಯಾನದ ಯಶಸ್ಸಿನ ಭಾಗವಾಗಿದ್ದು, 2018ರಿಂದ ಇಸ್ರೋದಲ್ಲಿ ತಾಂತ್ರಿಕ ವಿಭಾಗದಲ್ಲಿ ದುಡಿಯುತ್ತಿದ್ದಾರೆ. ಉತ್ತರ ಪ್ರದೇಶದ ಮುಝಫ್ಫರ್ ನಗರ್ನ ಅರೀಬ್ ಅಹ್ಮದ್ರಿಗೂ ಈ ಚಂದ್ರಯಾನದ ಯಶಸ್ಸಿನಲ್ಲಿ ಪಾಲಿದೆ. ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಬಿಟೆಕ್ ಪಡೆದಿರುವ ಇವರು ಚಂದ್ರಯಾನ ತಪಾಸಣಾ ತಂಡದ ಸದಸ್ಯರಾಗಿದ್ದರು. 2015ರಿಂದ ಇಸ್ರೋದಲ್ಲಿ ದುಡಿಯುತ್ತಿರುವ ಅಖ್ತರ್ ಅಬ್ಬಾಸ್, ಚಂದ್ರಯಾನಕ್ಕಾಗಿ ದುಡಿದ ಇನ್ನೋರ್ವ ತಂತ್ರಜ್ಞ. ಅಲೀಘರ್ ಮುಸ್ಲಿಮ್ ಯುನಿವರ್ಸಿಟಿಯಲ್ಲಿ ಬಿಟೆಕ್ ಮತ್ತು ಎಂಟೆಕ್ ಪದವಿ ಪಡೆದಿರುವ ಇವರು ಉತ್ತರ ಪ್ರದೇಶದವರು. ಇಶ್ರತ್ ಜಮಾಲ್ ಎಂಬವರು ಈ ಅಭಿಯಾನದಲ್ಲಿ ಭಾಗಿಯಾದ ಇನ್ನೋರ್ವ ವಿಜ್ಞಾನಿ. 2017ರಿಂದ ಇವರು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರಿನ ಇಸ್ರೋ ಘಟಕದಲ್ಲಿ ಸಂಶೋಧನಾ ವಿಭಾಗದಲ್ಲಿ ದುಡಿಯುತ್ತಿರುವ ಇವರು ಎಲೆಕ್ಟ್ರಿ ಕಲ್ ಎಂಜಿನಿಯರಿಂಗ್ ನಲ್ಲಿ ಬಿಟೆಕ್ ಮತ್ತು ಪವರ್ ಆಂಡ್ ಕಂಟ್ರೋಲ್ ತಂತ್ರಜ್ಞಾನದಲ್ಲಿ ಎಂಟೆಕ್ ಪದವಿ ಪಡೆದಿದ್ದಾರೆ. ಅ ಲೀಘರ್ ಮುಸ್ಲಿಮ್ ಯುನಿವರ್ಸಿಟಿಯಿಂದ ಎಲೆಕ್ಟ್ರಾನಿಕ್ ಎಂಜಿನಿಯರಿಂಗ್ ನಲ್ಲಿ ಬಿಟೆಕ್ ಪಡೆದಿರುವ ಖುಶ್ಬೂ ಮಿರ್ಝಾ ಅವರು ಚಂದ್ರಯಾನಕ್ಕಾಗಿ ದುಡಿದ ಇನ್ನೋರ್ವ ತಂತ್ರಜ್ಞೆ. ದೆಹಲಿ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ ನಲ್ಲಿ ಬಿಟೆಕ್ ಪದವಿ ಪಡೆದಿರುವ ಇವರು 2021ರಲ್ಲಿ ಇಸ್ರೋ ಸೇರಿದ್ದಾರೆ. ನಿಜವಾಗಿ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಚಂದ್ರಯಾನದ ಯಶಸ್ಸಿನಲ್ಲಿ ಮುಸ್ಲಿಮ್ ಸಮುದಾಯದ ವಿಜ್ಞಾನಿಗಳ ಪಾತ್ರವೂ ಇದೆ ಎಂಬುದು ಎಷ್ಟು ಮುಖ್ಯವೋ ಮುಸ್ಲಿಮ್ ಸಮುದಾಯದ ಸಂಭ್ರಮವು ಯುವಪೀಳಿಗೆಯಲ್ಲಿ ಉಂಟು ಮಾಡಬಹುದಾದ ರೋಮಾಂಚನವೂ ಅಷ್ಟೇ ಮುಖ್ಯ. ಚಂದ್ರಯಾನದ ಯಶಸ್ಸನ್ನು ಪ್ರತಿ ಮನೆಯೂ ಸಂಭ್ರಮಿಸುವಾಗ, ಅದು ಮನೆಯ ಮಕ್ಕಳ ಮೇಲೂ ಪ್ರಭಾವ ಬೀರುತ್ತದೆ. ನಾವೂ ವಿಜ್ಞಾನಿಯಾಗಬೇಕು ಎಂಬ ಭಾವ ಅವರೊಳಗೆ ಹುಟ್ಟುವಂತೆ ಮಾಡುತ್ತದೆ. ಸಾಮಾನ್ಯವಾಗಿ, ವೈದ್ಯರಾಗಬೇಕು, ಪೈಲಟ್, ಉದ್ಯಮಿ, ಚಾರ್ಟರ್ಡ್ ಅಕೌಂಟೆಂಟ್, ಲಾಯರ್ ಇತ್ಯಾದಿ ಆಗಬೇಕೆಂದು ಬಯಕೆ ವ್ಯಕ್ತಪಡಿಸುವ ವಿದ್ಯಾರ್ಥಿಗಳೇ ಇವತ್ತು ಹೆಚ್ಚಿದ್ದಾರೆ. ಎಸೆಸೆಲ್ಸಿ ಅಥವಾ ಪಿಯುಸಿ ಫಲಿತಾಂಶದ ಬಳಿಕ ಟಾಪರ್ ಆದ ವಿದ್ಯಾರ್ಥಿಗಳನ್ನು ಮಾತನಾಡಿಸಿದರೆ ವಿಜ್ಞಾನಿ ಆಗಬೇಕು ಎಂದು ಹೇಳುವವರು ಕಡಿಮೆ. ಅದಕ್ಕಿರುವ ಮೊದಲ ಕಾರಣ, ವಿಜ್ಞಾನಿಗಳು ಸಾರ್ವಜನಿಕವಾಗಿ ಚರ್ಚೆಯಲ್ಲಿ ಇಲ್ಲದೇ ಇರುವುದು. ಕ್ರಿಕೆಟ್ ಪಂದ್ಯದಲ್ಲಿ ಭಾರತ ಗೆದ್ದುದನ್ನು ಸಾಮಾನ್ಯ ಜನರು ಆಡಿಕೊಳ್ಳುವಷ್ಟು ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ಹಾರಿಸಲಾಗುವ ರಾಕೆಟ್ನ ಬಗ್ಗೆ ಆಡಿಕೊಳ್ಳುವುದಿಲ್ಲ. ಪತ್ರಿಕೆಗಳೂ ಅಷ್ಟೇ. ಕ್ರಿಕೆಟ್ ಪಂದ್ಯದ ಗೆಲುವನ್ನು ಎರಡ್ಮೂರು ದಿನಗಳ ಕಾಲ ಬೇರೆ ಬೇರೆ ವಿಶ್ಲೇಷಣೆಗೆ ಒಡ್ಡುವ ಪತ್ರಿಕೆಗಳು ವೈಜ್ಞಾನಿಕ ಸಾಧನೆಯನ್ನು ಒಂದು ದಿನದ ಮುಖಪುಟ ಸುದ್ದಿಯಾಗಿಸುವುದನ್ನು ಬಿಟ್ಟರೆ ಅದಕ್ಕಾಗಿ ದುಡಿದವರನ್ನಾಗಲಿ, ಅದರ ಹಿಂದಿರುವ ಶ್ರಮವನ್ನಾಗಲಿ, ಅದರ ಬಜೆಟ್ಟು ಮತ್ತು ತಾಂತ್ರಿಕ ಸೂಕ್ಷ್ಮತೆಗಳನ್ನಾಗಲಿ ಚರ್ಚೆಗೆ ಎತ್ತಿಕೊಳ್ಳುವುದೇ ಇಲ್ಲ. ಇಂಥ ಅಸೂಕ್ಷ್ಮತೆಗಳೇ ಹೊಸ ತಲೆಮಾರಿನಲ್ಲಿ ವಿಜ್ಞಾನ ಕ್ಷೇತ್ರವು ಬೆರಗನ್ನು ಹುಟ್ಟಿಸದೇ ಇರುವುದಕ್ಕೆ ಕಾರಣವಾಗಿದೆ. ಬೆಳೆಯುತ್ತಿರುವ ಪೀಳಿಗೆಯ ಮುಂದೆ ಕೈ ತುಂಬಾ ದುಡ್ಡು ಮಾಡುವ ವೈದ್ಯರು, ಲಾಯರುಗಳು, ಸಿಎಗಳು ಮತ್ತು ವಿದೇಶದಲ್ಲಿ ದುಡಿಯುವವರೇ ಸುಳಿದಾಡುತ್ತಿರುತ್ತಾರೆ. ತಾವೂ ಅವರಂತಾಗಬೇಕು ಮತ್ತು ಬದುಕನ್ನು ಆರಾಮವಾಗಿ ಕಟ್ಟಿಕೊಳ್ಳಬೇಕು ಎಂಬ ಕನಸು ಕಟ್ಟುತ್ತಾರೆ. ಇದು ಅವರ ತಪ್ಪಲ್ಲ. ಅವರಿಗೆ ಇವುಗಳೇ ಮಹಾನ್ ಎಂದು ಪ್ರತಿಕ್ಷಣ ಬಿಂಬಿಸುತ್ತಿರುವ ಎಲ್ಲ ಜವಾಬ್ದಾರಿಯುತ ನಾಗರಿಕರ ತಪ್ಪು. ಮಾಧ್ಯಮಗಳಿಗೆ ಇವುಗಳಲ್ಲಿ ಅತಿದೊಡ್ಡ ಪಾಲಿದೆ. ಒಂದುರೀತಿಯಲ್ಲಿ,</span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಚಂದ್ರಯಾನದ ಯಶಸ್ಸಿಗೆ ಮುಸ್ಲಿಮ್ ನೇತಾರರು ವ್ಯಕ್ತಪಡಿಸಿರುವ ಪ್ರತಿಕ್ರಿಯೆಯು ಖಂಡಿತ ಸಮುದಾಯದ ಬೆಳೆಯುತ್ತಿರುವ ಪೀಳಿಗೆಯ ದೃಷ್ಟಿಯಿಂದ ಅತ್ಯಂತ ಪ್ರಯೋಜನಕಾರಿ. ತಾನೂ ವಿಜ್ಞಾನಿಯಾಗಬೇಕು ಮತ್ತು ದೇಶಕ್ಕೆ ದೊಡ್ಡ ಕೊಡುಗೆಗಳನ್ನು ನೀಡಬೇಕು ಎಂಬ ಬಯಕೆಯೊಂದು ಅವರೊಳಗೆ ಹುಟ್ಟಿಕೊಳ್ಳಲು ಈ ಸಂಭ್ರಮ ಪ್ರೇರಣೆ ಒದಗಿಸಬಹುದು. ಹಾಗೆಯೇ ಚಂದ್ರಯಾನದಲ್ಲಿ ಭಾಗಿಯಾದ ಮುಸ್ಲಿಮ್ ವಿಜ್ಞಾನಿಗಳೂ ಪ್ರತಿಮನೆಯ ಚರ್ಚಾ ವಿಷಯವಾಗಬೇಕು. ಹೀಗಾದರೆ ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡೀತು. ಇದುವೇ ನಿಜವಾದ ಸಂಭ್ರಮ.</span><br style="background-color: white; color: #222222; font-family: Arial, Helvetica, sans-serif; font-size: small;" /></div>a k kukkilahttp://www.blogger.com/profile/04432257424497331465noreply@blogger.com0tag:blogger.com,1999:blog-2716482703415659532.post-18682343368694567762023-08-31T05:01:00.000-07:002023-08-31T05:01:24.658-07:00 ಗುಜರಾತ್ ಹತ್ಯಾಕಾಂಡದಲ್ಲಿ ಪ್ರಭುತ್ವ ಭಾಗಿಯಾಗಿತ್ತೇ?<div class="separator" style="clear: both; text-align: center;"><a href="https://blogger.googleusercontent.com/img/b/R29vZ2xl/AVvXsEg99vHkzJRVCgJ5USBnxUwyug5xjrCYfBbTTKM83qrRvLQJXsNExSqYPv5lj829LIOALY3-HY2diTjCkEHY1bip9rIo77y-eHElquAKI8lEp572mlDIFXUZAPLRKP1_dgTW-0oxFoQB4ZvDbgizvJszzrouqnupriahtsxaSIB7MXNVYwdKjE_SKJQWCtW2/s1138/edit%20pic.jpg" imageanchor="1" style="margin-left: 1em; margin-right: 1em;"><img border="0" data-original-height="559" data-original-width="1138" height="196" src="https://blogger.googleusercontent.com/img/b/R29vZ2xl/AVvXsEg99vHkzJRVCgJ5USBnxUwyug5xjrCYfBbTTKM83qrRvLQJXsNExSqYPv5lj829LIOALY3-HY2diTjCkEHY1bip9rIo77y-eHElquAKI8lEp572mlDIFXUZAPLRKP1_dgTW-0oxFoQB4ZvDbgizvJszzrouqnupriahtsxaSIB7MXNVYwdKjE_SKJQWCtW2/w400-h196/edit%20pic.jpg" width="400" /></a></div><br /><p><br /></p><span style="background-color: white; color: #222222; font-family: Arial, Helvetica, sans-serif; font-size: small;"><div><br /></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div>ಬಿಲ್ಕಿಸ್ ಬಾನು ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಮತ್ತು ಗುಜರಾತ್ ಸರಕಾರಕ್ಕೆ ಸುಪ್ರೀಮ್ ಕೋರ್ಟು ಕೆಲವು ಖಾರ ಪ್ರಶ್ನೆಗಳನ್ನು ಕೇಳಿದೆ. ಈ 11 ಮಂದಿ ಅಪರಾಧಿಗಳನ್ನು ಮಾತ್ರ ಯಾಕೆ ಕ್ಷಮೆಗೆ ಆಯ್ಕೆ ಮಾಡಿಕೊಂಡಿದ್ದೀರಿ, ರಾಜ್ಯದಲ್ಲಿರುವ ಉಳಿದ ಅಪರಾಧಿಗಳಿಗೂ ಯಾಕೆ ಇದೇ ಮಾನದಂಡವನ್ನು ಅನ್ವಯಿಸಿ ಬಿಡುಗಡೆಗೊಳಿಸಿಲ್ಲ... ಎಂದು ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಉಜ್ವಲ್ ಭುಯಾನ್ ಅವರನ್ನು ಒಳಗೊಂಡ ನ್ಯಾಯಪೀಠ ಪ್ರಶ್ನಿಸಿದೆ. ಮರಣ ದಂಡನೆ ವಿಧಿಸಲಾಗಿದ್ದ ಈ ಅಪರಾಧಿಗಳ ಶಿಕ್ಷೆಯನ್ನು ಆ ಬಳಿಕ ಜೀವಾವಧಿಗೆ ಇಳಿಸಲಾಗಿದೆ. ಇಂಥ ಅಪರಾಧಿಗಳನ್ನು 14 ವರ್ಷ ಶಿಕ್ಷೆಯ ಬಳಿಕ ಹೇಗೆ ಬಿಡುಗಡೆಗೊಳಿಸಿದಿರಿ? ಅಲ್ಲದೇ, ಈ ಪ್ರಕರಣದ ವಿಚಾರಣೆ ಗೋಧ್ರಾ ನ್ಯಾಯಾಲಯದಲ್ಲಿ ನಡೆಯದಿದ್ದರೂ ಬಿಡುಗಡೆಯ ವಿಷಯದಲ್ಲಿ ಗೋಧ್ರಾ ನ್ಯಾಯಾಲಯದ ಅಭಿಪ್ರಾಯವನ್ನು ಯಾಕೆ ಪಡೆದಿರಿ? ಈ ಬಿಡುಗಡೆಗೆ ಸಿಬಿಐ ಆಕ್ಷೇಪ ವ್ಯಕ್ತಪಡಿಸಿಲ್ಲವೇಕೆ? ಎಂದೂ ನ್ಯಾಯಪೀಠ ಪ್ರಶ್ನಿಸಿದೆ.</span><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">2022 ಆಗಸ್ಟ್ 15ರಂದು ಈ 11 ಮಂದಿ ಅಪರಾಧಿಗಳನ್ನು ಸನ್ನಡತೆಯ ಆಧಾರದಲ್ಲಿ ಗುಜರಾತ್ ಸರಕಾರ ಬಿಡುಗಡೆಗೊಳಿಸಿತ್ತು. 2002ರ ಗುಜರಾತ್ ಹತ್ಯಾಕಾಂಡದ ವೇಳೆ ಈ ಅಪರಾಧಿಗಳು ಬಿಲ್ಕಿಸ್ ಬಾನು ಮತ್ತು ಅವರ ಕುಟುಂಬದ ಮೇಲೆ ಅತ್ಯಂತ ಪೈ ಶಾಚಿಕವಾಗಿ ನಡಕೊಂಡಿದ್ದರು. 21 ವರ್ಷದವಳಾಗಿದ್ದ ಮತ್ತು 5 ತಿಂಗಳ ಗರ್ಭಿಣಿಯಾಗಿದ್ದ ಬಿಲ್ಕಿಸ್ ಬಾನುರನ್ನು ಸಾಮೂಹಿಕ ಅತ್ಯಾಚಾರಕ್ಕೆ ಒಳಪಡಿಸಲಾಗಿತ್ತು. ಆಕೆಯ ಪುಟ್ಟ ಮಗಳನ್ನು ಕಣ್ಣೆದುರೇ ನೆಲಕ್ಕೆ ಬಡಿದು ಈ ದುರುಳರು ಹತ್ಯೆ ಮಾಡಿದ್ದರು. ಅಲ್ಲದೇ, ಆಕೆಯ ಕುಟುಂಬದ 7 ಮಂದಿಯ ಹತ್ಯೆಗೂ ಕಾರಣರಾಗಿದ್ದರು. ಗುಜರಾತ್ ಗಲಭೆಯ ವೇಳೆ ಜೀವ ಉಳಿಸಿಕೊಳ್ಳುವುದಕ್ಕಾಗಿ ಟ್ರಕ್ ಒಂದರಲ್ಲಿ ಸುರಕ್ಷಿತ ಸ್ಥಳಕ್ಕೆ ಸಾಗುತ್ತಿದ್ದ ಗುಂಪಿನಲ್ಲಿ ಈ ಬಿಲ್ಕಿಸ್ ಮತ್ತು ಹತ್ಯೆಗೀಡಾದ ಈ 7 ಮಂದಿಯೂ ಸೇರಿದ್ದರು. ಆ ಘಟನೆಯಲ್ಲಿ ಒಟ್ಟು 14 ಮಂದಿಯನ್ನು ಹತ್ಯೆ ಮಾಡಲಾಗಿತ್ತು. ಪ್ರಜ್ಞೆ ಕಳಕೊಂಡು ಬಿದ್ದಿದ್ದ ಬಿಲ್ಕಿಸ್ರನ್ನು ಈ ದುರುಳರು ಸತ್ತಿದ್ದಾರೆಂದು ಭಾವಿಸಿ ಬಿಟ್ಟು ಹೋಗಿದ್ದರು. ಪ್ರಜ್ಞೆ ಮರಳುವಾಗ ಬಿಲ್ಕಿಸ್ ನಗ್ನರಾಗಿದ್ದರು. ಬಳಿಕ ಹತ್ತಿರದ ಗುಡ್ಡ ಏರಿ ಅಲ್ಲಿಯ ಮನೆಯೊಂದರಲ್ಲಿ ಅವರು ಆಶ್ರಯ ಪಡೆದರು. ಈ ಪ್ರಕರಣದ ವಿಚಾರಣೆಯನ್ನು ಗುಜರಾತ್ನ ಬದಲು ಮುಂಬೈಯಲ್ಲಿ ನಡೆಸುವಂತೆ ಸುಪ್ರೀಮ್ ಕೋರ್ಟು ಆದೇಶಿಸಿತ್ತು. ವಿಚಾರಣೆ ನಡೆಸಿದ ಸಿಬಿಐ ಈ ಅಪರಾಧಿಗಳಿಗೆ ಮರಣ ದಂಡನೆ ಶಿಕ್ಷೆಯನ್ನು ವಿಧಿಸಿತ್ತು. ಆ ಬಳಿಕ ಮುಂಬೈ ಹೈಕೋರ್ಟು ಶಿಕ್ಷೆಯನ್ನು ಜೀವಾವಧಿಗೆ ಇಳಿಸಿತ್ತು.</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಈ ನಡುವೆ ಬಿಲ್ಕಿಸ್ ಬಾನು ಹಲವು ಸವಾಲುಗಳನ್ನು ಎದುರಿಸಿದ್ದರು. ನಿರಂತರ ಜೀವ ಬೆದರಿಕೆ ಆಕೆಯನ್ನು ಬೆನ್ನಟ್ಟಿತ್ತು. ಮರ್ನಾಲ್ಕು ಬಾರಿ ಮನೆ ಬದಲಾಯಿಸಿದ್ದರು. ಒಂದುಕಡೆ, ಪುಟ್ಟ ಮಗಳೂ ಸೇರಿದಂತೆ ಕುಟುಂಬದ 7 ಮಂದಿಯನ್ನು ಕಣ್ಣೆದುರೇ ಕಳಕೊಂಡ ದುಃಖ ಮತ್ತು ಅತ್ಯಾಚಾರಕ್ಕೊಳಗಾದ ಆಘಾತ, ಇನ್ನೊಂದೆಡೆ ಜೀವ ಬೆದರಿಕೆ- ಇವೆರಡನ್ನೂ ಎದುರಿಸಿ ನಿಲ್ಲುವುದು ಆಕೆಗೆ ಸುಲಭವಾಗಿರಲಿಲ್ಲ. ಆಕೆಗೆ ಈ 11 ಮಂದಿ ದುಷ್ಕರ್ಮಿಗಳಷ್ಟೇ ಸವಾಲಾಗಿರಲಿಲ್ಲ, ಇಡೀ ಪ್ರಭುತ್ವವನ್ನೇ ಆಕೆ ಎದುರಿಸಬೇಕಿತ್ತು. ಪೊಲೀಸ್ ಠಾಣೆಯ ಕಂಭ ಕಂಭಗಳೂ ಬಿಲ್ಕಿಸ್ರನ್ನು ಬೆದರಿಸುತ್ತಿತ್ತು. ಅತ್ಯಾಚಾರದ ಸಂತ್ರಸ್ತೆ ಎಂಬೊಂದು ಹಣೆಪಟ್ಟಿಯನ್ನು ಅಂಟಿಸಿಕೊಂಡೇ ಆಕೆ ಬದುಕಬೇಕಿತ್ತು. ನ್ಯಾಯಾಲಯದ ವಿಚಾರಣೆಗೂ ಹಾಜರಾಗಬೇಕಿತ್ತು. ಮಾಧ್ಯಮಗಳ ಪ್ರಶ್ನೆಗಳಿಗೂ ಉತ್ತರಿಸಬೇಕಿತ್ತು. ಆದರೆ, </span><span style="background-color: white; color: #222222; font-family: Arial, Helvetica, sans-serif; font-size: small;">ಬಿಲ್ಕಿಸ್ ಈ ಎಲ್ಲ ಸವಾಲನ್ನು ಸಕಾರಾತ್ಮಕವಾಗಿಯೇ ಸ್ವೀಕರಿಸಿದರು. ತನ್ನ ಮೇಲೆ ಅತ್ಯಾಚಾರಗೈದ ಮತ್ತು ಕುಟುಂಬ ಸದಸ್ಯರನ್ನು ಹತ್ಯೆಗೈದವರನ್ನು ಶಿಕ್ಷೆಯ ಕುಣಿಕೆಗೆ ತಲುಪಿಸಿಯೇ ಸಿದ್ಧ ಎಂಬ ಹಠಕ್ಕೆ ಬಿದ್ದರು. ಈ ದಿಕ್ಕಿನಲ್ಲಿ ಎದುರಾದ ಸರ್ವ ಒತ್ತಡಗಳನ್ನೂ ಧಿಕ್ಕರಿಸಿದರು. ಈ ಹೋರಾಟ ಮನೋಭಾವದ ಪರಿಣಾಮವಾಗಿಯೇ ಈ 11 ಮಂದಿ ಕ್ರೂರಿಗಳಿಗೆ ಶಿಕ್ಷೆಯಾಯಿತು. ಸಾಮಾನ್ಯವಾಗಿ,</span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಕೋಮುಗಲಭೆಯ ವೇಳೆ ಎಸಗಲಾಗುವ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳಲ್ಲಿ ದುಷ್ಕರ್ಮಿಗಳಿಗೆ ಶಿಕ್ಷೆಯಾಗುವುದು ಬಹಳ ಕಡಿಮೆ. ಹೆಚ್ಚಿನ ವೇಳೆ ಸಂತ್ರಸ್ತರು ದೂರು ಕೊಡುವುದಿಲ್ಲ. ಒಂದುವೇಳೆ ಕೊಟ್ಟರೂ ದುಷ್ಕರ್ಮಿಗಳ ಒತ್ತಡದಿಂದಾಗಿ ನ್ಯಾಯಾಲಯದಲ್ಲಿ ಅವರು ಹೇಳಿಕೆ ಬದಲಿಸುವುದೇ ಹೆಚ್ಚು. ಗುಜರಾತ್ನ ಬೆಸ್ಟ್ ಬೇಕರಿ ಪ್ರಕರಣ ಇದಕ್ಕೆ ತಾಜಾ ಉದಾಹರಣೆ. ಅತ್ಯಾಚಾರಕ್ಕೊಳಗಾಗಿ ಜೀವಭಯದಿಂದ ಊರು ಬಿಟ್ಟವರು ಮರಳಿ ಊರಿಗೆ ಬರಬೇಕಾದರೆ ದುಷ್ಕರ್ಮಿಗಳೇ ಕೆಲವು ಷರತ್ತುಗಳನ್ನು ವಿಧಿಸುತ್ತಾರೆ. ಅದರಲ್ಲಿ, ದೂರು ನೀಡಬಾರದು ಮತ್ತು ನೀಡಿದ್ದರೆ ಅದನ್ನು ಹಿಂತೆಗೆದುಕೊಳ್ಳಬೇಕು ಎಂಬುದೂ ಒಂದು. ಬಹುತೇಕ ಪ್ರಕರಣಗಳಲ್ಲಿ ಈ ರಾಜಿ ಒಪ್ಪಂದವೇ ಮೇಲುಗೈ ಪಡೆಯುತ್ತದೆ. ಅಲ್ಲದೇ, ಪೊಲೀಸರೂ ಸೂಕ್ತ ಎಫ್ಐಆರ್ ದಾಖಲಿಸುವುದಿಲ್ಲ. ಪೂರಕ ಸಾಕ್ಷ್ಯಗಳನ್ನೂ ಸಂಗ್ರಹಿಸುವುದಿಲ್ಲ. ಅವರು ದುಷ್ಕರ್ಮಿಗಳ ಜೊತೆ ಶಾಮೀಲಾಗಿ ಪ್ರಕರಣವನ್ನು ದುರ್ಬಲಗೊಳಿಸುವ ಸನ್ನಿವೇಶಗಳೇ ಹೆಚ್ಚು. ಇಂಥ ಹಲವು ಸವಾಲುಗಳ ನಡುವೆಯೂ ಬಿಲ್ಕಿಸ್ ಬಾನು ದುಷ್ಕರ್ಮಿಗಳನ್ನು ಕಟಕಟೆಗೆ ತಂದಿದ್ದಾರೆಂದರೆ ಮತ್ತು ಶಿಕ್ಷೆಯಾಗುವಂತೆ ನೋಡಿಕೊಂಡಿದ್ದಾರೆಂದರೆ, ಅದು ಸಣ್ಣ ಸಾಹಸವಲ್ಲ. ನಿಜವಾಗಿ, </span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಗುಜರಾತ್ ಸರಕಾರ ಬಿಲ್ಕಿಸ್ ಪರ ನಿಲ್ಲಬೇಕಿತ್ತು. ಆದರೆ, ಅದು ದುಷ್ಕರ್ಮಿಗಳ ಪರ ನಿಂತಿತು. ಈ ದುರುಳರನ್ನು ಬಿಡುಗಡೆಗೊಳಿಸುವುದಕ್ಕೆ ಅನುಮತಿಸುವಂತೆ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆಯಿತು. ದುರಂತ ಏನೆಂದರೆ, ಈ ಪತ್ರ ಬರೆದುದಕ್ಕಾಗಿ ಗುಜರಾತ್ ಸರಕಾರಕ್ಕೆ ಛೀಮಾರಿ ಹಾಕಬೇಕಿದ್ದ ಕೇಂದ್ರ ಗೃಹ ಇಲಾಖೆಯು ಬಿಡುಗಡೆಗೆ ಅನುಮತಿಯನ್ನು ನೀಡಿ ಈ ಪಾಪ ಕಾರ್ಯದಲ್ಲಿ ತಾನೂ ಶಾಮೀಲಾಯಿತು. ಹಾಗಂತ, ಇಲ್ಲಿಗೇ ಮುಗಿದಿಲ್ಲ.</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಈ ಬಿಡುಗಡೆಯನ್ನು ಪ್ರಶ್ನಿಸಿ ಬಿಲ್ಕಿಸ್ ಬಾನು, ಸಂಸದೆ ಮಹುವಾ ಮೊಯಿತ್ರ ಸೇರಿದಂತೆ ಇತರರು ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಿ ನ್ಯಾಯಮೂರ್ತಿ ಕೆ.ಎ. ಜೋಸೆಫ್ ಮತ್ತು ಬಿ.ವಿ. ನಾಗರತ್ನ ಅವರನ್ನೊಳಗೊಂಡ ನ್ಯಾಯಪೀಠವನ್ನು ಸುಪ್ರೀಮ್ ಕೋರ್ಟು ರಚಿಸಿತು. ಆದರೆ ಕೇಂದ್ರ ಮತ್ತು ಗುಜರಾತ್ ಸರಕಾರಗಳು ಇಲ್ಲೂ ಆಟವಾಡತೊಡಗಿತು. ಪ್ರಕರಣದ ವಿಚಾರಣೆಯನ್ನು ಪದೇ ಪದೇ ಮೂಂದೂಡುವಂಥ ಸನ್ನಿವೇಶವನ್ನು ಸರಕಾರಗಳು ಸೃಷ್ಟಿಸತೊಡಗಿದುವು. ಕೆ.ಎ. ಜೋಸೆಫ್ ಈ ಪ್ರಕರಣದ ವಿಚಾರಣೆ ನಡೆಸುವುದು ಈ ಎರಡೂ ಸರಕಾರಗಳಿಗೂ ಬೇಕಿರಲಿಲ್ಲ. 2023 ಜೂನ್ 16ರಂದು ಅವರು ನಿವೃತ್ತಿಯಾಗಲಿದ್ದು, ಅಲ್ಲಿಯವರೆಗೆ ವಿವಿಧ ಕಾರಣಗಳನ್ನು ಮುಂದಿಟ್ಟು ವಿಚಾರಣೆ ನಡೆಸದಂತೆ ನೋಡಿಕೊಂಡವು. ಇದನ್ನು ಖುದ್ದು ಜೋಸೆಫ್ ಅವರೇ ಬಹಿರಂಗವಾಗಿ ಹೇಳಿಕೊಂಡರು. ಇದೀಗ ಅವರ ಜಾಗಕ್ಕೆ ನ್ಯಾಯಮೂರ್ತಿ ಉಜ್ವಲ್ ಭುಯಾನ್ ನೇಮಕವಾಗಿದ್ದಾರೆ ಮತ್ತು ವಿಚಾರಣೆ ಪ್ರಾರಂಭವಾಗಿದೆ. ನಿಜವಾಗಿ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಈ 11 ಮಂದಿ ಅಪರಾಧಿಗಳನ್ನು ಬಿಡುಗಡೆಗೊಳಿಸುವ ಮೂಲಕ ಕೇಂದ್ರ ಮತ್ತು ಗುಜರಾತ್ ಸರಕಾರಗಳು ಈ ದೇಶದ ವರ್ಚಸ್ಸಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಧಕ್ಕೆಯನ್ನು ತಂದಿದೆ. ಅಲ್ಲದೇ, ಈ ಅಪರಾಧಿಗಳ ಬಗ್ಗೆ ಗುಜರಾತ್ ಸರಕಾರ ಎಷ್ಟು ಅನುಕಂಪವನ್ನು ಹೊಂದಿತ್ತು ಅನ್ನುವುದಕ್ಕೆ ಜೈಲಿನಲ್ಲಿರುವಾಗ ಅವರಿಗೆ ಸಿಕ್ಕಿರುವ ಪೆರೋಲ್ಗಳೇ ಸಾಕ್ಷಿ. ಈ ಅಪರಾಧಿಗಳಲ್ಲಿ ನಾಲ್ಕರಿಂದ 5 ಮಂದಿ ಶಿಕ್ಷಾವಧಿಯಲ್ಲೇ ಸಾವಿರಕ್ಕಿಂತಲೂ ಅಧಿಕ ದಿನಗಳನ್ನು ಜೈಲಿನ ಹೊರಗಡೆ ಕಳೆದಿದ್ದರು. ಜೈಲಧಿಕಾರಿಗಳು ಈ ಅಪರಾಧಿಗಳಿಗೆ ಇಂಥದ್ದೊಂದು ಬಿಡುಗಡೆ ಭಾಗ್ಯವನ್ನು ಕರುಣಿಸಿದ್ದರು. ಹಾಗಂತ, ಇಂಥ ಪೆರೋಲ್ ಭಾಗ್ಯಗಳು ಇತರ ಅಪರಾಧಿಗಳಿಗೆ ಲಭಿಸಿರುವ ಯಾವ ಮಾಹಿತಿಯೂ ಇಲ್ಲ. ಅಷ್ಟಕ್ಕೂ,</span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;"> ಗುಜರಾತ್ ಸರಕಾರ ಈ ಅಪರಾಧಿಗಳನ್ನು ಇಷ್ಟೊಂದು ಕಾಳಜಿಯಿಂದ ನೋಡಿಕೊಳ್ಳಲು ಕಾರಣ ಏನು? ಗುಜರಾತ್ ಹತ್ಯಾಕಾಂಡವನ್ನು ಈ ಸರಕಾರ ಸಂಭ್ರಮಿಸುತ್ತಿದೆಯೇ? ಅಂಥದ್ದೊಂದು ಹತ್ಯಾಕಾಂಡವನ್ನು ಅದು ಬಯಸಿತ್ತೇ? ಅಲ್ಲದೇ, ಬಿಡುಗಡೆಗೊಂಡ ಈ ಅಪರಾಧಿಗಳನ್ನು ಜೈಲಿನ ಹೊರಗಡೆ ಆರತಿ ಎತ್ತಿ ಸ್ವಾಗತಿಸಲಾಗಿತ್ತು. ಸಿಹಿ ಹಂಚಿ ಸಂಭ್ರಮಿಸಲಾಗಿತ್ತು. ಹೀಗೆ ಬಿಡುಗಡೆಗೊಂಡ ಅಪರಾಧಿಗಳಲ್ಲಿ ಓರ್ವ ಆ ಬಳಿಕ ಬಿಜೆಪಿ ಸಚಿವರಿದ್ದ ವೇದಿಕೆಯನ್ನೂ ಹಂಚಿಕೊಂಡಿದ್ದ. ಇವೆಲ್ಲ ಏನು? ಈ ಅಪರಾಧಿಗಳ ಬಗ್ಗೆ ಗುಜರಾತ್ ಮತ್ತು ಕೇಂದ್ರ ಸರಕಾರಕ್ಕೆ ಇಷ್ಟು ಕಕ್ಕುಲಾತಿ ಏಕೆ? ದೇಶಕ್ಕೆ ಅಪಕೀರ್ತಿ ತಂದವರನ್ನು ಇವರೆಲ್ಲ ಇಷ್ಟು ಗೌರವಯುತವಾಗಿ ನಡೆಸಿಕೊಳ್ಳುತ್ತಿರುವುದೇಕೆ? ಗುಜರಾತ್ ಹತ್ಯಾಕಾಂಡದಲ್ಲಿ ಪ್ರಭುತ್ವ ಭಾಗಿಯಾಗಿರುವುದರ ಸೂಚನೆಯೇ ಇದು? ತನ್ನ ನಿವೃತ್ತಿಯನ್ನು ಈ ಎರಡೂ ಸರಕಾರಗಳು ಕಾಯುತ್ತಿವೆ ಎಂದು ನ್ಯಾಯಮೂರ್ತಿ ಕೆ.ಎ. ಜೋಸೆಫ್ ಹೇಳಿರುವುದರ ಆಂತರ್ಯವೇನು? ನಿಜಕ್ಕೂ ನ್ಯಾಯಪ್ರಿಯರೆಲ್ಲ ತಲೆತಗ್ಗಿಸಬೇಕಾದ ಪ್ರಕರಣ ಇದು.</span></div>a k kukkilahttp://www.blogger.com/profile/04432257424497331465noreply@blogger.com0tag:blogger.com,1999:blog-2716482703415659532.post-20755632824416675862023-08-23T05:04:00.000-07:002023-08-23T05:04:43.486-07:00 47ರ ಭಾರತಕ್ಕೆ 76ರ ಭಾರತದ ಮುಖಾಮುಖಿ<div class="separator" style="clear: both; text-align: center;"><a href="https://blogger.googleusercontent.com/img/b/R29vZ2xl/AVvXsEjbijQjGxpJA8-EqEhl9DdVY6EnVtj5zglYMbktdszsQn_OziFYX-CsVcBHZQxaFX7e7zSrzTKMNXGSenPd4dDJ0riSoABtZ2g8GHGpUJac5I8tLYkJJtUQ5GchZhaGROIamuvslsqaTGxWpCBe7USCMcwNF2-nZzI9Lq7bzDqBRXQPyAkFY8IdgWAU7_r4/s1138/edit%20pic%201.jpg" imageanchor="1" style="margin-left: 1em; margin-right: 1em;"><img border="0" data-original-height="559" data-original-width="1138" height="196" src="https://blogger.googleusercontent.com/img/b/R29vZ2xl/AVvXsEjbijQjGxpJA8-EqEhl9DdVY6EnVtj5zglYMbktdszsQn_OziFYX-CsVcBHZQxaFX7e7zSrzTKMNXGSenPd4dDJ0riSoABtZ2g8GHGpUJac5I8tLYkJJtUQ5GchZhaGROIamuvslsqaTGxWpCBe7USCMcwNF2-nZzI9Lq7bzDqBRXQPyAkFY8IdgWAU7_r4/w400-h196/edit%20pic%201.jpg" width="400" /></a></div><br /><p><br /></p><p>ಸನ್ಮಾರ್ಗ ಸಂಪಾದಕೀಯ </p><span style="background-color: white; color: #222222; font-family: Arial, Helvetica, sans-serif; font-size: small;">1947 ಆಗಸ್ಟ್ 15ರಂದು ಗಾಂಧೀಜಿ ಕೊಲ್ಕತ್ತಾ ಬಳಿಯ ನೌಕಾಲಿಯಲ್ಲಿದ್ದರು. ಆಗಸ್ಟ್ 6ರಂದೇ ಅವರು ಲಾಹೋರ್ನಿಂದ ಕೊಲ್ಕತ್ತಾಕ್ಕೆಂದು ಹೊರಟಿದ್ದರು. ಅಲ್ಲಿಂದ ನೌಕಾಲಿಗೆ ಹೋಗುವುದು ಅವರ ಉದ್ದೇಶ. ಭಾರತ ಮತ್ತು ಪಾಕಿಸ್ತಾನ ಎಂಬ ಹೆಸರಲ್ಲಿ ಭಾರತ ವಿಭಜನೆಗೊಂಡು ಸ್ವತಂತ್ರಗೊಳ್ಳುವುದು ಅದಾಗಲೇ ದೇಶಕ್ಕೆ ದೇಶವೇ ತಿಳಿದಿರುವ ಕಾರಣ ಉತ್ತರ ಭಾರತದಲ್ಲಿ ಹಿಂದೂ- ಮುಸ್ಲಿಮ್ ಘರ್ಷಣೆ ಸ್ಫೋಟಗೊಂಡಿತ್ತು. ಇವತ್ತು ಬಾಂಗ್ಲಾದೇಶದ ಭಾಗವಾಗಿರುವ ನೌಕಾಲಿಯಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದರು. ಕೊಲ್ಕತ್ತಾದಲ್ಲಿ ಮುಸ್ಲಿಮರು ಅಲ್ಪಸಂಖ್ಯಾತರಾಗಿದ್ದರು. ಮುಸ್ಲಿಮ್ ಪಾಕಿಸ್ತಾನ ಮತ್ತು ಹಿಂದೂ ಭಾರತ ಎಂಬ ಕರಿಛಾಯೆಗೆ ಬಡಜನರು ಸಿಲುಕಿಕೊಂಡರು. ನೌಕಾಲಿಯಲ್ಲಿ ಹಿಂದೂಗಳು ಸಂತ್ರಸ್ತರಾದರೆ ಕೊಲ್ಕತ್ತಾದಲ್ಲಿ ಮುಸ್ಲಿಮರು ಸಂತ್ರಸ್ತರಾದರು. ನೌಕಾಲಿಗೆಂದು ಹೊರಟ ಗಾಂಧೀಜಿಯವರು ಆಗಸ್ಟ್ 9ರಂದು ಕೊಲ್ಕತ್ತಾ ತಲುಪಿದರು. ಆಗ ಅವರನ್ನು ಪ್ರಮುಖ ಮುಸ್ಲಿಮ್ ಮುಖಂಡ ಹುಸೈನ್ ಶಹೀದ್ ಸುಹ್ರವರ್ದಿ ಭೇಟಿಯಾಗಿ ಕೊಲ್ಕತ್ತಾದಲ್ಲೇ ಉಳಕೊಳ್ಳುವಂತೆ ಮತ್ತು ಮುಸ್ಲಿಮರ ಮೇಲಿನ ದಾಳಿಯನ್ನು ತಡೆಯುವುದಕ್ಕೆ ನೆರವಾಗುವಂತೆ ವಿನಂತಿಸಿದರು. ನೌಕಾಲಿಯಲ್ಲಿ ಹಿಂದೂಗಳ ಮೇಲಿನ ದಾಳಿಯನ್ನು ತಡೆಯಲು ನೀವು ನೆರವಾದರೆ, ಕೊಲ್ಕತ್ತಾದಲ್ಲಿ ಮುಸ್ಲಿಮರ ಮೇಲಿನ ದಾಳಿಯನ್ನು ತಡೆಯಲು ನೆರವಾಗುವೆ.. ಎಂದು ಗಾಂಧೀಜಿ ಮಾತು ಕೊಟ್ಟರು. ಆ ಬಳಿಕ ಅವರಿಬ್ಬರೂ ಭುಜಕ್ಕೆ ಭುಜ ಸೇರಿಸಿ ಕೋಮುಗಲಭೆಯನ್ನು ನಿಯಂತ್ರಿಸುವುದಕ್ಕೆ ಶ್ರಮಿಸಿದರು. ಗಾಂಧೀಜಿ ಅಮರಣಾಂತ ಉಪವಾಸ ವ್ರತ ಘೋಷಿಸಿದರು. ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲೂ ಗಾಂಧೀಜಿ ಜನರ ನಡುವೆ ನಿಂತರು. ಹಿಂದೂಗಳಿಗೆ ಸುಹ್ರವರ್ದಿಯ ಮೇಲೆ ಆಕ್ರೋಶವಿತ್ತು. ಹಿಂದೂಗಳ ಮೇಲಿನ ದಾಳಿಯ ವೇಳೆ ಅವರ ನಿಲುವಿನ ಬಗ್ಗೆ ಆಕ್ಷೇಪವಿತ್ತು. ಆದರೆ, ಗಾಂಧೀಜಿ ನಿಜ ನಾಯಕನಂತೆ ಎಲ್ಲರನ್ನೂ ಸೇರಿಸಿಕೊಂಡು ಹಿಂದೂ-ಮುಸ್ಲಿಮರನ್ನು ದ್ವೇಷದ ಕುಲುಮೆಯಿಂದ ಹೊರತಂದರು. ಹಿಂದೂಗಳನ್ನು ಮಂದಿರದಲ್ಲೂ ಮುಸ್ಲಿಮರನ್ನು ಮಸೀದಿಯಲ್ಲೂ ಸೇರಿಸಿದರು. ಎಲ್ಲಿಯವರೆಗೆಂದರೆ, ಆಗಸ್ಟ್ 26ರ ಈದುಲ್ ಫಿತರ್ ಹಬ್ಬವನ್ನು ಎಲ್ಲರ ಜೊತೆ ಸೇರಿ ಆಚರಿಸಿದರು. ಜನರು ಸಂಕಷ್ಟದಲ್ಲಿರುವಾಗ ಓರ್ವ ಜವಾಬ್ದಾರಿಯುತ ವ್ಯಕ್ತಿ ಏನು ಮಾಡಬಹುದು ಎನ್ನುವುದಕ್ಕೆ ನಿದರ್ಶನ ಇದು. ದುರಂತ ಏನೆಂದರೆ,</span><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">1947 ಆಗಸ್ಟ್ 15ರ ಆಸುಪಾಸಿನಲ್ಲಿ ಕೊಲ್ಕತ್ತಾ, ನೌಕಾಲಿ ಕೋಮುದ್ವೇಷದಿಂದ ಉರಿದಿದ್ದರೆ ಈ 2023ರ ಆಗಸ್ಟ್ ಆಸುಪಾಸಿನಲ್ಲಿ ಮಣಿಪುರ, ಹರ್ಯಾಣಗಳು ಉರಿಯುತ್ತಿವೆ. ಸ್ವಾತಂತ್ರ್ಯ ಲಭ್ಯವಾಗಿ 75 ವರ್ಷಗಳಾದ ಬಳಿಕವೂ ಧರ್ಮದ ಹೆಸರಿನಲ್ಲಿ ನಡೆಯುವ ಅತ್ಯಾಚಾರಕ್ಕೆ ತೆರೆಬಿದ್ದಿಲ್ಲ. ಮಣಿಪುರದಲ್ಲಿ ಮೇಥಿಗಳು ಕುಕಿ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿಸಿ ಅತ್ಯಾಚಾರ ನಡೆಸಿದ್ದಾರೆ. 150ಕ್ಕಿಂತಲೂ ಅಧಿಕ ಮಂದಿಯ ಪ್ರಾಣಹಾನಿಯಾಗಿದೆ. ಮೇಥಿಗಳು ಮತ್ತು ಕುಕಿಗಳು ಶಸ್ತಾಸ್ತ್ರ ಹಿಡಿದು ಹೋರಾಡುತ್ತಿದ್ದಾರೆ. ಮೇ 3ರಿಂದ ಆರಂಭವಾಗಿರುವ ಧರ್ಮದ್ವೇಷದ ಈ ಚಟುವಟಿಕೆ ಇನ್ನೂ ನಿಂತಿಲ್ಲ. ನೌಖಾಲಿಯಲ್ಲಿ ಹಿಂದೂಗಳ ವಿರುದ್ಧ ತಿರುಗಿ ಬಿದ್ದಿದ್ದ ಮುಸ್ಲಿಮರನ್ನು ಮತ್ತು ಕೊಲ್ಕತ್ತಾದಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಸಾಧಿಸುತ್ತಿದ್ದ ಹಿಂದೂಗಳನ್ನು ಮನುಷ್ಯರಾಗಿ ಆಲೋಚಿಸುವಂತೆ ಮಾಡುವುದಕ್ಕೆ ಗಾಂಧೀಜಿಗೆ ಸಾಧ್ಯವಾಗಿತ್ತು. ಅವರು ಆ ಪ್ರದೇಶಗಳಿಗೆ ಭೇಟಿಕೊಟ್ಟು, ಜನರೊಂದಿಗೆ ಬೆರೆತು, ಉಪವಾಸ ಆಚರಿಸಿ ಜನರ ಭಾವನೆಯಲ್ಲಿ ಬದಲಾವಣೆಯನ್ನು ತರಲು ಯಶಸ್ವಿಯಾಗಿದ್ದರು. ಆದರೆ ಇವತ್ತು ಇಂಥ ನಾಯಕರೇ ಕಾಣಿಸುತ್ತಿಲ್ಲ. ಸರ್ವರನ್ನೂ ಜೊತೆಗೆ ಕೊಂಡೊಯ್ಯಬೇಕಾದ ಮತ್ತು ಜನರ ಸಂಕಷ್ಟಕ್ಕೆ ಸದಾ ಸ್ಪಂದಿಸಬೇಕಿದ್ದ ಪ್ರಧಾನಿ ಆ ಹೊಣೆಗಾರಿಕೆಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಮಣಿಪುರಕ್ಕೆ ಬೆಂಕಿ ಬಿದ್ದು ಮೂರು ತಿಂಗಳು ಕಳೆದ ಬಳಿಕ ಮಣಿಪುರದ ಬಗ್ಗೆ ಕೇವಲ ಎರಡೇ ಎರಡು ನಿಮಿಷ ಪ್ರಧಾನಿ ಮಾತನಾಡಿದ್ದಾರೆ. ಅದೂ ಕೂಡಾ ಪ್ರತಿಪಕ್ಷಗಳು ಪಾರ್ಲಿಮೆಂಟ್ನಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿ ಪ್ರಧಾನಿ ಮಾತಾಡಲೇಬೇಕಾದ ಅನಿವಾರ್ಯ ಸ್ಥಿತಿಯನ್ನು ನಿರ್ಮಿಸಿದ ಬಳಿಕ. ನೌಕಾಲಿ ಭಾರತದ ಭಾಗವಾಗುವುದಿಲ್ಲವೆಂದು ಗೊತ್ತಿದ್ದೂ ಕೂಡಾ ಗಾಂಧೀಜಿ ಅಲ್ಲಿಗೆ ತೆರಳಿದ್ದರು. ಜನರೊಂದಿಗೆ ಬೆರೆತಿದ್ದರು. ಭೂಮಿ ಯಾರ ಪಾಲಾಗುತ್ತದೆ ಎಂಬುದರ ಆಚೆಗೆ ಅಲ್ಲಿ ಬದುಕುತ್ತಿರುವವರ ಪ್ರಾಣ-ಮಾನಕ್ಕೆ ಅವರು ಪ್ರಾಮುಖ್ಯತೆ ನೀಡಿದ್ದರು. ಹಾಗಂತ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಗಾಂಧೀಜಿ ದೇಶದ ಪ್ರಧಾನಿಯೋ ರಾಷ್ಟ್ರಪತಿಯೋ ಏನೂ ಆಗಿರಲಿಲ್ಲ. ಆದರೆ ಮಣಿಪುರ ಈ ದೇಶದ್ದೇ ಒಂದು ತುಂಡು ಭಾಗ. ಅಲ್ಲದೇ, ಈಗಿನ ಗಾಂಧಿರಹಿತ ಭಾರತಕ್ಕೆ ಪ್ರಧಾನಿಯೇ ನಾಯಕ. ಆದರೆ ಈಗಿನ ಪ್ರಧಾನಿ ಮಣಿಪುರಕ್ಕೆ ಈವರೆಗೆ ಭೇಟಿ ಕೊಟ್ಟಿಲ್ಲ. ಅಲ್ಲಿನ ಜನರ ಭಾವನೆಗಳನ್ನು ಆಲಿಸಿಲ್ಲ. ಅತ್ಯಂತ ಸಂಕಷ್ಟದಲ್ಲಿರುವ ಸಮಯದಲ್ಲಿ ಜನರು ಪ್ರಧಾನಿಯ ಉಪಸ್ಥಿತಿಯನ್ನು ಬಯಸುತ್ತಾರೆ. ಅವರಲ್ಲಿ ತಮ್ಮ ಸಂಕಷ್ಟಗಳನ್ನು ಹೇಳಿಕೊಂಡು ಹಗುರವಾಗುತ್ತಾರೆ. ಆದರೆ ಕಳೆದ ಮೂರು ತಿಂಗಳ ಅವಧಿಯಲ್ಲಿ ದೇಶದ ಇತರ ರಾಜ್ಯಗಳಿಗೆ ಮತ್ತು ವಿದೇಶಕ್ಕೆ ಪ್ರಯಾಣಿಸಿರುವ ಪ್ರಧಾನಿ ಮಣಿಪುರಕ್ಕೆ ಭೇಟಿ ಕೊಡುವುದು ಬಿಡಿ, ಮಣಿಪುರಿಗಳಲ್ಲಿ ಧೈರ್ಯ ತುಂಬುವುದಕ್ಕೆ ಒಂದೈದು ನಿಮಿಷವನ್ನೂ ವ್ಯಯಿಸಿಲ್ಲ. ಇಲ್ಲಿ ಇನ್ನೂ ಒಂದು ಆಘಾತಕಾರಿ ಅಂಶವಿದೆ. ಅದೇನೆಂದರೆ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಕಳೆದ ಆಗಸ್ಟ್ ನಲ್ಲಿ 11 ಮಂದಿ ಅತ್ಯಾಚಾರಿ ಅಪರಾಧಿಗಳನ್ನು ಬಿಡುಗಡೆಗೊಳಿಸಲಾಗಿತ್ತು. 2002ರಲ್ಲಿ ಗುಜರಾತ್ನಲ್ಲಿ ನಡೆದ ಧರ್ಮದ್ವೇಷದ ಹಿಂಸೆಯ ವೇಳೆ ಬಿಲ್ಕಿಸ್ ಬಾನು ಎಂಬ 22 ವರ್ಷದ ಗರ್ಭಿಣಿಯ ಮೇಲೆ ಅತ್ಯಾಚಾರಗೈದ, ಆಕೆಯ ಮಗಳನ್ನು ನೆಲಕ್ಕೆ ಬಡಿದು ಹತ್ಯೆಗೈದುದೂ ಸೇರಿದಂತೆ 7 ಮಂದಿಯ ಹತ್ಯೆ ನಡೆಸಿದ ಅಪರಾಧಿಗಳು ಇವರು. ಇವರು ಜೀವನಪರ್ಯಂತ ಜೈಲಲ್ಲಿರಬೇಕು ಎಂಬುದು ನ್ಯಾಯಾಲಯದ ನಿಲುವಾಗಿತ್ತು. ಆದರೆ ಇವರನ್ನು ಬಿಡುಗಡೆಗೊಳಿಸಲು ಗುಜರಾತ್ ಸರಕಾರ ನಿರ್ಧರಿಸಿತು. ಹಾಗಂತ, ಈ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯ ತೀರ್ಪು ನೀಡಿರುವುದರಿಂದ ಕೇಂದ್ರ ಸರಕಾರದ ಒಪ್ಪಿಗೆಯ ಹೊರತು ಬಿಡುಗಡೆ ಅಸಾಧ್ಯವಾಗಿತ್ತು. ಆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆಗೆ ಅನುಮತಿ ಕೋರಿ ಗುಜರಾತ್ ಸರಕಾರ ಪತ್ರ ಬರೆಯಿತು. ಕೇಂದ್ರ ಸರಕಾರ ಈ ಬಿಡುಗಡೆಗೆ ಅನುಮತಿಯನ್ನೂ ನೀಡಿತು. ಸ್ವಾತಂತ್ರ್ಯದ ಅಮೃತ ಮಹೋತ್ಸವ ನಡೆಯುತ್ತಿರುವ ವೇಳೆಯಲ್ಲೇ ಈ ಅಪರಾಧಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಲಾಯಿತು. ಪ್ರಧಾನಿ ಮನಸ್ಸು ಮಾಡಿದ್ದಿದ್ದರೆ ಈ ಬಿಡುಗಡೆ ಸಾಧ್ಯವೇ ಇರಲಿಲ್ಲ. ಸ್ವತಂತ್ರಗೊಂಡು 75 ವರ್ಷಗಳಾಗುವಾಗ ದೇಶ ಎತ್ತ ಕಡೆ ಮುಖ ಮಾಡಿದೆ ಎಂಬುದನ್ನು ಇದು ಸೂಚಿಸುತ್ತದೆ.</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ನಿಜವಾಗಿ, ಗಾಂಧೀಜಿಯ ಹೆಸರನ್ನು ಉಚ್ಚರಿಸಲೂ ಲಾಯಕ್ಕಲ್ಲದ ಹೆಚ್ಚಿನವರು ಇವತ್ತು ಜನಪ್ರತಿನಿಧಿಗಳಾಗಿದ್ದಾರೆ. ಹಲ್ಲೆ, ಹತ್ಯೆ, ಅತ್ಯಾಚಾರ, ದ್ವೇಷಭಾಷಣ, ಭ್ರಷ್ಟಾಚಾರ ಇತ್ಯಾದಿ ಕೊಳಕುಗಳನ್ನು ಅಂಟಿಸಿಕೊಳ್ಳದೇ ಸ್ವಚ್ಛವಾಗಿರುವ ಜನಪ್ರತಿನಿಧಿಗಳ ಸಂಖ್ಯೆ ವರ್ಷಂಪ್ರತಿ ಕಡಿಮೆಯಾಗುತ್ತಿದೆ. ಸ್ವಾತಂತ್ರ್ಯದ 75 ವರ್ಷಗಳಲ್ಲಿ ಪ್ರಾಮಾಣಿಕತೆ, ನೈತಿಕತೆ, ಧರ್ಮ, ಮೌಲ್ಯ ಇತ್ಯಾದಿಗಳ ಅರ್ಥವೇ ಬದಲಾಗಿದೆ. ಪ್ರಧಾನಿ ಸಹಿತ ಜನಪ್ರತಿನಿಧಿಗಳು ಪ್ರತಿ ಮಾತನ್ನೂ ಓಟಿನ ಲೆಕ್ಕಾಚಾರದಿಂದಲೇ ಆಡುತ್ತಾರೆ. ಮುಸ್ಲಿಮರ ಮತಗಳೇ ಬೇಡ ಎಂದು ಹೇಳುವಷ್ಟು ರಾಜಕೀಯ ಕೊಳೆತು ಹೋಗಿದೆ. ಕೋಮುಗಲಭೆಯನ್ನೂ ಓಟಿನ ದೃಷ್ಟಿಕೋನದಿಂದಲೇ ನೋಡಲಾಗುತ್ತದೆ. ಭ್ರಷ್ಟಾಚಾರಿ ತಮ್ಮ ಪಕ್ಷದವರಾದರೆ ಸಮರ್ಥಿಸುವುದು ಮತ್ತು ಅನ್ಯ ಪಕ್ಷದವನಾದರೆ ಪ್ರತಿಭಟಿಸುವುದು ಎಂಬಲ್ಲಿಗೆ ನೈತಿಕತೆ ಕುಸಿದು ಹೋಗಿದೆ. ರೈಲು ಅಪಘಾತದ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಲಾಲ್ ಬಹದ್ದೂರ್ ಶಾಸ್ತ್ರಿ ಇವತ್ತಿನ ರಾಜಕಾರಣದಲ್ಲಿ ದಡ್ಡ ಅನಿಸಿಕೊಂಡಿದ್ದಾರೆ. ಅಂದಹಾಗೆ,</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">1947ರ ಭಾರತ ಮತ್ತು 2023ರ ಭಾರತವನ್ನು ತಕ್ಕಡಿಯಲ್ಲಿಟ್ಟು ತೂಗುವಾಗ ಖುಷಿ ಮತ್ತು ದುಃಖ ಎರಡರ ಅನುಭವವೂ ಉಂಟಾಗುತ್ತದೆ. 47ರ ಭಾರತ ಸ್ವತಃ ಸೂಜಿಯನ್ನು ತಯಾರಿಸಲಾರದಷ್ಟು ಬಡವಾಗಿತ್ತು. ಆದರೆ, ಹೃದಯದಲ್ಲಿ ಶ್ರೀಮಂತವಾಗಿತ್ತು. 2023ರ ಭಾರತ ಚಂದ್ರನಲ್ಲಿಗೆ ರಾಕೆಟ್ ಕಳುಹಿಸುವಷ್ಟು ಶ್ರೀಮಂತವಾಗಿದೆ. ಆದರೆ, ಹೃದಯದಲ್ಲಿ ಬಡವಾಗಿದೆ. ಬರಬರುತ್ತಾ ಹಿಂದೂ ಮತ್ತು ಮುಸ್ಲಿಮರನ್ನು ಅಥವಾ ಹಿಂದೂ ಮತ್ತು ಕ್ರೈಸ್ತರನ್ನು ಕಿಡಿ ಹೊತ್ತಿಕೊಳ್ಳುವ ಎರಡು ವೈರಿ ವಸ್ತುಗಳಂತೆ ಪರಿವರ್ತಿಸಿ ಬಿಡಲಾಗಿದೆ. ಅಭಿವೃದ್ಧಿ ರಾಜಕಾರಣ ಸರಿದು ಹೋಗಿ ದ್ವೇಷ ರಾಜಕಾರಣ ಮುನ್ನೆಲೆಗೆ ಬಂದಿದೆ. ನಿಜವಾಗಿ, 2023ರ ಭಾರತವನ್ನು ಕಂಡು 47ರ ಭಾರತ ಸಂಭ್ರಮಿಸಬೇಕಿತ್ತು. ಆದರೆ, ಅಂಥದ್ದೊಂದು ಸಂತಸಕ್ಕೆ ಮಣಿಪುರಗಳು, ಹರ್ಯಾಣಗಳು ಅವಕಾಶ ಕೊಡುತ್ತಿಲ್ಲ. ಆ 11 ಮಂದಿ ಅಪರಾಧಿಗಳಂತೂ 47ರ ಭಾರತ ನಾಚುವಂತೆ ಎದೆ ಸೆಟೆದು ನಡೆದಾಡುತ್ತಿದ್ದಾರೆ. ಇದು ನಿಜಕ್ಕೂ ವಿಷಾದನೀಯ.</span><br style="background-color: white; color: #222222; font-family: Arial, Helvetica, sans-serif; font-size: small;" /></div>a k kukkilahttp://www.blogger.com/profile/04432257424497331465noreply@blogger.com0tag:blogger.com,1999:blog-2716482703415659532.post-55961874547406486532023-08-14T04:22:00.000-07:002023-08-14T04:22:51.262-07:00 ಹರ್ಯಾಣ ಹಿಂಸೆ: ಮುಸ್ಲಿಮರನ್ನು ಬಲಿಪಶು ಮಾಡುವ ಮೊದಲು... <p></p><div class="separator" style="clear: both; text-align: center;"><a href="https://blogger.googleusercontent.com/img/b/R29vZ2xl/AVvXsEgW4JJlTmvIBpwzGRLhx0ce2fKgF-otx-V0Rg2oA-qd9vD5MyMWzB8j7NuvsbTI-fn34Zrq6Ly3urxboLy2J3S69pojmwxAqxGZ6wAj-oUF0tyPU3F39LjHkeCyQhSt1HlaPHpCyxdoK5xm1WjC_MdtFC4ZY_UiX0lj-WeEu3FSttDBhlnXcwOIQN9x2i9G/s1138/edit%20picnew.jpg" imageanchor="1" style="margin-left: 1em; margin-right: 1em;"><img border="0" data-original-height="559" data-original-width="1138" height="196" src="https://blogger.googleusercontent.com/img/b/R29vZ2xl/AVvXsEgW4JJlTmvIBpwzGRLhx0ce2fKgF-otx-V0Rg2oA-qd9vD5MyMWzB8j7NuvsbTI-fn34Zrq6Ly3urxboLy2J3S69pojmwxAqxGZ6wAj-oUF0tyPU3F39LjHkeCyQhSt1HlaPHpCyxdoK5xm1WjC_MdtFC4ZY_UiX0lj-WeEu3FSttDBhlnXcwOIQN9x2i9G/w400-h196/edit%20picnew.jpg" width="400" /></a></div><br /><br /><p></p><p><span style="background-color: white; color: #222222; font-family: Arial, Helvetica, sans-serif; font-size: small;">ಹರ್ಯಾಣದ ನೂಹ್ ಮತ್ತು ಗುರುಗ್ರಾಮ್ ಜಿಲ್ಲೆಗಳು ಅವಳಿ-ಜವಳಿಗಳಂತೆ ಅಕ್ಕ-ಪಕ್ಕ ಇವೆ. ಗುರುಗ್ರಾಮ್ ಎಂಬುದು ದೇಶದಲ್ಲಿಯೇ ಅತ್ಯಂತ ಮುಂದುವರಿದ ಜಿಲ್ಲೆ. ಬೆಂಗಳೂರು ಮತ್ತು ಮುಂಬೈ ಯನ್ನು ಬಿಟ್ಟರೆ ದೇಶಕ್ಕೆ ಅತ್ಯಧಿಕ ಆದಾಯವನ್ನು ತಂಡುಕೊಡುವ ಮೂರನೇ ಜಿಲ್ಲೆ ಈ ಗುರುಗ್ರಾಮ್. ಇಲ್ಲಿ ಮಾಲ್ಗಳಿವೆ, ಆಸ್ಪತ್ರೆಗಳಿವೆ, ಯುನಿವರ್ಸಿಟಿಗಳಿವೆ, ಸಣ್ಣ-ಪುಟ್ಟ 500 ಕಂಪೆನಿಗಳಿವೆ. ಮೂಲಭೂತ ಸೌಲಭ್ಯಗಳು ವಿಫುಲವಾಗಿರುವ ಜಿಲ್ಲೆ ಇದು. ಆದರೆ, ನೂಹ್ ಜಿಲ್ಲೆ ಇದಕ್ಕೆ ಸಂಪೂರ್ಣ ತದ್ವಿರುದ್ಧ. ಇಲ್ಲಿ ಒಂದೇ ಒಂದು ಯುನಿವರ್ಸಿಟಿಯಿಲ್ಲ. ರೈಲ್ವೆ ಸೌಲಭ್ಯವಿಲ್ಲ. ಕುಡಿಯುವ ನೀರಿಗೆ ತತ್ವಾರ. ನೀರಾವರಿ ಸೌಲಭ್ಯವಿಲ್ಲ. ಆರೋಗ್ಯ ಮತ್ತು ಶಿಕ್ಷಣಕ್ಕೆ ಬೇಕಾದ ಸೌಲಭ್ಯವೂ ಇಲ್ಲ. 2018ರಲ್ಲಿ ನೀತಿ ಆಯೋಗವು ತಯಾರಿಸಿದ ದೇಶದಲ್ಲಿಯೇ ಅತ್ಯಂತ ಹಿಂದುಳಿದ ಜಿಲ್ಲೆಗಳ ಪಟ್ಟಿಯಲ್ಲಿ ಈ ನೂಹ್ ಕೂಡಾ ಸ್ಥಾನ ಪಡಕೊಂಡಿದೆ. ಇದೇ ನೂಹ್ನಲ್ಲಿ ಜುಲೈ 31ರಂದು ಹಿಂಸೆ ಸ್ಫೋಟಿಸಿದೆ. </span></p><p><span style="background-color: white; color: #222222; font-family: Arial, Helvetica, sans-serif; font-size: small;">ಸಂಘಪರಿವಾರ ಹಮ್ಮಿಕೊಂಡ ಬ್ರಿಜ್ಮಂಡಲ್ ಜಲಾಭಿಷೇಕ್ ಯಾತ್ರೆಯು ಹಿಂಸಾಕೃತ್ಯಗಳಿಗೆ ಸಾಕ್ಷಿಯಾಯಿತಲ್ಲದೇ ಇಬ್ಬರು ಹೋಮ್ ಗಾರ್ಡ್ ಗಳು, ಓರ್ವ ಮಸೀದಿ ಇಮಾಮ್ ಸೇರಿದಂತೆ 6 ಮಂದಿ ಸಾವಿಗೀಡಾದರು. ಅನೇಕ ವಾಹನಗಳು ಬೆಂಕಿಗಾಹುತಿಯಾದುವು. ಸುಮಾರು 100ರಷ್ಟು ಮಂದಿ ಗಾಯಗೊಂಡರು. 150ರಷ್ಟು ಎಫ್ಐಆರ್ಗಳು ದಾಖಲಾದುವು. 200ಕ್ಕಿಂತಲೂ ಅಧಿಕ ಮಂದಿಯನ್ನು ಬಂಧಿಸಲಾಯಿತು.</span></p><p><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಮುಸ್ಲಿಮರೇ ಅಧಿಕ ಸಂಖ್ಯೆಯಲ್ಲಿರುವ ಈ ಜಿಲ್ಲೆಯ ಮಂದಿ ಮಳೆ ಆಧಾರಿತ ಕೃಷಿಯನ್ನೇ ಅವಲಂಬಿಸಿಕೊAಡಿದ್ದಾರೆ. ಸರಕಾರದ ಅವಕೃಪೆಗೆ ಒಳಗಾಗಿರುವ ಕಾರಣ ಸೂಕ್ತ ನೀರಾವರಿ ಸೌಲಭ್ಯವೂ ಇಲ್ಲ. ಹೈನುಗಾರಿಕೆ, ಆಡು-ಕುರಿ ಸಾಕಾಣೆ ಮತ್ತು ಗುಜರಿ ಅಂಗಡಿಗಳ ನಿರ್ವಹಣೆಯ ಮೂಲಕ ಇಲ್ಲಿನ ಜನರು ಬದುಕು ಕಟ್ಟಿಕೊಂಡಿದ್ದಾರೆ. ಸರಕಾರದ ತೀವ್ರ ನಿರ್ಲಕ್ಷ್ಯದ ಹೊರತಾಗಿಯೂ ತಮ್ಮ ಪಾಡಿಗೆ ಹೊಟ್ಟೆ ತುಂಬಿಕೊಳ್ಳುತ್ತಿರುವ ನೂಹ್ನ ಜನರನ್ನು ಧಾರ್ಮಿಕವಾಗಿ ಪ್ರಚೋದಿಸುವ ಪ್ರಯತ್ನಗಳು ವರ್ಷಗಳಿಂದ ನಡೆಯುತ್ತಲೇ ಬಂದಿದ್ದುವು. ಕೇವಲ ನೂಹ್ ಮಾತ್ರ ಅಲ್ಲ, ಅತ್ಯಂತ ಮುಂದುವರಿದ ಗುರುಗ್ರಾಮ್ನಲ್ಲೂ ಇಂಥದ್ದೇ ಪ್ರಚೋದನಕಾರಿ ಭಾಷಣಗಳು ನಡೆಯುತ್ತಿದ್ದುವು. ಶುಕ್ರವಾರದ ಜುಮಾ ನಮಾಝನ್ನು ನಗರದ ತೆರೆದ ಬಯಲಲ್ಲಿ ನಡೆಸದಂತೆ 2018ರಿಂದಲೂ ಸಂಘಪರಿವಾರ ಸರಕಾರಕ್ಕೆ ತಾಕೀತು ಮಾಡುತ್ತಲೇ ಬಂದಿದೆ. ಇದರಿಂದಾಗಿ 116 ಸ್ಥಳಗಳಲ್ಲಿ ನಡೆಯುತ್ತಿದ್ದ ಜುಮಾ ನಮಾಝï ಇದೀಗ 6ಕ್ಕೆ ಇಳಿದಿದೆ. </span></p><p><span style="background-color: white; color: #222222; font-family: Arial, Helvetica, sans-serif; font-size: small;"> ಗುರುಗ್ರಾಮ್ನಲ್ಲಿರುವ ಮಾಂಸದಂಗಡಿಗಳ ವಿರುದ್ಧ ಪದೇ ಪದೇ ದಾಳಿಯನ್ನೋ ಭೀತಿಯನ್ನೋ ಹಬ್ಬಿಸಲಾಗುತ್ತಲೇ ಇದೆ. ಇಂಥ ಮಾಂಸ ದಂಗಡಿಗಳ ಮಾಲಿಕರು ಬಹುತೇಕ ಮುಸ್ಲಿಮರು. ನವರಾತ್ರಿ ಹಬ್ಬದ ಪ್ರಯುಕ್ತ ಎಲ್ಲ ಮಾಂಸದಂಗಡಿಗಳನ್ನೂ ಮುಚ್ಚಿಸಲಾಗುತ್ತದೆ. 2021ರಲ್ಲಿ ಕ್ರಿಸ್ಮಸ್ ಸಂಭ್ರಮ ಕೂಟಕ್ಕೆ ಇದೇ ಸಂಘಪರಿವಾರ ದಾಳಿ ಮಾಡಿ ದಾಂಧಲೆಗೈದಿತ್ತು. 2 ವರ್ಷಗಳ ಹಿಂದೆ ಗುರುಗ್ರಾಮ್ನ ಪಟೌಡಿ ಎಂಬ ಪ್ರದೇಶದಲ್ಲಿ ಮಹಾ ಪಂಚಾಯತನ್ನು ಏರ್ಪಡಿಸಲಾಗಿತ್ತಲ್ಲದೇ, ಅಲ್ಪಸಂಖ್ಯಾತರ ವಿರುದ್ಧ ಹಿಂಸೆಗೆ ಬಹಿರಂಗ ಕರೆ ಕೊಡಲಾಗಿತ್ತು. ಮೊನ್ನೆ ಜುಲೈ 31ರಂದು ಸಂಘಪರಿವಾರ ಹಮ್ಮಿಕೊಂಡಿದ್ದ ಬ್ರಿಜ್ಮಂಡಲ್ ಜಲಾಭಿಷೇಕ್ ಯಾತ್ರೆ ಕೂಡಾ ಪ್ರಚೋದನಕಾರಿ ಭಾಷಣಗಳಿಂದ ಮುಕ್ತವಾಗಿರಲಿಲ್ಲ. ನೂಹ್ ಜಿಲ್ಲೆಯ ಮಂದಿರಗಳನ್ನು ಮಹಾಭಾರತ ಕಾಲದ ವೈಭವಕ್ಕೆ ಮರಳಿ ತರಲಾಗುವುದು ಎಂದು ಯಾತ್ರೆಯಲ್ಲಿ ಘೋಷಿಸಲಾಗಿತ್ತು. ನೂಹ್ ಜಿಲ್ಲೆಯ ಪಕ್ಕದ ಅಲ್ವಾರ್ ನಲ್ಲಿ ಜುನೈದ್ ಮತ್ತು ನಾಸಿರ್ ಎಂಬಿಬ್ಬರನ್ನು ಸುಟ್ಟು ಕೊಂದ ಆರೋಪಿ ಮೋನು ಮನೆಸರ್ ಎಂಬವ ಈ ಯಾತ್ರೆಗೂ ಮುನ್ನ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ಹಂಚಿಕೊಂಡಿದ್ದ. ತಾನು ಈ ಯಾತ್ರೆಯಲ್ಲಿ ಭಾಗಿಯಾಗುವೆ, ನೀವೂ ಬನ್ನಿ ಎಂದು ಸಾರ್ವಜನಿಕರಲ್ಲಿ ವಿನಂತಿಸಿದ್ದ. ಆತ ಈ ಇಬ್ಬರ ಹತ್ಯೆಗೆ ಸಂಬಂಧಿಸಿದಂತೆ ರಾಜಸ್ತಾನ ಪೊಲೀಸರಿಗೆ ಬೇಕಾಗಿರುವ ವ್ಯಕ್ತಿ. ಇಂಥವ ಈ ಯಾತ್ರೆಯಲ್ಲಿ ಭಾಗಿಯಾಗುತ್ತಾನೆನ್ನುವುದೇ ಸಾರ್ವಜನಿಕ ಆಕ್ರೋಶ ವನ್ನು ಹುಟ್ಟು ಹಾಕಿದೆ. ಈತ ವೀಡಿಯೋ ಹಂಚಿಕೊಂಡ ಬಳಿಕ ಪರ-ವಿರುದ್ಧ ಅಭಿಪ್ರಾಯಗಳು ಸೋಶಿಯಲ್ ಮೀಡಿಯಾದಲ್ಲಿ ಧಾರಾಳ ಹಂಚಿಕೆಯಾಗಿವೆ. ಪ್ರಚೋದನಕಾರಿ ಬರಹ-ವೀಡಿಯೋಗಳೂ ಹರಿದಾಡಿವೆ. ಆತನನ್ನು ತಡೆಯಬೇಕೆಂಬ ಆಕ್ರೋಶವೂ ಕೆಲವರಲ್ಲಿ ಕಾಣಿಸಿಕೊಂಡಿದೆ. ಇದೇವೇಳೆ,</span></p><p><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಅಭೂತಪೂರ್ವವೆಂಬಂತೆ ಪಕ್ಕದ ರಾಜಸ್ತಾನ, ಉತ್ತರ ಪ್ರದೇಶಗಳಿಂದ ಭಾರೀ ಸಂಖ್ಯೆಯ ಜನರು ಈ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. 15 ಸಾವಿರಕ್ಕಿಂತಲೂ ಅಧಿಕ ಮಂದಿಯ ಈ ಭಾರೀ ಪ್ರವಾಹವನ್ನು ಪೊಲೀಸರೂ ನಿರೀಕ್ಷಿಸಿರಲಿಲ್ಲ. ಗೋರಕ್ಷಕ್ ಎಂದು ಬರೆಯಲಾದ ಹಲವು ಕಪ್ಪು ಬಣ್ಣದ ಕಾರುಗಳ ಪೈಕಿ ಒಂದರಲ್ಲಿ ಈ ಮನೆಸರ್ ಇದ್ದಾನೆ ಎಂಬ ವದಂತಿಗಳೂ ಹಬ್ಬಿವೆ. ಅಂದಹಾಗೆ,</span></p><p><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಹರ್ಯಾಣದಲ್ಲಿ ಬ್ರಿಜ್ಮಂಡಲ್ ಜಲಾಭಿಷೇಕ್ ಯಾತ್ರೆ ಮತ್ತು ಕನ್ವಾಲ್ ಯಾತ್ರೆ ಪ್ರತಿ ವರ್ಷವೂ ನಡೆಯುತ್ತಿದೆ. ಹೀಗಿರುವಾಗ, ಇಷ್ಟು ವರ್ಷಗಳಲ್ಲಿ ಕಾಣಿಸಿಕೊಳ್ಳದ ಹಿಂಸೆ ಈ ಬಾರಿ ಸ್ಫೋಟಗಳ್ಳಲು ಕಾರಣವೇನು? ನೂಹ್ ಎಂಬುದು ಸ್ವಾತಂತ್ರ್ಯಾ ನಂತರ ಹಿಂದೂ- ಮುಸ್ಲಿಮ್ ಹಿಂಸೆಗೆ ಸಾಕ್ಷಿಯಾಗದ ಜಿಲ್ಲೆ. ತಮ್ಮ ಪಕ್ಕದಲ್ಲೇ ವೈಭವೋಪೇತವಾಗಿ ಗುರುಗ್ರಾಮ್ ಜಿಲ್ಲೆ ಬೆಳೆಯುತ್ತಿದ್ದರೂ ತಮಗಾದ ಅನ್ಯಾಯವನ್ನು ಪ್ರಶ್ನಿಸದೇ ತಮ್ಮ ಪಾಡಿಗಿದ್ದ ಜಿಲ್ಲೆ ಈ ನೂಹ್. ಹೀಗಿದ್ದ ಮೇಲೆ ದಿಢೀರಿರ್ ಆಗಿ ಈ ಹಿಂಸೆ ಸ್ಫೋಟಗೊಂಡದ್ದೇಕೆ? ಉದ್ದೇಶಪೂರ್ವಕವಾಗಿ ಇಂಥದ್ದೊಂದು ಹಿಂಸೆಯನ್ನು ಪ್ರಚೋದಿಸಲಾಯಿತೇ? ಲ್ಯಾಂಡ್ ಮಾಫಿಯಾದ ಕೈವಾಡ ಈ ಹಿಂಸಾಚಾರದ ಹಿಂದಿರಬಹುದೇ? ಹಿಂಸಾಚಾರದ ಬಳಿಕದ ಬೆಳವಣಿಗೆಗಳನ್ನು ನೋಡಿದರೆ, ಹೌದು ಅನ್ನುವಂತಿದೆ. ಹಿಂಸಾಚಾರದ ಎರಡೇ ದಿನದೊಳಗೆ ಹರ್ಯಾಣ ಸರಕಾರವು ಈ ನೂಹ್ ಜಿಲ್ಲೆಯಲ್ಲಿ ಬುಲ್ಡೋಜರ್ನೊಂದಿಗೆ ಪ್ರತ್ಯಕ್ಷವಾಯಿತು. ಸುಮಾರು 300ಕ್ಕಿಂತಲೂ ಅಧಿಕ ಬಡ ಗುಡಿಸಲುಗಳನ್ನು ಧ್ವಂಸ ಮಾಡಿತು. ಅಲ್ಲಿದ್ದವರನ್ನು ರೋಹಿಂಗ್ಯನ್ನರು, ಅಕ್ರಮ ವಲಸಿಗರು ಎಂದು ನಾಮಕರಣ ಮಾಡಿತು. ಒಂದುವೇಳೆ, ಆ ಗುಡಿಸಲು ಅಕ್ರಮವೇ ಆಗಿದ್ದಿದ್ದರೆ, ಇಷ್ಟು ವರ್ಷ ಸರಕಾರಕ್ಕೆ ಅದು ಗೊತ್ತಿರಲಿಲ್ಲವೇ? ಅವುಗಳನ್ನು ತೆರವುಗೊಳಿಸಲು ಹಿಂಸಾಚಾರದ ವರೆಗೆ ಸರಕಾರ ವಿಳಂಬ ಮಾಡಿತೇಕೆ? ಅಷ್ಟಕ್ಕೂ, ಈ ಮನೆಗಳನ್ನು ಕೆಡಹುವ ಪೂರ್ವದಲ್ಲಿ ಸರಕಾರ ನೋಟೀಸು ಜಾರಿ ಮಾಡಿದೆಯೇ? ಈ ಗುಡಿಸಲುಗಳಿಂದ ಉತ್ತರಗಳನ್ನು ಪಡಕೊಂಡಿದೆಯೇ?</span></p><p><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಬಹುಶಃ, ಹರ್ಯಾಣ ಹಿಂಸೆಯ ಹಿಂದೆ ಹಿಂದೂ-ಮುಸ್ಲಿಮ್ ಎಂಬ ಗೋಚರ ಕಾರಣಕ್ಕಿಂತ ಹೊರತಾದ ಪ್ರಬಲ ಅಗೋಚರ ಕಾರಣಗಳು ಇದ್ದಿರುವಂತಿದೆ. ಬಡವರನ್ನು ಒಕ್ಕಲೆಬ್ಬಿಸಿ ಆ ಜಾಗವನ್ನು ಕಬಳಿಸುವ ಉದ್ದೇಶದಿಂದಲೇ ಈ ಹಿಂಸಾಚಾರಕ್ಕೆ ರೂಪು ನೀಡಲಾಗಿದೆಯೇ ಎಂಬ ಅನುಮಾನವಿದೆ. ಭೂಮಾಫಿಯಾದ ಮಂದಿ ಈ ಧಾರ್ಮಿಕ ಯಾತ್ರೆಯನ್ನು ತಮ್ಮ ಉದ್ದೇಶ ಜಾರಿಗಾಗಿ ಬಳಸಿಕೊಂಡಿರುವಂತಿದೆ ಅಥವಾ ಸಮಾಜ ಘಾತುಕರು ಮತ್ತು ಭೂಮಾಫಿಯಾದ ಮಂದಿ ಜೊತೆ ಸೇರಿಯೇ ಈ ಹಿಂಸಾಚಾರದ ತಂತ್ರ ಹೆಣೆದಿರುವಂತಿದೆ. ಇದರ ಹೊಲಬರಿಯದ ಬಡಪಾಯಿಗಳು ಹಿಂಸೆಯ ಕುಲುಮೆಗೆ ಬಿದ್ದಿರುವಂತಿದೆ.</span><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;"><br /></span></p><p><span style="background-color: white; color: #222222; font-family: Arial, Helvetica, sans-serif; font-size: small;">ಪ್ರಭುತ್ವವೊಂದು ತನ್ನದೇ ನಾಗರಿಕರನ್ನು ತಾರತಮ್ಯದಿಂದ ನಡೆಸಿಕೊಂಡರೆ ಏನಾಗಬಹುದು ಎನ್ನುವುದಕ್ಕೆ ನೂಹ್ ಮತ್ತು ಗುರುಗ್ರಾಮ್ ಜಿಲ್ಲೆಗಳು ಪ್ರತ್ಯಕ್ಷ ಸಾಕ್ಷಿಯಾಗಿವೆ. ದೇಶದ 739 ಜಿಲ್ಲೆಗಳ ಪೈಕಿ ಅತ್ಯಂತ ಹಿಂದುಳಿದ ಜಿಲ್ಲೆಯಾಗಿ ನೂಹ್ ಗುರುತಿಸಿಕೊಳ್ಳಲು ಕಾರಣವೇನು? ಅದರ ಪಕ್ಕವೇ ಇರುವ ಗುರುಗ್ರಾಮ್ ಅತ್ಯಂತ ಅಭಿವೃದ್ಧಿ ಹೊಂದಿದ ಜಿಲ್ಲೆಯಾಗಿ ಗೌರವ ಗಿಟ್ಟಿಸಿಕೊಂಡದ್ದು ಹೇಗೆ? ನೂಹ್ ಅನ್ನು ನಿರ್ಲಕ್ಷಿಸಿ ಗುರುಗ್ರಾಮ್ ಅನ್ನು ಮುದ್ದಿಸುವುದಕ್ಕೆ ಪ್ರಭುತ್ವಕ್ಕೆ ಇರುವ ಕಾರಣಗಳೇನು? ಅಲ್ಪಸಂಖ್ಯಾತರು ಹೆಚ್ಚಿರುವ ಪ್ರದೇಶಗಳ ಅಭಿವೃದ್ಧಿಗೆ ಯಾವ ಕ್ರಮವನ್ನೂ ಕೈಗೊಳ್ಳದೇ ಇರುವುದು ಸರಕಾರಿ ನೀತಿಯ ಭಾಗವೇ? ಒಂದುಕಡೆ ಅಲ್ಪಸಂಖ್ಯಾತರು ಹೆಚ್ಚಿರುವ ಪ್ರದೇಶಗಳನ್ನು ಪಾಳು ಬಿಡುವುದು ಮತ್ತು ಇನ್ನೊಂದು ಕಡೆ ಅವರನ್ನು ಗುಜರಿ ಹೆಕ್ಕುವವರು, ಶಿಕ್ಷಣ ವಂಚಿತರು, ಒರಟರು, ನಾಗರಿಕ ಬದುಕಿಗೆ ಅಸೂಕ್ತರು ಎಂದೆಲ್ಲಾ ನಿಂದಿಸುವುದು ಎಷ್ಟು ಸರಿ? ಪ್ರಭುತ್ವದ ಅನ್ಯಾಯವನ್ನು ನಾಗರಿಕರ ಅಪರಾಧದಂತೆ ಬಿಂಬಿಸುವುದು ಯಾಕೆ?</span><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;"><br /></span></p><p><span style="background-color: white; color: #222222; font-family: Arial, Helvetica, sans-serif; font-size: small;">ಹರ್ಯಾಣದ ಹಿಂಸೆಯನ್ನು ಖಂಡಿಸುತ್ತಲೇ ಅದರ ಒಳ-ಹೊರಗನ್ನು ನಾಗರಿಕ ಸಮಾಜ ಗಂಭೀರ ವಿಶ್ಲೇಷಣೆಗೆ ಒಡ್ಡಬೇಕಾದ ಅಗತ್ಯವೂ ಇದೆ. ಇದು ಧರ್ಮದ ಕಾರಣಕ್ಕಾಗಿ ನಡೆದ ಘರ್ಷಣೆಯಂತೆ ಕಾಣಿಸುತ್ತಿಲ್ಲ. ಪ್ರಭುತ್ವದ ಅನ್ಯಾಯ, ಭೂಮಾಫಿಯಾ, ಪ್ರಚೋದನೆ.. ಇತ್ಯಾದಿಗಳ ಪಾತ್ರವೂ ಇದರ ಹಿಂದಿರುವಂತಿದೆ. ಮುಸ್ಲಿಮರನ್ನು ಬಲಿಪಶು ಮಾಡುವ ಮೊದಲು ಸಮಗ್ರ ಅಧ್ಯಯನ ನಡೆಯಬೇಕಿದೆ.</span></p><div class="nH aHU" style="color: #202124; font-family: "Google Sans", Roboto, RobotoDraft, Helvetica, Arial, sans-serif; position: relative;"><div class="nH hx aHo" style="color: #222222; min-width: 592px; padding: 0px;"><div class="nH" jslog="20686; u014N:xr6bB; 1:WyIjdGhyZWFkLWE6cjQ2MDQyODI3NTY1ODI1NTI2MTYiLG51bGwsbnVsbCxudWxsLG51bGwsbnVsbCxudWxsLG51bGwsbnVsbCxudWxsLG51bGwsbnVsbCxudWxsLFtdXQ.." role="list"><div aria-expanded="true" class="h7 ie nH oy8Mbf" role="listitem" style="clear: both; max-width: 100000px; outline: none; padding-bottom: 0px;" tabindex="-1"><div class="Bk" style="border-bottom-color: initial; border-bottom-style: initial; border-image: initial; border-left-color: initial; border-left-style: initial; border-radius: 0px; border-right-color: initial; border-right-style: initial; border-top-color: rgb(239, 239, 239); border-top-style: solid; border-width: 0px; float: left; margin-bottom: 0px; position: relative; width: 994px;"><div class="G3 G2" style="border-bottom: 0px rgba(100, 121, 143, 0.12); border-image: initial; border-left: 0px; border-radius: 0px; border-right: 0px; border-top: none; margin-bottom: 0px; margin-left: 0px; margin-right: 0px; padding-top: 0px;"><div id=":oc"><div class="adn ads" data-legacy-message-id="189cf62c2f1fa3e0" data-message-id="#msg-a:r-2511813313100076621" style="border-left: none; display: flex; padding: 0px;"><div class="gs" style="margin: 0px; padding: 0px 0px 20px; width: 922px;"><div><div class="ii gt" id=":of" jslog="20277; u014N:xr6bB; 1:WyIjdGhyZWFkLWE6cjQ2MDQyODI3NTY1ODI1NTI2MTYiLG51bGwsbnVsbCxudWxsLG51bGwsbnVsbCxudWxsLG51bGwsbnVsbCxudWxsLG51bGwsbnVsbCxudWxsLFtdXQ..; 4:WyIjbXNnLWE6ci0yNTExODEzMzEzMTAwMDc2NjIxIixudWxsLFtdXQ.." style="direction: ltr; font-size: 0.875rem; margin: 8px 0px 0px; padding: 0px; position: relative;"><div class="a3s aiL" id=":oe" style="font-family: Arial, Helvetica, sans-serif; font-feature-settings: normal; font-kerning: auto; font-optical-sizing: auto; font-size: small; font-stretch: normal; font-variant-alternates: normal; font-variant-east-asian: normal; font-variant-numeric: normal; font-variation-settings: normal; line-height: 1.5; overflow: hidden;"><div dir="auto"><div dir="auto"><br /></div></div><div class="yj6qo"></div><div class="adL"></div></div></div><div class="hi" style="background: rgb(242, 242, 242); border-bottom-left-radius: 1px; border-bottom-right-radius: 1px; margin: 0px; padding: 0px; width: auto;"></div></div></div><div class="ajx" style="clear: both;"></div></div><div class="gA gt acV" style="background-attachment: initial; background-clip: initial; background-image: initial; background-origin: initial; background-position: initial; background-repeat: initial; background-size: initial; border-bottom-left-radius: 0px; border-bottom-right-radius: 0px; border-top: none; font-size: 0.875rem; margin: 0px; padding: 0px; width: auto;"><div class="gB xu" jslog="184332; u014N:xr6bB;" style="border-top: 0px; padding: 0px;"><div class="ip iq" style="border-top: none; clear: both; margin: 0px; padding: 16px 0px;"><div id=":og"><table class="cf wS" role="presentation" style="border-collapse: collapse;"><tbody><tr><td class="amq" style="margin: 0px; padding: 0px 16px; vertical-align: top; visibility: hidden; width: 44px;"><img class="ajn bofPge" data-hovercard-id="akkukkila@gmail.com" id=":ny_0" jid="akkukkila@gmail.com" name=":ny" src="https://lh3.googleusercontent.com/a/AAcHTteq9Uu0wmlso9ATlx62zYqlBn5h4FpBojqA2JwexerV1EY=s40-p" style="border-radius: 50%; display: block; height: 40px; width: 40px;" /></td><td class="amr" style="margin: 0px; padding: 0px; width: 922px;"><div class="nr wR" style="background-color: white; border-radius: 1px; border: none; box-sizing: border-box; color: #222222; margin: 0px; padding: 0px; transition: none 0s ease 0s;"><div class="amn" style="align-items: center; color: inherit; display: flex; height: auto; line-height: 20px; padding: 0px;"><span class="ams bkH" id=":o9" jslog="21576; u014N:cOuCgd,Kr2w4b; 1:WyIjdGhyZWFkLWE6cjQ2MDQyODI3NTY1ODI1NTI2MTYiLG51bGwsbnVsbCxudWxsLG51bGwsbnVsbCxudWxsLG51bGwsbnVsbCxudWxsLG51bGwsbnVsbCxudWxsLFtdXQ..; 4:WyIjbXNnLWE6ci0yNTExODEzMzEzMTAwMDc2NjIxIixudWxsLFtdLG51bGwsMSwwXQ.." role="link" style="-webkit-font-smoothing: antialiased; -webkit-user-drag: none; align-items: center; background: none; border-radius: 18px; border: 1px solid rgb(116, 119, 117); box-shadow: none; box-sizing: border-box; color: #444746; cursor: pointer; display: inline-flex; font-size: 0.875rem; height: 36px; justify-content: center; margin-right: 8px; min-width: 104px; outline: none; padding: 0px 16px 0px 12px; position: relative; user-select: none; z-index: 0;" tabindex="0">Reply</span><span class="ams bkG" id=":ob" jslog="21578; u014N:cOuCgd,Kr2w4b; 1:WyIjdGhyZWFkLWE6cjQ2MDQyODI3NTY1ODI1NTI2MTYiLG51bGwsbnVsbCxudWxsLG51bGwsbnVsbCxudWxsLG51bGwsbnVsbCxudWxsLG51bGwsbnVsbCxudWxsLFtdXQ..; 4:WyIjbXNnLWE6ci0yNTExODEzMzEzMTAwMDc2NjIxIixudWxsLFtdLG51bGwsMSwwXQ.." role="link" style="-webkit-font-smoothing: antialiased; -webkit-user-drag: none; align-items: center; background: none; border-radius: 18px; border: 1px solid rgb(116, 119, 117); box-shadow: none; box-sizing: border-box; color: #444746; cursor: pointer; display: inline-flex; font-size: 0.875rem; height: 36px; justify-content: center; margin-right: 8px; min-width: 104px; outline: none; padding: 0px 16px 0px 12px; position: relative; user-select: none; z-index: 0;" tabindex="0">Forward</span></div></div></td></tr></tbody></table><br /></div></div></div></div></div></div></div></div></div><div class="nH"></div><div class="nH"></div></div></div><div class="nH" style="color: #202124; font-family: "Google Sans", Roboto, RobotoDraft, Helvetica, Arial, sans-serif;"></div>a k kukkilahttp://www.blogger.com/profile/04432257424497331465noreply@blogger.com0tag:blogger.com,1999:blog-2716482703415659532.post-12861813174341971822023-08-07T02:46:00.000-07:002023-08-07T02:46:30.676-07:00 ದ್ರೌಪದಿಯನ್ನು ಅವಮಾನಿಸಿದ ದುಶ್ಶಾಸನನೇ ಈ ವರ್ತಮಾನದ ಹೀರೋ<p></p><div class="separator" style="clear: both; text-align: center;"><a href="https://blogger.googleusercontent.com/img/b/R29vZ2xl/AVvXsEi1jotAJsBZzUmKpNHJK2svG9Vf-RZOePDxbf7BNvCcof4yJ4pQyo5tzZRTSZ7H809ODXs2cUHPcd-BGhbglsvsGJpXGjtFLRODNYtATU72M3uztUWDOpezi4e-nc_ckTGDZr5hYBnsrPZCT2EowcNNIpDIK5obcM9A0-WcqCWFTPrzMpdd7Xrr_e-3wKXu/s1138/edit%20pic%20new.jpg" imageanchor="1" style="margin-left: 1em; margin-right: 1em;"><img border="0" data-original-height="559" data-original-width="1138" height="196" src="https://blogger.googleusercontent.com/img/b/R29vZ2xl/AVvXsEi1jotAJsBZzUmKpNHJK2svG9Vf-RZOePDxbf7BNvCcof4yJ4pQyo5tzZRTSZ7H809ODXs2cUHPcd-BGhbglsvsGJpXGjtFLRODNYtATU72M3uztUWDOpezi4e-nc_ckTGDZr5hYBnsrPZCT2EowcNNIpDIK5obcM9A0-WcqCWFTPrzMpdd7Xrr_e-3wKXu/w400-h196/edit%20pic%20new.jpg" width="400" /></a></div>ಸನ್ಮಾರ್ಗ ಸಂಪಾದಕೀಯ <p></p><span style="background-color: white; color: #222222; font-family: Arial, Helvetica, sans-serif; font-size: small;">ವಿಷವನ್ನು ಯಾರು ಕುಡಿದರೂ ಫಲಿತಾಂಶ ಒಂದೇ. ಅದು ಲಿಂಗಭೇದ ಮಾಡುವುದಿಲ್ಲ. ಧರ್ಮದ್ವೇಷವೆಂಬ ವಿಷ ಸೇವಿಸಿರುವವರಲ್ಲೂ ಇದೇ ಬಗೆಯ ಫಲಿತಾಂಶ ವ್ಯಕ್ತವಾಗುತ್ತಿದೆ. ಕೆಲವೊಮ್ಮೆ ಮಹಿಳೆಯರಲ್ಲಿ ಈ ವಿಷದ ತೀವ್ರತೆ ಹೆಚ್ಚಿರುತ್ತದೋ ಎಂಬ ಸಂದೇಹವೂ ಉಂಟಾಗುತ್ತಿದೆ. ಉದಾಹರಣೆಗೆ, ಮಣಿಪುರ.</span><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;"><br /></span><div><span style="background-color: white; color: #222222; font-family: Arial, Helvetica, sans-serif; font-size: small;">ಕುಕಿ ಸಮುದಾಯದ ವಿರುದ್ಧ ನಡೆಸಲಾಗುತ್ತಿರುವ ಸಂಘಟಿತ ಕ್ರೌರ್ಯಗಳ ಹಿಂದೆ ಮಹಿಳೆಯರ ಬಹುದೊಡ್ಡ ಪಾತ್ರ ಇದೆ ಎಂಬುದಾಗಿ ವಿವಿಧ ವರದಿಗಳು ಹೇಳುತ್ತಿವೆ. ಮೈತಿ ಸಮುದಾಯದ ಪುರುಷರು ಕುಕಿ ಗ್ರಾಮಗಳಿಗೆ ನುಗ್ಗಿ ಹತ್ಯೆ-ಅತ್ಯಾಚಾರ-ದರೋಡೆಗಳನ್ನು ನಡೆಸುತ್ತಿರುವಾಗ ಮಹಿಳೆಯರು ಅವರಿಗೆ ಬೆಂಬಲವಾಗಿ ನಿಂತಿದ್ದಾರೆ. ರಕ್ಷಣಾ ಪಡೆ ಆ ಗ್ರಾಮಗಳಿಗೆ ಹೋಗಿ ದುಷ್ಕರ್ಮಿಗಳನ್ನು ಬಂಧಿಸದಂತೆ ತಡೆಯುವುದಕ್ಕಾಗಿ ಮಹಿಳೆಯರು ರಸ್ತೆ ತಡೆ ನಡೆಸುತ್ತಿದ್ದಾರೆ. ಕಂದಕಗಳನ್ನು ತೋಡುತ್ತಿ ದ್ದಾರೆ ಮತ್ತು ಟೈರ್ಗಳನ್ನು ಸುಟ್ಟು ಅಡ್ಡಿಪಡಿಸುತ್ತಿದ್ದಾರೆ. ಕ್ರೌರ್ಯದಲ್ಲಿ ತೊಡಗಿರುವ ಪುರುಷರು ಆ ಗ್ರಾಮದಿಂದ ತಪ್ಪಿಸಿಕೊಳ್ಳುವಂತೆ ಮಾಡುವುದೇ ಇವರ ಉದ್ದೇಶ ಎಂದು ರಕ್ಷಣಾ ಪಡೆಯೇ ಮಾಧ್ಯಮಗಳೊಂದಿಗೆ ಹೇಳಿಕೊಂಡಿದೆ. ಅವರನ್ನು ಬಲವಂತದಿಂದ ಚದುರಿಸಲು ಹೊರಟರೆ ಬೆತ್ತಲಾಗುವ ಬೆದರಿಕೆಯನ್ನೂ ಹಾಕುತ್ತಿದ್ದಾರೆ. ರಕ್ಷಣಾ ಪಡೆಯಲ್ಲಿ ಮಹಿಳಾ ಸಿಬಂದಿಯ ಕೊರತೆಯಿಂದಾಗಿ ಈ ಮಹಿಳೆಯರ ಸಂಚು ಸಫಲವೂ ಆಗುತ್ತಿದೆ. ಎಲ್ಲಿಯವರೆಗೆಂದರೆ, ಇಬ್ಬರು ಕುಕಿ ಮಹಿಳೆಯರನ್ನು ಬೆತ್ತಲುಗೊಳಿಸಿ ಮೆರವಣಿಗೆ ಮಾಡಲಾದ ಘಟನೆಯ ಆರೋಪಿಯನ್ನು ಬಂಧಿಸಲು ಹೋದ ರಕ್ಷಣಾ ಪಡೆಯನ್ನೂ ಈ ಮಹಿಳೆಯರು ತಡೆದಿದ್ದಾರೆ. ಟೈರ್ಗೆ ಬೆಂಕಿ ಕೊಟ್ಟು ರಸ್ತೆ ತಡೆ ನಿರ್ಮಿಸಿದ್ದಾರೆ. ಕೊನೆಗೆ ಅಶ್ರುವಾಯು ಸಿಡಿಸಿ ಚದುರಿಸಿ, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರೇ ಹೇಳಿದ್ದಾರೆ.</span></div><div><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;">ಸಾಮಾನ್ಯವಾಗಿ ಹೆಣ್ಣನ್ನು ಗಂಡಿಗಿಂತ ಭಿನ್ನವಾಗಿ ಬಿಂಬಿಸಲಾಗುತ್ತದೆ. ಕತೆ, ಕಾದಂಬರಿ, ನಾಟಕ, ಸಿನಿಮಾ ಎಲ್ಲದರಲ್ಲೂ ಪುರುಷರೇ ವಿಲನ್. ದ್ವೇಷ ಸಾಧಿಸುವ, ಹತ್ಯೆ ನಡೆಸುವ, ಅತ್ಯಾಚಾರ ಮತ್ತು ಹಿಂಸಾ ಕೃತ್ಯಗಳಲ್ಲಿ ತೊಡಗುವ ಪಾತ್ರಗಳೆಲ್ಲ ಬಹುತೇಕ ಪುರುಷರಿಗೇ ಮೀಸಲು. ಈ ಪುರುಷರ ಮಹಿಳೆಯರು ಇದ್ದೂ ಇಲ್ಲದಂತೆ ಅಥವಾ ಇಂಥ ಕೃತ್ಯಗಳಿಂದ ಅಂತರ ಕಾಯ್ದುಕೊಂಡಂತೆ ಬದುಕುತ್ತಿರುತ್ತಾರೆ. ಕತೆ- ಕಾದಂಬರಿಗಳಲ್ಲಂತೂ ಹೆಣ್ಣು ಕರುಣಾಮಯಿಯಾಗಿರುವುದೇ ಹೆಚ್ಚು. ಇತರರಿಗೆ ಮಿಡಿಯುವ ಮತ್ತು ಪುರುಷರಲ್ಲಿ ಮನುಷ್ಯತ್ವವನ್ನು ಪ್ರೇರೇಪಿಸುವ ಪಾತ್ರವಾಗಿಯೇ ಹೆಣ್ಣು ಗುರುತಿಸಿಕೊಳ್ಳುತ್ತಾಳೆ. ಮಹಾಭಾರತ, ರಾಮಾಯಣದ ಎರಡು ಕೇಂದ್ರ ಬಿಂದುಗಳಾದ ದ್ರೌಪದಿ ಮತ್ತು ಸೀತೆಯಲ್ಲಿ ದರ್ಶಿಸಬಹುದಾದ ಗುಣಗಳೂ ಇವುಗಳೇ.</span><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ತುಂಬಿದ ಸಭೆಯಲ್ಲಿ ದ್ರೌಪದಿಯನ್ನು ಬೆತ್ತಲೆ ಮಾಡಲು ಹೊರಟ ದುರ್ಯೋಧನ ಮತ್ತು ದುಶ್ಶಾಸನರಿಗೆ ಅವರ ಪತ್ನಿಯರು ಬೆಂಬಲವಾಗಿ ನಿಂತ ಉಲ್ಲೇಖಗಳು ಎಲ್ಲೂ ಇಲ್ಲ. ದುರ್ಯೋಧ ನನ ಪತ್ನಿ ಭಾನುಮತಿ ಮತ್ತು ದುಶ್ಶಾಸನನ ಪತ್ನಿ ನಿರ್ಜರ ಇಬ್ಬರೂ ಈ ಹೀನ ಕೃತ್ಯದಲ್ಲಿ ಯಾವ ಪಾಲನ್ನೂ ಪಡಕೊಳ್ಳಲಿಲ್ಲ. ಹಾಗೆಯೇ, ಸೀತೆಯನ್ನು ರಾವಣ ಅಪಹರಿಸಿದ್ದರೂ ಆತನ ಪತ್ನಿ ಮಂಡೋದರಿ ಅದಕ್ಕೆ ಬೆಂಬಲವಾಗಿ ನಿಲ್ಲಲಿಲ್ಲ. ಅಲ್ಲದೇ ಸೀತೆಗೆ ಯಾವ ಅನ್ಯಾಯವೂ ಆಗದಂತೆ ಬೆಂಗಾವಲಾಗಿ ನಿಂತಳು ಎಂಬ ವಿವರಗಳೂ ಇವೆ. ಪೌರಾಣಿಕ ಕತೆಗಳಾಗಲಿ, ಇತಿಹಾಸವಾಗಲಿ ಉದ್ದಕ್ಕೂ ಹೆಣ್ಣನ್ನು ಬಿಂಬಿಸಿಕೊಂಡು ಬಂದದ್ದು ಹೀಗೆಯೇ. ಆದರೆ ಈ ವರ್ತಮಾನ ಹೀಗೇಕೆ?</span><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಮಣಿಪುರದಲ್ಲಿ ಇಬ್ಬರು ಹೆಣ್ಣು ಮಕ್ಕಳನ್ನು ಬೆತ್ತಲೆಗೊಳಿಸಿ ಮೆರವಣಿಗೆ ನಡೆಸಿದವರ ಧರ್ಮ ಯಾವುದು? ಅವರಿಗೆ ಯಾರು ಮಾದರಿ? ದುರ್ಯೋಧನ ಮತ್ತು ದುಶ್ಶಾಸನರ ದುರ್ಗುಣವು ಹಿಂದೂ ಧರ್ಮವನ್ನು ಪ್ರೀತಿಸುವ ವ್ಯಕ್ತಿಯಲ್ಲಿರಲು ಸಾಧ್ಯವೇ? ದ್ರೌಪದಿಯ ವಸ್ತ್ರಾ ಪಹರಣ ಮಾಡಿರುವುದಕ್ಕಾಗಿ ಒಂದು ಕಡೆ ದುರ್ಯೋಧನ ಮತ್ತು ದುಶ್ಶಾಸನರನ್ನು ವಿಲನ್ಗಳಾಗಿ ನೋಡುವುದು ಮತ್ತು ಇನ್ನೊಂದು ಕಡೆ ಅವರಿಬ್ಬರೂ ನಾಚುವಂತೆ ನಡಕೊಳ್ಳುವುದು ಇವೆರಡೂ ಒಬ್ಬರಲ್ಲೇ ವ್ಯಕ್ತವಾಗುವುದು ಹೇಗೆ? ದ್ರೌಪದಿಯನ್ನು ಮಾದರಿ ಎಂದು ಆರಾಧಿಸುವ ಮಹಿಳೆಯರು ಬೆತ್ತಲೆ ಮಾಡಿದವರಿಗೆ ಬೆಂಬಲವಾಗಿ ನಿಲ್ಲುವುದು ಹೇಗೆ? </span><span style="background-color: white; color: #222222; font-family: Arial, Helvetica, sans-serif; font-size: small;">ಹಿಂದೂ ಧರ್ಮ ಎಂದೂ ದುರ್ಯೋಧನನನ್ನೋ ದುಶ್ಶಾನನನ್ನೋ ಶಕುನಿಯನ್ನೋ ಮಾದರಿ ಎಂದು ಹೇಳಿಲ್ಲ. ಹಿಂದೂ ಧರ್ಮವನ್ನು ಪ್ರೀತಿಸುವುದೆಂದರೆ, ಇವರ ಕೃತ್ಯಗಳನ್ನು ಪ್ರೀತಿಸದಿರುವುದು ಮತ್ತು ಇವರ ಆಲೋಚನೆಗಳನ್ನು ಧರ್ಮವಿರೋಧಿ ಎಂದು ಮನಸಾರೆ ನಂಬುವುದು. ಇಂಥ ಧರ್ಮವಿರೋಧಿ ಕೃತ್ಯಗಳು ಮತ್ತು ಆಲೋಚನೆಗಳು ಎಲ್ಲೆಲ್ಲಾ ವ್ಯಕ್ತಗೊಳ್ಳುತ್ತವೋ ಅಲ್ಲೆಲ್ಲಾ ಧರ್ಮಕ್ಕೆ ನಿಷ್ಠೆಯನ್ನು ತೋರುವುದು ಮತ್ತು ಅಧರ್ಮವನ್ನು ವಿರೋಧಿಸುವುದು. ಅಂದಹಾಗೆ,</span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ದ್ರೌಪದಿ, ಸೀತೆ, ಮಂಡೋದರಿ, ದುರ್ಯೋಧನ, ದುಶ್ಶಾಸನ, ಶಕುನಿ... ಮುಂತಾದವರೆಲ್ಲ ಬರೇ ಪುರಾಣಕ್ಕೆ ಸೀಮಿತವಾದ ಪಾತ್ರಗಳಲ್ಲ. ಅಲ್ಲದೇ, ಈ ಪಾತ್ರಗಳು ರೋಮಾಂಚನಗೊಳ್ಳುವುದಕ್ಕೋ ಸಂಕಟಪಡುವುದಕ್ಕೋ ಮೀಸಲಾದ ವ್ಯಕ್ತಿತ್ವಗಳೂ ಅಲ್ಲ. ಈ ವರ್ತಮಾನದಲ್ಲಿ ಯಾವುದು ಸರಿ ಮತ್ತು ಯಾವುದು ತಪ್ಪು ಎಂಬುದನ್ನು ಸ್ಪಷ್ಟಪಡಿಸಿಕೊಂಡು ಬದುಕುವುದಕ್ಕೆ ಈ ಪಾತ್ರಗಳು ಒರೆಗಲ್ಲು ಆಗಬೇಕು. ಹೆಣ್ಣು ಬೆತ್ತಲೆಗೊಳ್ಳುವಾಗ, ದ್ರೌಪದಿಯ ಸಂಕಟ ಸಮಾಜದಲ್ಲಿ ಕಾಣಿಸಿಕೊಳ್ಳಬೇಕು. ಬೆತ್ತಲೆಗೊಳಿಸಿದವರು ನನ್ನ ಧರ್ಮದವರೋ, ನನ್ನ ಪಕ್ಷದವರೋ ಎಂಬ ಆಲೋಚನೆಯ ಆಚೆಗೆ ಅವರು ದುರ್ಯೋಧನರು, ದುಶ್ಶಾಸನರು ಎಂಬ ಭಾವವೇ ಮೇಲುಗೈ ಪಡೆಯಬೇಕು. ಹಾಗಂತ, ಕೇವಲ ಮಣಿಪುರಕ್ಕೆ ಸಂಬಂಧಿಸಿ ಮಾತ್ರ ಹೀಗೆ ಹೇಳಬೇಕಾದುದೂ ಅಲ್ಲ.</span><br style="background-color: white; color: #222222; font-family: Arial, Helvetica, sans-serif; font-size: small;" /><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಧರ್ಮದ್ವೇಷ ಸಾಂಕ್ರಾಮಿಕವೆಂಬಂತೆ ದೇಶದ ಉದ್ದಗಲಕ್ಕೂ ವ್ಯಾಪಿಸುತ್ತಿದೆ. ತನ್ನ ಧರ್ಮದವ ಹೆಣ್ಣನ್ನು ಬೆತ್ತಲೆ ಮಾಡಿದರೂ ಅತ್ಯಾಚಾರಕ್ಕೆ ಒಳಪಡಿಸಿದರೂ ಹತ್ಯೆ ಮಾಡಿದರೂ ವಂಚನೆ-ದರೋಡೆಯಲ್ಲಿ ಭಾಗಿಯಾದಾಗಲೂ ಮೌನವಾಗುವುದು ಮತ್ತು ಬೇರೆ ಧರ್ಮದವರು ಇಂಥದ್ದನ್ನೇ ಮಾಡಿದರೆ ಬೀದಿಗಿಳಿದು ದ್ವೇಷ ಸಾಧಿಸುವುದು ಎಲ್ಲೆಡೆ ಕಂಡುಬರುತ್ತಿದೆ. ಧರ್ಮ ಪ್ರೇಮ ಎಂದರೆ ಇನ್ನೊಂದು ಧರ್ಮವನ್ನು ದ್ವೇಷಿಸುವುದು ಎಂಬಂತಾಗಿದೆ. ಈ ಪ್ರಜ್ಞೆ ಹುಟ್ಟಿಕೊಂಡದ್ದು ಹೇಗೆ? ಯಾವ ಧರ್ಮವೂ ಇಂಥದ್ದೊಂದು ಮೌಲ್ಯವನ್ನು ಪ್ರತಿಪಾದಿಸಿಲ್ಲ. ದ್ರೌಪದಿಯ ವಸ್ತ್ರಾಪಹರಣವನ್ನು ಶ್ರೀಕೃಷ್ಣ ತಡೆದನೇ ಹೊರತು ಭಾನುಮತಿಯದ್ದೋ ನಿರ್ಜರಳದ್ದೋ ವಸ್ತ್ರಾಪಹರಣಕ್ಕೆ ಆದೇಶಿಸಲಿಲ್ಲ. ಅಷ್ಟಕ್ಕೂ, ದ್ರೌಪದಿಯ ವಸ್ತ್ರಾಪಹರಣವನ್ನು ತಡೆಯಬಲ್ಲ ಶಕ್ತಿವಂತ ಶ್ರೀಕೃಷ್ಣನಿಗೆ ಭಾನುಮತಿಯ ವಸ್ತ್ರಾಪಹರಣ ಮಾಡಬಲ್ಲ ಸಾಮರ್ಥ್ಯ ಇರಲಿಲ್ಲ ಎಂದು ಇದರರ್ಥವಲ್ಲ. ಅದು ಧರ್ಮವಲ್ಲ ಎಂಬುದೇ ಅದಕ್ಕೆ ಕಾರಣ. ಧರ್ಮ ಅಂದರೆ ಇದುವೇ. ಆದರೆ, ಈ ಮೌಲ್ಯವೇ ಇವತ್ತು ಸಮಾಜದಿಂದ ಕಣ್ಮರೆಯಾಗತೊಡಗಿದೆ. ಹೆಣ್ಣು ಬೆತ್ತಲೆಗೊಳ್ಳುತ್ತಿದ್ದಾಳೆ. ಆಕೆಯನ್ನು ರಕ್ಷಿಸುವ ಹೊಣೆ ಹೊರ ಬೇಕಾಗಿದ್ದ ಸಮಾಜವೇ ಅದರ ಬೆಂಬಲಕ್ಕೆ ನಿಲ್ಲುತ್ತಿದೆ. ಅದರಲ್ಲೂ, ಬೆತ್ತಲೆಯ ಆಘಾತವನ್ನು ಚೆನ್ನಾಗಿ ಗ್ರಹಿಸಬಲ್ಲ ಮಹಿಳೆಯರೇ ಬೆತ್ತಲೆ ಮಾಡಿದವರ ರಕ್ಷಣೆಗೆ ನಿಲ್ಲುತ್ತಿದ್ದಾರೆ. ನಿಜವಾಗಿ, </span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಇನ್ನೊಂದು, ಧರ್ಮವನ್ನು ದ್ವೇಷಿಸುವುದೇ ಸ್ವಧರ್ಮ ಪ್ರೇಮ ಎಂದು ನಂಬಿಕೊಂಡಿರುವುದರ ಫಲಿತಾಂಶ ಇದು. ಯಾವುದೇ ಧರ್ಮ ಇನ್ನೊಂದು ಧರ್ಮವನ್ನು ದ್ವೇಷಿಸಿಕೊಂಡು ಬೆಳೆಯಲು ಸಾಧ್ಯವೇ ಇಲ್ಲ. ದ್ವೇಷ ಧರ್ಮದ ಅಗತ್ಯವೂ ಅಲ್ಲ. ಅಗತ್ಯ ಎಂದಾಗಿದ್ದರೆ ಪುರಾಣ ಕತೆಗಳ ತುಂಬಾ ಇಂಥ ದ್ವೇಷಗಳೇ ತುಂಬಿಕೊಂಡಿರುತ್ತಿತ್ತು. ಅಲ್ಲೋರ್ವ ಮಂಡೋದರಿ ಕಾಣಸಿಗುವುದಕ್ಕೆ ಸಾಧ್ಯವೂ ಇರಲಿಲ್ಲ. ಧರ್ಮ ಯಾವಾಗಲೂ ಪರಿಶುದ್ಧ. ಆದರೆ, ಅಧಿಕಾರ ಹಾಗಲ್ಲ. ಶುದ್ಧ-ಅಶುದ್ಧ ಎಂಬ ಭೇದವನ್ನೇ ಅದು ಮಾಡುವುದಿಲ್ಲ. ಅಧಿಕಾರ ಪಡೆಯುವುದಕ್ಕಾಗಿ ಯಾವ ದಾರಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೂ ಅದು ಹೇಸುವುದಿಲ್ಲ. ಜನರನ್ನು ಕಚ್ಚಾಡಿಸುವುದರಿಂದ ಅಧಿಕಾರ ಲಭ್ಯವಾಗುತ್ತದೆ ಎಂದಾದರೆ, ಅದು ಆ ಆಯ್ಕೆಯನ್ನೂ ಬಳಸಿಕೊಳ್ಳುತ್ತದೆ. ಧರ್ಮವನ್ನು ವಿಕೃತವಾಗಿ ವ್ಯಾಖ್ಯಾನಿಸುವುದರಿಂದ ಲಾಭ ಇದೆ ಎಂದಾದರೆ ಅದಕ್ಕೂ ಕೈ ಹಾಕುತ್ತದೆ. ಕರುಣಾಮಯಿ ಹೆಣ್ಣಿನೊಳಗೂ ತೀರದ ದ್ವೇಷವನ್ನು ಅದು ಹುಟ್ಟು ಹಾಕುತ್ತದೆ. ಗಂಡನ್ನು ಕ್ರೌರ್ಯದ ವಕ್ತಾರರಾಗಿ ಮಾರ್ಪ ಡಿಸುತ್ತದೆ. ತನ್ನ ಧರ್ಮದವರಲ್ಲದ ಎಲ್ಲರನ್ನೂ ವೈರಿಗಳಂತೆ ಮತ್ತು ತನ್ನ ಧರ್ಮವನ್ನು ನಾಶ ಮಾಡಲು ಸಂಚು ಹೂಡುತ್ತಿರುವವರಂತೆ ಬಿಂಬಿಸುತ್ತದೆ. ಅಂತಿಮವಾಗಿ ಸ್ವಧರ್ಮ ಪ್ರೇಮವೆಂದರೆ, ಇನ್ನೊಂದು ಧರ್ಮವನ್ನು ದ್ವೇಷಿಸುವುದು ಎನ್ನುವಲ್ಲಿಗೆ ತಂದು ಮುಟ್ಟಿಸುತ್ತದೆ. </span></div><div><span style="background-color: white; color: #222222; font-family: Arial, Helvetica, sans-serif; font-size: small;"><br /></span></div><div><span style="background-color: white; color: #222222; font-family: Arial, Helvetica, sans-serif; font-size: small;">ಮಣಿಪುರದಿಂದ ಹಿಡಿದು ದೇಶದಾದ್ಯಂತ ಇವತ್ತು ಕಾಣಿಸಿಕೊಂಡಿರುವುದು ಇದೇ ಸಿದ್ಧಾಂತ. ಇದು ಧರ್ಮ ಅಲ್ಲ, ಅಧರ್ಮ. ದುಶ್ಶಾಸನನ ಕೃತ್ಯಕ್ಕೆ ಹೆಣ್ಣು ಬೆಂಬಲವಾಗಿ ನಿಲ್ಲುವುದು ಧರ್ಮವಾಗಲು ಸಾಧ್ಯವೇ ಇಲ್ಲ.</span></div>a k kukkilahttp://www.blogger.com/profile/04432257424497331465noreply@blogger.com0tag:blogger.com,1999:blog-2716482703415659532.post-26672594115689119762023-06-20T06:52:00.003-07:002023-06-20T06:52:29.318-07:00ಸಂತ್ರಸ್ತರ ಪರ ನಿಲ್ಲುವುದಕ್ಕೂ ಭಯ ಪಡಬೇಕಾದ ಕಾಲ..<div class="separator" style="clear: both; text-align: center;"><a href="https://blogger.googleusercontent.com/img/b/R29vZ2xl/AVvXsEiOp0VrxjHqjDU3o-KWiLSWYwRvZ1c_Q6DbYY6VToL1OPX_9bgXJ5-i80LAMZ2DvWsW8s0LoRyU68Vqi6zc3epnqbooLpn77BDkq2j5P0V7YQuYoZuF9Z8RT1J15TcjNfkUPQ56_njKjgEBjpMwWDz2en-x1alM9comJGBopKUfR-AHY-BbZFMAFRt8JyL1/s300/edi%2030.jpg" imageanchor="1" style="margin-left: 1em; margin-right: 1em;"><img border="0" data-original-height="137" data-original-width="300" height="183" src="https://blogger.googleusercontent.com/img/b/R29vZ2xl/AVvXsEiOp0VrxjHqjDU3o-KWiLSWYwRvZ1c_Q6DbYY6VToL1OPX_9bgXJ5-i80LAMZ2DvWsW8s0LoRyU68Vqi6zc3epnqbooLpn77BDkq2j5P0V7YQuYoZuF9Z8RT1J15TcjNfkUPQ56_njKjgEBjpMwWDz2en-x1alM9comJGBopKUfR-AHY-BbZFMAFRt8JyL1/w400-h183/edi%2030.jpg" width="400" /></a></div><br /><p>27-6-2022</p><p> ತೀಸ್ತಾ ಸೆಟಲ್ವಾಡ್ ಅವರ ಬಂಧನವಾಗಿದೆ. ಒಂದುವೇಳೆ, ಅವರಿಲ್ಲದೇ ಇರುತ್ತಿದ್ದರೆ ಗುಜರಾತ್ ನರಮೇಧದ ಸಂತ್ರಸ್ತರು ಹೇಗಿರುತ್ತಿದ್ದರು? ಅವರು ತಮ್ಮ ಕಮ್ಯುನಲಿಸಂ ಕೋಂಬಾಟ್ ಪತ್ರಿಕೆಯನ್ನು ವರ್ಷಗಳ ಕಾಲ ಗುಜರಾತ್ ಸಂತ್ರಸ್ತರ ಸಂಕಟಗಳಿಗೆ ಮೀಸಲಿಡದೇ ಇರುತ್ತಿದ್ದರೆ ಮತ್ತು ನರಮೇಧದ ಒಳಸಂಚುಗಳನ್ನು ಇಂಚಿಂಚಾಗಿ ನಾಗರಿಕ ಸಮಾಜದ ಮುಂದಿಡದೇ ಇರುತ್ತಿದ್ದರೆ, ಏನಾಗಿರುತ್ತಿತ್ತು? ಸಿಟಿಜನ್ಸ್ ಫಾರ್ ಜಸ್ಟಿಸ್ ಎಂಡ್ ಪೀಸ್ ಎಂಬ ಸರಕಾರೇತರ ಸಂಸ್ಥೆಯನ್ನು ಸ್ಥಾಪಿಸಿ ನರಮೇಧದ ಸಂತ್ರಸ್ತರನ್ನು ಕೋರ್ಟಿಗೆ ಹೋಗುವಂತೆ ಧೈರ್ಯ ತುಂಬದೇ ಇರುತ್ತಿದ್ದರೆ, ಒಂದೇ ಒಂದು ಪ್ರಕರಣವಾದರೂ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುತ್ತಿತ್ತೇ?</p>
<p>ತನ್ನವರನ್ನು ಕಳಕೊಂಡದ್ದಲ್ಲದೇ ಭೀಕರ ಅತ್ಯಾಚಾರಕ್ಕೂ ಗುರಿಯಾದ ಬಿಲ್ಕೀಸ್ಗೆ 50 ಲಕ್ಷ ರೂಪಾಯಿಯನ್ನು ಪರಿಹಾರವಾಗಿ ನೀಡುವಂತೆ ಸುಪ್ರೀಮ್ ಕೋರ್ಟು ಗುಜರಾತ್ ಸರಕಾರಕ್ಕೆ ಆದೇಶಿಸಿದ್ದರೆ, ಅದಕ್ಕೆ ಕಾರಣ ಇದೇ ಸೆಟಲ್ವಾಡ್. ಗುಜರಾತ್ ನರಮೇಧಕ್ಕೆ ಸಂಬಂಧಿಸಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದರೆ, ಅದರ ಹಿಂದಿನ ರೂವಾರಿ ಇದೇ ಸೆಟಲ್ವಾಡ್.</p>
<p>ಗುಜರಾತ್ ನರಮೇಧಕ್ಕೆ ಸಂಬಂಧಿಸಿ ಸುಮಾರು 50ರಷ್ಟು ಆರೋಪಿಗಳಿಗೆ ಶಿಕ್ಷೆಯಾಗಿದೆ. ಇವರಲ್ಲಿ ಗಲ್ಲು ಶಿಕ್ಷೆಗೆ ಒಳಗಾದವರು ಮತ್ತು ಜೀವಾವಧಿ ಶಿಕ್ಷೆಗೆ ಒಳಗಾದವರೂ ಇದ್ದಾರೆ. ಮುಖ್ಯಮಂತ್ರಿ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವೆಯಾಗಿದ್ದ ಮಾಯಾ ಕೊಡ್ನಾನಿಯ ನ್ನು ಕಟಕಟೆಯಲ್ಲಿ ನಿಲ್ಲಿಸಲು ಸಾಧ್ಯವಾಗಿದ್ದಿದ್ದರೆ ಅದರ ಹಿಂದೆ ಸೆಟಲ್ವಾಡ್ರ ಶ್ರಮ ಸಾಕಷ್ಟಿದೆ. ಗುಜರಾತ್ ನರಮೇಧಕ್ಕೆ ಸಂಬಂಧಿಸಿ ತೀಸ್ತಾ ಸಂತ್ರಸ್ತರ ಆಮ್ಲಜನಕವಾಗಿದ್ದರು. ಪ್ರಭುತ್ವದ ಮೌನ ಸಮ್ಮತಿಯೊಂದಿಗೆ ನರಮೇಧವೊಂದು ನಡೆದಾಗ ಸಂತ್ರಸ್ತರ ಮುಂದೆ ಎರಡ್ಮೂರು ಸವಾಲುಗಳಿರುತ್ತವೆ.<br />1. ಪ್ರಭುತ್ವವೇ ಅವರ ವಿರುದ್ಧ ನಿಂತಿರುವುದು.<br />2. ಸಂತ್ರಸ್ತರೆಂಬ ನೆಲೆಯಲ್ಲಿನ ಅಸಹಾಯಕತೆ.<br />3. ನ್ಯಾಯಕ್ಕಾಗಿ ಕೋರ್ಟು ಮೆಟ್ಟಲು ಹತ್ತಬೇಕಾದರೆ ಎದುರಾಗುವ ಹಣಕಾಸಿನ ಅಡಚಣೆ.</p>
<p>ಎಲ್ಲಕ್ಕಿಂತ ದೊಡ್ಡ ಸವಾಲಿನ ಕೆಲಸವೇನೆಂದರೆ, ಪ್ರಭುತ್ವವನ್ನು ಎದುರು ಹಾಕಿಕೊಳ್ಳುವುದು. ಗುಜರಾತ್ ನರಮೇಧದಲ್ಲಿ ಬದುಕುಳಿದ ಸಂತ್ರಸ್ತರು ತಮ್ಮ ಮೇಲಾದ ದೌರ್ಜನ್ಯ ಮತ್ತು ತಾವು ಕಂಡುಂಡ ಭೀಕರ ದೃಶ್ಯದ ವಿವರಗಳನ್ನು ದಾಖಲಿಸಬೇಕಿದ್ದುದು ಪೊಲೀಸ್ ಠಾಣೆಗಳಲ್ಲಿ. ಆದರೆ ಹೆಚ್ಚಿನ ಕ್ರೌರ್ಯಗಳು ಈ ಪೊಲೀಸ್ ಠಾಣೆಗಳ ನಿಷ್ಕ್ರೀಯತೆ ಅಥವಾ ಬೆಂಬಲದಿಂದಲೇ ನಡೆದಿದ್ದುವು. ಆದ್ದರಿಂದ, ಸಂತ್ರಸ್ತರೋರ್ವರು ಠಾಣೆಯೊಂದರ ಮೆಟ್ಟಲೇರುವುದು ಮತ್ತು ದೂರು ದಾಖಲಿಸುವುದು ಸುಲಭ ಅಲ್ಲ. ಅಲ್ಲಿನ ಪೊಲೀಸರು ಬಿಡಿ, ಕಂಭ ಕಂಭಗಳೂ ಆ ಸಂತ್ರಸ್ತರನ್ನು ದುರುಗುಟ್ಟಿ ನೋಡುವುದು ಸಹಜ. ಇಂಥ ಸವಾಲನ್ನು, ಆಗಷ್ಟೇ ತನ್ನವರನ್ನೆಲ್ಲ ಕಳಕೊಂಡು ಬೀದಿ ಪಾಲಾಗಿರುವ ಓರ್ವ ಸಂತ್ರಸ್ತ ಎದುರಿಸುವುದು ಸುಲಭ ಅಲ್ಲ. ತೀಸ್ತಾ ಮುಖ್ಯವಾಗುವುದೇ ಇಲ್ಲಿ. ದೇಶ ಕಂಡ ಪ್ರಪ್ರಥಮ ಅಟಾರ್ನಿ ಜನರಲ್ ಚಿಮನ್ಲಾಲ್ ಸೆಟಲ್ವಾಡ್ರ ಮೊಮ್ಮಗಳಾದ ಮತ್ತು ನ್ಯಾಯವಾದಿ ಅತುಲ್ ಸೆಟಲ್ವಾಡ್ರ ಮಗಳಾದ ತೀಸ್ತಾರಲ್ಲಿ ಸಹಜವಾಗಿಯೇ ಕಾನೂನು ಪರಿಜ್ಞಾನ ಚೆನ್ನಾಗಿತ್ತು. ಜೊತೆಗೆ ಅವರು ಮುಂಬೈಯಲ್ಲಿ ಬೆಳೆದವರಾದರೂ ಹುಟ್ಟಿದ್ದು ಗುಜರಾತ್ ನಲ್ಲಿದುದರಿಂದ ಆ ಮಣ್ಣಿನ ಗುಣವನ್ನು ಅವರು ಚೆನ್ನಾಗಿಯೇ ಬಲ್ಲವರಾಗಿದ್ದರು.</p>
<p>1992ರಲ್ಲಿ ಮುಂಬೈ ಗಲಭೆ ನಡೆದಾಗ, ಅದನ್ನು ಹತ್ತಿರದಿಂದ ಕಂಡು ಮಾಧ್ಯಮಗಳಿಗೆ ವರದಿ ಮಾಡಿದ ಅನುಭವವೂ ಅವರಿಗಿತ್ತು. ಕೋಮು ಘರ್ಷಣೆಯ ಹೆಸರಲ್ಲಿ ನಡೆಯುವ ಜನಾಂಗೀಯ ಹಿಂಸೆ ಮತ್ತು ಏಕಮುಖ ಹತ್ಯಾಕಾಂಡಗಳನ್ನು ಅವರಿಗೆ ಮುಂಬೈ ಗಲಭೆ ಚೆನ್ನಾಗಿ ಪರಿಚಯಿಸಿತ್ತು. ಆದ್ದರಿಂದಲೇ, 2002ರ ಗುಜರಾತ್ ನರಮೇಧ ಕ್ಕಿಂತ 5 ವರ್ಷಗಳ ಮೊದಲೇ ಹತ್ಯಾಕಾಂಡವೊಂದರ ಭೀತಿಯನ್ನು ಅವರು ವ್ಯಕ್ತಪಡಿಸಿದ್ದರು ಮತ್ತು ವಿವಿಧ ದಾಖಲೆ ಹಾಗೂ ವರದಿಗಳನ್ನು ಸಂಗ್ರಹಿಸಿ ನ್ಯಾಯವಾದಿಗಳ ಬಾಗಿಲು ತಟ್ಟಿದ್ದರು. ಅಂದಹಾಗೆ, ತೀಸ್ತಾ ಅವರ ಛಲ ಬಿಡದ ಹೋರಾಟಕ್ಕೆ ಒಂದು ಸಾಕ್ಷ್ಯ ಬೇಕೆಂದರೆ ಅದು ಬಿಲ್ಕೀಸ್ ಬಾನು ಪ್ರಕರಣ. ಬೆಸ್ಟ್ ಬೇಕರಿ ಮತ್ತು ಬಿಲ್ಕೀಸ್ ಬಾನು ಪ್ರಕರಣದ ತನಿಖೆಯನ್ನು ಗುಜರಾತ್ ಪೊಲೀಸರು ಕೈಬಿಟ್ಟಿದ್ದರು. ತೀಸ್ತಾ ಸುಮ್ಮನಾಗಲಿಲ್ಲ. ಬಿಲ್ಕೀಸ್ರಲ್ಲಿ ಧೈರ್ಯ ತುಂಬಿದರು. ನ್ಯಾಯವನ್ನು ಪಡೆದೇ ತೀರಬೇಕೆಂಬ ಛಲ ಹುಟ್ಟಿಸಿದರು. ಅವರಿಂದಾಗಿಯೇ ಆ ಪ್ರಕರಣ ಸುಪ್ರೀಮ್ ಮೆಟ್ಟಿಲೇರಿತು ಮತ್ತು ಸುಪ್ರೀಮ್ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ವಿ.ಎನ್.ಖರೆ ಅವರು ಪ್ರಕರಣದ ಮರು ತನಿಖೆಗೆ ಆದೇಶಿಸಿದ್ದರು.</p>
<p>ನಿಜವಾಗಿ, ಪ್ರಭುತ್ವ ಭಾಗಿಯಾದ ಯಾವುದೇ ನರಮೇಧವು ಹೆಚ್ಚು ಸಮಯ ಸಾರ್ವಜನಿಕವಾಗಿ ಚರ್ಚೆಯಲ್ಲಿರುವುದು ಕಡಿಮೆ. ಇದಕ್ಕೆ ಕಾರಣ, ಪ್ರಭುತ್ವದ ಭೀತಿ. ರಾಷ್ಟ್ರೀಯ ಮಾಧ್ಯಮಗಳು ಒಂದಿಷ್ಟು ದಿನ ಇಂಥ ಕ್ರೌರ್ಯಗಳ ಅಷ್ಟಿಷ್ಟು ವರದಿಯನ್ನು ಮಾಡಿ ಬಳಿಕ ಬೆನ್ನು ಹಾಕುವುದು ರೂಢಿ. ಆದರೆ ಗುಜರಾತ್ ನರಮೇಧಕ್ಕೆ ಸಂಬಂಧಿಸಿ ಈ ಮಾತು ಸುಳ್ಳಾಗಿದ್ದರೆ ಅದರ ಪೂರ್ಣ ಶ್ರೇಯಸ್ಸು ತೀಸ್ತಾರಿಗೆ ಸಲ್ಲಬೇಕು. ಗುಜರಾತ್ ನರಮೇಧಕ್ಕೆ ಪೂರ್ವಭಾವಿಯಾಗಿ ನಡೆದಿರಬಹುದಾದ ಸಂಚುಗಳಿಂದ ಹಿಡಿದು, ಇಡೀ ನರಮೇಧಕ್ಕೆ ನೇತೃತ್ವ ನೀಡಿದವರು, ಪ್ರಚೋದನೆ ಕೊಟ್ಟವರು ಮತ್ತು ಮಾಧ್ಯಮಗಳ ಸುಳ್ಳು ಸುದ್ದಿಗಳನ್ನು ತೀಸ್ತಾ ತನ್ನ ಕಮ್ಯುನಲಿಸಂ ಕೊಂಬಾಟ್ ಪತ್ರಿಕೆಯಲ್ಲಿ ಯಾವ ಮುಲಾಜೂ ಇಲ್ಲದೇ ಪ್ರಕಟಿಸತೊಡಗಿದರು. ನಿಜವಾಗಿ,</p>
<p>ತನ್ನ ಪತ್ರಿಕೆಯನ್ನು ಅವರು ಕೇವಲ ಗುಜರಾತ್ ನರಮೇಧದ ಬಲಿಪಶುಗಳಿಗಾಗಿಯೇ ಅರ್ಪಿಸಿದ್ದರು. ಆರಂಭದಿಂದ ಕೊನೆಪುಟದ ವರೆಗೆ ನರಮೇಧದ ಇಂಚಿಂಚು ವಿವರಗಳು ಮತ್ತು ಕಾನೂನು ಪ್ರಕ್ರಿಯೆಗಳ ಮಾಹಿತಿಗಾಗಿ ಮೀಸಲಿಟ್ಟರು. ಸಂತ್ರಸ್ತರನ್ನು ಭೇಟಿಯಾಗಿ ಅವರ ಮಾತುಗಳನ್ನು ಗುಜರಾತ್ನಿಂದ ಹೊರಗಿನ ಓದುಗರಿಗೆ ತಲುಪಿಸಿದರು. ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಯ ಮಾಹಿತಿಗಳನ್ನು ನೀಡುತ್ತಾ ಬಂದರು. ಎಲ್ಲೆಲ್ಲ ಸಂತ್ರಸ್ತರಿದ್ದರೋ ಅವರೆಲ್ಲರಿಗೂ ಏಕಧ್ವನಿ ಬರುವಂತೆ ಮತ್ತು ಧೈರ್ಯದಿಂದಿರುವಂಥ ವಾತಾವರಣ ಸೃಷ್ಟಿಸಿದರು. ಗುಜರಾತ್ನಿಂದ ಹೊರಬಂದು ವಿವಿಧ ರಾಜ್ಯಗಳಲ್ಲಿ ಗುಜರಾತ್ ನರಮೇಧಕ್ಕೆ ಸಂಬಂಧಿಸಿ ಮಾಹಿತಿಗಳನ್ನು ಹಂಚಿಕೊಂಡರು. ಯಾವ ಕಾರಣಕ್ಕೂ ಗುಜರಾತ್ ನರಮೇಧದ ರೂವಾರಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳಬಾರದು ಮತ್ತು ಈ ನರಮೇಧ ಸಾರ್ವಜನಿಕ ಪ್ರಜ್ಞೆಯಿಂದ ಮಾಸಿ ಹೋಗಬಾರದು ಎಂಬ ಪ್ರಾಮಾಣಿಕ ಕಳಕಳಿ ತೀಸ್ತಾರಲ್ಲಿತ್ತು. ಒಂದು ನರಮೇಧದ ಪ್ರಜ್ಞೆ ಸಾರ್ವಜ ನಿಕವಾಗಿ ಇರುವವರೆಗೆ ಇನ್ನೊಂದು ನರಮೇಧ ಸುಲಭ ಅಲ್ಲ. ಯಾಕೆಂದರೆ,</p>
<p>ಜನರು ತಕ್ಷಣಕ್ಕೆ ಎಚ್ಚೆತ್ತುಕೊಳ್ಳುತ್ತಾರೆ. ನರಮೇಧದ ಸಾಧ್ಯತೆಗಳನ್ನು ಗುರುತಿಸಿ ಸಮಾಜಕ್ಕೆ ಎಚ್ಚರಿಕೆಯನ್ನು ರವಾನಿಸುತ್ತಾರೆ. ಕಳೆದ 20 ವರ್ಷಗಳಲ್ಲಿ ತೀಸ್ತಾ ತನ್ನ ಆಯು ಷ್ಯದ ಬಹುತೇಕ ಸಮಯವನ್ನು ಇನ್ನೊಂದು ನರಮೇಧ ನಡೆಯದಂತೆ ತಡೆಯುವುದಕ್ಕಾಗಿ ಮೀಸಲಿ ಟ್ಟರು ಎಂದರೂ ಸರಿ. 2002ರ ಗುಜರಾತ್ ಹತ್ಯಾಕಾಂಡಕ್ಕೆ ಪೂರ್ವಭಾವಿಯಾಗಿ ಅಲ್ಲಿನ ಆದಿವಾಸಿಗಳು, ಕ್ಷತ್ರಿಯ, ಹರಿಜನರಲ್ಲಿ ಹೇಗೆ ಮುಸ್ಲಿಮ್ ದ್ವೇಷವನ್ನು ಗಟ್ಟಿಗೊಳಿಸಲಾಗುತ್ತಾ ಬರಲಾಯಿತು ಎಂಬ ಮಾಹಿತಿ ತೀಸ್ತಾರಲ್ಲಿ ಇದ್ದುದರಿಂದಲೇ ಅವರು ಕಾಲಿಗೆ ಚಕ್ರ ಕಟ್ಟಿಕೊಂಡು ದೇಶದಾದ್ಯಂತ ಸುತ್ತಿದರು. ಒಂದುಕಡೆ, ತನ್ನ ಸಿಟಿಜನ್ಸ್ ಫಾರ್ ಜಸ್ಟೀಸ್ ಎಂಡ್ ಪೀಸ್ ಎಂಬ ಸಂಸ್ಥೆಯ ಮೂಲಕ ಗುಜರಾತ್ ಸಂತ್ರಸ್ತರಲ್ಲಿ ಧೈರ್ಯ ತುಂಬುತ್ತಾ ಮತ್ತು ಇನ್ನೊಂದು ಕಡೆ, ತನ್ನ ಕಮ್ಯುನಲಿಸಂ ಕೊಂಬಾಟ್ ಮೂಲಕ ದೇಶದ ಉದ್ದಗಲದ ಭಾರತೀಯರಲ್ಲಿ ನರಮೇಧದ ಪೈಶಾಚಿಕತೆಯನ್ನು ವಿವರಿಸುತ್ತಾ ನಡೆದರು. ಇದರಿಂದಾಗಿ ಪ್ರಭುತ್ವ ಮತ್ತು ಅವರ ಬೆಂಬಲಿಗರ ತೀವ್ರ ವಿರೋಧವನ್ನೂ ಕಟ್ಟಿಕೊಂಡರು. ಅವರನ್ನು ಕಾನೂ ನಿನ ಕುಣಿಕೆಯಲ್ಲಿ ಸಿಲುಕಿಸುವುದಕ್ಕೆ ಒಂದಲ್ಲ ಒಂದು ಪ್ರಯತ್ನಗಳು ನಡೆಯುತ್ತಲೇ ಬಂದುವು. ಇದೀಗ, ಕ್ರಿಮಿನಲ್ ಪಿತೂರಿ, ಸುಳ್ಳು ಸಾಕ್ಷ್ಯಾಧಾರ ಸಲ್ಲಿಕೆ ಮತ್ತು ಸಂತ್ರಸ್ತರ ಭಾವುಕತೆಯನ್ನು ದುರುಪಯೋಗಿಸಿದ ಆರೋಪದಲ್ಲಿ ಬಂಧಿಸಲಾಗಿದೆ. ಈ ಬಂಧನದ ಹಿಂದೆ ಸುಪ್ರೀಮ್ ಕೋರ್ಟ್ನ ಪರಾಮರ್ಶೆಗೂ ಪಾತ್ರ ಇದೆ ಎಂಬುದೇ ಅತಿದೊಡ್ಡ ದುರಂತ. ಒಂದುವೇಳೆ,</p>
<p>ಮುಂಬೈ, ಭೀವಂಡಿ, ಭಾಗಲ್ಪುರ್, ನೆಲ್ಲಿ, ದೆಹಲಿ ಅಥವಾ ಇನ್ನಾವುದೇ ಕಡೆ ನಡೆದ ಹತ್ಯಾಕಾಂಡಗಳ ಬಗ್ಗೆ ತೀಸ್ತಾರಂತೆ ಮಾನವ ಹಕ್ಕು ಕಾರ್ಯಕರ್ತರು ಮತ್ತು ಸಂಘಟನೆಗಳು ರಂಗಕ್ಕಿಳಿಯದೇ ಇರುತ್ತಿದ್ದರೆ ಮತ್ತು ಸಂತ್ರಸ್ತರ ಬೆನ್ನಿಗೆ ನಿಲ್ಲದೇ ಇರುತ್ತಿದ್ದರೆ ಆ ಕ್ರೌರ್ಯಕ್ಕೆ ಕಾರಣರಾದವರು ಕಟಕಟೆಯ ವರೆಗೆ ತಲುಪುತ್ತಿದ್ದರೇ? ತೀಸ್ತಾರಂತೆ ಸಂತ್ರಸ್ತರ ಜೊತೆಗೆ ನಿಲ್ಲುವುದನ್ನೇ ಮತ್ತು ಅವರಲ್ಲಿ ನ್ಯಾಯಕ್ಕಾಗಿ ಆಗ್ರಹಿಸುವ ಕಿಚ್ಚು ತುಂಬುವುದನ್ನೇ ಅಪರಾಧ ಎಂದು ಹೇಳುವುದಾದರೆ, ಸಂತ್ರಸ್ತರಿಗೆ ಇನ್ನು ಮುಂದೆ ನೆರವಾಗಲು ಯಾರು ಸಿಗಬಹುದು? ಅಷ್ಟಕ್ಕೂ, ಇನ್ನು ಮುಂದೆ ಯಾವುದೇ ಪ್ರಕರಣ ನ್ಯಾಯಾಲಯದಲ್ಲಿ ಬಿದ್ದು ಹೋದರೆ ಅದರ ಹೆಸರಲ್ಲಿ ನ್ಯಾಯವಾದಿ ಮತ್ತು ಎಫ್ಐಆರ್ ದಾಖಲಿಸಿದ ಪೊಲೀಸರನ್ನು ತೀಸ್ತಾರಂತೆ ಬಂಧಿಸಲಾಗುವುದೇ? ಮೋದಿಯವರಿಗೆ ಕ್ಲೀನ್ಚಿಟ್ ಕೊಡುವುದು ಬೇರೆ, ಅವರ ಮೇಲೆ ಕೇಸು ದಾಖಲಿಸಲು ನೆರವಾದುದಕ್ಕೆ ತೀಸ್ತಾರನ್ನು ಬಂಧಿಸುವುದು ಬೇರೆ. ಟೀಸ್ತಾ ಗೆದ್ದು ಬರಲಿ.</p>a k kukkilahttp://www.blogger.com/profile/04432257424497331465noreply@blogger.com0tag:blogger.com,1999:blog-2716482703415659532.post-25990713185056468512023-06-20T06:50:00.003-07:002023-06-20T06:50:37.635-07:00ಅಗ್ನಿಪಥ್ಗೆ ವಿರೋಧವೇಕೆ? ಎಡವಿದ್ದು ಯಾರು?<p> </p><div class="separator" style="clear: both; text-align: center;"><a href="https://blogger.googleusercontent.com/img/b/R29vZ2xl/AVvXsEhWfyBulv0ecWA7tmKr3zIiJzQAlyZ9up77EX0A9FFHkYG7bvPumFq5o-pLN7tT-t4uXg3lqxclk6CM_r2IPvUl16MwS6uhfgCF_maqC-o95s3Y6WZ5SnRdcz6qW00g4iCy5ScaG4PhybRbS9ZpTE6Aj2EgRvbyKgu7z3csXxwJFXrlD8u-qmaR2VjdpAR-/s300/edi%2029.jpg" imageanchor="1" style="margin-left: 1em; margin-right: 1em;"><img border="0" data-original-height="140" data-original-width="300" height="187" src="https://blogger.googleusercontent.com/img/b/R29vZ2xl/AVvXsEhWfyBulv0ecWA7tmKr3zIiJzQAlyZ9up77EX0A9FFHkYG7bvPumFq5o-pLN7tT-t4uXg3lqxclk6CM_r2IPvUl16MwS6uhfgCF_maqC-o95s3Y6WZ5SnRdcz6qW00g4iCy5ScaG4PhybRbS9ZpTE6Aj2EgRvbyKgu7z3csXxwJFXrlD8u-qmaR2VjdpAR-/w400-h187/edi%2029.jpg" width="400" /></a></div><br /><p></p><p>30-6-2022</p><p>2013 ಸೆಪ್ಟೆಂಬರ್ 15ರಂದು ಹರ್ಯಾಣದ ರೆವಾರಿಯಲ್ಲಿ ನಿವೃತ್ತ ಯೋಧರು ರ್ಯಾಲಿಯನ್ನು ಸಂಘಟಿಸಿದ್ದರು. ವನ್ ರ್ಯಾಂಕ್ ವನ್ ಪೆನ್ಶನ್ (ಸಮಾನ ಶ್ರೇಣಿ ಸಮಾನ ಪಿಂಚಣಿ) ಯೋಜನೆಯನ್ನು ಜಾರಿಗೆ ತರಬೇಕು ಎಂಬುದು ಅವರ ಒತ್ತಾಯವಾಗಿತ್ತು. ಅಂದರೆ, ಸೇನೆಯಿಂದ ಈ ಹಿಂದೆ ನಿವೃತ್ತಿಯಾದವರಿಗೂ ಆ ಬಳಿಕ ನಿವೃತ್ತಿಯಾದವರಿಗೂ ಪಿಂಚಣಿಯಲ್ಲಿ ಸಮಾನತೆಯನ್ನು ಕಾಯ್ದುಕೊಳ್ಳಬೇಕು ಎಂಬ ಬೇಡಿಕೆ. ಉದಾಹರಣೆಗೆ, ಯೋಧನಾಗಿ 1990ರಲ್ಲಿ ನಿವೃತ್ತಿಯಾದ ವ್ಯಕ್ತಿಗೂ 2020ರಲ್ಲಿ ಯೋಧನಾಗಿ ನಿವೃತ್ತಿಯಾದ ವ್ಯಕ್ತಿಗೂ ಪಿಂಚಣಿಯಲ್ಲಿ ವ್ಯತ್ಯಾಸ ಇರುತ್ತದೆ. ಯಾಕೆಂದರೆ, 1990ರಲ್ಲಿ ಓರ್ವ ಯೋಧನಿಗೆ ವೇತನ ಎಷ್ಟಿರುತ್ತದೋ 2020ರ ಯೋಧನಿಗೆ ವೇತನ ಅಷ್ಟೇ ಇರುವುದಿಲ್ಲ. ಪಿಂಚಣಿಗೆ ವೇತನ ಮಾನದಂಡ ಆಗಿರುವುದರಿಂದ 1990ರಲ್ಲಿ ನಿವೃತ್ತಿಯಾದ ಯೋಧ ಮತ್ತು 2020ರಲ್ಲಿ ನಿವೃತ್ತಿಯಾದ ಯೋಧ ಒಂದೇ ಶ್ರೇಣಿಯವರಾದರೂ ಪಿಂಚಣಿಯಲ್ಲಿ ವ್ಯತ್ಯಾಸ ಇರುತ್ತದೆ. 1990ರ ಯೋಧ ಕಡಿಮೆ ಪಿಂಚಣಿ ಪಡೆಯುವಾಗ 2020ರ ನಿವೃತ್ತ ಯೋಧ ಅಧಿಕ ಪಿಂಚಣಿ ಪಡೆಯುತ್ತಾನೆ. ಇದು ಯೋಧರ ನಡುವೆ ತಾರತಮ್ಯವಾಗಿದ್ದು, ಪಿಂಚಣಿಯಲ್ಲಿ ಸಮಾನತೆಯನ್ನು ಕಾಯ್ದುಕೊಳ್ಳಬೇಕು ಎಂಬುದು ರ್ಯಾಲಿನಿರತ ಯೋಧರ ಆಗ್ರಹವಾಗಿತ್ತು.</p>
<p>ಆಗ ಮನ್ಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿತ್ತು ಮತ್ತು 2014ರ ಲೋಕಸಭಾ ಚುನಾವಣೆಗೆ ರಂಗ ಸಜ್ಜುಗೊಳ್ಳುತ್ತಿತ್ತು. ನರೇಂದ್ರ ಮೋದಿಯವರು ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿಯಾಗಿ ಘೋಷಿತವಾಗಿದ್ದರು. ಅವರು ಈ ಯೋಧರ ರ್ಯಾಲಿಯಲ್ಲಿ ಭಾಗವಹಿಸಿ ಮಾತ ನಾಡಿದರಲ್ಲದೇ, ಒಂದು ಶ್ರೇಣಿ, ಒಂದು ಪಿಂಚಣಿ ಎಂಬ ಬೇಡಿಕೆಗೆ ಬೆಂಬಲ ಸಾರಿದ್ದರು. ಇದಾಗಿ ಈಗ 9 ವರ್ಷಗಳೇ ಕಳೆದಿವೆ. ಈಗ ಅದೇ ನರೇಂದ್ರ ಮೋದಿಯವರು ಅಗ್ನಿಪಥ್ ಎಂಬ ಯೋಜನೆಯ ಮೂಲಕ ನೋ ರ್ಯಾಂಕ್ ನೋ ಪೆನ್ಶನ್ ಎಂದು ಘೋಷಿಸಿದ್ದಾರೆ. ಅಂದು ನಿವೃತ್ತ ಯೋಧರು ಬೀದಿಗಿಳಿದಿದ್ದರೆ ಇಂದು ಸೇನಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.<br />ಅಗ್ನಿಪಥ್ ಯೋಜನೆಯ ಬಗ್ಗೆ ನಿವೃತ್ತ ಸೇನಾಧಿಕಾರಿಗಳು ಮತ್ತು ರಕ್ಷಣಾ ತಜ್ಞರೇ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಈ ಪ್ರಶ್ನೆಗಳನ್ನೆಲ್ಲ ಬಿಜೆಪಿ ವಿರೋಧಿಯೆಂದೋ ವಿರೋಧ ಪಕ್ಷಗಳ ಪಿತೂರಿಯೆಂದೋ ಸಾರಾಸಗಟಾಗಿ ತಳ್ಳಿ ಹಾಕುವುದು ದೇಶದ ಹಿತದೃಷ್ಟಿಯಿಂದ ಅ ಪಾಯಕಾರಿ. ಒಂದುಕಡೆ, ಈ ದೇಶದ ಮೇಲೆ ಕಣ್ಣಿಟ್ಟಿರುವ ಚೀನಾ ಮತ್ತು ಪಾಕಿಸ್ತಾನವಿದೆ. ನೆರೆಕರೆಯ ದೇಶಗಳ ಜೊತೆಗೂ ಭಾರತದ ಸಂಬಂಧ ಉತ್ತಮವಾಗಿಲ್ಲ. ಚೀನಾ ಯಾವ ಸಂದರ್ಭದಲ್ಲೂ ಈ ರಾಷ್ಟ್ರಗಳನ್ನು ಬಳಸಿಕೊಂಡು ದೇಶದ ಮೇಲೆ ಆಕ್ರಮಣ ನಡೆಸುವುದಕ್ಕೆ ಅವಕಾಶವಿದೆ. ಇನ್ನೊಂದು ಕಡೆ, ಈಶಾನ್ಯ ಭಾರತದಲ್ಲಿ ಬಂಡಾಯ ಚಟುವಟಿಕೆಯಿದೆ. ಕಾಶ್ಮೀರವೂ ಸುಖವಾಗಿಲ್ಲ. ಇಂಥ ಸ್ಥಿತಿಯಲ್ಲಿ, ಅನುಭವಿ ಮತ್ತು ನಿಪುಣ ಯೋಧರ ಅಗತ್ಯ ಬಹಳವೇ ಇದೆ.</p>
<p>ಅಗ್ನಿಪಥ್ ಯೋಜನೆಯಂತೆ, 17ರಿಂದ 25 ವರ್ಷದೊಳಗಿನವರನ್ನು ನಾಲ್ಕು ವರ್ಷಗಳ ಅವಧಿಗೆ ಯೋಧರಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈ ಯೋಧರನ್ನು ಅಗ್ನಿವೀರ್ ಎಂದು ಕರೆಯಲಾಗುತ್ತದೆ. ಮೊದಲ ವರ್ಷ 46 ಸಾವಿರ ಅಗ್ನಿವೀರರನ್ನು ಆಯ್ಕೆ ಮಾಡಲಿದ್ದು, ಈ ಆಯ್ಕೆ ಪ್ರಕ್ರಿಯೆ 90 ದಿನಗಳಲ್ಲಿ ಮುಗಿಯಲಿದೆ. ಪ್ರತಿ ವರ್ಷದಂತೆ ನಾಲ್ಕು ವರ್ಷಗಳವರೆಗೆ ಈ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಸೇರ್ಪಡೆಯಾಗುವ ಯೋಧರಿಗೆ 12ನೇ ತರಗತಿಯ ಪ್ರಮಾಣ ಪತ್ರ ನೀಡಲಾಗುವುದು. ಮಾತ್ರವಲ್ಲ, ನಾಲ್ಕು ವರ್ಷಗಳ ಬಳಿಕ ನಿವೃತ್ತರಾಗುವ ಯೋಧರು ಪೂರ್ಣಾವಧಿ ಸೇವೆಗಾಗಿ ಅರ್ಜಿ ಸಲ್ಲಿಸಬಹುದಾಗಿದ್ದು, ಇವರಲ್ಲಿ 25% ಮಂದಿಯನ್ನು ಮಾತ್ರ ಪೂರ್ಣಾವಧಿಗೆ ಆಯ್ಕೆ ಮಾಡಲಾಗುತ್ತದೆ.</p>
<p>ಸಮಸ್ಯೆ ಇರುವುದೂ ಇಲ್ಲಿ. ಯೋಧರನ್ನು ದೇಶಸೇವೆ ಮಾಡುವವರು ಎಂದು ಗುರುತಿಸಲಾಗುತ್ತದೆಯೇ ಹೊರತು ವೃತ್ತಿನಿರತರೆಂದಲ್ಲ. ಭಾರತೀಯ ಸೇನೆ ಸೇರುವುದೆಂದರೆ, ಅದೊಂದು ಹೆಮ್ಮೆ. ಪಂಜಾಬ್, ಹರ್ಯಾಣ, ಉತ್ತರ ಪ್ರದೇಶ, ರಾಜಸ್ತಾನ, ಬಿಹಾರ ಮುಂತಾದ ರಾಜ್ಯಗಳು ಯುವಕರನ್ನು ದೊಡ್ಡ ಮಟ್ಟದಲ್ಲಿ ದೇಶಸೇವೆಗೆಂದು ಕಳಿಸುತ್ತಿದೆ. ಯೋಧನ ಕುಟುಂಬವೊಂದು ತಮ್ಮ ಗ್ರಾಮದಲ್ಲಿರುವುದನ್ನುಈ ಊರಿನವರು ಹೆಮ್ಮೆಯೆಂದು ಭಾವಿಸುವ ವಾತಾವರಣವಿದೆ. ದೇಶಸೇವೆಯ ನಡುವೆ ರಜೆಯಲ್ಲಿ ಊರಿಗೆ ಮರಳುವ ಯೋಧನಿಗೆ ಅಪಾರ ಗೌರವವೂ ಲಭ್ಯವಾಗುತ್ತದೆ. ಎಷ್ಟೋ ಬಾರಿ ಯೋಧರ ಸಾಹಸಪೂರ್ಣ ಸೇವೆಗಾಗಿ ಯೋಧರನ್ನು ಮೆರವಣಿಗೆಯಲ್ಲಿ ಕೊಂಡೊಯ್ದು ಊರೇ ಸಂಭ್ರಮಿಸುತ್ತದೆ. ಆದರೆ, ನಾಲ್ಕು ವರ್ಷಗಳ ಸೇವೆಯ ಬಳಿಕ ಯೋಧ ಎಂಬ ಹಣೆಪಟ್ಟಿಯನ್ನು ಕಳಚಿಟ್ಟು ಸರ್ಕಾರ ಕೊಡುವ 11 ಲಕ್ಷ ರೂಪಾಯಿಯನ್ನು ಪಡೆದುಕೊಂಡು ಮರಳುವವನಿಗೆ/ಳಿಗೆ ಈ ಗೌರವ ಲಭ್ಯವಾದೀತೇ ಎಂಬುದು ಮೊದಲ ಪ್ರಶ್ನೆ. ಹೀಗೆ ನಿವೃತ್ತರಾಗುವ ಯೋಧರಿಗೆ ಪಿಂಚಣಿಯಿಲ್ಲ. ಪೂರ್ಣಾವಧಿ ಯೋಧರಿಗೆ ಸಿಗುವ ಭೂಮಿ, ಶಿಕ್ಷಣ ಮೀಸಲಾತಿ, ಆರೋಗ್ಯ ರಿಯಾಯಿತಿಗಳೂ ಸಿಗಲ್ಲ. ಈ ನಾಲ್ಕು ವರ್ಷಗಳಲ್ಲಿ ಅವರ ಶಿಕ್ಷಣವೂ ಮೊಟಕುಗೊಳ್ಳುತ್ತದೆ. 12ನೇ ತರಗತಿಯ ಸರ್ಟಿಫಿಕೇಟನ್ನು ಮತ್ತು 11 ಲಕ್ಷವನ್ನು ಹಿಡಿದುಕೊಂಡು ಅವರು ತನ್ನೂರಿಗೆ ಮರಳುತ್ತಾರೆ. ಆ ಬಳಿಕ ಅವರು ತಮ್ಮ ಶಿಕ್ಷಣವನ್ನು ಮುಂದುವರಿಸಬೇಕಾಗುತ್ತದೆ. ವೃತ್ತಿಗಾಗಿ ಹುಡುಕಾಟ ನಡೆಸಬೇಕಾಗುತ್ತದೆ. ಅಂದಹಾಗೆ, ದೇಶದಲ್ಲಿ ಇವತ್ತು ನಿರುದ್ಯೋಗದ ಸಮಸ್ಯೆ ಉಚ್ಛ್ರಾಯ ಸ್ಥಿತಿಯಲ್ಲಿದೆ. ಕೊರೋನಾ ನೆಪದಲ್ಲಿ ಕಳೆದ ಎರಡು ವರ್ಷಗಳಲ್ಲಿ ಸೇನಾ ಭರ್ತಿ ನಡೆದೂ ಇಲ್ಲ. ಅಲ್ಲದೇ,</p>
<p>ಭಾರತೀಯ ಸೇನೆ ಸದ್ಯ ಒಂದು ಲಕ್ಷ ಯೋಧರ ಕೊರತೆಯನ್ನು ಎದುರಿಸುತ್ತಲೂ ಇದೆ. ಇಂಥ ಸ್ಥಿತಿಯಲ್ಲಿ ಪೂರ್ಣಾವಧಿ ಯೋಧರ ಬದಲು ನಾಲ್ಕು ವರ್ಷಗಳ ಗುತ್ತಿಗೆಯಾಧಾರಿತ ಯೋಧರ ಆಯ್ಕೆಯನ್ನು ದಿಢೀರ್ ಘೋಷಿಸಿದರೆ ಏನಾದೀತು? ಉತ್ತರ ಭಾರತದಲ್ಲಿ ಸೇನಾ ಆಯ್ಕೆಗೆ ತರಬೇತಿ ನೀಡಲೆಂದೇ ಅನೇಕ ಕೋಚಿಂಗ್ ಸೆಂಟರ್ಗಳಿವೆ. ಇಲ್ಲಿ ವರ್ಷಗಳಿಂದ ಯುವಕರು ದೈಹಿಕ ಕಸರತ್ತು ನಡೆಸುತ್ತಲೂ ಇದ್ದಾರೆ. ಜೀವನ ಭದ್ರತೆಯ ಜೊತೆಗೇ ಜೀವಿತ ಕಾಲದ ವರೆಗೆ ಯೋಧರೆಂಬ ಗೌರವ ಲಭಿಸುವ ನಿರೀಕ್ಷೆಯೇ ಅವರ ಸೇನಾ ಸೇರ್ಪಡೆಗೆ ಕಾರಣ. ಅಂದಹಾಗೆ,</p>
<p>ಅಗ್ನಿವೀರ್ ವಿಚಲಿತಗೊಳಿಸಿದ್ದು ಇಂಥ ಯುವ ಸಮೂಹವನ್ನು. ಅವರೆಲ್ಲರ ನಿರೀಕ್ಷೆಗಳನ್ನು ಅಗ್ನಿಪಥ್ ಯೋಜನೆ ಮಣ್ಣುಪಾಲು ಮಾಡಿದೆ. ದೇಶಸೇವೆಯೆಂಬ ಹೊಣೆಗಾರಿಕೆಯನ್ನು ಗುತ್ತಿಗೆಯಾಧಾರಿತ ವೃತ್ತಿಮಟ್ಟಕ್ಕೆ ಇಳಿಸಿರುವುದಕ್ಕೆ ಅವರಲ್ಲಿ ಆಕ್ರೋಶ ಇದೆ. 2013ರಲ್ಲಿ ಒಂದೇ ಶ್ರೇಣಿ ಒಂದೇ ಪಿಂಚಣಿಯನ್ನು ಬೆಂಬಲಿಸಿದ ಇದೇ ಮೋದಿಯವರು ಇವತ್ತು ಯೋಧರಿಗೆ ಪಿಂಚಣಿ ಕೊಡುವುದು ರಕ್ಷಣಾ ಇಲಾಖೆಗೆ ಹೊರೆಯಾಗುತ್ತದೆ ಎಂದು ಹೇಳುತ್ತಿರುವುದು ಅವರಲ್ಲಿ ಅಸಮಾಧಾನ ಮೂಡಿಸಿದೆ. ಈಗಿನ ಬಜೆಟ್ನಲ್ಲಿ ಕೇವಲ ಯೋಧರ ಪಿಂಚಣಿಗಳಿಗೆ 1,19,696 ಕೋಟಿ ರೂಪಾಯಿಯನ್ನು ಮೀಸಲಿರಿಸಲಾಗಿದ್ದರೆ, 1,63,453 ಕೋಟಿ ರೂಪಾಯಿಯನ್ನು ಯೋಧರ ವೇತ ನಕ್ಕಾಗಿ ಮೀಸಲಿರಿಸಲಾಗಿದೆ. ಇದು ಭಾರೀ ಹೊರೆ ಎಂದು ಸರ್ಕಾರ ವಾದಿಸುತ್ತಿದೆ. ಒಟ್ಟು ರಕ್ಷಣಾ ಬಜೆಟ್ನ ಪೈಕಿ 54%ದಷ್ಟು ಹಣವೂ ಕೇವಲ ಪಿಂಚಣಿ ಮತ್ತು ವೇತನಕ್ಕಾಗಿ ಖರ್ಚಾಗುತ್ತಿದೆ ಎಂಬ ಅಂಕಿ-ಅಂಶವನ್ನು ಸರ್ಕಾರ ಮುಂದಿಡುತ್ತಿದೆ. ಈ ಖರ್ಚನ್ನು ತಗ್ಗಿಸುವುದಕ್ಕಾಗಿಯೇ ಯೋಧರನ್ನು ಗುತ್ತಿಗೆಯಾಧಾರಿತ ಕಾರ್ಮಿಕರಂತೆ ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂಬುದು ಸರ್ಕಾರದ ಪರೋಕ್ಷ ಸಮರ್ಥನೆ. ಆದರೆ,</p>
<p>ದೇಶಸೇವೆ ಎಂಬುದು ಗುತ್ತಿಗೆ ಆಧಾರಿತ ವೃತ್ತಿಯಲ್ಲ. ಅದೊಂದು ಗೌರವ, ಹೆಮ್ಮೆ. ಬಿಜೆಪಿ ಈ ಯೋಧರನ್ನೇ ತೋರಿಸಿ ಮತ ಯಾಚಿಸಿದ ಪಕ್ಷ. ದೇಶಪ್ರೇಮ, ದೇಶಭಕ್ತಿ ಎಂಬುದು ಬಿಜೆಪಿಯ ಅನುದಿನದ ಸ್ಲೋಗನ್. ಇಂಥ ಪಕ್ಷವೊಂದು ಯೋಧರ ಪಿಂಚಣಿಯ ನ್ನು ಹೊರೆ ಎಂದು ಪರಿಗಣಿಸುವುದು ಮತ್ತು ಅವರ ಸೇವೆಯನ್ನು ವೃತ್ತಿಯೆಂದು ತೃಣೀಕರಿಸುವುದು ಅಪ್ಪಟ ದೇಶದ್ರೋಹದ ಕೃತ್ಯ. ಶಾಸಕರು, ಸಂಸದರು ಜೀವನಪೂರ್ತಿ ಪಡೆಯುವ ಪಿಂಚಣಿಯನ್ನು ಹೊರೆ ಎಂದು ಪರಿಗಣಿಸದ ಮತ್ತು ಅದಕ್ಕೆ ಯಾವ ವಿರೋಧವ ನ್ನೂ ವ್ಯಕ್ತಪಡಿಸದ ಬಿಜೆಪಿ, ಯೋಧರ ಪಿಂಚಣಿಯನ್ನು ಮಾತ್ರ ಹೊರೆ ಎಂದು ಪರಿಗಣಿಸಿರುವುದು ಅದರ ಯೋಧ ದ್ರೋಹಕ್ಕೆ ಅತ್ಯುತ್ತಮ ಉದಾಹರಣೆ.</p>
<p>ಯೋಧರು ಎಂದೂ ಈ ದೇಶಕ್ಕೆ ಹೊರೆಯಲ್ಲ, ಅವರು ಈ ದೇಶದ ಆಸ್ತಿ. ಕೈಯಲ್ಲಿ 11 ಲಕ್ಷ ರೂಪಾಯಿಯನ್ನು ಕೊಟ್ಟು ನಾಲ್ಕು ವರ್ಷಗಳ ಬಳಿಕ ಮನೆಗೆ ಅಟ್ಟುವುದು ಸಣ್ಣ ಸಂಗತಿಯಲ್ಲ. ಇಂಥ ಬೆಳವಣಿಗೆ ಅವರನ್ನು ವಿಚಲಿತಗೊಳಿಸುವ ಸಾಧ್ಯತೆಯಿದೆ. ಬಳಿಕ ಉದ್ಯೋಗದ ಸಮಸ್ಯೆಯೂ ಅವರನ್ನು ಕಾಡಲಿದೆ. ಇಂಥ ವಿಚಲಿತ ಮತ್ತು ಆಕ್ರೋಶಿತ ನಿರುದ್ಯೋಗಿ ಯುವ ಸಮೂಹವನ್ನು ರಾಜಕೀಯ ಮತ್ತು ಸಮಾಜದ್ರೋಹಿ ಶಕ್ತಿಗಳು ಮುಂದೆ ದುರ್ಬಳಕೆ ಮಾಡಿಕೊಳ್ಳಬಹುದು. ರುವಾಂಡ ಮತ್ತು ಯುಗೋಸ್ಲಾವಿಯಾದಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನಾಂಗ ಹತ್ಯೆಯಲ್ಲಿ ಮಿಲಿಟರಿ ಪಡೆಯ ದೊಡ್ಡ ಪಾತ್ರವಿರುವುದು ಎಲ್ಲರಿಗೂ ಗೊತ್ತು. ನಾಲ್ಕು ವರ್ಷಗಳ ವೃತ್ತಿಯ ಬಳಿಕ ಸೇನೆಯಿಂದ ಮನೆಗೆ ಮರಳುವವರಲ್ಲಿ ಇಂಥ ಜನಾಂಗ ದ್ವೇಷವನ್ನು ತುಂಬಿ ಸಮಾಜಘಾತುಕರು ದುರು ಪಯೋಗಪಡಿಸುವುದಕ್ಕೂ ಸಾಧ್ಯವಿದೆ. ಆದ್ದರಿಂದ, ಅಗ್ನಿಪಥ್ ಯೋಜನೆ ಮರುಪರಿಶೀಲನೆ ಬಹಳ ಅಗತ್ಯ. ದೇಶ ಕಾಯುವ ಯೋಧರನ್ನು ದಯವಿಟ್ಟು ಅವಮಾನಿಸಬೇಡಿ.</p>a k kukkilahttp://www.blogger.com/profile/04432257424497331465noreply@blogger.com0